Homeಮುಖಪುಟಕೊರೊನಾ ಬಗ್ಗೆ ಸುಳ್ಳು ಸುದ್ದಿ ಹರಡದಂತೆ ನಟಿ ಶಿಲ್ಪಾ ಶೆಟ್ಟಿ ಮನವಿ

ಕೊರೊನಾ ಬಗ್ಗೆ ಸುಳ್ಳು ಸುದ್ದಿ ಹರಡದಂತೆ ನಟಿ ಶಿಲ್ಪಾ ಶೆಟ್ಟಿ ಮನವಿ

- Advertisement -
- Advertisement -

ಕೊರೊನಾ ವೈರಸ್ ಬಗ್ಗೆ ನಕಲಿ ಸುದ್ದಿಗಳ ಹರಡುತ್ತಿರುವುದರ ವಿರುದ್ದ ಹಾಗೂ ವೈದ್ಯರ ಮೇಲಿನ ದೌರ್ಜನ್ಯದ ವಿರುದ್ದ ನಟಿ ಶಿಲ್ಪಾ ಶೆಟ್ಟಿ ವಿಡಿಯೊ ಸಂದೇಶವನ್ನು ಹಂಚಿಕೊಂಡಿದ್ದಾರೆ.

ಆರೋಗ್ಯ ಕಾರ್ಯಕರ್ತರ ವಿರುದ್ಧ ಆಗುತ್ತಿರುವ ಹಿಂಸಾಚಾರದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ರವೀನಾ ಟಂಡನ್ ಅವರ “ಜೀತೆಗಾ ಇಂಡಿಯಾ ಜೀತೇಂಗೆ ಹಮ್” ಅಭೀಯಾನದ ಭಾಗವಾಗಿ ಶಿಲ್ಪಾ ತಮ್ಮ ವಿಡಿಯೋ ಸಂದೇಶವನ್ನು ಹಂಚಿಕೊಂಡಿದ್ದಾರೆ.

ವೈದ್ಯರು, ದಾದಿಯರು ಮತ್ತು ಇತರ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಆರೋಗ್ಯ ವೃತ್ತಿಪರರನ್ನು ಉಲ್ಲೇಖಿಸಿ “ಮಾನವೀಯತೆಯ ಹೆಸರಿನಲ್ಲಿ ನಾವು ಮಾಡಬಹುದಾದ ಕ್ರಮವವೇನೆಂದರೆ, ನಮ್ಮನ್ನು ಸುರಕ್ಷಿತವಾಗಿಡಲು ತಮ್ಮ ಪ್ರಾಣವನ್ನೇ ತ್ಯಾಗ ಮಾಡುತ್ತಿರುವವರಿಗಾಗಿ ಧ್ವನಿ ಎತ್ತುವುದು” ಎಂದು ಶಿಲ್ಪಾ ಹೇಳಿದ್ದಾರೆ.

ಜೊತೆಗೆ ಕೊರೊನಾ ವೈರಸ್ ಸುಳ್ಳು ಮಾಹಿತಿಯ ಹರಡುವಿಕೆಯ ಬಗ್ಗೆ ಎಚ್ಚರವಾಗಿರುವಂತೆ ಶಿಲ್ಪಾ ಶೆಟ್ಟಿ ತನ್ನ ಇನ್ಸ್ಟ್ರಾಗ್ರಾಮ್ ನಲ್ಲಿ ಎಚ್ಚರಿಕೆ ನೀಡಿದ್ದಾರೆ.

ಶಿಲ್ಪಾ ತನ್ನ ಲಾಕ್‌ಡೌನ್ ಜೀವನ ದೈನಂದಿನ ನೋಟವನ್ನು ಆಗಾಗ್ಗೆ ಹಂಚಿಕೊಳ್ಳುತ್ತಿದ್ದಾರೆ. ಇಂದು ಶಿಲ್ಪಾ “ನನ್ನ ಪ್ರೀತಿಯ, ರವೀನಾ ನನ್ನನ್ನು ನಾಮನಿರ್ದೇಶನ ಮಾಡಿದ್ದಕ್ಕಾಗಿ ಮತ್ತು ನಿಮ್ಮ ಈ ಅದ್ಭುತ ಕಾರ್ಯಕ್ರಮದಲ್ಲಿ ಭಾಗವಾಗಿಸಿದ್ದಕ್ಕಾಗಿ ಧನ್ಯವಾದಗಳು. ನನ್ನ ಎಲ್ಲ ಸಹ ನಾಗರಿಕರೆ ದಯವಿಟ್ಟು ನಮ್ಮ ಸಮುದಾಯವನ್ನು ಸುರಕ್ಷಿತವಾಗಿಡಲು ದಣಿವರಿಯಿಲ್ಲದೆ ಕೆಲಸ ಮಾಡುತ್ತಿರುವ ಯೋಧರ ಪರವಾಗಿ ನಿಂತುಕೊಳ್ಳಿ .. ಸುಳ್ಳು ವದಂತಿಗಳನ್ನು ಬಯಲು ಮಾಡಿ. ನಿಮ್ಮ ಮಟ್ಟದಲ್ಲಿ ನಕಲಿ ಸುದ್ದಿಗಳ ಹರಡುವಿಕೆಯನ್ನು ನಿಲ್ಲಿಸಬೇಕು ಎಂಬುದು ನನ್ನ ವಿನಮ್ರ ವಿನಂತಿಯಾಗಿದೆ. ಈ ಸಾಂಕ್ರಾಮಿಕ ರೋಗದ ವಿರುದ್ಧ ಒಗ್ಗಟ್ಟಾಗಿ ನಿಲ್ಲುವ ಸಮಯ ಇದು. ” ಎಂದಿದ್ದಾರೆ.

ಸಂದೇಶವನ್ನು ಹರಡಲು ಶಿಲ್ಪಾ ತನ್ನ ಸಹೋದರಿ ಶಮಿತಾ ಶೆಟ್ಟಿ, ಚಲನಚಿತ್ರ ನಿರ್ಮಾಪಕ ಫರಾ ಖಾನ್ ಮತ್ತು ನಟ ಅಭಿಮನ್ಯು ದಸ್ಸಾನಿಯನ್ನು ನಾಮಕರಣ ಮಾಡಿದರು.

View this post on Instagram

Thank you my dear, @officialraveenatandon for nominating me and making me a part of this amazing initiative of yours. To all my fellow citizens, please look out and stand up for the warriors who are tirelessly working round the clock to keep our community safe. It’s a humble request to please treat these heroes with respect, debunk myths & false rumours, and stop the spread of fake news at your own levels. Let’s do our bit too! It’s time to stand united against this pandemic. I nominate @shamitashetty_official @farahkhankunder and @abhimanyud to take this cause forward. . . . . . #SwasthRahoMastRaho #JeetegaIndia #JeetengeHum #IndiaFightsCorona #COVID19 #StayHomeStaySafe

A post shared by Shilpa Shetty Kundra (@theshilpashetty) on

ಈ ರೀತಿಯ ಕಾರ್ಯದಲ್ಲಿ ಕೈಜೋಡಿಸುವಂತೆ ರವೀನಾ, ಶಿಲ್ಪಾ ಶೆಟ್ಟಿಯ ಜೊತೆ ಸೋನು ಸೂದ್ ಅವರನ್ನು ಕೂಡಾ ನಾಮಕರಣ ಮಾಡಿದ್ದರು. ಈ ಮಧ್ಯೆ ಹ್ಯಾಪಿ ನ್ಯೂ ಇಯರ್ ನಟ ಕೊರೊನಾ ವಿರುದ್ದ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರು ಉಳಿಯಲು ತನ್ನ ಮುಂಬೈ ಹೋಟೆಲ್ ಅನ್ನು ತೆರೆದಿದ್ದಾರೆ. ತಮ್ಮ ಸಂದೇಶಗಳನ್ನು ಹಂಚಿಕೊಂಡ ರವೀನಾ, ಸೋನಾಲಿ ಕುಲಕರ್ಣಿ ಮತ್ತು ಚಲನಚಿತ್ರ ನಿರ್ಮಾಪಕ ಒನಿರ್ ಅವರನ್ನು ಕೂಡಾ ಟ್ಯಾಗ್ ಮಾಡಿದ್ದರು.


ಇದನ್ನೂ ಓದಿ: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...