Homeಅಂತರಾಷ್ಟ್ರೀಯಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

- Advertisement -
- Advertisement -

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್ ನ್ಯಾಯಾಲಯಕ್ಕೆ ಜಂಟಿ ಅರ್ಜಿ ಸಲ್ಲಿಸಿರುವ ಎಸ್‌ಸಿ ಮತ್ತು ಅದಾನಿ ಪರ ಅಮೆರಿಕ ಮೂಲದ ವಕೀಲರು, ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಎಸ್‌ಇಸಿಯ ಸಮನ್ಸ್‌ಗಳನ್ನು ಸ್ವೀಕರಿಸಲು ಒಪ್ಪಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದರಿಂದಾಗಿ, ಅದಾನಿಗಳಿಗೆ ಹೇಗೆ ಸಮನ್ಸ್ ನೀಡಬೇಕು ಎಂದು ನ್ಯಾಯಾಧೀಶರು ತೀರ್ಪು ನೀಡುವ ಅಗತ್ಯವಿಲ್ಲ ಎಂದು ವರದಿಗಳು ಹೇಳಿವೆ.

ಅಮೆರಿಕದ ಕಾನೂನಿನ ಪ್ರಕಾರ ಈ ಪ್ರಕರಣದಲ್ಲಿ ಅದಾನಿಗಳಿಗೆ ಸಮನ್ಸ್ ಕೊಡುವುದು ಕಡ್ಡಾಯವಾಗಿದೆ. ಹಾಗಾಗಿ, ಎಸ್‌ಇಸಿ ಹೇಗ್ ಕನ್ವೆನ್ಷನ್ ಮೂಲಕ ಎರಡು ಬಾರಿ ಸಮನ್ಸ್ ಜಾರಿ ಮಾಡಿತ್ತು. ಆದರೆ, ಅದನ್ನು ಅದಾನಿಗಳಿಗೆ ತಲುಪಿಸಲು ಎರಡೂ ಬಾರಿಯೂ ಭಾರತ ಸರ್ಕಾರದ ಕಾನೂನು ಮತ್ತು ನ್ಯಾಯ ಸಚಿವಾಲಯ ನಿರಾಕರಿಸಿತ್ತು. ಸಮನ್ಸ್‌ಗಳಲ್ಲಿ ತಾಂತ್ರಿಕ ದೋಷಗಳಿದ್ದವು. ಅಂದರೆ, ಅದರ ಮೇಲೆ ಅಗತ್ಯವಾದ ಅಧಿಕೃತ ಸೀಲ್ ಮತ್ತು ಇಂಕ್ ಸಹಿ ಮುಂತಾದವು ಸರಿಯಾಗಿ ಇರಲಿಲ್ಲ ಎಂದು ಸರ್ಕಾರ ಜಾರಿಕೊಂಡಿತ್ತು.

ಭಾರತ ಸರ್ಕಾರ ಎರಡು ಬಾರಿ ಸಮನ್ಸ್ ತಲುಪಿಸಲು ನಿರಾಕರಿಸಿದ ಕಾರಣ ಎಸ್‌ಇಸಿಗೆ ಹೇಗ್ ಕನ್ವೆನ್ಷನ್ ಮೂಲಕ ಸಮನ್ಸ್ ತಲುಪಿಸುವುದು ಕಷ್ಟವಾಗಿತ್ತು. ಇದರಿಂದಾಗಿ ಅದು ನ್ಯೂಯಾರ್ಕ್‌ನ ಈಸ್ಟರ್ನ್ ಡಿಸ್ಟ್ರಿಕ್ಟ್ ಫೆಡರಲ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸಾಮಾನ್ಯ ಪ್ರಕ್ರಿಯೆಯನ್ನು ಬಿಟ್ಟು ಬೇರೆ ಮಾರ್ಗದ ಮೂಲಕ (ಇ-ಮೇಲ್ ಮೂಲಕ) ಸಮನ್ಸ್ ತಲುಪಿಸಲು ಅನುಮತಿ ಕೇಳಿತ್ತು. ಈ ನಡುವೆ ಅದಾನಿಗಳು ಸಮನ್ಸ್ ಸ್ವೀಕರಿಸಲು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ನ್ಯಾಯಾಧೀಶರು ಈ ಜಂಟಿ ಅರ್ಜಿಯನ್ನು ಅನುಮೋದಿಸಿದರೆ, ಅದಾನಿಯವರಿಗೆ ಎಸ್‌ಇಸಿ ದೂರಿನ ಮೇಲೆ ಪ್ರತಿಕ್ರಿಯಿಸಲು ಅಥವಾ ಆ ಪ್ರಕರಣವನ್ನು ವಜಾಗೊಳಿಸುವಂತೆ ಅರ್ಜಿ ಸಲ್ಲಿಸಲು 90 ದಿನಗಳ ಕಾಲಾವಕಾಶ ಸಿಗಲಿದೆ. ಅದಾನಿಯವರ ಪ್ರತಿಕ್ರಿಯೆಯ ನಂತರ, ಎಸ್‌ಇಸಿ ತನ್ನ ಆಕ್ಷೇಪಣೆ ಅಥವಾ ವಿರೋಧವನ್ನು ಸಲ್ಲಿಸಲು ಮುಂದಿನ 60 ದಿನಗಳ ಕಾಲಾವಕಾಶ ಹೊಂದಿರುತ್ತದೆ. ಎಸ್‌ಇಸಿ ಸಲ್ಲಿಸಿದ ಆಕ್ಷೇಪಣೆಗಳಿಗೆ ಅದಾನಿಯವರು ತಮ್ಮ ಅಂತಿಮ ಪ್ರತ್ಯುತ್ತರವನ್ನು ನೀಡಲು 45 ದಿನಗಳ ಸಮಯವನ್ನು ನಿಗದಿಪಡಿಸಲಾಗಿದೆ.

ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು 2021 ರ ಬಾಂಡ್ ವಿತರಣೆಯ ಸಮಯದಲ್ಲಿ ಅಮೆರಿಕದ ಹೂಡಿಕೆದಾರರಿಗೆ ಸುಳ್ಳು ಮತ್ತು ದಾರಿತಪ್ಪಿಸುವ ಮಾಹಿತಿ ನೀಡಿದ್ದಾರೆ. ಭಾರತದಲ್ಲಿ ಸೌರಶಕ್ತಿ ಒಪ್ಪಂದಗಳನ್ನು ಪಡೆಯಲು ಸರ್ಕಾರಿ ಅಧಿಕಾರಿಗಳಿಗೆ ಸುಮಾರು $265 ಮಿಲಿಯನ್ (ಅಂದಾಜು ₹2,200 ಕೋಟಿ) ಲಂಚ ನೀಡುವ ಯೋಜನೆಯ ಬಗ್ಗೆ ಹೂಡಿಕೆದಾರರಿಂದ ಮಾಹಿತಿಯನ್ನು ಮರೆಮಾಚಲಾಗಿದೆ. ಹೂಡಿಕೆದಾರರಿಗೆ ಕಂಪನಿಯು ಭ್ರಷ್ಟಾಚಾರ ವಿರೋಧಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದೆ ಎಂದು ನಂಬಿಸಿ, ಅಕ್ರಮವಾಗಿ ಹಣ ಸಂಗ್ರಹಿಸಲಾಗಿದೆ ಈ ಎಲ್ಲಾ ಆರೋಪಗಳನ್ನು ಮಾಡಿ ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ (ಎಜಿಇಎಲ್‌) ಮೇಲೆ ಎಸ್‌ಇಸಿ ನವೆಂಬರ್ 2024 ರಲ್ಲಿ ದೂರು ದಾಖಲಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅದಾನಿ ಗ್ರೂಪ್, ಈ ಆರೋಪಗಳು ಆಧಾರರಹಿತವಾಗಿವೆ ಎಂದು ತಿರಸ್ಕರಿಸಿದೆ. ಅಲ್ಲದೆ, ಎಜಿಇಎಲ್‌ ಕಂಪನಿಯು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ ಮತ್ತು ಕಂಪನಿಯ ಯಾವುದೇ ನಿರ್ದೇಶಕರ ಮೇಲೆ ಲಂಚ ಅಥವಾ ಭ್ರಷ್ಟಾಚಾರದ ಅಪರಾಧ ಆರೋಪಗಳನ್ನು ಹೊರಿಸಲಾಗಿಲ್ಲ ಎಂದು ವಾದಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...