Homeಮುಖಪುಟಅದಾನಿಗೆ 6 ವಿಮಾನ ನಿಲ್ದಾಣಗಳ ನಿರ್ವಹಣೆ ನೀಡುವುದರ ವಿರುದ್ಧ ದನಿಯೆತ್ತಿದ್ದ ಹಣಕಾಸು ಇಲಾಖೆ, ನೀತಿ ಆಯೋಗ!...

ಅದಾನಿಗೆ 6 ವಿಮಾನ ನಿಲ್ದಾಣಗಳ ನಿರ್ವಹಣೆ ನೀಡುವುದರ ವಿರುದ್ಧ ದನಿಯೆತ್ತಿದ್ದ ಹಣಕಾಸು ಇಲಾಖೆ, ನೀತಿ ಆಯೋಗ! ಕಾರಣವೇನು?

ಒಂದೇ ವಿಮಾನಯಾನ ಸಂಸ್ಥೆಗೆ ಎರಡಕ್ಕಿಂತ ಹೆಚ್ಚು ವಿಮಾನ ನಿಲ್ದಾಣಗಳನ್ನು ನೀಡಬಾರದು. ಅವುಗಳನ್ನು ವಿವಿಧ ಕಂಪನಿಗಳಿಗೆ ನೀಡುವುದರಿಂದ ಆರೋಗ್ಯಕರ ಸ್ಪರ್ಧೆಗೆ ಸಹಕಾರಿಯಾಗುತ್ತದೆ.

- Advertisement -
- Advertisement -

2019ರಲ್ಲಿ ಅಹಮದಾಬಾದ್ ಮೂಲದ ಅದಾನಿ ಗ್ರೂಪ್‌ಗೆ ಆರು ವಿಮಾನ ನಿಲ್ದಾಣಗಳ ನಿರ್ವಹಣೆ ಕಾಮಗಾರಿ ವಹಿಸುವುದನ್ನು ಹಣಕಾಸು ಇಲಾಖೆ ಮತ್ತು ನೀತಿ ಆಯೋಗ ಆಕ್ಷೇಪಿಸಿದ್ದವು ಎಂದು ತನಗೆ ದೊರೆತ ಮಾಹಿತಿಗಳ ಆಧಾರದಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕಳೆದ ವರ್ಷ ಆಗಸ್ಟ್ 31 ರಂದು, ಮುಂಬೈನ ದೇಶದ ಎರಡನೇ ಅತಿದೊಡ್ಡ ವಿಮಾನ ನಿಲ್ದಾಣದ ನಿಯಂತ್ರಣ ಆಸಕ್ತಿಯನ್ನು ಪಡೆಯಲು ಅದಾನಿ ಗ್ರೂಪ್ ಮತ್ತೊಂದು ಒಪ್ಪಂದಕ್ಕೆ ಸಹಿ ಹಾಕಿದ್ದು, ಇದನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಜನವರಿ 12 ರಂದು ಅಂಗೀಕಾರ ಮಾಡಿದ್ದನ್ನು ಈ ಹಿನ್ನೆಲೆಯಲ್ಲಿ ನೋಡಬೇಕಿದೆ.

6 ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್ ಪಡೆದುಕೊಳ್ಳುವುದರ ವಿರುದ್ಧ ಹಣಕಾಸು ಇಲಾಖೆ ಮತ್ತು ನೀತಿ ಆಯೋಗ ಗಂಭೀರ ಆಕ್ಷೇಪ ಎತ್ತಿದ್ದವು. ಮುಂಬೈ ಜೊತೆಗೆ ಅಹಮದಾಬಾದ್, ಮಂಗಳೂರು, ಲಕ್ನೋ, ಜೈಪುರ, ಗುವಾಹಟಿ ಮತ್ತು ತಿರುವನಂತಪುರಂ ಸೇರಿ ಏಳು ವಿಮಾನ ನಿಲ್ದಾಣಗಳು ಕಳೆದ ಹಣಕಾಸು ವರ್ಷದಲ್ಲಿ (2019-20) 7.90 ಕೋಟಿ ಪ್ರಯಾಣಿಕರನ್ನು ನಿರ್ವಹಿಸಿವೆ. ಇದು ದೇಶೀಯ ವಾಯು ಪ್ರಯಾಣಿಕರ ದಟ್ಟಣೆಯ (ಅಂದಾಜು 34 ಕೋಟಿ) ನಾಲ್ಕನೇ ಒಂದು ಭಾಗಕ್ಕೆ ಸಮನಾಗಿದೆ.

ಅಹಮದಾಬಾದ್, ಲಕ್ನೋ, ಮಂಗಳೂರು, ಜೈಪುರ, ಗುವಾಹಟಿ ಮತ್ತು ತಿರುವನಂತಪುರಂನಲ್ಲಿನ ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕಾಗಿ ಬಿಡ್‌ಗಳನ್ನು ಆಹ್ವಾನಿಸುವ ಮೊದಲು (ಎನ್‌ಡಿಎ ಸರ್ಕಾರದ ಅತಿದೊಡ್ಡ ಖಾಸಗೀಕರಣ ಕಾರ್ಯಕ್ರಮ) ಕೇಂದ್ರದ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮೌಲ್ಯಮಾಪನ ಸಮಿತಿ (ಪಿಪಿಪಿಎಸಿ) ನಾಗರಿಕ ವಿಮಾನಯಾನ ಸಚಿವಾಲಯದ ಈ ಪ್ರಕ್ರಿಯೆಯ ಪ್ರಸ್ತಾಪವನ್ನು ಡಿಸೆಂಬರ್ 11, 2018 ರಂದು ಚರ್ಚಿಸಿದೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ದೊರೆತ ಮಿನಟ್‌ಗಳ ಪ್ರಕಾರ, ಚರ್ಚೆಯ ಸಮಯದಲ್ಲಿ, ಆರ್ಥಿಕ ವ್ಯವಹಾರಗಳ ಇಲಾಖೆಯ ಟಿಪ್ಪಣಿ ಹೀಗೆ ಹೇಳಿದೆ: “ಈ ಆರು ವಿಮಾನ ನಿಲ್ದಾಣಗಳ ಯೋಜನೆಗಳು ತೀವ್ರ ಬಂಡವಾಳ-ಕೇಂದ್ರಿತ ಯೋಜನೆಗಳಾಗಿವೆ, ಆದ್ದರಿಂದ ಹೆಚ್ಚಿನ ಷರತ್ತುಗಳನ್ನು ಸೇರಿಸಲು ಸೂಚಿಸಲಾಗಿದೆ. ಹೆಚ್ಚಿನ ಹಣಕಾಸಿನ ಅಪಾಯ ಮತ್ತು ಕಾರ್ಯಕ್ಷಮತೆಯ ಸಮಸ್ಯೆಗಳನ್ನು ಪರಿಗಣಿಸಲಾಗಿ, ಒಂದೇ ವಿಮಾನಯಾನ ಸಂಸ್ಥೆಗೆ ಎರಡಕ್ಕಿಂತ ಹೆಚ್ಚು ವಿಮಾನ ನಿಲ್ದಾಣಗಳನ್ನು ನೀಡಬಾರದು ಎಂದು ಸೂಚಿಸುತ್ತಿದ್ದೇವೆ. ಅವುಗಳನ್ನು ವಿವಿಧ ಕಂಪನಿಗಳಿಗೆ ನೀಡುವುದರಿಂದ ಆರೋಗ್ಯಕರ ಸ್ಪರ್ಧೆಗೆ ಸಹಕಾರಿಯಾಗುತ್ತದೆ.”

ಡಿಸೆಂಬರ್ 10, 2018 ರಂದು ಪಿಪಿಪಿಎಸಿಗೆ ಡಿಇಎ ಟಿಪ್ಪಣಿಯನ್ನು ಇಲಾಖೆಯ ಪಿಪಿಪಿ ಸೆಲ್‌ನಲ್ಲಿ ನಿರ್ದೇಶಕರು ಸಲ್ಲಿಸಿದ್ದಾರೆ. ತನ್ನ ವಾದವನ್ನು ಸಮರ್ಥಿಸಲು, ಡಿಇಎ ದೆಹಲಿ ಮತ್ತು ಮುಂಬೈ ವಿಮಾನ ನಿಲ್ದಾಣಗಳ ಪೂರ್ವನಿದರ್ಶನವನ್ನು ಉಲ್ಲೇಖಿಸಿದೆ. ಅಲ್ಲಿ ಜಿಎಂಆರ್ ಮೂಲತಃ ಏಕೈಕ ಅರ್ಹ ಬಿಡ್ಡರ್ ಆಗಿದ್ದರೂ, ಎರಡೂ ವಿಮಾನ ನಿಲ್ದಾಣಗಳನ್ನು ನೀಡಲಾಗಿಲ್ಲ. ಇದು ದೆಹಲಿಯ ವಿದ್ಯುತ್ ವಿತರಣೆಯ ಖಾಸಗೀಕರಣವನ್ನು ಸಹ ಉಲ್ಲೇಖಿಸುತ್ತದೆ. “ದೆಹಲಿ ವಿದ್ಯುತ್ ವಿತರಣೆ ಖಾಸಗೀಕರಣದ ಸಂದರ್ಭದಲ್ಲಿ, ನಗರವನ್ನು ಮೂರು ವಲಯಗಳಾಗಿ ವಿಂಗಡಿಸಿ. ಎರಡು ಕಂಪನಿಗಳಿಗೆ ಅವಕಾಶ ನೀಡಲಾಯಿತು” ಎಂದು ಅದು ಹೇಳಿದೆ.

ಪಿಪಿಪಿಎಸಿ ಸಭೆಯಲ್ಲಿ, ಡಿಇಎ ಎತ್ತಿದ ಈ ಆಕ್ಷೇಪಗಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಡಿಇಎ ಟಿಪ್ಪಣಿ ಹೊರಡಿಸಿದ ಅದೇ ದಿನ, ನೀತಿ ಆಯೋಗ್ ವಿಮಾನ ನಿಲ್ದಾಣದ ಬಿಡ್ಡಿಂಗ್ ಬಗ್ಗೆ ಪ್ರತ್ಯೇಕ ಕಳವಳವನ್ನು ವ್ಯಕ್ತಪಡಿಸಿತು. ಸರ್ಕಾರದ ಪ್ರಮುಖ ನೀತಿ ಥಿಂಕ್-ಟ್ಯಾಂಕ್‌ನ ಪಿಪಿಪಿ ಸಿದ್ಧಪಡಿಸಿದ ಜ್ಞಾಪಕದಲ್ಲಿ “ಸಾಕಷ್ಟು ತಾಂತ್ರಿಕ ಸಾಮರ್ಥ್ಯದ ಕೊರತೆಯಿರುವ ಬಿಡ್ಡರ್ ಯೋಜನೆಯನ್ನು ಅಪಾಯಕ್ಕೆ ತಳ್ಳಬಹುದು ಮತ್ತು ಸರ್ಕಾರವು ಒದಗಿಸಲು ಬದ್ಧವಾಗಿರುವ ಸೇವೆಗಳ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಹುದು” ಎಂದಿದೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಅಂದಿನ ಡಿಇಎ ಕಾರ್ಯದರ್ಶಿ ಎಸ್‌ಸಿ ಗರ್ಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪಿಪಿಪಿಎಸಿ – ಸಭೆಯಲ್ಲಿ, ಇಗೋಸ್ (ಕಾರ್ಯದರ್ಶಿಗಳ ಸಶಕ್ತ ಗುಂಪು) ಈಗಾಗಲೇ ವಿಮಾನ ನಿಲ್ದಾಣಗಳ ಬಿಡ್ಡಿಂಗ್‌ಗೆ ನಿರ್ಧರಿಸಿದೆ ಎಂದು ಹೇಳಲಾಗಿತು. “ವಿಮಾನ ನಿಲ್ದಾಣ ನಿರ್ವಹಣೆಯ ಅನುಭವ ಬಿಡ್ಡಿಂಗ್‌ಗೆ ಪೂರ್ವಾಪೇಕ್ಷಿತವಲ್ಲ, ಅಥವಾ ಬಿಡ್ ನಂತರದ ಅವಶ್ಯಕತೆಯೂ ಅಲ್ಲ. ಇದು ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಬ್ರೌನ್‌ಫೀಲ್ಡ್ ವಿಮಾನ ನಿಲ್ದಾಣಗಳ ಸ್ಪರ್ಧೆಯನ್ನು ವಿಸ್ತರಿಸುತ್ತದೆ ” ಎಂದು ತಿಪ್ಪೆ ಸಾರಿಸಿದರು.

2019 ರ ಜುಲೈನಲ್ಲಿ ಹಣಕಾಸು ಸಚಿವಾಲಯದಿಂದ ವಿದ್ಯುತ್ ಸಚಿವಾಲಯಕ್ಕೆ ವರ್ಗಾವಣೆಯಾಗಿದ್ದ ಮತ್ತು ಈಗ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಸಲಹೆಗಾರರಾಗಿರುವ ಗಾರ್ಗ್ ಈ ವಿಷಯದ ಕುರಿತ ಪ್ರಶ್ನೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಆರು ವಿಮಾನ ನಿಲ್ದಾಣಗಳಿಗೆ ಬಿಡ್ ಗೆದ್ದ ಒಂದು ವರ್ಷದ ನಂತರ, ಅದಾನಿ ಗ್ರೂಪ್ 2020 ರ ಫೆಬ್ರವರಿಯಲ್ಲಿ ಅಹಮದಾಬಾದ್, ಮಂಗಳೂರು ಮತ್ತು ಲಕ್ನೋ ವಿಮಾನ ನಿಲ್ದಾಣಗಳಿಗೆ ಅನ್ವಯಿಸಿ, ರಿಯಾಯಿತಿ ಒಪ್ಪಂದಗಳಿಗೆ ಸಹಿ ಹಾಕಿತು.

ಒಂದು ತಿಂಗಳ ನಂತರ, ಅದಾನಿ ಗ್ರೂಪ್ ಎಎಐನಿಂದ ಮೂರು ವಿಮಾನ ನಿಲ್ದಾಣಗಳನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಫೆಬ್ರವರಿ 2021 ರವರೆಗೆ ಸಂಭವಿಸಿದ ವಿಳಂಬವನ್ನು ಕೋವಿಡ್ 19 ಸಾಂಕ್ರಾಮಿಕಕ್ಕೆ ಜೋಡಿಸಿತು. ಕೊನೆಗೆ 2020 ರ ವೇಳೆಗೆ ಈ ಮೂರು ವಿಮಾನ ನಿಲ್ದಾಣಗಳನ್ನು ಸ್ವಾಧೀನಪಡಿಸಿಕೊಳ್ಳಲು ಎಎಐ ಅದಾನಿ ಗ್ರೂಪ್‌ಗೆ ಸೂಚಿಸಿತ್ತು. ಈ ಆರು ವಿಮಾನ ನಿಲ್ದಾಣಗಳಲ್ಲಿ ಮೂರು – ಅಹಮದಾಬಾದ್, ಮಂಗಳೂರು ಮತ್ತು ಲಕ್ನೋ – 2020 ರ ನವೆಂಬರ್‌ನಲ್ಲಿ ಅದಾನಿ ಗ್ರೂಪ್‌ಗೆ ಹಸ್ತಾಂತರವಾದವು. ಇತರ ಮೂರು ವಿಮಾನ ನಿಲ್ದಾಣಗಳಿಗೆ ರಿಯಾಯಿತಿ ಒಪ್ಪಂದಕ್ಕೆ (ಜೈಪುರ , ಗುವಾಹಟಿ ಮತ್ತು ತಿರುವನಂತಪುರಂ) ಸೆಪ್ಟೆಂಬರ್‌ನಲ್ಲಿ ಎಎಐ ಮತ್ತು ಅದಾನಿ ಗ್ರೂಪ್ ನಡುವೆ ಸಹಿ ಹಾಕಲಾಯಿತು.

ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಉಲ್ಲೇಖಿಸಿ ಎಎಐನಿಂದ ಹೆಚ್ಚಿನ ಸಮಯವನ್ನು ಕೋರಿದ ಆರು ತಿಂಗಳೊಳಗೆ, ಅದಾನಿ ಗ್ರೂಪ್ ದೇಶದ ಎರಡನೇ ಅತಿದೊಡ್ಡ ನಿಲ್ದಾಣ ಎನಿಸಿದ ಮುಂಬೈ ವಿಮಾನ ನಿಲ್ದಾಣ ಮತ್ತು ನವೀ ಮುಂಬಯಿಯಲ್ಲಿ ಮುಂಬರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣವನ್ನು ಹೈದರಾಬಾದ್ ಮೂಲದ ಜಿವಿಕೆ ಯಿಂದ ನಿಯಂತ್ರಿಸುವ ಹಕ್ಕನ್ನು ಪಡೆದುಕೊಂಡಿತು.

ಎಎಐ ನಡೆಸುವ ಆರು ವಿಮಾನ ನಿಲ್ದಾಣಗಳಿಗೆ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ, ಅದಾನಿ ಗ್ರೂಪ್ ತನ್ನ ಪ್ರತಿಸ್ಪರ್ಧಿಗಳನ್ನು ಮೀರಿಸಿದೆ. ಅನುಭವಿ ಕಂಪನಿಗಳಾದ ಜಿಎಂಆರ್ ಗ್ರೂಪ್, ಜುರಿಚ್ ಮತ್ತು ಕೊಚ್ಚಿನ್ ಇಂಟರ್ ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ ಮತ್ತು ಇತರ ಮೂಲಸೌಕರ್ಯ ಕಂಪನಿಗಳ ಜೊತೆಗೆ ಸ್ಪರ್ಧಿಸಿದ ಅದಾನಿ ಗ್ರೂಪ್ ಎಲ್ಲಾ ಆರು ವಿಮಾನ ನಿಲ್ದಾಣಗಳನ್ನು 50 ವರ್ಷಗಳ ಅವಧಿಗೆ ನಿರ್ವಹಿಸುವ ಹಕ್ಕುಗಳನ್ನು ಪಡೆದುಕೊಂಡಿದೆ.

ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...