Homeಮುಖಪುಟಅದಾನಿಗೆ 6 ವಿಮಾನ ನಿಲ್ದಾಣಗಳ ನಿರ್ವಹಣೆ ನೀಡುವುದರ ವಿರುದ್ಧ ದನಿಯೆತ್ತಿದ್ದ ಹಣಕಾಸು ಇಲಾಖೆ, ನೀತಿ ಆಯೋಗ!...

ಅದಾನಿಗೆ 6 ವಿಮಾನ ನಿಲ್ದಾಣಗಳ ನಿರ್ವಹಣೆ ನೀಡುವುದರ ವಿರುದ್ಧ ದನಿಯೆತ್ತಿದ್ದ ಹಣಕಾಸು ಇಲಾಖೆ, ನೀತಿ ಆಯೋಗ! ಕಾರಣವೇನು?

ಒಂದೇ ವಿಮಾನಯಾನ ಸಂಸ್ಥೆಗೆ ಎರಡಕ್ಕಿಂತ ಹೆಚ್ಚು ವಿಮಾನ ನಿಲ್ದಾಣಗಳನ್ನು ನೀಡಬಾರದು. ಅವುಗಳನ್ನು ವಿವಿಧ ಕಂಪನಿಗಳಿಗೆ ನೀಡುವುದರಿಂದ ಆರೋಗ್ಯಕರ ಸ್ಪರ್ಧೆಗೆ ಸಹಕಾರಿಯಾಗುತ್ತದೆ.

- Advertisement -
- Advertisement -

2019ರಲ್ಲಿ ಅಹಮದಾಬಾದ್ ಮೂಲದ ಅದಾನಿ ಗ್ರೂಪ್‌ಗೆ ಆರು ವಿಮಾನ ನಿಲ್ದಾಣಗಳ ನಿರ್ವಹಣೆ ಕಾಮಗಾರಿ ವಹಿಸುವುದನ್ನು ಹಣಕಾಸು ಇಲಾಖೆ ಮತ್ತು ನೀತಿ ಆಯೋಗ ಆಕ್ಷೇಪಿಸಿದ್ದವು ಎಂದು ತನಗೆ ದೊರೆತ ಮಾಹಿತಿಗಳ ಆಧಾರದಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕಳೆದ ವರ್ಷ ಆಗಸ್ಟ್ 31 ರಂದು, ಮುಂಬೈನ ದೇಶದ ಎರಡನೇ ಅತಿದೊಡ್ಡ ವಿಮಾನ ನಿಲ್ದಾಣದ ನಿಯಂತ್ರಣ ಆಸಕ್ತಿಯನ್ನು ಪಡೆಯಲು ಅದಾನಿ ಗ್ರೂಪ್ ಮತ್ತೊಂದು ಒಪ್ಪಂದಕ್ಕೆ ಸಹಿ ಹಾಕಿದ್ದು, ಇದನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಜನವರಿ 12 ರಂದು ಅಂಗೀಕಾರ ಮಾಡಿದ್ದನ್ನು ಈ ಹಿನ್ನೆಲೆಯಲ್ಲಿ ನೋಡಬೇಕಿದೆ.

6 ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್ ಪಡೆದುಕೊಳ್ಳುವುದರ ವಿರುದ್ಧ ಹಣಕಾಸು ಇಲಾಖೆ ಮತ್ತು ನೀತಿ ಆಯೋಗ ಗಂಭೀರ ಆಕ್ಷೇಪ ಎತ್ತಿದ್ದವು. ಮುಂಬೈ ಜೊತೆಗೆ ಅಹಮದಾಬಾದ್, ಮಂಗಳೂರು, ಲಕ್ನೋ, ಜೈಪುರ, ಗುವಾಹಟಿ ಮತ್ತು ತಿರುವನಂತಪುರಂ ಸೇರಿ ಏಳು ವಿಮಾನ ನಿಲ್ದಾಣಗಳು ಕಳೆದ ಹಣಕಾಸು ವರ್ಷದಲ್ಲಿ (2019-20) 7.90 ಕೋಟಿ ಪ್ರಯಾಣಿಕರನ್ನು ನಿರ್ವಹಿಸಿವೆ. ಇದು ದೇಶೀಯ ವಾಯು ಪ್ರಯಾಣಿಕರ ದಟ್ಟಣೆಯ (ಅಂದಾಜು 34 ಕೋಟಿ) ನಾಲ್ಕನೇ ಒಂದು ಭಾಗಕ್ಕೆ ಸಮನಾಗಿದೆ.

ಅಹಮದಾಬಾದ್, ಲಕ್ನೋ, ಮಂಗಳೂರು, ಜೈಪುರ, ಗುವಾಹಟಿ ಮತ್ತು ತಿರುವನಂತಪುರಂನಲ್ಲಿನ ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕಾಗಿ ಬಿಡ್‌ಗಳನ್ನು ಆಹ್ವಾನಿಸುವ ಮೊದಲು (ಎನ್‌ಡಿಎ ಸರ್ಕಾರದ ಅತಿದೊಡ್ಡ ಖಾಸಗೀಕರಣ ಕಾರ್ಯಕ್ರಮ) ಕೇಂದ್ರದ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮೌಲ್ಯಮಾಪನ ಸಮಿತಿ (ಪಿಪಿಪಿಎಸಿ) ನಾಗರಿಕ ವಿಮಾನಯಾನ ಸಚಿವಾಲಯದ ಈ ಪ್ರಕ್ರಿಯೆಯ ಪ್ರಸ್ತಾಪವನ್ನು ಡಿಸೆಂಬರ್ 11, 2018 ರಂದು ಚರ್ಚಿಸಿದೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ದೊರೆತ ಮಿನಟ್‌ಗಳ ಪ್ರಕಾರ, ಚರ್ಚೆಯ ಸಮಯದಲ್ಲಿ, ಆರ್ಥಿಕ ವ್ಯವಹಾರಗಳ ಇಲಾಖೆಯ ಟಿಪ್ಪಣಿ ಹೀಗೆ ಹೇಳಿದೆ: “ಈ ಆರು ವಿಮಾನ ನಿಲ್ದಾಣಗಳ ಯೋಜನೆಗಳು ತೀವ್ರ ಬಂಡವಾಳ-ಕೇಂದ್ರಿತ ಯೋಜನೆಗಳಾಗಿವೆ, ಆದ್ದರಿಂದ ಹೆಚ್ಚಿನ ಷರತ್ತುಗಳನ್ನು ಸೇರಿಸಲು ಸೂಚಿಸಲಾಗಿದೆ. ಹೆಚ್ಚಿನ ಹಣಕಾಸಿನ ಅಪಾಯ ಮತ್ತು ಕಾರ್ಯಕ್ಷಮತೆಯ ಸಮಸ್ಯೆಗಳನ್ನು ಪರಿಗಣಿಸಲಾಗಿ, ಒಂದೇ ವಿಮಾನಯಾನ ಸಂಸ್ಥೆಗೆ ಎರಡಕ್ಕಿಂತ ಹೆಚ್ಚು ವಿಮಾನ ನಿಲ್ದಾಣಗಳನ್ನು ನೀಡಬಾರದು ಎಂದು ಸೂಚಿಸುತ್ತಿದ್ದೇವೆ. ಅವುಗಳನ್ನು ವಿವಿಧ ಕಂಪನಿಗಳಿಗೆ ನೀಡುವುದರಿಂದ ಆರೋಗ್ಯಕರ ಸ್ಪರ್ಧೆಗೆ ಸಹಕಾರಿಯಾಗುತ್ತದೆ.”

ಡಿಸೆಂಬರ್ 10, 2018 ರಂದು ಪಿಪಿಪಿಎಸಿಗೆ ಡಿಇಎ ಟಿಪ್ಪಣಿಯನ್ನು ಇಲಾಖೆಯ ಪಿಪಿಪಿ ಸೆಲ್‌ನಲ್ಲಿ ನಿರ್ದೇಶಕರು ಸಲ್ಲಿಸಿದ್ದಾರೆ. ತನ್ನ ವಾದವನ್ನು ಸಮರ್ಥಿಸಲು, ಡಿಇಎ ದೆಹಲಿ ಮತ್ತು ಮುಂಬೈ ವಿಮಾನ ನಿಲ್ದಾಣಗಳ ಪೂರ್ವನಿದರ್ಶನವನ್ನು ಉಲ್ಲೇಖಿಸಿದೆ. ಅಲ್ಲಿ ಜಿಎಂಆರ್ ಮೂಲತಃ ಏಕೈಕ ಅರ್ಹ ಬಿಡ್ಡರ್ ಆಗಿದ್ದರೂ, ಎರಡೂ ವಿಮಾನ ನಿಲ್ದಾಣಗಳನ್ನು ನೀಡಲಾಗಿಲ್ಲ. ಇದು ದೆಹಲಿಯ ವಿದ್ಯುತ್ ವಿತರಣೆಯ ಖಾಸಗೀಕರಣವನ್ನು ಸಹ ಉಲ್ಲೇಖಿಸುತ್ತದೆ. “ದೆಹಲಿ ವಿದ್ಯುತ್ ವಿತರಣೆ ಖಾಸಗೀಕರಣದ ಸಂದರ್ಭದಲ್ಲಿ, ನಗರವನ್ನು ಮೂರು ವಲಯಗಳಾಗಿ ವಿಂಗಡಿಸಿ. ಎರಡು ಕಂಪನಿಗಳಿಗೆ ಅವಕಾಶ ನೀಡಲಾಯಿತು” ಎಂದು ಅದು ಹೇಳಿದೆ.

ಪಿಪಿಪಿಎಸಿ ಸಭೆಯಲ್ಲಿ, ಡಿಇಎ ಎತ್ತಿದ ಈ ಆಕ್ಷೇಪಗಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಡಿಇಎ ಟಿಪ್ಪಣಿ ಹೊರಡಿಸಿದ ಅದೇ ದಿನ, ನೀತಿ ಆಯೋಗ್ ವಿಮಾನ ನಿಲ್ದಾಣದ ಬಿಡ್ಡಿಂಗ್ ಬಗ್ಗೆ ಪ್ರತ್ಯೇಕ ಕಳವಳವನ್ನು ವ್ಯಕ್ತಪಡಿಸಿತು. ಸರ್ಕಾರದ ಪ್ರಮುಖ ನೀತಿ ಥಿಂಕ್-ಟ್ಯಾಂಕ್‌ನ ಪಿಪಿಪಿ ಸಿದ್ಧಪಡಿಸಿದ ಜ್ಞಾಪಕದಲ್ಲಿ “ಸಾಕಷ್ಟು ತಾಂತ್ರಿಕ ಸಾಮರ್ಥ್ಯದ ಕೊರತೆಯಿರುವ ಬಿಡ್ಡರ್ ಯೋಜನೆಯನ್ನು ಅಪಾಯಕ್ಕೆ ತಳ್ಳಬಹುದು ಮತ್ತು ಸರ್ಕಾರವು ಒದಗಿಸಲು ಬದ್ಧವಾಗಿರುವ ಸೇವೆಗಳ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಹುದು” ಎಂದಿದೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಅಂದಿನ ಡಿಇಎ ಕಾರ್ಯದರ್ಶಿ ಎಸ್‌ಸಿ ಗರ್ಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪಿಪಿಪಿಎಸಿ – ಸಭೆಯಲ್ಲಿ, ಇಗೋಸ್ (ಕಾರ್ಯದರ್ಶಿಗಳ ಸಶಕ್ತ ಗುಂಪು) ಈಗಾಗಲೇ ವಿಮಾನ ನಿಲ್ದಾಣಗಳ ಬಿಡ್ಡಿಂಗ್‌ಗೆ ನಿರ್ಧರಿಸಿದೆ ಎಂದು ಹೇಳಲಾಗಿತು. “ವಿಮಾನ ನಿಲ್ದಾಣ ನಿರ್ವಹಣೆಯ ಅನುಭವ ಬಿಡ್ಡಿಂಗ್‌ಗೆ ಪೂರ್ವಾಪೇಕ್ಷಿತವಲ್ಲ, ಅಥವಾ ಬಿಡ್ ನಂತರದ ಅವಶ್ಯಕತೆಯೂ ಅಲ್ಲ. ಇದು ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಬ್ರೌನ್‌ಫೀಲ್ಡ್ ವಿಮಾನ ನಿಲ್ದಾಣಗಳ ಸ್ಪರ್ಧೆಯನ್ನು ವಿಸ್ತರಿಸುತ್ತದೆ ” ಎಂದು ತಿಪ್ಪೆ ಸಾರಿಸಿದರು.

2019 ರ ಜುಲೈನಲ್ಲಿ ಹಣಕಾಸು ಸಚಿವಾಲಯದಿಂದ ವಿದ್ಯುತ್ ಸಚಿವಾಲಯಕ್ಕೆ ವರ್ಗಾವಣೆಯಾಗಿದ್ದ ಮತ್ತು ಈಗ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಸಲಹೆಗಾರರಾಗಿರುವ ಗಾರ್ಗ್ ಈ ವಿಷಯದ ಕುರಿತ ಪ್ರಶ್ನೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಆರು ವಿಮಾನ ನಿಲ್ದಾಣಗಳಿಗೆ ಬಿಡ್ ಗೆದ್ದ ಒಂದು ವರ್ಷದ ನಂತರ, ಅದಾನಿ ಗ್ರೂಪ್ 2020 ರ ಫೆಬ್ರವರಿಯಲ್ಲಿ ಅಹಮದಾಬಾದ್, ಮಂಗಳೂರು ಮತ್ತು ಲಕ್ನೋ ವಿಮಾನ ನಿಲ್ದಾಣಗಳಿಗೆ ಅನ್ವಯಿಸಿ, ರಿಯಾಯಿತಿ ಒಪ್ಪಂದಗಳಿಗೆ ಸಹಿ ಹಾಕಿತು.

ಒಂದು ತಿಂಗಳ ನಂತರ, ಅದಾನಿ ಗ್ರೂಪ್ ಎಎಐನಿಂದ ಮೂರು ವಿಮಾನ ನಿಲ್ದಾಣಗಳನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಫೆಬ್ರವರಿ 2021 ರವರೆಗೆ ಸಂಭವಿಸಿದ ವಿಳಂಬವನ್ನು ಕೋವಿಡ್ 19 ಸಾಂಕ್ರಾಮಿಕಕ್ಕೆ ಜೋಡಿಸಿತು. ಕೊನೆಗೆ 2020 ರ ವೇಳೆಗೆ ಈ ಮೂರು ವಿಮಾನ ನಿಲ್ದಾಣಗಳನ್ನು ಸ್ವಾಧೀನಪಡಿಸಿಕೊಳ್ಳಲು ಎಎಐ ಅದಾನಿ ಗ್ರೂಪ್‌ಗೆ ಸೂಚಿಸಿತ್ತು. ಈ ಆರು ವಿಮಾನ ನಿಲ್ದಾಣಗಳಲ್ಲಿ ಮೂರು – ಅಹಮದಾಬಾದ್, ಮಂಗಳೂರು ಮತ್ತು ಲಕ್ನೋ – 2020 ರ ನವೆಂಬರ್‌ನಲ್ಲಿ ಅದಾನಿ ಗ್ರೂಪ್‌ಗೆ ಹಸ್ತಾಂತರವಾದವು. ಇತರ ಮೂರು ವಿಮಾನ ನಿಲ್ದಾಣಗಳಿಗೆ ರಿಯಾಯಿತಿ ಒಪ್ಪಂದಕ್ಕೆ (ಜೈಪುರ , ಗುವಾಹಟಿ ಮತ್ತು ತಿರುವನಂತಪುರಂ) ಸೆಪ್ಟೆಂಬರ್‌ನಲ್ಲಿ ಎಎಐ ಮತ್ತು ಅದಾನಿ ಗ್ರೂಪ್ ನಡುವೆ ಸಹಿ ಹಾಕಲಾಯಿತು.

ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಉಲ್ಲೇಖಿಸಿ ಎಎಐನಿಂದ ಹೆಚ್ಚಿನ ಸಮಯವನ್ನು ಕೋರಿದ ಆರು ತಿಂಗಳೊಳಗೆ, ಅದಾನಿ ಗ್ರೂಪ್ ದೇಶದ ಎರಡನೇ ಅತಿದೊಡ್ಡ ನಿಲ್ದಾಣ ಎನಿಸಿದ ಮುಂಬೈ ವಿಮಾನ ನಿಲ್ದಾಣ ಮತ್ತು ನವೀ ಮುಂಬಯಿಯಲ್ಲಿ ಮುಂಬರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣವನ್ನು ಹೈದರಾಬಾದ್ ಮೂಲದ ಜಿವಿಕೆ ಯಿಂದ ನಿಯಂತ್ರಿಸುವ ಹಕ್ಕನ್ನು ಪಡೆದುಕೊಂಡಿತು.

ಎಎಐ ನಡೆಸುವ ಆರು ವಿಮಾನ ನಿಲ್ದಾಣಗಳಿಗೆ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ, ಅದಾನಿ ಗ್ರೂಪ್ ತನ್ನ ಪ್ರತಿಸ್ಪರ್ಧಿಗಳನ್ನು ಮೀರಿಸಿದೆ. ಅನುಭವಿ ಕಂಪನಿಗಳಾದ ಜಿಎಂಆರ್ ಗ್ರೂಪ್, ಜುರಿಚ್ ಮತ್ತು ಕೊಚ್ಚಿನ್ ಇಂಟರ್ ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ ಮತ್ತು ಇತರ ಮೂಲಸೌಕರ್ಯ ಕಂಪನಿಗಳ ಜೊತೆಗೆ ಸ್ಪರ್ಧಿಸಿದ ಅದಾನಿ ಗ್ರೂಪ್ ಎಲ್ಲಾ ಆರು ವಿಮಾನ ನಿಲ್ದಾಣಗಳನ್ನು 50 ವರ್ಷಗಳ ಅವಧಿಗೆ ನಿರ್ವಹಿಸುವ ಹಕ್ಕುಗಳನ್ನು ಪಡೆದುಕೊಂಡಿದೆ.

ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...