Homeಮುಖಪುಟಏಷ್ಯಾದ 2 ನೇ ಶ್ರೀಮಂತ ವ್ಯಕ್ತಿಯಾಗಿ ‘ಅದಾನಿ’; ಒಂದು ದಿನದ ಆದಾಯ 1,002 ಕೋಟಿ!

ಏಷ್ಯಾದ 2 ನೇ ಶ್ರೀಮಂತ ವ್ಯಕ್ತಿಯಾಗಿ ‘ಅದಾನಿ’; ಒಂದು ದಿನದ ಆದಾಯ 1,002 ಕೋಟಿ!

ಇದೇ ಮೊದಲ ಬಾರಿಗೆ ಅಗ್ರ 10 ಶ್ರೀಮಂತರ ಪಟ್ಟಿಯಲ್ಲಿ ಅದಾನಿ ಸಹೋದರರು ಕಾಣಿಸಿಕೊಂಡಿದ್ದಾರೆ.

- Advertisement -
- Advertisement -

ಭಾರತದ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರ ಸಂಪತ್ತು ಕಳೆದ ಒಂದ ವರ್ಷದಲ್ಲಿ ನಾಲ್ಕು ಪಟ್ಟು ಹೆಚ್ಚಿದ್ದು, ಏಷ್ಯಾದ ಶ್ರೀಮಂತರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಕಳೆದ ವರ್ಷ ಅವರ ಸಂಪತ್ತು  1.40 ಲಕ್ಷ ಕೋಟಿ ರೂ. ಇತ್ತು. ಈ ವರ್ಷಕ್ಕೆ ಅದು 5.05 ಲಕ್ಷ ಕೋಟಿಗೆ ರೂ. ಹೆಚ್ಚಾಗಿದೆ ಎಂದು ಗುರುವಾರ ಬಿಡುಗಡೆಯಾದ ‘IIFL ವೆಲ್ತ್‌‌ ಹುರುನ್‌ ಇಂಡಿಯಾ ರಿಚ್‌- 2021’ ರ ಪಟ್ಟಿ ಹೇಳಿದೆ.

ಈ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ (RIL) ಅಧ್ಯಕ್ಷ ಮುಖೇಶ್ ಅಂಬಾನಿ ಅವರು ಸತತ ಹತ್ತು ವರ್ಷಗಳಲ್ಲೂ ಅಗ್ರ ಸ್ಥಾನ ಕಾಯ್ದಕೊಂಡಿದ್ದಾರೆ. ಕಳೆದ ಒಂದು ವರ್ಷದಲ್ಲಿ ಅವರು ಒಟ್ಟು 7.18 ಲಕ್ಷ ಕೋಟಿ ರೂ. ಆದಾಯ ಗಳಿಸಿಕೊಂಡಿದ್ದಾರೆ ಎಂದು ಪಟ್ಟಿ ಹೇಳಿದೆ.

ಇದನ್ನೂ ಓದಿ: ಅತಿ ಶ್ರೀಮಂತರ ಮೇಲೆ ತೆರಿಗೆ ವಿಧಿಸಿ, ಬಡಜನರಿಗೆ ಪರಿಹಾರ ಒದಗಿಸಿ: ರಾಜ್ಯಾದ್ಯಂತ ಜನಾಗ್ರಹ ಪ್ರತಿಭಟನೆ

ಅದಾನಿ ಅವರು ಈ ವರ್ಷ ಚೀನಾದ ಬಾಟಲ್ ವಾಟರ್ ಉತ್ಪಾದಕ ಜಾಂಗ್ ಶನ್ಶಾನ್ ಅವರನ್ನು ಹಿಂದಿಕ್ಕಿ ಏಷ್ಯಾದ ಎರಡನೇ ಶ್ರೀಮಂತರಾಗಿದ್ದಾರೆ. ಅದಾನಿಯ ಒಂದು ದಿನದ ಆದಾಯ 1,002 ಕೋಟಿಗೆ ಏರಿದೆ ಎಂದು ವರದಿ ತಿಳಿಸಿದೆ.

ಇದೇ ಮೊದಲ ಬಾರಿಗೆ ಅದಾನಿ ಸಹೋದರರು (ಗೌತಮ್ ಮತ್ತು ವಿನೋದ್ ಶಾಂತಿಲಾಲ್ ಅದಾನಿ) ಅಗ್ರ 10 ಶ್ರೀಮಂತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ವರದಿಯ ಪ್ರಕಾರ, ವಿನೋದ್ ಶಾಂತಿಲಾಲ್ ಅದಾನಿ ಅವರ ಸಂಪತ್ತು 1.31 ಲಕ್ಷ ಕೋಟಿಗೆ ಏರಿಕೆಯಾಗಿದ್ದು, ಅವರು ಪಟ್ಟಿಯ ಎಂಟನೇ ಸ್ಥಾನದಲ್ಲಿದ್ದಾರೆ.

ಹುರುನ್ ಇಂಡಿಯಾ ಶ್ರೀಮಂತ ಪಟ್ಟಿ-2021: ಈ ವರ್ಷ ಟಾಪ್ 10 ಶ್ರೀಮಂತ ಭಾರತೀಯರ ಪಟ್ಟಿ ಹೀಗಿದೆ

  • ಮುಖೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್): 7,18,000 ಕೋಟಿ ರೂ.
  • ಗೌತಮ್ ಅದಾನಿ (ಅದಾನಿ ಗ್ರೂಪ್): 5,05,900 ಕೋಟಿ ರೂ.
  • ಶಿವ್ ನಾಡಾರ್ (HCL): 2,36,600 ಕೋಟಿ ರೂ.
  • ಎಸ್ಪಿ ಹಿಂದುಜಾ (ಹಿಂದುಜಾ ಗ್ರೂಪ್): 2,20,000 ಕೋಟಿ ರೂ.
  • ಲಕ್ಷ್ಮಿ ಮಿತ್ತಲ್ (ಆರ್ಸೆಲರ್ ಮಿತ್ತಲ್): 1,74,400 ಕೋಟಿ ರೂ.
  • ಸೈರಸ್ ಪೂನವಲ್ಲ (ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ): 1,63,700 ಕೋಟಿ ರೂ.
  • ರಾಧಕಿಶನ್ ದಮಾನಿ (ಅವೆನ್ಯೂ ಸೂಪರ್ಮಾರ್ಟ್ಸ್): 1,54,300 ಕೋಟಿ ರೂ.
  • ವಿನೋದ್ ಶಾಂತಿಲಾಲ್ ಅದಾನಿ (ಅದಾನಿ ಗ್ರೂಪ್): 1,31,600 ಕೋಟಿ ರೂ.
  • ಕುಮಾರ್ ಮಂಗಳಂ ಬಿರ್ಲಾ (ಆದಿತ್ಯ ಬಿರ್ಲಾ): 1,22,200 ಕೋಟಿ ರೂ.
  • ಜೈ ಚೌಧರಿ (Zscaler): 1,21,600 ಕೋಟಿ ರೂ.

ಇದನ್ನೂ ಓದಿ: ಅತಿ ಶ್ರೀಮಂತರ ಮೇಲೆ ’ಕೋವಿಡ್ ತೆರಿಗೆ’ ವಿಧಿಸಲೇಬೇಕಿದೆ: ವಿಕಾಸ್ ಮೌರ್ಯ

ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ಕಮ್ಯುನಿಷ್ಟ್‌ ಪಕ್ಷ(ಮಾರ್ಕ್ಸ್‌‌ವಾದಿ)ದ ಪಾಲಿಟ್‌ಬ್ಯೂರೋ ಸದಸ್ಯ ಸೀತಾರಾಮ್ ಯೆಚೂರಿ, “ನಿರುದ್ಯೋಗವು ಹೆಚ್ಚಾದಂತೆ, ಹಸಿವಿನ ಮಟ್ಟವು ಹೆಚ್ಚಾಗುತ್ತಿದೆ. ಬಡತನ ಮತ್ತು ಏರುತ್ತಿರುವ ಹಣದುಬ್ಬರವು ಜನರ ಜೀವನವನ್ನು ನಾಶಪಡಿಸುತ್ತಿದೆ. ಆದರೆ ಶ್ರೀಮಂತರು ಮಾತ್ರ ಇನ್ನೂ ಹೆಚ್ಚು ಶ್ರೀಮಂತರಾಗುತ್ತಿದ್ದಾರೆ. ಈ ಸಮಯದಲ್ಲಿ ಜನರ ಕಲ್ಯಾಣಕ್ಕಾಗಿ ಸಂಪನ್ಮೂಲಗಳನ್ನು ಹೆಚ್ಚು ಮಾಡುವುದಕ್ಕಾಗಿ ಅತಿ ಶ್ರೀಮಂತರಿಗೆ ಹೆಚ್ಚು ತೆರಿಗೆ(ಸೂಪರ್‌ ರಿಚ್ ಟ್ಯಾಕ್ಸ್‌)ಯನ್ನು ಹಾಕುವ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು” ಎಂದು ಹೇಳಿದ್ದಾರೆ.

ವರದಿ ಬಿಡುಗಡೆಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. “ಉದ್ಯೋಗ ನಷ್ಟ ಮತ್ತು ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಆದಾಯ ಕುಸಿದಿದೆ. ಆದರೆ, ದೇಶದ ಉದ್ಯಮಪತಿಗಳ ಸಂಪತ್ತು ಹೆಚ್ಚಾಗುತ್ತಿದೆ. ದೇಶದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಶ್ರೀಮಂತರ ಪರವಾಗಿ ರೂಪಿಸುತ್ತಿರುವ ನೀತಿಗಳೇ ಕಾರಣ” ಎಂದು ಹಲವಾರು ಜನರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಬಿಲಿಯನೇರ್ ಬೂಮ್: ಶ್ರೀಮಂತರ ಜೇಬುಗಳನ್ನು ಸೇರಿದ ಕೋವಿಡ್ ಕ್ಯಾಷ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...