Homeಮುಖಪುಟಏಷ್ಯಾದ 2 ನೇ ಶ್ರೀಮಂತ ವ್ಯಕ್ತಿಯಾಗಿ ‘ಅದಾನಿ’; ಒಂದು ದಿನದ ಆದಾಯ 1,002 ಕೋಟಿ!

ಏಷ್ಯಾದ 2 ನೇ ಶ್ರೀಮಂತ ವ್ಯಕ್ತಿಯಾಗಿ ‘ಅದಾನಿ’; ಒಂದು ದಿನದ ಆದಾಯ 1,002 ಕೋಟಿ!

ಇದೇ ಮೊದಲ ಬಾರಿಗೆ ಅಗ್ರ 10 ಶ್ರೀಮಂತರ ಪಟ್ಟಿಯಲ್ಲಿ ಅದಾನಿ ಸಹೋದರರು ಕಾಣಿಸಿಕೊಂಡಿದ್ದಾರೆ.

- Advertisement -
- Advertisement -

ಭಾರತದ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರ ಸಂಪತ್ತು ಕಳೆದ ಒಂದ ವರ್ಷದಲ್ಲಿ ನಾಲ್ಕು ಪಟ್ಟು ಹೆಚ್ಚಿದ್ದು, ಏಷ್ಯಾದ ಶ್ರೀಮಂತರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಕಳೆದ ವರ್ಷ ಅವರ ಸಂಪತ್ತು  1.40 ಲಕ್ಷ ಕೋಟಿ ರೂ. ಇತ್ತು. ಈ ವರ್ಷಕ್ಕೆ ಅದು 5.05 ಲಕ್ಷ ಕೋಟಿಗೆ ರೂ. ಹೆಚ್ಚಾಗಿದೆ ಎಂದು ಗುರುವಾರ ಬಿಡುಗಡೆಯಾದ ‘IIFL ವೆಲ್ತ್‌‌ ಹುರುನ್‌ ಇಂಡಿಯಾ ರಿಚ್‌- 2021’ ರ ಪಟ್ಟಿ ಹೇಳಿದೆ.

ಈ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ (RIL) ಅಧ್ಯಕ್ಷ ಮುಖೇಶ್ ಅಂಬಾನಿ ಅವರು ಸತತ ಹತ್ತು ವರ್ಷಗಳಲ್ಲೂ ಅಗ್ರ ಸ್ಥಾನ ಕಾಯ್ದಕೊಂಡಿದ್ದಾರೆ. ಕಳೆದ ಒಂದು ವರ್ಷದಲ್ಲಿ ಅವರು ಒಟ್ಟು 7.18 ಲಕ್ಷ ಕೋಟಿ ರೂ. ಆದಾಯ ಗಳಿಸಿಕೊಂಡಿದ್ದಾರೆ ಎಂದು ಪಟ್ಟಿ ಹೇಳಿದೆ.

ಇದನ್ನೂ ಓದಿ: ಅತಿ ಶ್ರೀಮಂತರ ಮೇಲೆ ತೆರಿಗೆ ವಿಧಿಸಿ, ಬಡಜನರಿಗೆ ಪರಿಹಾರ ಒದಗಿಸಿ: ರಾಜ್ಯಾದ್ಯಂತ ಜನಾಗ್ರಹ ಪ್ರತಿಭಟನೆ

ಅದಾನಿ ಅವರು ಈ ವರ್ಷ ಚೀನಾದ ಬಾಟಲ್ ವಾಟರ್ ಉತ್ಪಾದಕ ಜಾಂಗ್ ಶನ್ಶಾನ್ ಅವರನ್ನು ಹಿಂದಿಕ್ಕಿ ಏಷ್ಯಾದ ಎರಡನೇ ಶ್ರೀಮಂತರಾಗಿದ್ದಾರೆ. ಅದಾನಿಯ ಒಂದು ದಿನದ ಆದಾಯ 1,002 ಕೋಟಿಗೆ ಏರಿದೆ ಎಂದು ವರದಿ ತಿಳಿಸಿದೆ.

ಇದೇ ಮೊದಲ ಬಾರಿಗೆ ಅದಾನಿ ಸಹೋದರರು (ಗೌತಮ್ ಮತ್ತು ವಿನೋದ್ ಶಾಂತಿಲಾಲ್ ಅದಾನಿ) ಅಗ್ರ 10 ಶ್ರೀಮಂತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ವರದಿಯ ಪ್ರಕಾರ, ವಿನೋದ್ ಶಾಂತಿಲಾಲ್ ಅದಾನಿ ಅವರ ಸಂಪತ್ತು 1.31 ಲಕ್ಷ ಕೋಟಿಗೆ ಏರಿಕೆಯಾಗಿದ್ದು, ಅವರು ಪಟ್ಟಿಯ ಎಂಟನೇ ಸ್ಥಾನದಲ್ಲಿದ್ದಾರೆ.

ಹುರುನ್ ಇಂಡಿಯಾ ಶ್ರೀಮಂತ ಪಟ್ಟಿ-2021: ಈ ವರ್ಷ ಟಾಪ್ 10 ಶ್ರೀಮಂತ ಭಾರತೀಯರ ಪಟ್ಟಿ ಹೀಗಿದೆ

  • ಮುಖೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್): 7,18,000 ಕೋಟಿ ರೂ.
  • ಗೌತಮ್ ಅದಾನಿ (ಅದಾನಿ ಗ್ರೂಪ್): 5,05,900 ಕೋಟಿ ರೂ.
  • ಶಿವ್ ನಾಡಾರ್ (HCL): 2,36,600 ಕೋಟಿ ರೂ.
  • ಎಸ್ಪಿ ಹಿಂದುಜಾ (ಹಿಂದುಜಾ ಗ್ರೂಪ್): 2,20,000 ಕೋಟಿ ರೂ.
  • ಲಕ್ಷ್ಮಿ ಮಿತ್ತಲ್ (ಆರ್ಸೆಲರ್ ಮಿತ್ತಲ್): 1,74,400 ಕೋಟಿ ರೂ.
  • ಸೈರಸ್ ಪೂನವಲ್ಲ (ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ): 1,63,700 ಕೋಟಿ ರೂ.
  • ರಾಧಕಿಶನ್ ದಮಾನಿ (ಅವೆನ್ಯೂ ಸೂಪರ್ಮಾರ್ಟ್ಸ್): 1,54,300 ಕೋಟಿ ರೂ.
  • ವಿನೋದ್ ಶಾಂತಿಲಾಲ್ ಅದಾನಿ (ಅದಾನಿ ಗ್ರೂಪ್): 1,31,600 ಕೋಟಿ ರೂ.
  • ಕುಮಾರ್ ಮಂಗಳಂ ಬಿರ್ಲಾ (ಆದಿತ್ಯ ಬಿರ್ಲಾ): 1,22,200 ಕೋಟಿ ರೂ.
  • ಜೈ ಚೌಧರಿ (Zscaler): 1,21,600 ಕೋಟಿ ರೂ.

ಇದನ್ನೂ ಓದಿ: ಅತಿ ಶ್ರೀಮಂತರ ಮೇಲೆ ’ಕೋವಿಡ್ ತೆರಿಗೆ’ ವಿಧಿಸಲೇಬೇಕಿದೆ: ವಿಕಾಸ್ ಮೌರ್ಯ

ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ಕಮ್ಯುನಿಷ್ಟ್‌ ಪಕ್ಷ(ಮಾರ್ಕ್ಸ್‌‌ವಾದಿ)ದ ಪಾಲಿಟ್‌ಬ್ಯೂರೋ ಸದಸ್ಯ ಸೀತಾರಾಮ್ ಯೆಚೂರಿ, “ನಿರುದ್ಯೋಗವು ಹೆಚ್ಚಾದಂತೆ, ಹಸಿವಿನ ಮಟ್ಟವು ಹೆಚ್ಚಾಗುತ್ತಿದೆ. ಬಡತನ ಮತ್ತು ಏರುತ್ತಿರುವ ಹಣದುಬ್ಬರವು ಜನರ ಜೀವನವನ್ನು ನಾಶಪಡಿಸುತ್ತಿದೆ. ಆದರೆ ಶ್ರೀಮಂತರು ಮಾತ್ರ ಇನ್ನೂ ಹೆಚ್ಚು ಶ್ರೀಮಂತರಾಗುತ್ತಿದ್ದಾರೆ. ಈ ಸಮಯದಲ್ಲಿ ಜನರ ಕಲ್ಯಾಣಕ್ಕಾಗಿ ಸಂಪನ್ಮೂಲಗಳನ್ನು ಹೆಚ್ಚು ಮಾಡುವುದಕ್ಕಾಗಿ ಅತಿ ಶ್ರೀಮಂತರಿಗೆ ಹೆಚ್ಚು ತೆರಿಗೆ(ಸೂಪರ್‌ ರಿಚ್ ಟ್ಯಾಕ್ಸ್‌)ಯನ್ನು ಹಾಕುವ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು” ಎಂದು ಹೇಳಿದ್ದಾರೆ.

ವರದಿ ಬಿಡುಗಡೆಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. “ಉದ್ಯೋಗ ನಷ್ಟ ಮತ್ತು ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಆದಾಯ ಕುಸಿದಿದೆ. ಆದರೆ, ದೇಶದ ಉದ್ಯಮಪತಿಗಳ ಸಂಪತ್ತು ಹೆಚ್ಚಾಗುತ್ತಿದೆ. ದೇಶದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಶ್ರೀಮಂತರ ಪರವಾಗಿ ರೂಪಿಸುತ್ತಿರುವ ನೀತಿಗಳೇ ಕಾರಣ” ಎಂದು ಹಲವಾರು ಜನರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಬಿಲಿಯನೇರ್ ಬೂಮ್: ಶ್ರೀಮಂತರ ಜೇಬುಗಳನ್ನು ಸೇರಿದ ಕೋವಿಡ್ ಕ್ಯಾಷ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....