Homeಮುಖಪುಟಏಷ್ಯಾದ 2 ನೇ ಶ್ರೀಮಂತ ವ್ಯಕ್ತಿಯಾಗಿ ‘ಅದಾನಿ’; ಒಂದು ದಿನದ ಆದಾಯ 1,002 ಕೋಟಿ!

ಏಷ್ಯಾದ 2 ನೇ ಶ್ರೀಮಂತ ವ್ಯಕ್ತಿಯಾಗಿ ‘ಅದಾನಿ’; ಒಂದು ದಿನದ ಆದಾಯ 1,002 ಕೋಟಿ!

ಇದೇ ಮೊದಲ ಬಾರಿಗೆ ಅಗ್ರ 10 ಶ್ರೀಮಂತರ ಪಟ್ಟಿಯಲ್ಲಿ ಅದಾನಿ ಸಹೋದರರು ಕಾಣಿಸಿಕೊಂಡಿದ್ದಾರೆ.

- Advertisement -
- Advertisement -

ಭಾರತದ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರ ಸಂಪತ್ತು ಕಳೆದ ಒಂದ ವರ್ಷದಲ್ಲಿ ನಾಲ್ಕು ಪಟ್ಟು ಹೆಚ್ಚಿದ್ದು, ಏಷ್ಯಾದ ಶ್ರೀಮಂತರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಕಳೆದ ವರ್ಷ ಅವರ ಸಂಪತ್ತು  1.40 ಲಕ್ಷ ಕೋಟಿ ರೂ. ಇತ್ತು. ಈ ವರ್ಷಕ್ಕೆ ಅದು 5.05 ಲಕ್ಷ ಕೋಟಿಗೆ ರೂ. ಹೆಚ್ಚಾಗಿದೆ ಎಂದು ಗುರುವಾರ ಬಿಡುಗಡೆಯಾದ ‘IIFL ವೆಲ್ತ್‌‌ ಹುರುನ್‌ ಇಂಡಿಯಾ ರಿಚ್‌- 2021’ ರ ಪಟ್ಟಿ ಹೇಳಿದೆ.

ಈ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ (RIL) ಅಧ್ಯಕ್ಷ ಮುಖೇಶ್ ಅಂಬಾನಿ ಅವರು ಸತತ ಹತ್ತು ವರ್ಷಗಳಲ್ಲೂ ಅಗ್ರ ಸ್ಥಾನ ಕಾಯ್ದಕೊಂಡಿದ್ದಾರೆ. ಕಳೆದ ಒಂದು ವರ್ಷದಲ್ಲಿ ಅವರು ಒಟ್ಟು 7.18 ಲಕ್ಷ ಕೋಟಿ ರೂ. ಆದಾಯ ಗಳಿಸಿಕೊಂಡಿದ್ದಾರೆ ಎಂದು ಪಟ್ಟಿ ಹೇಳಿದೆ.

ಇದನ್ನೂ ಓದಿ: ಅತಿ ಶ್ರೀಮಂತರ ಮೇಲೆ ತೆರಿಗೆ ವಿಧಿಸಿ, ಬಡಜನರಿಗೆ ಪರಿಹಾರ ಒದಗಿಸಿ: ರಾಜ್ಯಾದ್ಯಂತ ಜನಾಗ್ರಹ ಪ್ರತಿಭಟನೆ

ಅದಾನಿ ಅವರು ಈ ವರ್ಷ ಚೀನಾದ ಬಾಟಲ್ ವಾಟರ್ ಉತ್ಪಾದಕ ಜಾಂಗ್ ಶನ್ಶಾನ್ ಅವರನ್ನು ಹಿಂದಿಕ್ಕಿ ಏಷ್ಯಾದ ಎರಡನೇ ಶ್ರೀಮಂತರಾಗಿದ್ದಾರೆ. ಅದಾನಿಯ ಒಂದು ದಿನದ ಆದಾಯ 1,002 ಕೋಟಿಗೆ ಏರಿದೆ ಎಂದು ವರದಿ ತಿಳಿಸಿದೆ.

ಇದೇ ಮೊದಲ ಬಾರಿಗೆ ಅದಾನಿ ಸಹೋದರರು (ಗೌತಮ್ ಮತ್ತು ವಿನೋದ್ ಶಾಂತಿಲಾಲ್ ಅದಾನಿ) ಅಗ್ರ 10 ಶ್ರೀಮಂತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ವರದಿಯ ಪ್ರಕಾರ, ವಿನೋದ್ ಶಾಂತಿಲಾಲ್ ಅದಾನಿ ಅವರ ಸಂಪತ್ತು 1.31 ಲಕ್ಷ ಕೋಟಿಗೆ ಏರಿಕೆಯಾಗಿದ್ದು, ಅವರು ಪಟ್ಟಿಯ ಎಂಟನೇ ಸ್ಥಾನದಲ್ಲಿದ್ದಾರೆ.

ಹುರುನ್ ಇಂಡಿಯಾ ಶ್ರೀಮಂತ ಪಟ್ಟಿ-2021: ಈ ವರ್ಷ ಟಾಪ್ 10 ಶ್ರೀಮಂತ ಭಾರತೀಯರ ಪಟ್ಟಿ ಹೀಗಿದೆ

  • ಮುಖೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್): 7,18,000 ಕೋಟಿ ರೂ.
  • ಗೌತಮ್ ಅದಾನಿ (ಅದಾನಿ ಗ್ರೂಪ್): 5,05,900 ಕೋಟಿ ರೂ.
  • ಶಿವ್ ನಾಡಾರ್ (HCL): 2,36,600 ಕೋಟಿ ರೂ.
  • ಎಸ್ಪಿ ಹಿಂದುಜಾ (ಹಿಂದುಜಾ ಗ್ರೂಪ್): 2,20,000 ಕೋಟಿ ರೂ.
  • ಲಕ್ಷ್ಮಿ ಮಿತ್ತಲ್ (ಆರ್ಸೆಲರ್ ಮಿತ್ತಲ್): 1,74,400 ಕೋಟಿ ರೂ.
  • ಸೈರಸ್ ಪೂನವಲ್ಲ (ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ): 1,63,700 ಕೋಟಿ ರೂ.
  • ರಾಧಕಿಶನ್ ದಮಾನಿ (ಅವೆನ್ಯೂ ಸೂಪರ್ಮಾರ್ಟ್ಸ್): 1,54,300 ಕೋಟಿ ರೂ.
  • ವಿನೋದ್ ಶಾಂತಿಲಾಲ್ ಅದಾನಿ (ಅದಾನಿ ಗ್ರೂಪ್): 1,31,600 ಕೋಟಿ ರೂ.
  • ಕುಮಾರ್ ಮಂಗಳಂ ಬಿರ್ಲಾ (ಆದಿತ್ಯ ಬಿರ್ಲಾ): 1,22,200 ಕೋಟಿ ರೂ.
  • ಜೈ ಚೌಧರಿ (Zscaler): 1,21,600 ಕೋಟಿ ರೂ.

ಇದನ್ನೂ ಓದಿ: ಅತಿ ಶ್ರೀಮಂತರ ಮೇಲೆ ’ಕೋವಿಡ್ ತೆರಿಗೆ’ ವಿಧಿಸಲೇಬೇಕಿದೆ: ವಿಕಾಸ್ ಮೌರ್ಯ

ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ಕಮ್ಯುನಿಷ್ಟ್‌ ಪಕ್ಷ(ಮಾರ್ಕ್ಸ್‌‌ವಾದಿ)ದ ಪಾಲಿಟ್‌ಬ್ಯೂರೋ ಸದಸ್ಯ ಸೀತಾರಾಮ್ ಯೆಚೂರಿ, “ನಿರುದ್ಯೋಗವು ಹೆಚ್ಚಾದಂತೆ, ಹಸಿವಿನ ಮಟ್ಟವು ಹೆಚ್ಚಾಗುತ್ತಿದೆ. ಬಡತನ ಮತ್ತು ಏರುತ್ತಿರುವ ಹಣದುಬ್ಬರವು ಜನರ ಜೀವನವನ್ನು ನಾಶಪಡಿಸುತ್ತಿದೆ. ಆದರೆ ಶ್ರೀಮಂತರು ಮಾತ್ರ ಇನ್ನೂ ಹೆಚ್ಚು ಶ್ರೀಮಂತರಾಗುತ್ತಿದ್ದಾರೆ. ಈ ಸಮಯದಲ್ಲಿ ಜನರ ಕಲ್ಯಾಣಕ್ಕಾಗಿ ಸಂಪನ್ಮೂಲಗಳನ್ನು ಹೆಚ್ಚು ಮಾಡುವುದಕ್ಕಾಗಿ ಅತಿ ಶ್ರೀಮಂತರಿಗೆ ಹೆಚ್ಚು ತೆರಿಗೆ(ಸೂಪರ್‌ ರಿಚ್ ಟ್ಯಾಕ್ಸ್‌)ಯನ್ನು ಹಾಕುವ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು” ಎಂದು ಹೇಳಿದ್ದಾರೆ.

ವರದಿ ಬಿಡುಗಡೆಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. “ಉದ್ಯೋಗ ನಷ್ಟ ಮತ್ತು ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಆದಾಯ ಕುಸಿದಿದೆ. ಆದರೆ, ದೇಶದ ಉದ್ಯಮಪತಿಗಳ ಸಂಪತ್ತು ಹೆಚ್ಚಾಗುತ್ತಿದೆ. ದೇಶದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಶ್ರೀಮಂತರ ಪರವಾಗಿ ರೂಪಿಸುತ್ತಿರುವ ನೀತಿಗಳೇ ಕಾರಣ” ಎಂದು ಹಲವಾರು ಜನರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಬಿಲಿಯನೇರ್ ಬೂಮ್: ಶ್ರೀಮಂತರ ಜೇಬುಗಳನ್ನು ಸೇರಿದ ಕೋವಿಡ್ ಕ್ಯಾಷ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...