Homeಮುಖಪುಟಏಷ್ಯಾದ 2 ನೇ ಶ್ರೀಮಂತ ವ್ಯಕ್ತಿಯಾಗಿ ‘ಅದಾನಿ’; ಒಂದು ದಿನದ ಆದಾಯ 1,002 ಕೋಟಿ!

ಏಷ್ಯಾದ 2 ನೇ ಶ್ರೀಮಂತ ವ್ಯಕ್ತಿಯಾಗಿ ‘ಅದಾನಿ’; ಒಂದು ದಿನದ ಆದಾಯ 1,002 ಕೋಟಿ!

ಇದೇ ಮೊದಲ ಬಾರಿಗೆ ಅಗ್ರ 10 ಶ್ರೀಮಂತರ ಪಟ್ಟಿಯಲ್ಲಿ ಅದಾನಿ ಸಹೋದರರು ಕಾಣಿಸಿಕೊಂಡಿದ್ದಾರೆ.

- Advertisement -
- Advertisement -

ಭಾರತದ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರ ಸಂಪತ್ತು ಕಳೆದ ಒಂದ ವರ್ಷದಲ್ಲಿ ನಾಲ್ಕು ಪಟ್ಟು ಹೆಚ್ಚಿದ್ದು, ಏಷ್ಯಾದ ಶ್ರೀಮಂತರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಕಳೆದ ವರ್ಷ ಅವರ ಸಂಪತ್ತು  1.40 ಲಕ್ಷ ಕೋಟಿ ರೂ. ಇತ್ತು. ಈ ವರ್ಷಕ್ಕೆ ಅದು 5.05 ಲಕ್ಷ ಕೋಟಿಗೆ ರೂ. ಹೆಚ್ಚಾಗಿದೆ ಎಂದು ಗುರುವಾರ ಬಿಡುಗಡೆಯಾದ ‘IIFL ವೆಲ್ತ್‌‌ ಹುರುನ್‌ ಇಂಡಿಯಾ ರಿಚ್‌- 2021’ ರ ಪಟ್ಟಿ ಹೇಳಿದೆ.

ಈ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ (RIL) ಅಧ್ಯಕ್ಷ ಮುಖೇಶ್ ಅಂಬಾನಿ ಅವರು ಸತತ ಹತ್ತು ವರ್ಷಗಳಲ್ಲೂ ಅಗ್ರ ಸ್ಥಾನ ಕಾಯ್ದಕೊಂಡಿದ್ದಾರೆ. ಕಳೆದ ಒಂದು ವರ್ಷದಲ್ಲಿ ಅವರು ಒಟ್ಟು 7.18 ಲಕ್ಷ ಕೋಟಿ ರೂ. ಆದಾಯ ಗಳಿಸಿಕೊಂಡಿದ್ದಾರೆ ಎಂದು ಪಟ್ಟಿ ಹೇಳಿದೆ.

ಇದನ್ನೂ ಓದಿ: ಅತಿ ಶ್ರೀಮಂತರ ಮೇಲೆ ತೆರಿಗೆ ವಿಧಿಸಿ, ಬಡಜನರಿಗೆ ಪರಿಹಾರ ಒದಗಿಸಿ: ರಾಜ್ಯಾದ್ಯಂತ ಜನಾಗ್ರಹ ಪ್ರತಿಭಟನೆ

ಅದಾನಿ ಅವರು ಈ ವರ್ಷ ಚೀನಾದ ಬಾಟಲ್ ವಾಟರ್ ಉತ್ಪಾದಕ ಜಾಂಗ್ ಶನ್ಶಾನ್ ಅವರನ್ನು ಹಿಂದಿಕ್ಕಿ ಏಷ್ಯಾದ ಎರಡನೇ ಶ್ರೀಮಂತರಾಗಿದ್ದಾರೆ. ಅದಾನಿಯ ಒಂದು ದಿನದ ಆದಾಯ 1,002 ಕೋಟಿಗೆ ಏರಿದೆ ಎಂದು ವರದಿ ತಿಳಿಸಿದೆ.

ಇದೇ ಮೊದಲ ಬಾರಿಗೆ ಅದಾನಿ ಸಹೋದರರು (ಗೌತಮ್ ಮತ್ತು ವಿನೋದ್ ಶಾಂತಿಲಾಲ್ ಅದಾನಿ) ಅಗ್ರ 10 ಶ್ರೀಮಂತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ವರದಿಯ ಪ್ರಕಾರ, ವಿನೋದ್ ಶಾಂತಿಲಾಲ್ ಅದಾನಿ ಅವರ ಸಂಪತ್ತು 1.31 ಲಕ್ಷ ಕೋಟಿಗೆ ಏರಿಕೆಯಾಗಿದ್ದು, ಅವರು ಪಟ್ಟಿಯ ಎಂಟನೇ ಸ್ಥಾನದಲ್ಲಿದ್ದಾರೆ.

ಹುರುನ್ ಇಂಡಿಯಾ ಶ್ರೀಮಂತ ಪಟ್ಟಿ-2021: ಈ ವರ್ಷ ಟಾಪ್ 10 ಶ್ರೀಮಂತ ಭಾರತೀಯರ ಪಟ್ಟಿ ಹೀಗಿದೆ

  • ಮುಖೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್): 7,18,000 ಕೋಟಿ ರೂ.
  • ಗೌತಮ್ ಅದಾನಿ (ಅದಾನಿ ಗ್ರೂಪ್): 5,05,900 ಕೋಟಿ ರೂ.
  • ಶಿವ್ ನಾಡಾರ್ (HCL): 2,36,600 ಕೋಟಿ ರೂ.
  • ಎಸ್ಪಿ ಹಿಂದುಜಾ (ಹಿಂದುಜಾ ಗ್ರೂಪ್): 2,20,000 ಕೋಟಿ ರೂ.
  • ಲಕ್ಷ್ಮಿ ಮಿತ್ತಲ್ (ಆರ್ಸೆಲರ್ ಮಿತ್ತಲ್): 1,74,400 ಕೋಟಿ ರೂ.
  • ಸೈರಸ್ ಪೂನವಲ್ಲ (ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ): 1,63,700 ಕೋಟಿ ರೂ.
  • ರಾಧಕಿಶನ್ ದಮಾನಿ (ಅವೆನ್ಯೂ ಸೂಪರ್ಮಾರ್ಟ್ಸ್): 1,54,300 ಕೋಟಿ ರೂ.
  • ವಿನೋದ್ ಶಾಂತಿಲಾಲ್ ಅದಾನಿ (ಅದಾನಿ ಗ್ರೂಪ್): 1,31,600 ಕೋಟಿ ರೂ.
  • ಕುಮಾರ್ ಮಂಗಳಂ ಬಿರ್ಲಾ (ಆದಿತ್ಯ ಬಿರ್ಲಾ): 1,22,200 ಕೋಟಿ ರೂ.
  • ಜೈ ಚೌಧರಿ (Zscaler): 1,21,600 ಕೋಟಿ ರೂ.

ಇದನ್ನೂ ಓದಿ: ಅತಿ ಶ್ರೀಮಂತರ ಮೇಲೆ ’ಕೋವಿಡ್ ತೆರಿಗೆ’ ವಿಧಿಸಲೇಬೇಕಿದೆ: ವಿಕಾಸ್ ಮೌರ್ಯ

ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ಕಮ್ಯುನಿಷ್ಟ್‌ ಪಕ್ಷ(ಮಾರ್ಕ್ಸ್‌‌ವಾದಿ)ದ ಪಾಲಿಟ್‌ಬ್ಯೂರೋ ಸದಸ್ಯ ಸೀತಾರಾಮ್ ಯೆಚೂರಿ, “ನಿರುದ್ಯೋಗವು ಹೆಚ್ಚಾದಂತೆ, ಹಸಿವಿನ ಮಟ್ಟವು ಹೆಚ್ಚಾಗುತ್ತಿದೆ. ಬಡತನ ಮತ್ತು ಏರುತ್ತಿರುವ ಹಣದುಬ್ಬರವು ಜನರ ಜೀವನವನ್ನು ನಾಶಪಡಿಸುತ್ತಿದೆ. ಆದರೆ ಶ್ರೀಮಂತರು ಮಾತ್ರ ಇನ್ನೂ ಹೆಚ್ಚು ಶ್ರೀಮಂತರಾಗುತ್ತಿದ್ದಾರೆ. ಈ ಸಮಯದಲ್ಲಿ ಜನರ ಕಲ್ಯಾಣಕ್ಕಾಗಿ ಸಂಪನ್ಮೂಲಗಳನ್ನು ಹೆಚ್ಚು ಮಾಡುವುದಕ್ಕಾಗಿ ಅತಿ ಶ್ರೀಮಂತರಿಗೆ ಹೆಚ್ಚು ತೆರಿಗೆ(ಸೂಪರ್‌ ರಿಚ್ ಟ್ಯಾಕ್ಸ್‌)ಯನ್ನು ಹಾಕುವ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು” ಎಂದು ಹೇಳಿದ್ದಾರೆ.

ವರದಿ ಬಿಡುಗಡೆಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. “ಉದ್ಯೋಗ ನಷ್ಟ ಮತ್ತು ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಆದಾಯ ಕುಸಿದಿದೆ. ಆದರೆ, ದೇಶದ ಉದ್ಯಮಪತಿಗಳ ಸಂಪತ್ತು ಹೆಚ್ಚಾಗುತ್ತಿದೆ. ದೇಶದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಶ್ರೀಮಂತರ ಪರವಾಗಿ ರೂಪಿಸುತ್ತಿರುವ ನೀತಿಗಳೇ ಕಾರಣ” ಎಂದು ಹಲವಾರು ಜನರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಬಿಲಿಯನೇರ್ ಬೂಮ್: ಶ್ರೀಮಂತರ ಜೇಬುಗಳನ್ನು ಸೇರಿದ ಕೋವಿಡ್ ಕ್ಯಾಷ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...