Homeಮುಖಪುಟರೈತರಿಗೆ ಸಾಲ ನೀಡಲು SBI ಜೊತೆ ಕೈಜೋಡಿಸಿದ ಅದಾನಿ ಕ್ಯಾಪಿಟಲ್

ರೈತರಿಗೆ ಸಾಲ ನೀಡಲು SBI ಜೊತೆ ಕೈಜೋಡಿಸಿದ ಅದಾನಿ ಕ್ಯಾಪಿಟಲ್

ಆಸ್ಟ್ರೇಲಿಯಾದಲ್ಲಿ ಅದಾನಿಯ ಕಲ್ಲಿದ್ದಲು ಗಣಿಗಾರಿಕೆ ವಿರುದ್ಧ ದೊಡ್ಡ ಹೋರಾಟ ನಡೆಯುತ್ತಿದೆ. ಅದಾನಿಗೆ ಎಸ್‌ಬಿಐ ಸಾಲ ಕೊಡಬಾರದು ಎಂದು ಜನರು ಪ್ರತಿಭಟಿಸುತ್ತಿದ್ದಾರೆ. ಆದರೆ ಅದೇ ಎಸ್‌ಬಿಐ ಜೊತೆಸೇರಿ ರೈತರಿಗೆ ಸಾಲ ನೀಡಲು ಅದಾನಿ ಕ್ಯಾಪಿಟಲ್ ಮುಂದಾಗಿದೆ.

- Advertisement -
- Advertisement -

ರೈತರಿಗೆ ಟ್ಯ್ರಾಕ್ಟರ್ ಮತ್ತು ಕೃಷಿ ಉಪಕರಣಗಳ ಖರೀದಿಗೆ ಸಹ ಸಾಲ ನೀಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು (SBI) ಇತ್ತೀಚೆಗೆ ಅದಾನಿ ಗ್ರೂಪ್‌ನ NBFC ಅಂಗವಾದ ಅದಾನಿ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಈ ಕುರಿತು SBI ನೀಡಿರುವ ಪ್ರಕಟಣೆಯಲ್ಲಿ, ‘ಈ ಪಾಲುದಾರಿಕೆಯ ಮೂಲಕ, ಬೆಳೆಗಳ ಉತ್ಪಾದಕತೆಯನ್ನು ಹೆಚ್ಚಿಸಲು, ಕೃಷಿ ಯಾಂತ್ರೀಕರಣದ ಅಳವಡಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ದೇಶದ ಒಳನಾಡಿನ ರೈತ ಗ್ರಾಹಕರನ್ನು ಆಕರ್ಷಿಸಲು ಸಾಧ್ಯವಾಗುತ್ತದೆ. ರೈತರ ಆದಾಯವನ್ನು ದ್ವಿಗುಣಗೊಳಿಸಲು, ಸಾಲದ ಹರಿವನ್ನು ಹೆಚ್ಚಿಸಲು, ಕೃಷಿ ಯಾಂತ್ರಿಕರಣ, ರೈತ ಉತ್ಪಾದಕ ಸಂಸ್ಥೆಗಳು ಇತ್ಯಾದಿಗಳಿಗೆ ಹಣಕಾಸು ಒದಗಿಸಲು ಅನೇಕ NBFC ಗಳೊಂದಿಗೆ ಸಹಕಾರಿ ಸಾಲ ನೀಡುವ ಅವಕಾಶಗಳನ್ನು SBI ಸಕ್ರಿಯವಾಗಿ ಎದುರು ನೋಡುತ್ತಿದೆ’ ಎಂದು ತಿಳಿಸಿದೆ.

SBI ಅಧ್ಯಕ್ಷ ದಿನೇಶ್ ಖಾರಾ, ‘‘ಸಹ ಸಾಲ’ ಕಾರ್ಯಕ್ರಮದ ಅಡಿಯಲ್ಲಿ ಅದಾನಿ ಕ್ಯಾಪಿಟಲ್‌ನೊಂದಿಗೆ ಸಹಭಾಗಿತ್ವವನ್ನು ಹೊಂದಲು ನಾವು ಸಂತೋಷಪಡುತ್ತೇವೆ’ ಎಂದು ಹೇಳಿದ್ದಾರೆ.

‘SBI ಗ್ರಾಹಕರ ನೆಲೆಯನ್ನು ವಿಸ್ತರಿಸಲು ಮತ್ತು ದೇಶದ ಹಿಂದುಳಿದ ಕೃಷಿ ವಿಭಾಗಗಳೊಂದಿಗೆ ಸಂಪರ್ಕ ಸಾಧಿಸಲು ಈ ಪಾಲುದಾರಿಕೆಯು ಸಹಾಯ ಮಾಡುತ್ತದೆ. ಭಾರತದ ಕೃಷಿ ಆರ್ಥಿಕತೆಯ ಬೆಳವಣಿಗೆಗೆ ಇದು ಮತ್ತಷ್ಟು ಕೊಡುಗೆ ನೀಡುತ್ತದೆ. ದೂರದ ಪ್ರದೇಶಗಳಲ್ಲಿನ ಗ್ರಾಹಕರನ್ನು ತಲುಪಲು ಮತ್ತು ಬ್ಯಾಂಕಿಂಗ್ ಸೇವೆಗಳನ್ನು ಒದಗಿಸಲು ನಾವು ಎನ್ಬಿಎಫ್ಸಿಗಳೊಂದಿಗೆ ಕೆಲಸ ಮಾಡುವುದನ್ನು ಮುಂದುವರೆಸುತ್ತೇವೆ’ ಎಂದು ತಿಳಿಸಿದ್ದಾರೆ.

ಅದಾನಿ ಕ್ಯಾಪಿಟಲ್‌ನ ಎಂಡಿ ಮತ್ತು ಸಿಇಒ ಗೌರವ್ ಗುಪ್ತಾ, ‘ಭಾರತದ ಸಣ್ಣ ಮತ್ತು ಅತಿ ಸಣ್ಣ ಉದ್ದಿಮೆದಾರರಿಗೆ ಆರ್ಥಿಕ ಸಾಲವನ್ನು ಲಭ್ಯವಾಗುವಂತೆ ಮಾಡುವುದು ನಮ್ಮ ಗುರಿಯಾಗಿದೆ. SBI ಜೊತೆಗಿನ ನಮ್ಮ ಪಾಲುದಾರಿಕೆಯು ಬ್ಯಾಂಕ್ ಸೌಲಭ್ಯಗಳನ್ನು ಹೊಂದಿಲ್ಲದ ಹಾಗೂ ಹಿಂದುಳಿದ ಭಾರತೀಯ ರೈತರನ್ನು ಗುರಿಯಾಗಿಸುವುದಾಗಿದೆ. ನಮ್ಮ ಗುರಿಯು, ಈ ಪಾಲುದಾರಿಕೆಯ ಮೂಲಕ ಕೃಷಿ ಯಾಂತ್ರಿಕರಣಕ್ಕೆ ಕೊಡುಗೆ ನೀಡುವುದು ಮತ್ತು ಕೃಷಿ ವಿಭಾಗದ ಉತ್ಪಾದಕತೆ ಹಾಗೂ ಆದಾಯವನ್ನು ಸುಧಾರಿಸುವಲ್ಲಿ ಪಾತ್ರವಹಿಸುವುದಾಗಿದೆ’ ಎಂದು ವಿವರಿಸಿದ್ದಾರೆ.

ಒಟ್ಟಿನಲ್ಲಿ ಅದಾನಿ ಕಂಪನಿ ಕೃಷಿ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವುದನ್ನು ಈ ಒಪ್ಪಂದ ಬಹಿರಂಗಪಡಿಸುತ್ತದೆ. ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಏಕಸ್ವಾಮ್ಯ ಸಾಧಿಸುತ್ತಿರುವ ಅದು ಏಷ್ಯಾದ ನಂಬರ್ ಶ್ರೀಮಂತ ಕಂಪನಿ ಎನಿಸಿದೆ. ಕೃಷಿ ಕಾಯ್ದೆಗಳು ಜಾರಿಯಾದ ನಂತರ ದೇಶಾದ್ಯಂತ ರೈತರು ಅಂಬಾನಿ-ಅದಾನಿ ಕಂಪನಿಗಳನ್ನು ಬಾಯ್ಕಾಟ್ ಮಾಡುವಂತೆ ಕರೆ ನೀಡಿದ್ದರು. ಆಸ್ಟ್ರೇಲಿಯಾದಲ್ಲಿ ಅದಾನಿಯ ಕಲ್ಲಿದ್ದಲು ಗಣಿಗಾರಿಕೆ ವಿರುದ್ಧ ದೊಡ್ಡ ಹೋರಾಟ ನಡೆಯುತ್ತಿದೆ. ಅದಾನಿಗೆ ಎಸ್‌ಬಿಐ ಸಾಲ ಕೊಡಬಾರದು ಎಂದು ಜನರು ಪ್ರತಿಭಟಿಸುತ್ತಿದ್ದಾರೆ. ಆದರೆ ಅದೇ ಎಸ್‌ಬಿಐ ಜೊತೆಸೇರಿ ರೈತರಿಗೆ ಸಾಲ ನೀಡಲು ಅದಾನಿ ಕ್ಯಾಪಿಟಲ್ ಮುಂದಾಗಿದೆ. ಇದಕ್ಕೆ ರೈತರ ಪ್ರತಿಕ್ರಿಯೆ ಹೇಗಿರುತ್ತೆ ಎಂಬುದನ್ನು ಕಾದು ನೋಡಬೇಕಿದೆ.


ಇದನ್ನೂ ಓದಿ: ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅದಾನಿಗೆ ಎಸ್‌ಬಿಐ ಸಾಲ ಕೊಡಬಾರದು ಎಂದು ಜನರು ಪ್ರತಿಭಟಿಸುತ್ತಿದ್ದಾರೆ. ಆದರೆ ಅದೇ ಎಸ್‌ಬಿಐ ಜೊತೆಸೇರಿ ರೈತರಿಗೆ ಸಾಲ ನೀಡಲು ಅದಾನಿ ಕ್ಯಾಪಿಟಲ್ ಮುಂದಾಗಿದೆ. ಇದಕ್ಕೆ ರೈತರ ಪ್ರತಿಕ್ರಿಯೆ ಹೇಗಿರುತ್ತೆ ಎಂಬುದನ್ನು ಕಾದು ನೋಡಬೇಕಿದೆ.

  2. ಒಟ್ಟಿನಲ್ಲಿ ಅದಾನಿ ಕಂಪನಿ ಕೃಷಿ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವುದನ್ನು ಈ ಒಪ್ಪಂದ ಬಹಿರಂಗಪಡಿಸುತ್ತದೆ. ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಏಕಸ್ವಾಮ್ಯ ಸಾಧಿಸುತ್ತಿರುವ ಅದು ಏಷ್ಯಾದ ನಂಬರ್ ಶ್ರೀಮಂತ ಕಂಪನಿ ಎನಿಸಿದೆ. ಕೃಷಿ ಕಾಯ್ದೆಗಳು ಜಾರಿಯಾದ ನಂತರ ದೇಶಾದ್ಯಂತ ರೈತರು ಅಂಬಾನಿ-ಅದಾನಿ ಕಂಪನಿಗಳನ್ನು ಬಾಯ್ಕಾಟ್ ಮಾಡುವಂತೆ ಕರೆ ನೀಡಿದ್ದರು.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...