Homeಮುಖಪುಟರೈತರಿಗೆ ಸಾಲ ನೀಡಲು SBI ಜೊತೆ ಕೈಜೋಡಿಸಿದ ಅದಾನಿ ಕ್ಯಾಪಿಟಲ್

ರೈತರಿಗೆ ಸಾಲ ನೀಡಲು SBI ಜೊತೆ ಕೈಜೋಡಿಸಿದ ಅದಾನಿ ಕ್ಯಾಪಿಟಲ್

ಆಸ್ಟ್ರೇಲಿಯಾದಲ್ಲಿ ಅದಾನಿಯ ಕಲ್ಲಿದ್ದಲು ಗಣಿಗಾರಿಕೆ ವಿರುದ್ಧ ದೊಡ್ಡ ಹೋರಾಟ ನಡೆಯುತ್ತಿದೆ. ಅದಾನಿಗೆ ಎಸ್‌ಬಿಐ ಸಾಲ ಕೊಡಬಾರದು ಎಂದು ಜನರು ಪ್ರತಿಭಟಿಸುತ್ತಿದ್ದಾರೆ. ಆದರೆ ಅದೇ ಎಸ್‌ಬಿಐ ಜೊತೆಸೇರಿ ರೈತರಿಗೆ ಸಾಲ ನೀಡಲು ಅದಾನಿ ಕ್ಯಾಪಿಟಲ್ ಮುಂದಾಗಿದೆ.

- Advertisement -
- Advertisement -

ರೈತರಿಗೆ ಟ್ಯ್ರಾಕ್ಟರ್ ಮತ್ತು ಕೃಷಿ ಉಪಕರಣಗಳ ಖರೀದಿಗೆ ಸಹ ಸಾಲ ನೀಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು (SBI) ಇತ್ತೀಚೆಗೆ ಅದಾನಿ ಗ್ರೂಪ್‌ನ NBFC ಅಂಗವಾದ ಅದಾನಿ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಈ ಕುರಿತು SBI ನೀಡಿರುವ ಪ್ರಕಟಣೆಯಲ್ಲಿ, ‘ಈ ಪಾಲುದಾರಿಕೆಯ ಮೂಲಕ, ಬೆಳೆಗಳ ಉತ್ಪಾದಕತೆಯನ್ನು ಹೆಚ್ಚಿಸಲು, ಕೃಷಿ ಯಾಂತ್ರೀಕರಣದ ಅಳವಡಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ದೇಶದ ಒಳನಾಡಿನ ರೈತ ಗ್ರಾಹಕರನ್ನು ಆಕರ್ಷಿಸಲು ಸಾಧ್ಯವಾಗುತ್ತದೆ. ರೈತರ ಆದಾಯವನ್ನು ದ್ವಿಗುಣಗೊಳಿಸಲು, ಸಾಲದ ಹರಿವನ್ನು ಹೆಚ್ಚಿಸಲು, ಕೃಷಿ ಯಾಂತ್ರಿಕರಣ, ರೈತ ಉತ್ಪಾದಕ ಸಂಸ್ಥೆಗಳು ಇತ್ಯಾದಿಗಳಿಗೆ ಹಣಕಾಸು ಒದಗಿಸಲು ಅನೇಕ NBFC ಗಳೊಂದಿಗೆ ಸಹಕಾರಿ ಸಾಲ ನೀಡುವ ಅವಕಾಶಗಳನ್ನು SBI ಸಕ್ರಿಯವಾಗಿ ಎದುರು ನೋಡುತ್ತಿದೆ’ ಎಂದು ತಿಳಿಸಿದೆ.

SBI ಅಧ್ಯಕ್ಷ ದಿನೇಶ್ ಖಾರಾ, ‘‘ಸಹ ಸಾಲ’ ಕಾರ್ಯಕ್ರಮದ ಅಡಿಯಲ್ಲಿ ಅದಾನಿ ಕ್ಯಾಪಿಟಲ್‌ನೊಂದಿಗೆ ಸಹಭಾಗಿತ್ವವನ್ನು ಹೊಂದಲು ನಾವು ಸಂತೋಷಪಡುತ್ತೇವೆ’ ಎಂದು ಹೇಳಿದ್ದಾರೆ.

‘SBI ಗ್ರಾಹಕರ ನೆಲೆಯನ್ನು ವಿಸ್ತರಿಸಲು ಮತ್ತು ದೇಶದ ಹಿಂದುಳಿದ ಕೃಷಿ ವಿಭಾಗಗಳೊಂದಿಗೆ ಸಂಪರ್ಕ ಸಾಧಿಸಲು ಈ ಪಾಲುದಾರಿಕೆಯು ಸಹಾಯ ಮಾಡುತ್ತದೆ. ಭಾರತದ ಕೃಷಿ ಆರ್ಥಿಕತೆಯ ಬೆಳವಣಿಗೆಗೆ ಇದು ಮತ್ತಷ್ಟು ಕೊಡುಗೆ ನೀಡುತ್ತದೆ. ದೂರದ ಪ್ರದೇಶಗಳಲ್ಲಿನ ಗ್ರಾಹಕರನ್ನು ತಲುಪಲು ಮತ್ತು ಬ್ಯಾಂಕಿಂಗ್ ಸೇವೆಗಳನ್ನು ಒದಗಿಸಲು ನಾವು ಎನ್ಬಿಎಫ್ಸಿಗಳೊಂದಿಗೆ ಕೆಲಸ ಮಾಡುವುದನ್ನು ಮುಂದುವರೆಸುತ್ತೇವೆ’ ಎಂದು ತಿಳಿಸಿದ್ದಾರೆ.

ಅದಾನಿ ಕ್ಯಾಪಿಟಲ್‌ನ ಎಂಡಿ ಮತ್ತು ಸಿಇಒ ಗೌರವ್ ಗುಪ್ತಾ, ‘ಭಾರತದ ಸಣ್ಣ ಮತ್ತು ಅತಿ ಸಣ್ಣ ಉದ್ದಿಮೆದಾರರಿಗೆ ಆರ್ಥಿಕ ಸಾಲವನ್ನು ಲಭ್ಯವಾಗುವಂತೆ ಮಾಡುವುದು ನಮ್ಮ ಗುರಿಯಾಗಿದೆ. SBI ಜೊತೆಗಿನ ನಮ್ಮ ಪಾಲುದಾರಿಕೆಯು ಬ್ಯಾಂಕ್ ಸೌಲಭ್ಯಗಳನ್ನು ಹೊಂದಿಲ್ಲದ ಹಾಗೂ ಹಿಂದುಳಿದ ಭಾರತೀಯ ರೈತರನ್ನು ಗುರಿಯಾಗಿಸುವುದಾಗಿದೆ. ನಮ್ಮ ಗುರಿಯು, ಈ ಪಾಲುದಾರಿಕೆಯ ಮೂಲಕ ಕೃಷಿ ಯಾಂತ್ರಿಕರಣಕ್ಕೆ ಕೊಡುಗೆ ನೀಡುವುದು ಮತ್ತು ಕೃಷಿ ವಿಭಾಗದ ಉತ್ಪಾದಕತೆ ಹಾಗೂ ಆದಾಯವನ್ನು ಸುಧಾರಿಸುವಲ್ಲಿ ಪಾತ್ರವಹಿಸುವುದಾಗಿದೆ’ ಎಂದು ವಿವರಿಸಿದ್ದಾರೆ.

ಒಟ್ಟಿನಲ್ಲಿ ಅದಾನಿ ಕಂಪನಿ ಕೃಷಿ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವುದನ್ನು ಈ ಒಪ್ಪಂದ ಬಹಿರಂಗಪಡಿಸುತ್ತದೆ. ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಏಕಸ್ವಾಮ್ಯ ಸಾಧಿಸುತ್ತಿರುವ ಅದು ಏಷ್ಯಾದ ನಂಬರ್ ಶ್ರೀಮಂತ ಕಂಪನಿ ಎನಿಸಿದೆ. ಕೃಷಿ ಕಾಯ್ದೆಗಳು ಜಾರಿಯಾದ ನಂತರ ದೇಶಾದ್ಯಂತ ರೈತರು ಅಂಬಾನಿ-ಅದಾನಿ ಕಂಪನಿಗಳನ್ನು ಬಾಯ್ಕಾಟ್ ಮಾಡುವಂತೆ ಕರೆ ನೀಡಿದ್ದರು. ಆಸ್ಟ್ರೇಲಿಯಾದಲ್ಲಿ ಅದಾನಿಯ ಕಲ್ಲಿದ್ದಲು ಗಣಿಗಾರಿಕೆ ವಿರುದ್ಧ ದೊಡ್ಡ ಹೋರಾಟ ನಡೆಯುತ್ತಿದೆ. ಅದಾನಿಗೆ ಎಸ್‌ಬಿಐ ಸಾಲ ಕೊಡಬಾರದು ಎಂದು ಜನರು ಪ್ರತಿಭಟಿಸುತ್ತಿದ್ದಾರೆ. ಆದರೆ ಅದೇ ಎಸ್‌ಬಿಐ ಜೊತೆಸೇರಿ ರೈತರಿಗೆ ಸಾಲ ನೀಡಲು ಅದಾನಿ ಕ್ಯಾಪಿಟಲ್ ಮುಂದಾಗಿದೆ. ಇದಕ್ಕೆ ರೈತರ ಪ್ರತಿಕ್ರಿಯೆ ಹೇಗಿರುತ್ತೆ ಎಂಬುದನ್ನು ಕಾದು ನೋಡಬೇಕಿದೆ.


ಇದನ್ನೂ ಓದಿ: ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅದಾನಿಗೆ ಎಸ್‌ಬಿಐ ಸಾಲ ಕೊಡಬಾರದು ಎಂದು ಜನರು ಪ್ರತಿಭಟಿಸುತ್ತಿದ್ದಾರೆ. ಆದರೆ ಅದೇ ಎಸ್‌ಬಿಐ ಜೊತೆಸೇರಿ ರೈತರಿಗೆ ಸಾಲ ನೀಡಲು ಅದಾನಿ ಕ್ಯಾಪಿಟಲ್ ಮುಂದಾಗಿದೆ. ಇದಕ್ಕೆ ರೈತರ ಪ್ರತಿಕ್ರಿಯೆ ಹೇಗಿರುತ್ತೆ ಎಂಬುದನ್ನು ಕಾದು ನೋಡಬೇಕಿದೆ.

  2. ಒಟ್ಟಿನಲ್ಲಿ ಅದಾನಿ ಕಂಪನಿ ಕೃಷಿ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವುದನ್ನು ಈ ಒಪ್ಪಂದ ಬಹಿರಂಗಪಡಿಸುತ್ತದೆ. ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಏಕಸ್ವಾಮ್ಯ ಸಾಧಿಸುತ್ತಿರುವ ಅದು ಏಷ್ಯಾದ ನಂಬರ್ ಶ್ರೀಮಂತ ಕಂಪನಿ ಎನಿಸಿದೆ. ಕೃಷಿ ಕಾಯ್ದೆಗಳು ಜಾರಿಯಾದ ನಂತರ ದೇಶಾದ್ಯಂತ ರೈತರು ಅಂಬಾನಿ-ಅದಾನಿ ಕಂಪನಿಗಳನ್ನು ಬಾಯ್ಕಾಟ್ ಮಾಡುವಂತೆ ಕರೆ ನೀಡಿದ್ದರು.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...