Homeಮುಖಪುಟರೈತರಿಗೆ ಸಾಲ ನೀಡಲು SBI ಜೊತೆ ಕೈಜೋಡಿಸಿದ ಅದಾನಿ ಕ್ಯಾಪಿಟಲ್

ರೈತರಿಗೆ ಸಾಲ ನೀಡಲು SBI ಜೊತೆ ಕೈಜೋಡಿಸಿದ ಅದಾನಿ ಕ್ಯಾಪಿಟಲ್

ಆಸ್ಟ್ರೇಲಿಯಾದಲ್ಲಿ ಅದಾನಿಯ ಕಲ್ಲಿದ್ದಲು ಗಣಿಗಾರಿಕೆ ವಿರುದ್ಧ ದೊಡ್ಡ ಹೋರಾಟ ನಡೆಯುತ್ತಿದೆ. ಅದಾನಿಗೆ ಎಸ್‌ಬಿಐ ಸಾಲ ಕೊಡಬಾರದು ಎಂದು ಜನರು ಪ್ರತಿಭಟಿಸುತ್ತಿದ್ದಾರೆ. ಆದರೆ ಅದೇ ಎಸ್‌ಬಿಐ ಜೊತೆಸೇರಿ ರೈತರಿಗೆ ಸಾಲ ನೀಡಲು ಅದಾನಿ ಕ್ಯಾಪಿಟಲ್ ಮುಂದಾಗಿದೆ.

- Advertisement -
- Advertisement -

ರೈತರಿಗೆ ಟ್ಯ್ರಾಕ್ಟರ್ ಮತ್ತು ಕೃಷಿ ಉಪಕರಣಗಳ ಖರೀದಿಗೆ ಸಹ ಸಾಲ ನೀಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು (SBI) ಇತ್ತೀಚೆಗೆ ಅದಾನಿ ಗ್ರೂಪ್‌ನ NBFC ಅಂಗವಾದ ಅದಾನಿ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಈ ಕುರಿತು SBI ನೀಡಿರುವ ಪ್ರಕಟಣೆಯಲ್ಲಿ, ‘ಈ ಪಾಲುದಾರಿಕೆಯ ಮೂಲಕ, ಬೆಳೆಗಳ ಉತ್ಪಾದಕತೆಯನ್ನು ಹೆಚ್ಚಿಸಲು, ಕೃಷಿ ಯಾಂತ್ರೀಕರಣದ ಅಳವಡಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ದೇಶದ ಒಳನಾಡಿನ ರೈತ ಗ್ರಾಹಕರನ್ನು ಆಕರ್ಷಿಸಲು ಸಾಧ್ಯವಾಗುತ್ತದೆ. ರೈತರ ಆದಾಯವನ್ನು ದ್ವಿಗುಣಗೊಳಿಸಲು, ಸಾಲದ ಹರಿವನ್ನು ಹೆಚ್ಚಿಸಲು, ಕೃಷಿ ಯಾಂತ್ರಿಕರಣ, ರೈತ ಉತ್ಪಾದಕ ಸಂಸ್ಥೆಗಳು ಇತ್ಯಾದಿಗಳಿಗೆ ಹಣಕಾಸು ಒದಗಿಸಲು ಅನೇಕ NBFC ಗಳೊಂದಿಗೆ ಸಹಕಾರಿ ಸಾಲ ನೀಡುವ ಅವಕಾಶಗಳನ್ನು SBI ಸಕ್ರಿಯವಾಗಿ ಎದುರು ನೋಡುತ್ತಿದೆ’ ಎಂದು ತಿಳಿಸಿದೆ.

SBI ಅಧ್ಯಕ್ಷ ದಿನೇಶ್ ಖಾರಾ, ‘‘ಸಹ ಸಾಲ’ ಕಾರ್ಯಕ್ರಮದ ಅಡಿಯಲ್ಲಿ ಅದಾನಿ ಕ್ಯಾಪಿಟಲ್‌ನೊಂದಿಗೆ ಸಹಭಾಗಿತ್ವವನ್ನು ಹೊಂದಲು ನಾವು ಸಂತೋಷಪಡುತ್ತೇವೆ’ ಎಂದು ಹೇಳಿದ್ದಾರೆ.

‘SBI ಗ್ರಾಹಕರ ನೆಲೆಯನ್ನು ವಿಸ್ತರಿಸಲು ಮತ್ತು ದೇಶದ ಹಿಂದುಳಿದ ಕೃಷಿ ವಿಭಾಗಗಳೊಂದಿಗೆ ಸಂಪರ್ಕ ಸಾಧಿಸಲು ಈ ಪಾಲುದಾರಿಕೆಯು ಸಹಾಯ ಮಾಡುತ್ತದೆ. ಭಾರತದ ಕೃಷಿ ಆರ್ಥಿಕತೆಯ ಬೆಳವಣಿಗೆಗೆ ಇದು ಮತ್ತಷ್ಟು ಕೊಡುಗೆ ನೀಡುತ್ತದೆ. ದೂರದ ಪ್ರದೇಶಗಳಲ್ಲಿನ ಗ್ರಾಹಕರನ್ನು ತಲುಪಲು ಮತ್ತು ಬ್ಯಾಂಕಿಂಗ್ ಸೇವೆಗಳನ್ನು ಒದಗಿಸಲು ನಾವು ಎನ್ಬಿಎಫ್ಸಿಗಳೊಂದಿಗೆ ಕೆಲಸ ಮಾಡುವುದನ್ನು ಮುಂದುವರೆಸುತ್ತೇವೆ’ ಎಂದು ತಿಳಿಸಿದ್ದಾರೆ.

ಅದಾನಿ ಕ್ಯಾಪಿಟಲ್‌ನ ಎಂಡಿ ಮತ್ತು ಸಿಇಒ ಗೌರವ್ ಗುಪ್ತಾ, ‘ಭಾರತದ ಸಣ್ಣ ಮತ್ತು ಅತಿ ಸಣ್ಣ ಉದ್ದಿಮೆದಾರರಿಗೆ ಆರ್ಥಿಕ ಸಾಲವನ್ನು ಲಭ್ಯವಾಗುವಂತೆ ಮಾಡುವುದು ನಮ್ಮ ಗುರಿಯಾಗಿದೆ. SBI ಜೊತೆಗಿನ ನಮ್ಮ ಪಾಲುದಾರಿಕೆಯು ಬ್ಯಾಂಕ್ ಸೌಲಭ್ಯಗಳನ್ನು ಹೊಂದಿಲ್ಲದ ಹಾಗೂ ಹಿಂದುಳಿದ ಭಾರತೀಯ ರೈತರನ್ನು ಗುರಿಯಾಗಿಸುವುದಾಗಿದೆ. ನಮ್ಮ ಗುರಿಯು, ಈ ಪಾಲುದಾರಿಕೆಯ ಮೂಲಕ ಕೃಷಿ ಯಾಂತ್ರಿಕರಣಕ್ಕೆ ಕೊಡುಗೆ ನೀಡುವುದು ಮತ್ತು ಕೃಷಿ ವಿಭಾಗದ ಉತ್ಪಾದಕತೆ ಹಾಗೂ ಆದಾಯವನ್ನು ಸುಧಾರಿಸುವಲ್ಲಿ ಪಾತ್ರವಹಿಸುವುದಾಗಿದೆ’ ಎಂದು ವಿವರಿಸಿದ್ದಾರೆ.

ಒಟ್ಟಿನಲ್ಲಿ ಅದಾನಿ ಕಂಪನಿ ಕೃಷಿ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವುದನ್ನು ಈ ಒಪ್ಪಂದ ಬಹಿರಂಗಪಡಿಸುತ್ತದೆ. ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಏಕಸ್ವಾಮ್ಯ ಸಾಧಿಸುತ್ತಿರುವ ಅದು ಏಷ್ಯಾದ ನಂಬರ್ ಶ್ರೀಮಂತ ಕಂಪನಿ ಎನಿಸಿದೆ. ಕೃಷಿ ಕಾಯ್ದೆಗಳು ಜಾರಿಯಾದ ನಂತರ ದೇಶಾದ್ಯಂತ ರೈತರು ಅಂಬಾನಿ-ಅದಾನಿ ಕಂಪನಿಗಳನ್ನು ಬಾಯ್ಕಾಟ್ ಮಾಡುವಂತೆ ಕರೆ ನೀಡಿದ್ದರು. ಆಸ್ಟ್ರೇಲಿಯಾದಲ್ಲಿ ಅದಾನಿಯ ಕಲ್ಲಿದ್ದಲು ಗಣಿಗಾರಿಕೆ ವಿರುದ್ಧ ದೊಡ್ಡ ಹೋರಾಟ ನಡೆಯುತ್ತಿದೆ. ಅದಾನಿಗೆ ಎಸ್‌ಬಿಐ ಸಾಲ ಕೊಡಬಾರದು ಎಂದು ಜನರು ಪ್ರತಿಭಟಿಸುತ್ತಿದ್ದಾರೆ. ಆದರೆ ಅದೇ ಎಸ್‌ಬಿಐ ಜೊತೆಸೇರಿ ರೈತರಿಗೆ ಸಾಲ ನೀಡಲು ಅದಾನಿ ಕ್ಯಾಪಿಟಲ್ ಮುಂದಾಗಿದೆ. ಇದಕ್ಕೆ ರೈತರ ಪ್ರತಿಕ್ರಿಯೆ ಹೇಗಿರುತ್ತೆ ಎಂಬುದನ್ನು ಕಾದು ನೋಡಬೇಕಿದೆ.


ಇದನ್ನೂ ಓದಿ: ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅದಾನಿಗೆ ಎಸ್‌ಬಿಐ ಸಾಲ ಕೊಡಬಾರದು ಎಂದು ಜನರು ಪ್ರತಿಭಟಿಸುತ್ತಿದ್ದಾರೆ. ಆದರೆ ಅದೇ ಎಸ್‌ಬಿಐ ಜೊತೆಸೇರಿ ರೈತರಿಗೆ ಸಾಲ ನೀಡಲು ಅದಾನಿ ಕ್ಯಾಪಿಟಲ್ ಮುಂದಾಗಿದೆ. ಇದಕ್ಕೆ ರೈತರ ಪ್ರತಿಕ್ರಿಯೆ ಹೇಗಿರುತ್ತೆ ಎಂಬುದನ್ನು ಕಾದು ನೋಡಬೇಕಿದೆ.

  2. ಒಟ್ಟಿನಲ್ಲಿ ಅದಾನಿ ಕಂಪನಿ ಕೃಷಿ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವುದನ್ನು ಈ ಒಪ್ಪಂದ ಬಹಿರಂಗಪಡಿಸುತ್ತದೆ. ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಏಕಸ್ವಾಮ್ಯ ಸಾಧಿಸುತ್ತಿರುವ ಅದು ಏಷ್ಯಾದ ನಂಬರ್ ಶ್ರೀಮಂತ ಕಂಪನಿ ಎನಿಸಿದೆ. ಕೃಷಿ ಕಾಯ್ದೆಗಳು ಜಾರಿಯಾದ ನಂತರ ದೇಶಾದ್ಯಂತ ರೈತರು ಅಂಬಾನಿ-ಅದಾನಿ ಕಂಪನಿಗಳನ್ನು ಬಾಯ್ಕಾಟ್ ಮಾಡುವಂತೆ ಕರೆ ನೀಡಿದ್ದರು.

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...