Homeಮುಖಪುಟರೈತರಿಗೆ ಸಾಲ ನೀಡಲು SBI ಜೊತೆ ಕೈಜೋಡಿಸಿದ ಅದಾನಿ ಕ್ಯಾಪಿಟಲ್

ರೈತರಿಗೆ ಸಾಲ ನೀಡಲು SBI ಜೊತೆ ಕೈಜೋಡಿಸಿದ ಅದಾನಿ ಕ್ಯಾಪಿಟಲ್

ಆಸ್ಟ್ರೇಲಿಯಾದಲ್ಲಿ ಅದಾನಿಯ ಕಲ್ಲಿದ್ದಲು ಗಣಿಗಾರಿಕೆ ವಿರುದ್ಧ ದೊಡ್ಡ ಹೋರಾಟ ನಡೆಯುತ್ತಿದೆ. ಅದಾನಿಗೆ ಎಸ್‌ಬಿಐ ಸಾಲ ಕೊಡಬಾರದು ಎಂದು ಜನರು ಪ್ರತಿಭಟಿಸುತ್ತಿದ್ದಾರೆ. ಆದರೆ ಅದೇ ಎಸ್‌ಬಿಐ ಜೊತೆಸೇರಿ ರೈತರಿಗೆ ಸಾಲ ನೀಡಲು ಅದಾನಿ ಕ್ಯಾಪಿಟಲ್ ಮುಂದಾಗಿದೆ.

- Advertisement -
- Advertisement -

ರೈತರಿಗೆ ಟ್ಯ್ರಾಕ್ಟರ್ ಮತ್ತು ಕೃಷಿ ಉಪಕರಣಗಳ ಖರೀದಿಗೆ ಸಹ ಸಾಲ ನೀಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು (SBI) ಇತ್ತೀಚೆಗೆ ಅದಾನಿ ಗ್ರೂಪ್‌ನ NBFC ಅಂಗವಾದ ಅದಾನಿ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಈ ಕುರಿತು SBI ನೀಡಿರುವ ಪ್ರಕಟಣೆಯಲ್ಲಿ, ‘ಈ ಪಾಲುದಾರಿಕೆಯ ಮೂಲಕ, ಬೆಳೆಗಳ ಉತ್ಪಾದಕತೆಯನ್ನು ಹೆಚ್ಚಿಸಲು, ಕೃಷಿ ಯಾಂತ್ರೀಕರಣದ ಅಳವಡಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ದೇಶದ ಒಳನಾಡಿನ ರೈತ ಗ್ರಾಹಕರನ್ನು ಆಕರ್ಷಿಸಲು ಸಾಧ್ಯವಾಗುತ್ತದೆ. ರೈತರ ಆದಾಯವನ್ನು ದ್ವಿಗುಣಗೊಳಿಸಲು, ಸಾಲದ ಹರಿವನ್ನು ಹೆಚ್ಚಿಸಲು, ಕೃಷಿ ಯಾಂತ್ರಿಕರಣ, ರೈತ ಉತ್ಪಾದಕ ಸಂಸ್ಥೆಗಳು ಇತ್ಯಾದಿಗಳಿಗೆ ಹಣಕಾಸು ಒದಗಿಸಲು ಅನೇಕ NBFC ಗಳೊಂದಿಗೆ ಸಹಕಾರಿ ಸಾಲ ನೀಡುವ ಅವಕಾಶಗಳನ್ನು SBI ಸಕ್ರಿಯವಾಗಿ ಎದುರು ನೋಡುತ್ತಿದೆ’ ಎಂದು ತಿಳಿಸಿದೆ.

SBI ಅಧ್ಯಕ್ಷ ದಿನೇಶ್ ಖಾರಾ, ‘‘ಸಹ ಸಾಲ’ ಕಾರ್ಯಕ್ರಮದ ಅಡಿಯಲ್ಲಿ ಅದಾನಿ ಕ್ಯಾಪಿಟಲ್‌ನೊಂದಿಗೆ ಸಹಭಾಗಿತ್ವವನ್ನು ಹೊಂದಲು ನಾವು ಸಂತೋಷಪಡುತ್ತೇವೆ’ ಎಂದು ಹೇಳಿದ್ದಾರೆ.

‘SBI ಗ್ರಾಹಕರ ನೆಲೆಯನ್ನು ವಿಸ್ತರಿಸಲು ಮತ್ತು ದೇಶದ ಹಿಂದುಳಿದ ಕೃಷಿ ವಿಭಾಗಗಳೊಂದಿಗೆ ಸಂಪರ್ಕ ಸಾಧಿಸಲು ಈ ಪಾಲುದಾರಿಕೆಯು ಸಹಾಯ ಮಾಡುತ್ತದೆ. ಭಾರತದ ಕೃಷಿ ಆರ್ಥಿಕತೆಯ ಬೆಳವಣಿಗೆಗೆ ಇದು ಮತ್ತಷ್ಟು ಕೊಡುಗೆ ನೀಡುತ್ತದೆ. ದೂರದ ಪ್ರದೇಶಗಳಲ್ಲಿನ ಗ್ರಾಹಕರನ್ನು ತಲುಪಲು ಮತ್ತು ಬ್ಯಾಂಕಿಂಗ್ ಸೇವೆಗಳನ್ನು ಒದಗಿಸಲು ನಾವು ಎನ್ಬಿಎಫ್ಸಿಗಳೊಂದಿಗೆ ಕೆಲಸ ಮಾಡುವುದನ್ನು ಮುಂದುವರೆಸುತ್ತೇವೆ’ ಎಂದು ತಿಳಿಸಿದ್ದಾರೆ.

ಅದಾನಿ ಕ್ಯಾಪಿಟಲ್‌ನ ಎಂಡಿ ಮತ್ತು ಸಿಇಒ ಗೌರವ್ ಗುಪ್ತಾ, ‘ಭಾರತದ ಸಣ್ಣ ಮತ್ತು ಅತಿ ಸಣ್ಣ ಉದ್ದಿಮೆದಾರರಿಗೆ ಆರ್ಥಿಕ ಸಾಲವನ್ನು ಲಭ್ಯವಾಗುವಂತೆ ಮಾಡುವುದು ನಮ್ಮ ಗುರಿಯಾಗಿದೆ. SBI ಜೊತೆಗಿನ ನಮ್ಮ ಪಾಲುದಾರಿಕೆಯು ಬ್ಯಾಂಕ್ ಸೌಲಭ್ಯಗಳನ್ನು ಹೊಂದಿಲ್ಲದ ಹಾಗೂ ಹಿಂದುಳಿದ ಭಾರತೀಯ ರೈತರನ್ನು ಗುರಿಯಾಗಿಸುವುದಾಗಿದೆ. ನಮ್ಮ ಗುರಿಯು, ಈ ಪಾಲುದಾರಿಕೆಯ ಮೂಲಕ ಕೃಷಿ ಯಾಂತ್ರಿಕರಣಕ್ಕೆ ಕೊಡುಗೆ ನೀಡುವುದು ಮತ್ತು ಕೃಷಿ ವಿಭಾಗದ ಉತ್ಪಾದಕತೆ ಹಾಗೂ ಆದಾಯವನ್ನು ಸುಧಾರಿಸುವಲ್ಲಿ ಪಾತ್ರವಹಿಸುವುದಾಗಿದೆ’ ಎಂದು ವಿವರಿಸಿದ್ದಾರೆ.

ಒಟ್ಟಿನಲ್ಲಿ ಅದಾನಿ ಕಂಪನಿ ಕೃಷಿ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವುದನ್ನು ಈ ಒಪ್ಪಂದ ಬಹಿರಂಗಪಡಿಸುತ್ತದೆ. ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಏಕಸ್ವಾಮ್ಯ ಸಾಧಿಸುತ್ತಿರುವ ಅದು ಏಷ್ಯಾದ ನಂಬರ್ ಶ್ರೀಮಂತ ಕಂಪನಿ ಎನಿಸಿದೆ. ಕೃಷಿ ಕಾಯ್ದೆಗಳು ಜಾರಿಯಾದ ನಂತರ ದೇಶಾದ್ಯಂತ ರೈತರು ಅಂಬಾನಿ-ಅದಾನಿ ಕಂಪನಿಗಳನ್ನು ಬಾಯ್ಕಾಟ್ ಮಾಡುವಂತೆ ಕರೆ ನೀಡಿದ್ದರು. ಆಸ್ಟ್ರೇಲಿಯಾದಲ್ಲಿ ಅದಾನಿಯ ಕಲ್ಲಿದ್ದಲು ಗಣಿಗಾರಿಕೆ ವಿರುದ್ಧ ದೊಡ್ಡ ಹೋರಾಟ ನಡೆಯುತ್ತಿದೆ. ಅದಾನಿಗೆ ಎಸ್‌ಬಿಐ ಸಾಲ ಕೊಡಬಾರದು ಎಂದು ಜನರು ಪ್ರತಿಭಟಿಸುತ್ತಿದ್ದಾರೆ. ಆದರೆ ಅದೇ ಎಸ್‌ಬಿಐ ಜೊತೆಸೇರಿ ರೈತರಿಗೆ ಸಾಲ ನೀಡಲು ಅದಾನಿ ಕ್ಯಾಪಿಟಲ್ ಮುಂದಾಗಿದೆ. ಇದಕ್ಕೆ ರೈತರ ಪ್ರತಿಕ್ರಿಯೆ ಹೇಗಿರುತ್ತೆ ಎಂಬುದನ್ನು ಕಾದು ನೋಡಬೇಕಿದೆ.


ಇದನ್ನೂ ಓದಿ: ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅದಾನಿಗೆ ಎಸ್‌ಬಿಐ ಸಾಲ ಕೊಡಬಾರದು ಎಂದು ಜನರು ಪ್ರತಿಭಟಿಸುತ್ತಿದ್ದಾರೆ. ಆದರೆ ಅದೇ ಎಸ್‌ಬಿಐ ಜೊತೆಸೇರಿ ರೈತರಿಗೆ ಸಾಲ ನೀಡಲು ಅದಾನಿ ಕ್ಯಾಪಿಟಲ್ ಮುಂದಾಗಿದೆ. ಇದಕ್ಕೆ ರೈತರ ಪ್ರತಿಕ್ರಿಯೆ ಹೇಗಿರುತ್ತೆ ಎಂಬುದನ್ನು ಕಾದು ನೋಡಬೇಕಿದೆ.

  2. ಒಟ್ಟಿನಲ್ಲಿ ಅದಾನಿ ಕಂಪನಿ ಕೃಷಿ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವುದನ್ನು ಈ ಒಪ್ಪಂದ ಬಹಿರಂಗಪಡಿಸುತ್ತದೆ. ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಏಕಸ್ವಾಮ್ಯ ಸಾಧಿಸುತ್ತಿರುವ ಅದು ಏಷ್ಯಾದ ನಂಬರ್ ಶ್ರೀಮಂತ ಕಂಪನಿ ಎನಿಸಿದೆ. ಕೃಷಿ ಕಾಯ್ದೆಗಳು ಜಾರಿಯಾದ ನಂತರ ದೇಶಾದ್ಯಂತ ರೈತರು ಅಂಬಾನಿ-ಅದಾನಿ ಕಂಪನಿಗಳನ್ನು ಬಾಯ್ಕಾಟ್ ಮಾಡುವಂತೆ ಕರೆ ನೀಡಿದ್ದರು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....