Homeಮುಖಪುಟ20% ಕಡಿಮೆ ಬೆಲೆ ನೀಡಿ ಸೇಬು ಖರೀದಿಗೆ ಮುಂದಾದ ಅದಾನಿ ಕಂಪನಿ: ರೈತರಿಂದ ಅದಾನಿ ಬಾಯ್ಕಾಟ್...

20% ಕಡಿಮೆ ಬೆಲೆ ನೀಡಿ ಸೇಬು ಖರೀದಿಗೆ ಮುಂದಾದ ಅದಾನಿ ಕಂಪನಿ: ರೈತರಿಂದ ಅದಾನಿ ಬಾಯ್ಕಾಟ್ ಬೆದರಿಕೆ

ಕಳೆದ ವರ್ಷ 88 ರೂ ಗೆ ಒಂದು ಕೆಜಿ ಪ್ರೀಮಿಯಂ ಸೇಬು ಖರೀದಿಸುತ್ತಿದ್ದ ಅದಾನಿ ಕಂಪನಿ ಈಗ ಕೇವಲ 72 ರೂ ಖರೀದಿಸಲು ಮುಂದಾಗಿದೆ.

- Advertisement -
- Advertisement -

ದೆಹಲಿಯಲ್ಲಿ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತರ ಬೃಹತ್ ಹೋರಾಟ ಇಂದಿಗೆ 9 ತಿಂಗಳು ಪೂರೈಸಿದೆ. ಸರ್ಕಾರದ ಯಾವುದೇ ಸಂಧಾನ, ಬೆದರಿಕೆಗಳಿಗೆ ಬಗ್ಗದ ರೈತರು ದಿನೇ ದಿನೇ ಹೋರಾಟ ತೀವ್ರಗೊಳಿಸುತ್ತಿದ್ದಾರೆ. ಅವರ ಹೋರಾಟ ನ್ಯಾಯಯುತವಾದುದ್ದು ಎಂಬುದನ್ನು ಹಿಮಾಚಲ ಪ್ರದೇಶದ ಸೇಬು ಬೆಳೆಗಾರರ ಸಂಕಷ್ಟ ಮತ್ತೊಮ್ಮೆ ಸಾಬೀತುಪಡಿಸಿದೆ. ಈ ವರ್ಷ ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಿಂದಾಗಿ ಮೊದಲೆ ಬೆಳೆ ನಷ್ಟದಿಂದ ಸಂಕಷ್ಟದಿಂದಿದ್ದ ರೈತರ ಮೇಲೆ ಅದಾನಿ ಅಗ್ರಿ ಫ್ರೆಶ್ ಕಂಪನಿ ಗಧಾಪ್ರಹಾರ ನಡೆಸಿದೆ. 20% ಕಡಿಮೆ ಬೆಲೆ ನೀಡಿ ಸೇಬು ಖರೀದಿಗೆ ಮುಂದಾಗಿರುವುದು ರೈತರಲ್ಲಿ ಆಕ್ರೋಶ ಹುಟ್ಟಿಸಿದೆ.

ಹಿಮಾಚಲ ಪ್ರದೇಶದಲ್ಲಿ ಅದಾನಿ ಗ್ರೂಪ್ ಸಿಎ ಸ್ಟೋರ್‌ಗಳಿಗೆ ಸೇಬು ಖರೀದಿಸಲು ಗುರುವಾರ ತನ್ನ ಬೆಲೆಗಳನ್ನು ಘೋಷಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಪ್ರೀಮಿಯಂ ಸೇಬಿನ ಬೆಲೆಗಳು ಈ ಬಾರಿ ಶೇಕಡಾ 20 ರಷ್ಟು ಕಡಿಮೆಯಾಗಿವೆ. ಕಳೆದ ವರ್ಷ ಪ್ರೀಮಿಯಂ ಸೇಬಿನ ಆರಂಭಿಕ ಬೆಲೆ ಪ್ರತಿ ಕೆಜಿಗೆ 88 ರೂ ಇತ್ತು. ಆದರೆ ಅದನ್ನು ಈ ಬಾರಿ ಅದು ಕೆಜಿಗೆ 72 ರೂಗೆ ಇಳಿಸಲಾಗಿದೆ. ಇದು ಸೇಬು ಬೆಳೆಗಾರರನ್ನು ಕೆರಳಿಸಿದ್ದು ಅವರು ಅದಾನಿ ಕಂಪನಿ ಬಾಯ್ಕಾಟ್ ಮಾಡುವ ಎಚ್ಚರಿಕೆ ನಿಡಿದ್ದಾರೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಇಂದು ಘೋಷಿಸಿದ ದರಗಳ ಪ್ರಕಾರ, ಶೇ.60 ಕ್ಕಿಂತ ಕಡಿಮೆ ಬಣ್ಣವನ್ನು ಹೊಂದಿರುವ ಸೇಬುಗಳನ್ನು ಪ್ರತಿ ಕೆಜಿಗೆ 12 ರಿಂದ 15ರೂಗಳಿಗೆ ಮಾರಾಟ ಮಾಡಲಾಗುತ್ತಿದೆ. ಪ್ರತಿ ಕೆಜಿ ಸೇಬಿನ ಉತ್ಪಾದನಾ ವೆಚ್ಚ ಸುಮಾರು 25 ರೂ ಆಗುತ್ತದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿಮ್ಲಾದಲ್ಲಿ ಸೇಬು ಖರೀದಿ ಪ್ರಕ್ರಿಯೆ: Photo Courtesy: The Tribune

“ಇದು ತುಂಬಾ ನಿರಾಶಾದಾಯಕವಾಗಿದೆ ಮತ್ತು ಸೇಬು ಬೆಳೆಗಾರರು ಈ ಬಾರಿ ಅದಾನಿ ಕಂಪನಿಯನ್ನು ಬಹಿಷ್ಕರಿಸಬೇಕು” ಎಂದು ಹಣ್ಣು, ತರಕಾರಿ ಮತ್ತು ಹೂ ಬೆಳೆಗಾರರ ​​ಸಂಘದ ಅಧ್ಯಕ್ಷ ಹರೀಶ್ ಚೌಹಾಣ್ ಕರೆ ನೀಡಿದ್ದಾರೆ. “ಅದಾನಿ ಕಂಪನಿಯ ಬೆಲೆ ನಿಗದಿಗೊಳಿಸುವ ಕಾರ್ಯವಿಧಾನವು ಅನಿಯಂತ್ರಿತವಾಗಿದೆ. ಬೆಲೆಗಳನ್ನು ನಿಗದಿಪಡಿಸಿದಾಗ ಯಾವುದೇ ಸರ್ಕಾರಿ ಅಧಿಕಾರಿಯಾಗಲಿ ಅಥವಾ ರೈತರ ಪ್ರತಿನಿಧಿಗಳಾಗಲಿ ಯಾರೂ ಇಲ್ಲ” ಎಂದು ಚೌಹಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೇ ದೆಹಲಿಯಲ್ಲಿ ಹೋರಾಟನಿರತ ರೈತರ ವರ್ಷದಿಂದಲೂ ಹೇಳುತ್ತಾ ಬಂದಿರುವುದನ್ನು ನಾವು ಗಮನಿಸಬೇಕು.

ಇನ್ನೊಂದೆಡೆ ಬಿಥಲ್‌ನಲ್ಲಿರುವ ಅದಾನಿ ಸಿಎ ಗೋಡೌನ್ ಪ್ಲಾಂಟ್ ಮುಖ್ಯಸ್ಥ ಮಂಜೀತ್ ಶಿಲು ಮಾತನಾಡಿ, “ನಾವು ನೀಡುತ್ತಿರುವ ಬೆಲೆಗಳು ಉತ್ತಮವಾಗಿವೆ. ಬೆಳೆಗಾರರು ಪ್ಯಾಕಿಂಗ್ ಮತ್ತು ಗ್ರೇಡಿಂಗ್‌ಗೆ ಹಣ ಪಾವತಿಸಬೇಕಾಗಿಲ್ಲ. ನಮ್ಮಲ್ಲಿ ಸುಮಾರು 17,000 ಬೆಳೆಗಾರರ ​​ಗುಂಪು ಇದೆ. ಅವರು ನಮಗೆ ಸೇಬು ಮಾರುತ್ತಾರೆ. ನಾವು ಬೆಲೆಗಳನ್ನು ಘೋಷಿಸಿದಾಗಿನಿಂದ ಯಾರೂ ಆ ಬಗ್ಗೆ ನಮಗೆ ದೂರು ನೀಡಿಲ್ಲ. ಅದಾನಿ ಕಂಪನಿಗೆ ಸೇಬು ನೀಡದ ಬೆಳೆಗಾರರು ಮಾತ್ರ ದೂರು ನೀಡುತ್ತಿದ್ದಾರೆ” ಎಂದಿದ್ದಾರೆ.

ಅದಾನಿ ಕಂಪನಿ ದರಗಳು ಅತ್ಯಂತ ಕಳಪೆ ಮಟ್ಟದ್ದಾಗಿವೆ. ಎಪಿಎಂಸಿ ಮಂಡಿಗಳಲ್ಲಿ ಇದಕ್ಕಿಂತ ಹೆಚ್ಚಿನ ಬೆಲೆ ರೈತರಿಗೆ ಸಿಗುತ್ತಿದೆ ಎಂದು ಪ್ರಗತಿಪರ ಬೆಳೆಗಾರರ ​​ಸಂಘದ ಅಧ್ಯಕ್ಷ ಲೋಕಿಂದರ್ ಬಿಶ್ತ್ ಹೇಳಿದ್ದಾರೆ. ಅದಾನಿ ಕಂಪನಿಯ ಸಿಎ ಸ್ಟೋರ್‌ಗಳನ್ನು ಸ್ಥಾಪಿಸಲು ಸರ್ಕಾರದಿಂದ ದೊಡ್ಡ ಸಬ್ಸಿಡಿಗಳನ್ನು ಪಡೆದಿದ್ದು ಈಗ ರೈತರನ್ನು ಶೋಷಣೆ ಮಾಡುತ್ತಿದ್ದಾರೆ. ಈ ಕಂಪನಿಗಳ ಮೋಸಜಾಲದಿಂದ ರೈತರು ಬಿಡುಗಡೆ ಹೊಂದಲು ಸರ್ಕಾರವು ಕೋಲ್ಡ್‌ ಸ್ಟೋರೇಜ್‌ಗಳನ್ನು ರೈತರಿಗೆ ನಿರ್ಮಿಸಿಕೊಡಬೇಕು. ಇದರಿಂದ ರೈತರು ಬೆಲೆಕುಸಿತ ಉಂಟಾದಾಗ ಅತಿ ಕಡಿಮೆ ಬೆಲೆಗೆ ಸೇಬು ಮಾರುವುದು ತಪ್ಪುತ್ತದೆ ಎಂದು ಅವರು ಒತ್ತಾಯಿಸಿದ್ದಾರೆ.

ಸರ್ಕಾರವು ಗಣನೀಯ ಪ್ರಮಾಣದ ಸೇಬುಗಳನ್ನು ಸಮಂಜಸವಾದ ಬೆಲೆಯಲ್ಲಿ ಖರೀದಿಸಿದರೆ, ಕಾಶ್ಮೀರದ ನಾಫೆಡ್‌ನಂತೆ ಮಾರುಕಟ್ಟೆಯು ಹೆಚ್ಚು ಕಡಿಮೆ ಸ್ಥಿರವಾಗಿರುತ್ತದೆ ಮತ್ತು ಮಾರುಕಟ್ಟೆ ಶಕ್ತಿಗಳು ಬೆಳೆಗಾರರನ್ನು ಶೋಷಿಸಲು ಸಾಧ್ಯವಾಗುವುದಿಲ್ಲ ಎಂದು ಸಹ ಅವರು ಒತ್ತಾಯಿಸಿದ್ದಾರೆ.

ಇದೇ ಸಂದರ್ಭದಲ್ಲಿ ಹಿಮಾಚಲ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕುಲದೀಪ್ ರಾಥೋರ್ ಅದಾನಿ ಕಂಪನಿಯ ರೈತ ವಿರೋಧಿ ಧೋರಣೆಯನ್ನು ಖಂಡಿಸಿದ್ದಾರೆ. ಸರ್ಕಾರದ ಮೌನ ಅನುಮೋದನೆಯೊಂದಿಗೆ ಅದಾನಿ ಕಂಪನಿಗೆ ಸೇಬು ಬೆಲೆಯನ್ನು ಕಡಿಮೆ ಮಾಡಿದೆ. ಈಗಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ಕೂಡಲೇ ಸರ್ಕಾರ ಅವರ ನೆರವಿಗೆ ಧಾವಿಸಬೇಕು ಮತ್ತು ಅದಾನಿ ಕಂಪನಿ ಹೆಚ್ಚು ಬೆಲೆ ನೀಡುವಂತೆ ತಾಕೀತು ಮಾಡಬೇಕೆಂದು ಒತ್ತಾಯಿಸಿದ್ದಾರೆ.

1984 ರಿಂದ ರಾಜ್ಯ ಸರ್ಕಾರಗಳು ರೈತರಿಗೆ ಕೃಷಿ ಉಪಕರಣಗಳ ಜೊತೆಗೆ ಕೀಟನಾಶಕ, ಶಿಲೀಂಧ್ರನಾಶಕ ಮತ್ತು ಇತರ ಔಷಧಿಗಳ ಮೇಲೆ ಸಬ್ಸಿಡಿಗಳನ್ನು ನೀಡುತ್ತಿವೆ ಆದರೆ ಬಿಜೆಪಿ ಸರ್ಕಾರವು ಈ ಎಲ್ಲಾ ಸಬ್ಸಿಡಿಗಳನ್ನು ನಿಲ್ಲಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಕಳೆದ ವರ್ಷ 88 ರೂ ಗೆ ಒಂದು ಕೆಜಿ ಪ್ರೀಮಿಯಂ ಸೇಬು ಖರೀದಿಸುತ್ತಿದ್ದ ಅದಾನಿ ಕಂಪನಿ ಈಗ ಕೇವಲ 72 ರೂ ಖರೀದಿಸಲು ಮುಂದಾಗಿದೆ. ರೈತರು ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡ ಕಾರಣ ನಷ್ಟವಾದರೂ ಅಲ್ಲಿಯೇ ಮಾರಬೇಕಾಗಿದೆ. ಇನ್ನೊಂದೆಡೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಅವನ್ನ ನಿರ್ನಾಮ ಮಾಡಲಾಗುತ್ತಿದೆ. ಈ ರೀತಿಯಾಗಿ ರೈತರು ಕಾರ್ಪೊರೇಟ್ ಕಂಪನಿಗಳ ಅಡಿಯಾಳಾಗಬೇಕಾಗುತ್ತದೆ. ಹಾಗಾಗಿ ಕೃಷಿ ಕಾನೂನುಗಳು ಬೇಡ ಮತ್ತು ಎಪಿಎಂಸಿಗಳು ಗಟ್ಟಿಯಾಗಬೇಕು, ಅಲ್ಲಿನ ಭ್ರಷ್ಟಾಚಾರ ನಿಲ್ಲಬೇಕು ಎಂಬುದು ರೈತರ ಆಗ್ರಹವಾಗಿದೆ. ಅದಕ್ಕಾಗಿಯೇ ದೆಹಲಿಯಲ್ಲಿ ತೀವ್ರ ಹೋರಾಟ ನಡೆಸುತ್ತಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ: ತಾಳ್ಮೆ, ಬದ್ಧತೆ, ಶಿಸ್ತಿನ ಐತಿಹಾಸಿಕ ಹೋರಾಟಕ್ಕೆ 9 ತಿಂಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...