Homeಮುಖಪುಟ20% ಕಡಿಮೆ ಬೆಲೆ ನೀಡಿ ಸೇಬು ಖರೀದಿಗೆ ಮುಂದಾದ ಅದಾನಿ ಕಂಪನಿ: ರೈತರಿಂದ ಅದಾನಿ ಬಾಯ್ಕಾಟ್...

20% ಕಡಿಮೆ ಬೆಲೆ ನೀಡಿ ಸೇಬು ಖರೀದಿಗೆ ಮುಂದಾದ ಅದಾನಿ ಕಂಪನಿ: ರೈತರಿಂದ ಅದಾನಿ ಬಾಯ್ಕಾಟ್ ಬೆದರಿಕೆ

ಕಳೆದ ವರ್ಷ 88 ರೂ ಗೆ ಒಂದು ಕೆಜಿ ಪ್ರೀಮಿಯಂ ಸೇಬು ಖರೀದಿಸುತ್ತಿದ್ದ ಅದಾನಿ ಕಂಪನಿ ಈಗ ಕೇವಲ 72 ರೂ ಖರೀದಿಸಲು ಮುಂದಾಗಿದೆ.

- Advertisement -
- Advertisement -

ದೆಹಲಿಯಲ್ಲಿ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತರ ಬೃಹತ್ ಹೋರಾಟ ಇಂದಿಗೆ 9 ತಿಂಗಳು ಪೂರೈಸಿದೆ. ಸರ್ಕಾರದ ಯಾವುದೇ ಸಂಧಾನ, ಬೆದರಿಕೆಗಳಿಗೆ ಬಗ್ಗದ ರೈತರು ದಿನೇ ದಿನೇ ಹೋರಾಟ ತೀವ್ರಗೊಳಿಸುತ್ತಿದ್ದಾರೆ. ಅವರ ಹೋರಾಟ ನ್ಯಾಯಯುತವಾದುದ್ದು ಎಂಬುದನ್ನು ಹಿಮಾಚಲ ಪ್ರದೇಶದ ಸೇಬು ಬೆಳೆಗಾರರ ಸಂಕಷ್ಟ ಮತ್ತೊಮ್ಮೆ ಸಾಬೀತುಪಡಿಸಿದೆ. ಈ ವರ್ಷ ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಿಂದಾಗಿ ಮೊದಲೆ ಬೆಳೆ ನಷ್ಟದಿಂದ ಸಂಕಷ್ಟದಿಂದಿದ್ದ ರೈತರ ಮೇಲೆ ಅದಾನಿ ಅಗ್ರಿ ಫ್ರೆಶ್ ಕಂಪನಿ ಗಧಾಪ್ರಹಾರ ನಡೆಸಿದೆ. 20% ಕಡಿಮೆ ಬೆಲೆ ನೀಡಿ ಸೇಬು ಖರೀದಿಗೆ ಮುಂದಾಗಿರುವುದು ರೈತರಲ್ಲಿ ಆಕ್ರೋಶ ಹುಟ್ಟಿಸಿದೆ.

ಹಿಮಾಚಲ ಪ್ರದೇಶದಲ್ಲಿ ಅದಾನಿ ಗ್ರೂಪ್ ಸಿಎ ಸ್ಟೋರ್‌ಗಳಿಗೆ ಸೇಬು ಖರೀದಿಸಲು ಗುರುವಾರ ತನ್ನ ಬೆಲೆಗಳನ್ನು ಘೋಷಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಪ್ರೀಮಿಯಂ ಸೇಬಿನ ಬೆಲೆಗಳು ಈ ಬಾರಿ ಶೇಕಡಾ 20 ರಷ್ಟು ಕಡಿಮೆಯಾಗಿವೆ. ಕಳೆದ ವರ್ಷ ಪ್ರೀಮಿಯಂ ಸೇಬಿನ ಆರಂಭಿಕ ಬೆಲೆ ಪ್ರತಿ ಕೆಜಿಗೆ 88 ರೂ ಇತ್ತು. ಆದರೆ ಅದನ್ನು ಈ ಬಾರಿ ಅದು ಕೆಜಿಗೆ 72 ರೂಗೆ ಇಳಿಸಲಾಗಿದೆ. ಇದು ಸೇಬು ಬೆಳೆಗಾರರನ್ನು ಕೆರಳಿಸಿದ್ದು ಅವರು ಅದಾನಿ ಕಂಪನಿ ಬಾಯ್ಕಾಟ್ ಮಾಡುವ ಎಚ್ಚರಿಕೆ ನಿಡಿದ್ದಾರೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಇಂದು ಘೋಷಿಸಿದ ದರಗಳ ಪ್ರಕಾರ, ಶೇ.60 ಕ್ಕಿಂತ ಕಡಿಮೆ ಬಣ್ಣವನ್ನು ಹೊಂದಿರುವ ಸೇಬುಗಳನ್ನು ಪ್ರತಿ ಕೆಜಿಗೆ 12 ರಿಂದ 15ರೂಗಳಿಗೆ ಮಾರಾಟ ಮಾಡಲಾಗುತ್ತಿದೆ. ಪ್ರತಿ ಕೆಜಿ ಸೇಬಿನ ಉತ್ಪಾದನಾ ವೆಚ್ಚ ಸುಮಾರು 25 ರೂ ಆಗುತ್ತದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿಮ್ಲಾದಲ್ಲಿ ಸೇಬು ಖರೀದಿ ಪ್ರಕ್ರಿಯೆ: Photo Courtesy: The Tribune

“ಇದು ತುಂಬಾ ನಿರಾಶಾದಾಯಕವಾಗಿದೆ ಮತ್ತು ಸೇಬು ಬೆಳೆಗಾರರು ಈ ಬಾರಿ ಅದಾನಿ ಕಂಪನಿಯನ್ನು ಬಹಿಷ್ಕರಿಸಬೇಕು” ಎಂದು ಹಣ್ಣು, ತರಕಾರಿ ಮತ್ತು ಹೂ ಬೆಳೆಗಾರರ ​​ಸಂಘದ ಅಧ್ಯಕ್ಷ ಹರೀಶ್ ಚೌಹಾಣ್ ಕರೆ ನೀಡಿದ್ದಾರೆ. “ಅದಾನಿ ಕಂಪನಿಯ ಬೆಲೆ ನಿಗದಿಗೊಳಿಸುವ ಕಾರ್ಯವಿಧಾನವು ಅನಿಯಂತ್ರಿತವಾಗಿದೆ. ಬೆಲೆಗಳನ್ನು ನಿಗದಿಪಡಿಸಿದಾಗ ಯಾವುದೇ ಸರ್ಕಾರಿ ಅಧಿಕಾರಿಯಾಗಲಿ ಅಥವಾ ರೈತರ ಪ್ರತಿನಿಧಿಗಳಾಗಲಿ ಯಾರೂ ಇಲ್ಲ” ಎಂದು ಚೌಹಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೇ ದೆಹಲಿಯಲ್ಲಿ ಹೋರಾಟನಿರತ ರೈತರ ವರ್ಷದಿಂದಲೂ ಹೇಳುತ್ತಾ ಬಂದಿರುವುದನ್ನು ನಾವು ಗಮನಿಸಬೇಕು.

ಇನ್ನೊಂದೆಡೆ ಬಿಥಲ್‌ನಲ್ಲಿರುವ ಅದಾನಿ ಸಿಎ ಗೋಡೌನ್ ಪ್ಲಾಂಟ್ ಮುಖ್ಯಸ್ಥ ಮಂಜೀತ್ ಶಿಲು ಮಾತನಾಡಿ, “ನಾವು ನೀಡುತ್ತಿರುವ ಬೆಲೆಗಳು ಉತ್ತಮವಾಗಿವೆ. ಬೆಳೆಗಾರರು ಪ್ಯಾಕಿಂಗ್ ಮತ್ತು ಗ್ರೇಡಿಂಗ್‌ಗೆ ಹಣ ಪಾವತಿಸಬೇಕಾಗಿಲ್ಲ. ನಮ್ಮಲ್ಲಿ ಸುಮಾರು 17,000 ಬೆಳೆಗಾರರ ​​ಗುಂಪು ಇದೆ. ಅವರು ನಮಗೆ ಸೇಬು ಮಾರುತ್ತಾರೆ. ನಾವು ಬೆಲೆಗಳನ್ನು ಘೋಷಿಸಿದಾಗಿನಿಂದ ಯಾರೂ ಆ ಬಗ್ಗೆ ನಮಗೆ ದೂರು ನೀಡಿಲ್ಲ. ಅದಾನಿ ಕಂಪನಿಗೆ ಸೇಬು ನೀಡದ ಬೆಳೆಗಾರರು ಮಾತ್ರ ದೂರು ನೀಡುತ್ತಿದ್ದಾರೆ” ಎಂದಿದ್ದಾರೆ.

ಅದಾನಿ ಕಂಪನಿ ದರಗಳು ಅತ್ಯಂತ ಕಳಪೆ ಮಟ್ಟದ್ದಾಗಿವೆ. ಎಪಿಎಂಸಿ ಮಂಡಿಗಳಲ್ಲಿ ಇದಕ್ಕಿಂತ ಹೆಚ್ಚಿನ ಬೆಲೆ ರೈತರಿಗೆ ಸಿಗುತ್ತಿದೆ ಎಂದು ಪ್ರಗತಿಪರ ಬೆಳೆಗಾರರ ​​ಸಂಘದ ಅಧ್ಯಕ್ಷ ಲೋಕಿಂದರ್ ಬಿಶ್ತ್ ಹೇಳಿದ್ದಾರೆ. ಅದಾನಿ ಕಂಪನಿಯ ಸಿಎ ಸ್ಟೋರ್‌ಗಳನ್ನು ಸ್ಥಾಪಿಸಲು ಸರ್ಕಾರದಿಂದ ದೊಡ್ಡ ಸಬ್ಸಿಡಿಗಳನ್ನು ಪಡೆದಿದ್ದು ಈಗ ರೈತರನ್ನು ಶೋಷಣೆ ಮಾಡುತ್ತಿದ್ದಾರೆ. ಈ ಕಂಪನಿಗಳ ಮೋಸಜಾಲದಿಂದ ರೈತರು ಬಿಡುಗಡೆ ಹೊಂದಲು ಸರ್ಕಾರವು ಕೋಲ್ಡ್‌ ಸ್ಟೋರೇಜ್‌ಗಳನ್ನು ರೈತರಿಗೆ ನಿರ್ಮಿಸಿಕೊಡಬೇಕು. ಇದರಿಂದ ರೈತರು ಬೆಲೆಕುಸಿತ ಉಂಟಾದಾಗ ಅತಿ ಕಡಿಮೆ ಬೆಲೆಗೆ ಸೇಬು ಮಾರುವುದು ತಪ್ಪುತ್ತದೆ ಎಂದು ಅವರು ಒತ್ತಾಯಿಸಿದ್ದಾರೆ.

ಸರ್ಕಾರವು ಗಣನೀಯ ಪ್ರಮಾಣದ ಸೇಬುಗಳನ್ನು ಸಮಂಜಸವಾದ ಬೆಲೆಯಲ್ಲಿ ಖರೀದಿಸಿದರೆ, ಕಾಶ್ಮೀರದ ನಾಫೆಡ್‌ನಂತೆ ಮಾರುಕಟ್ಟೆಯು ಹೆಚ್ಚು ಕಡಿಮೆ ಸ್ಥಿರವಾಗಿರುತ್ತದೆ ಮತ್ತು ಮಾರುಕಟ್ಟೆ ಶಕ್ತಿಗಳು ಬೆಳೆಗಾರರನ್ನು ಶೋಷಿಸಲು ಸಾಧ್ಯವಾಗುವುದಿಲ್ಲ ಎಂದು ಸಹ ಅವರು ಒತ್ತಾಯಿಸಿದ್ದಾರೆ.

ಇದೇ ಸಂದರ್ಭದಲ್ಲಿ ಹಿಮಾಚಲ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕುಲದೀಪ್ ರಾಥೋರ್ ಅದಾನಿ ಕಂಪನಿಯ ರೈತ ವಿರೋಧಿ ಧೋರಣೆಯನ್ನು ಖಂಡಿಸಿದ್ದಾರೆ. ಸರ್ಕಾರದ ಮೌನ ಅನುಮೋದನೆಯೊಂದಿಗೆ ಅದಾನಿ ಕಂಪನಿಗೆ ಸೇಬು ಬೆಲೆಯನ್ನು ಕಡಿಮೆ ಮಾಡಿದೆ. ಈಗಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ಕೂಡಲೇ ಸರ್ಕಾರ ಅವರ ನೆರವಿಗೆ ಧಾವಿಸಬೇಕು ಮತ್ತು ಅದಾನಿ ಕಂಪನಿ ಹೆಚ್ಚು ಬೆಲೆ ನೀಡುವಂತೆ ತಾಕೀತು ಮಾಡಬೇಕೆಂದು ಒತ್ತಾಯಿಸಿದ್ದಾರೆ.

1984 ರಿಂದ ರಾಜ್ಯ ಸರ್ಕಾರಗಳು ರೈತರಿಗೆ ಕೃಷಿ ಉಪಕರಣಗಳ ಜೊತೆಗೆ ಕೀಟನಾಶಕ, ಶಿಲೀಂಧ್ರನಾಶಕ ಮತ್ತು ಇತರ ಔಷಧಿಗಳ ಮೇಲೆ ಸಬ್ಸಿಡಿಗಳನ್ನು ನೀಡುತ್ತಿವೆ ಆದರೆ ಬಿಜೆಪಿ ಸರ್ಕಾರವು ಈ ಎಲ್ಲಾ ಸಬ್ಸಿಡಿಗಳನ್ನು ನಿಲ್ಲಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಕಳೆದ ವರ್ಷ 88 ರೂ ಗೆ ಒಂದು ಕೆಜಿ ಪ್ರೀಮಿಯಂ ಸೇಬು ಖರೀದಿಸುತ್ತಿದ್ದ ಅದಾನಿ ಕಂಪನಿ ಈಗ ಕೇವಲ 72 ರೂ ಖರೀದಿಸಲು ಮುಂದಾಗಿದೆ. ರೈತರು ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡ ಕಾರಣ ನಷ್ಟವಾದರೂ ಅಲ್ಲಿಯೇ ಮಾರಬೇಕಾಗಿದೆ. ಇನ್ನೊಂದೆಡೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಅವನ್ನ ನಿರ್ನಾಮ ಮಾಡಲಾಗುತ್ತಿದೆ. ಈ ರೀತಿಯಾಗಿ ರೈತರು ಕಾರ್ಪೊರೇಟ್ ಕಂಪನಿಗಳ ಅಡಿಯಾಳಾಗಬೇಕಾಗುತ್ತದೆ. ಹಾಗಾಗಿ ಕೃಷಿ ಕಾನೂನುಗಳು ಬೇಡ ಮತ್ತು ಎಪಿಎಂಸಿಗಳು ಗಟ್ಟಿಯಾಗಬೇಕು, ಅಲ್ಲಿನ ಭ್ರಷ್ಟಾಚಾರ ನಿಲ್ಲಬೇಕು ಎಂಬುದು ರೈತರ ಆಗ್ರಹವಾಗಿದೆ. ಅದಕ್ಕಾಗಿಯೇ ದೆಹಲಿಯಲ್ಲಿ ತೀವ್ರ ಹೋರಾಟ ನಡೆಸುತ್ತಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ: ತಾಳ್ಮೆ, ಬದ್ಧತೆ, ಶಿಸ್ತಿನ ಐತಿಹಾಸಿಕ ಹೋರಾಟಕ್ಕೆ 9 ತಿಂಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...