Homeಮುಖಪುಟ20% ಕಡಿಮೆ ಬೆಲೆ ನೀಡಿ ಸೇಬು ಖರೀದಿಗೆ ಮುಂದಾದ ಅದಾನಿ ಕಂಪನಿ: ರೈತರಿಂದ ಅದಾನಿ ಬಾಯ್ಕಾಟ್...

20% ಕಡಿಮೆ ಬೆಲೆ ನೀಡಿ ಸೇಬು ಖರೀದಿಗೆ ಮುಂದಾದ ಅದಾನಿ ಕಂಪನಿ: ರೈತರಿಂದ ಅದಾನಿ ಬಾಯ್ಕಾಟ್ ಬೆದರಿಕೆ

ಕಳೆದ ವರ್ಷ 88 ರೂ ಗೆ ಒಂದು ಕೆಜಿ ಪ್ರೀಮಿಯಂ ಸೇಬು ಖರೀದಿಸುತ್ತಿದ್ದ ಅದಾನಿ ಕಂಪನಿ ಈಗ ಕೇವಲ 72 ರೂ ಖರೀದಿಸಲು ಮುಂದಾಗಿದೆ.

- Advertisement -
- Advertisement -

ದೆಹಲಿಯಲ್ಲಿ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತರ ಬೃಹತ್ ಹೋರಾಟ ಇಂದಿಗೆ 9 ತಿಂಗಳು ಪೂರೈಸಿದೆ. ಸರ್ಕಾರದ ಯಾವುದೇ ಸಂಧಾನ, ಬೆದರಿಕೆಗಳಿಗೆ ಬಗ್ಗದ ರೈತರು ದಿನೇ ದಿನೇ ಹೋರಾಟ ತೀವ್ರಗೊಳಿಸುತ್ತಿದ್ದಾರೆ. ಅವರ ಹೋರಾಟ ನ್ಯಾಯಯುತವಾದುದ್ದು ಎಂಬುದನ್ನು ಹಿಮಾಚಲ ಪ್ರದೇಶದ ಸೇಬು ಬೆಳೆಗಾರರ ಸಂಕಷ್ಟ ಮತ್ತೊಮ್ಮೆ ಸಾಬೀತುಪಡಿಸಿದೆ. ಈ ವರ್ಷ ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಿಂದಾಗಿ ಮೊದಲೆ ಬೆಳೆ ನಷ್ಟದಿಂದ ಸಂಕಷ್ಟದಿಂದಿದ್ದ ರೈತರ ಮೇಲೆ ಅದಾನಿ ಅಗ್ರಿ ಫ್ರೆಶ್ ಕಂಪನಿ ಗಧಾಪ್ರಹಾರ ನಡೆಸಿದೆ. 20% ಕಡಿಮೆ ಬೆಲೆ ನೀಡಿ ಸೇಬು ಖರೀದಿಗೆ ಮುಂದಾಗಿರುವುದು ರೈತರಲ್ಲಿ ಆಕ್ರೋಶ ಹುಟ್ಟಿಸಿದೆ.

ಹಿಮಾಚಲ ಪ್ರದೇಶದಲ್ಲಿ ಅದಾನಿ ಗ್ರೂಪ್ ಸಿಎ ಸ್ಟೋರ್‌ಗಳಿಗೆ ಸೇಬು ಖರೀದಿಸಲು ಗುರುವಾರ ತನ್ನ ಬೆಲೆಗಳನ್ನು ಘೋಷಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಪ್ರೀಮಿಯಂ ಸೇಬಿನ ಬೆಲೆಗಳು ಈ ಬಾರಿ ಶೇಕಡಾ 20 ರಷ್ಟು ಕಡಿಮೆಯಾಗಿವೆ. ಕಳೆದ ವರ್ಷ ಪ್ರೀಮಿಯಂ ಸೇಬಿನ ಆರಂಭಿಕ ಬೆಲೆ ಪ್ರತಿ ಕೆಜಿಗೆ 88 ರೂ ಇತ್ತು. ಆದರೆ ಅದನ್ನು ಈ ಬಾರಿ ಅದು ಕೆಜಿಗೆ 72 ರೂಗೆ ಇಳಿಸಲಾಗಿದೆ. ಇದು ಸೇಬು ಬೆಳೆಗಾರರನ್ನು ಕೆರಳಿಸಿದ್ದು ಅವರು ಅದಾನಿ ಕಂಪನಿ ಬಾಯ್ಕಾಟ್ ಮಾಡುವ ಎಚ್ಚರಿಕೆ ನಿಡಿದ್ದಾರೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಇಂದು ಘೋಷಿಸಿದ ದರಗಳ ಪ್ರಕಾರ, ಶೇ.60 ಕ್ಕಿಂತ ಕಡಿಮೆ ಬಣ್ಣವನ್ನು ಹೊಂದಿರುವ ಸೇಬುಗಳನ್ನು ಪ್ರತಿ ಕೆಜಿಗೆ 12 ರಿಂದ 15ರೂಗಳಿಗೆ ಮಾರಾಟ ಮಾಡಲಾಗುತ್ತಿದೆ. ಪ್ರತಿ ಕೆಜಿ ಸೇಬಿನ ಉತ್ಪಾದನಾ ವೆಚ್ಚ ಸುಮಾರು 25 ರೂ ಆಗುತ್ತದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿಮ್ಲಾದಲ್ಲಿ ಸೇಬು ಖರೀದಿ ಪ್ರಕ್ರಿಯೆ: Photo Courtesy: The Tribune

“ಇದು ತುಂಬಾ ನಿರಾಶಾದಾಯಕವಾಗಿದೆ ಮತ್ತು ಸೇಬು ಬೆಳೆಗಾರರು ಈ ಬಾರಿ ಅದಾನಿ ಕಂಪನಿಯನ್ನು ಬಹಿಷ್ಕರಿಸಬೇಕು” ಎಂದು ಹಣ್ಣು, ತರಕಾರಿ ಮತ್ತು ಹೂ ಬೆಳೆಗಾರರ ​​ಸಂಘದ ಅಧ್ಯಕ್ಷ ಹರೀಶ್ ಚೌಹಾಣ್ ಕರೆ ನೀಡಿದ್ದಾರೆ. “ಅದಾನಿ ಕಂಪನಿಯ ಬೆಲೆ ನಿಗದಿಗೊಳಿಸುವ ಕಾರ್ಯವಿಧಾನವು ಅನಿಯಂತ್ರಿತವಾಗಿದೆ. ಬೆಲೆಗಳನ್ನು ನಿಗದಿಪಡಿಸಿದಾಗ ಯಾವುದೇ ಸರ್ಕಾರಿ ಅಧಿಕಾರಿಯಾಗಲಿ ಅಥವಾ ರೈತರ ಪ್ರತಿನಿಧಿಗಳಾಗಲಿ ಯಾರೂ ಇಲ್ಲ” ಎಂದು ಚೌಹಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೇ ದೆಹಲಿಯಲ್ಲಿ ಹೋರಾಟನಿರತ ರೈತರ ವರ್ಷದಿಂದಲೂ ಹೇಳುತ್ತಾ ಬಂದಿರುವುದನ್ನು ನಾವು ಗಮನಿಸಬೇಕು.

ಇನ್ನೊಂದೆಡೆ ಬಿಥಲ್‌ನಲ್ಲಿರುವ ಅದಾನಿ ಸಿಎ ಗೋಡೌನ್ ಪ್ಲಾಂಟ್ ಮುಖ್ಯಸ್ಥ ಮಂಜೀತ್ ಶಿಲು ಮಾತನಾಡಿ, “ನಾವು ನೀಡುತ್ತಿರುವ ಬೆಲೆಗಳು ಉತ್ತಮವಾಗಿವೆ. ಬೆಳೆಗಾರರು ಪ್ಯಾಕಿಂಗ್ ಮತ್ತು ಗ್ರೇಡಿಂಗ್‌ಗೆ ಹಣ ಪಾವತಿಸಬೇಕಾಗಿಲ್ಲ. ನಮ್ಮಲ್ಲಿ ಸುಮಾರು 17,000 ಬೆಳೆಗಾರರ ​​ಗುಂಪು ಇದೆ. ಅವರು ನಮಗೆ ಸೇಬು ಮಾರುತ್ತಾರೆ. ನಾವು ಬೆಲೆಗಳನ್ನು ಘೋಷಿಸಿದಾಗಿನಿಂದ ಯಾರೂ ಆ ಬಗ್ಗೆ ನಮಗೆ ದೂರು ನೀಡಿಲ್ಲ. ಅದಾನಿ ಕಂಪನಿಗೆ ಸೇಬು ನೀಡದ ಬೆಳೆಗಾರರು ಮಾತ್ರ ದೂರು ನೀಡುತ್ತಿದ್ದಾರೆ” ಎಂದಿದ್ದಾರೆ.

ಅದಾನಿ ಕಂಪನಿ ದರಗಳು ಅತ್ಯಂತ ಕಳಪೆ ಮಟ್ಟದ್ದಾಗಿವೆ. ಎಪಿಎಂಸಿ ಮಂಡಿಗಳಲ್ಲಿ ಇದಕ್ಕಿಂತ ಹೆಚ್ಚಿನ ಬೆಲೆ ರೈತರಿಗೆ ಸಿಗುತ್ತಿದೆ ಎಂದು ಪ್ರಗತಿಪರ ಬೆಳೆಗಾರರ ​​ಸಂಘದ ಅಧ್ಯಕ್ಷ ಲೋಕಿಂದರ್ ಬಿಶ್ತ್ ಹೇಳಿದ್ದಾರೆ. ಅದಾನಿ ಕಂಪನಿಯ ಸಿಎ ಸ್ಟೋರ್‌ಗಳನ್ನು ಸ್ಥಾಪಿಸಲು ಸರ್ಕಾರದಿಂದ ದೊಡ್ಡ ಸಬ್ಸಿಡಿಗಳನ್ನು ಪಡೆದಿದ್ದು ಈಗ ರೈತರನ್ನು ಶೋಷಣೆ ಮಾಡುತ್ತಿದ್ದಾರೆ. ಈ ಕಂಪನಿಗಳ ಮೋಸಜಾಲದಿಂದ ರೈತರು ಬಿಡುಗಡೆ ಹೊಂದಲು ಸರ್ಕಾರವು ಕೋಲ್ಡ್‌ ಸ್ಟೋರೇಜ್‌ಗಳನ್ನು ರೈತರಿಗೆ ನಿರ್ಮಿಸಿಕೊಡಬೇಕು. ಇದರಿಂದ ರೈತರು ಬೆಲೆಕುಸಿತ ಉಂಟಾದಾಗ ಅತಿ ಕಡಿಮೆ ಬೆಲೆಗೆ ಸೇಬು ಮಾರುವುದು ತಪ್ಪುತ್ತದೆ ಎಂದು ಅವರು ಒತ್ತಾಯಿಸಿದ್ದಾರೆ.

ಸರ್ಕಾರವು ಗಣನೀಯ ಪ್ರಮಾಣದ ಸೇಬುಗಳನ್ನು ಸಮಂಜಸವಾದ ಬೆಲೆಯಲ್ಲಿ ಖರೀದಿಸಿದರೆ, ಕಾಶ್ಮೀರದ ನಾಫೆಡ್‌ನಂತೆ ಮಾರುಕಟ್ಟೆಯು ಹೆಚ್ಚು ಕಡಿಮೆ ಸ್ಥಿರವಾಗಿರುತ್ತದೆ ಮತ್ತು ಮಾರುಕಟ್ಟೆ ಶಕ್ತಿಗಳು ಬೆಳೆಗಾರರನ್ನು ಶೋಷಿಸಲು ಸಾಧ್ಯವಾಗುವುದಿಲ್ಲ ಎಂದು ಸಹ ಅವರು ಒತ್ತಾಯಿಸಿದ್ದಾರೆ.

ಇದೇ ಸಂದರ್ಭದಲ್ಲಿ ಹಿಮಾಚಲ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕುಲದೀಪ್ ರಾಥೋರ್ ಅದಾನಿ ಕಂಪನಿಯ ರೈತ ವಿರೋಧಿ ಧೋರಣೆಯನ್ನು ಖಂಡಿಸಿದ್ದಾರೆ. ಸರ್ಕಾರದ ಮೌನ ಅನುಮೋದನೆಯೊಂದಿಗೆ ಅದಾನಿ ಕಂಪನಿಗೆ ಸೇಬು ಬೆಲೆಯನ್ನು ಕಡಿಮೆ ಮಾಡಿದೆ. ಈಗಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ಕೂಡಲೇ ಸರ್ಕಾರ ಅವರ ನೆರವಿಗೆ ಧಾವಿಸಬೇಕು ಮತ್ತು ಅದಾನಿ ಕಂಪನಿ ಹೆಚ್ಚು ಬೆಲೆ ನೀಡುವಂತೆ ತಾಕೀತು ಮಾಡಬೇಕೆಂದು ಒತ್ತಾಯಿಸಿದ್ದಾರೆ.

1984 ರಿಂದ ರಾಜ್ಯ ಸರ್ಕಾರಗಳು ರೈತರಿಗೆ ಕೃಷಿ ಉಪಕರಣಗಳ ಜೊತೆಗೆ ಕೀಟನಾಶಕ, ಶಿಲೀಂಧ್ರನಾಶಕ ಮತ್ತು ಇತರ ಔಷಧಿಗಳ ಮೇಲೆ ಸಬ್ಸಿಡಿಗಳನ್ನು ನೀಡುತ್ತಿವೆ ಆದರೆ ಬಿಜೆಪಿ ಸರ್ಕಾರವು ಈ ಎಲ್ಲಾ ಸಬ್ಸಿಡಿಗಳನ್ನು ನಿಲ್ಲಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಕಳೆದ ವರ್ಷ 88 ರೂ ಗೆ ಒಂದು ಕೆಜಿ ಪ್ರೀಮಿಯಂ ಸೇಬು ಖರೀದಿಸುತ್ತಿದ್ದ ಅದಾನಿ ಕಂಪನಿ ಈಗ ಕೇವಲ 72 ರೂ ಖರೀದಿಸಲು ಮುಂದಾಗಿದೆ. ರೈತರು ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡ ಕಾರಣ ನಷ್ಟವಾದರೂ ಅಲ್ಲಿಯೇ ಮಾರಬೇಕಾಗಿದೆ. ಇನ್ನೊಂದೆಡೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಅವನ್ನ ನಿರ್ನಾಮ ಮಾಡಲಾಗುತ್ತಿದೆ. ಈ ರೀತಿಯಾಗಿ ರೈತರು ಕಾರ್ಪೊರೇಟ್ ಕಂಪನಿಗಳ ಅಡಿಯಾಳಾಗಬೇಕಾಗುತ್ತದೆ. ಹಾಗಾಗಿ ಕೃಷಿ ಕಾನೂನುಗಳು ಬೇಡ ಮತ್ತು ಎಪಿಎಂಸಿಗಳು ಗಟ್ಟಿಯಾಗಬೇಕು, ಅಲ್ಲಿನ ಭ್ರಷ್ಟಾಚಾರ ನಿಲ್ಲಬೇಕು ಎಂಬುದು ರೈತರ ಆಗ್ರಹವಾಗಿದೆ. ಅದಕ್ಕಾಗಿಯೇ ದೆಹಲಿಯಲ್ಲಿ ತೀವ್ರ ಹೋರಾಟ ನಡೆಸುತ್ತಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ: ತಾಳ್ಮೆ, ಬದ್ಧತೆ, ಶಿಸ್ತಿನ ಐತಿಹಾಸಿಕ ಹೋರಾಟಕ್ಕೆ 9 ತಿಂಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....