Homeಮುಖಪುಟ20% ಕಡಿಮೆ ಬೆಲೆ ನೀಡಿ ಸೇಬು ಖರೀದಿಗೆ ಮುಂದಾದ ಅದಾನಿ ಕಂಪನಿ: ರೈತರಿಂದ ಅದಾನಿ ಬಾಯ್ಕಾಟ್...

20% ಕಡಿಮೆ ಬೆಲೆ ನೀಡಿ ಸೇಬು ಖರೀದಿಗೆ ಮುಂದಾದ ಅದಾನಿ ಕಂಪನಿ: ರೈತರಿಂದ ಅದಾನಿ ಬಾಯ್ಕಾಟ್ ಬೆದರಿಕೆ

ಕಳೆದ ವರ್ಷ 88 ರೂ ಗೆ ಒಂದು ಕೆಜಿ ಪ್ರೀಮಿಯಂ ಸೇಬು ಖರೀದಿಸುತ್ತಿದ್ದ ಅದಾನಿ ಕಂಪನಿ ಈಗ ಕೇವಲ 72 ರೂ ಖರೀದಿಸಲು ಮುಂದಾಗಿದೆ.

- Advertisement -
- Advertisement -

ದೆಹಲಿಯಲ್ಲಿ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತರ ಬೃಹತ್ ಹೋರಾಟ ಇಂದಿಗೆ 9 ತಿಂಗಳು ಪೂರೈಸಿದೆ. ಸರ್ಕಾರದ ಯಾವುದೇ ಸಂಧಾನ, ಬೆದರಿಕೆಗಳಿಗೆ ಬಗ್ಗದ ರೈತರು ದಿನೇ ದಿನೇ ಹೋರಾಟ ತೀವ್ರಗೊಳಿಸುತ್ತಿದ್ದಾರೆ. ಅವರ ಹೋರಾಟ ನ್ಯಾಯಯುತವಾದುದ್ದು ಎಂಬುದನ್ನು ಹಿಮಾಚಲ ಪ್ರದೇಶದ ಸೇಬು ಬೆಳೆಗಾರರ ಸಂಕಷ್ಟ ಮತ್ತೊಮ್ಮೆ ಸಾಬೀತುಪಡಿಸಿದೆ. ಈ ವರ್ಷ ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಿಂದಾಗಿ ಮೊದಲೆ ಬೆಳೆ ನಷ್ಟದಿಂದ ಸಂಕಷ್ಟದಿಂದಿದ್ದ ರೈತರ ಮೇಲೆ ಅದಾನಿ ಅಗ್ರಿ ಫ್ರೆಶ್ ಕಂಪನಿ ಗಧಾಪ್ರಹಾರ ನಡೆಸಿದೆ. 20% ಕಡಿಮೆ ಬೆಲೆ ನೀಡಿ ಸೇಬು ಖರೀದಿಗೆ ಮುಂದಾಗಿರುವುದು ರೈತರಲ್ಲಿ ಆಕ್ರೋಶ ಹುಟ್ಟಿಸಿದೆ.

ಹಿಮಾಚಲ ಪ್ರದೇಶದಲ್ಲಿ ಅದಾನಿ ಗ್ರೂಪ್ ಸಿಎ ಸ್ಟೋರ್‌ಗಳಿಗೆ ಸೇಬು ಖರೀದಿಸಲು ಗುರುವಾರ ತನ್ನ ಬೆಲೆಗಳನ್ನು ಘೋಷಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಪ್ರೀಮಿಯಂ ಸೇಬಿನ ಬೆಲೆಗಳು ಈ ಬಾರಿ ಶೇಕಡಾ 20 ರಷ್ಟು ಕಡಿಮೆಯಾಗಿವೆ. ಕಳೆದ ವರ್ಷ ಪ್ರೀಮಿಯಂ ಸೇಬಿನ ಆರಂಭಿಕ ಬೆಲೆ ಪ್ರತಿ ಕೆಜಿಗೆ 88 ರೂ ಇತ್ತು. ಆದರೆ ಅದನ್ನು ಈ ಬಾರಿ ಅದು ಕೆಜಿಗೆ 72 ರೂಗೆ ಇಳಿಸಲಾಗಿದೆ. ಇದು ಸೇಬು ಬೆಳೆಗಾರರನ್ನು ಕೆರಳಿಸಿದ್ದು ಅವರು ಅದಾನಿ ಕಂಪನಿ ಬಾಯ್ಕಾಟ್ ಮಾಡುವ ಎಚ್ಚರಿಕೆ ನಿಡಿದ್ದಾರೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಇಂದು ಘೋಷಿಸಿದ ದರಗಳ ಪ್ರಕಾರ, ಶೇ.60 ಕ್ಕಿಂತ ಕಡಿಮೆ ಬಣ್ಣವನ್ನು ಹೊಂದಿರುವ ಸೇಬುಗಳನ್ನು ಪ್ರತಿ ಕೆಜಿಗೆ 12 ರಿಂದ 15ರೂಗಳಿಗೆ ಮಾರಾಟ ಮಾಡಲಾಗುತ್ತಿದೆ. ಪ್ರತಿ ಕೆಜಿ ಸೇಬಿನ ಉತ್ಪಾದನಾ ವೆಚ್ಚ ಸುಮಾರು 25 ರೂ ಆಗುತ್ತದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿಮ್ಲಾದಲ್ಲಿ ಸೇಬು ಖರೀದಿ ಪ್ರಕ್ರಿಯೆ: Photo Courtesy: The Tribune

“ಇದು ತುಂಬಾ ನಿರಾಶಾದಾಯಕವಾಗಿದೆ ಮತ್ತು ಸೇಬು ಬೆಳೆಗಾರರು ಈ ಬಾರಿ ಅದಾನಿ ಕಂಪನಿಯನ್ನು ಬಹಿಷ್ಕರಿಸಬೇಕು” ಎಂದು ಹಣ್ಣು, ತರಕಾರಿ ಮತ್ತು ಹೂ ಬೆಳೆಗಾರರ ​​ಸಂಘದ ಅಧ್ಯಕ್ಷ ಹರೀಶ್ ಚೌಹಾಣ್ ಕರೆ ನೀಡಿದ್ದಾರೆ. “ಅದಾನಿ ಕಂಪನಿಯ ಬೆಲೆ ನಿಗದಿಗೊಳಿಸುವ ಕಾರ್ಯವಿಧಾನವು ಅನಿಯಂತ್ರಿತವಾಗಿದೆ. ಬೆಲೆಗಳನ್ನು ನಿಗದಿಪಡಿಸಿದಾಗ ಯಾವುದೇ ಸರ್ಕಾರಿ ಅಧಿಕಾರಿಯಾಗಲಿ ಅಥವಾ ರೈತರ ಪ್ರತಿನಿಧಿಗಳಾಗಲಿ ಯಾರೂ ಇಲ್ಲ” ಎಂದು ಚೌಹಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೇ ದೆಹಲಿಯಲ್ಲಿ ಹೋರಾಟನಿರತ ರೈತರ ವರ್ಷದಿಂದಲೂ ಹೇಳುತ್ತಾ ಬಂದಿರುವುದನ್ನು ನಾವು ಗಮನಿಸಬೇಕು.

ಇನ್ನೊಂದೆಡೆ ಬಿಥಲ್‌ನಲ್ಲಿರುವ ಅದಾನಿ ಸಿಎ ಗೋಡೌನ್ ಪ್ಲಾಂಟ್ ಮುಖ್ಯಸ್ಥ ಮಂಜೀತ್ ಶಿಲು ಮಾತನಾಡಿ, “ನಾವು ನೀಡುತ್ತಿರುವ ಬೆಲೆಗಳು ಉತ್ತಮವಾಗಿವೆ. ಬೆಳೆಗಾರರು ಪ್ಯಾಕಿಂಗ್ ಮತ್ತು ಗ್ರೇಡಿಂಗ್‌ಗೆ ಹಣ ಪಾವತಿಸಬೇಕಾಗಿಲ್ಲ. ನಮ್ಮಲ್ಲಿ ಸುಮಾರು 17,000 ಬೆಳೆಗಾರರ ​​ಗುಂಪು ಇದೆ. ಅವರು ನಮಗೆ ಸೇಬು ಮಾರುತ್ತಾರೆ. ನಾವು ಬೆಲೆಗಳನ್ನು ಘೋಷಿಸಿದಾಗಿನಿಂದ ಯಾರೂ ಆ ಬಗ್ಗೆ ನಮಗೆ ದೂರು ನೀಡಿಲ್ಲ. ಅದಾನಿ ಕಂಪನಿಗೆ ಸೇಬು ನೀಡದ ಬೆಳೆಗಾರರು ಮಾತ್ರ ದೂರು ನೀಡುತ್ತಿದ್ದಾರೆ” ಎಂದಿದ್ದಾರೆ.

ಅದಾನಿ ಕಂಪನಿ ದರಗಳು ಅತ್ಯಂತ ಕಳಪೆ ಮಟ್ಟದ್ದಾಗಿವೆ. ಎಪಿಎಂಸಿ ಮಂಡಿಗಳಲ್ಲಿ ಇದಕ್ಕಿಂತ ಹೆಚ್ಚಿನ ಬೆಲೆ ರೈತರಿಗೆ ಸಿಗುತ್ತಿದೆ ಎಂದು ಪ್ರಗತಿಪರ ಬೆಳೆಗಾರರ ​​ಸಂಘದ ಅಧ್ಯಕ್ಷ ಲೋಕಿಂದರ್ ಬಿಶ್ತ್ ಹೇಳಿದ್ದಾರೆ. ಅದಾನಿ ಕಂಪನಿಯ ಸಿಎ ಸ್ಟೋರ್‌ಗಳನ್ನು ಸ್ಥಾಪಿಸಲು ಸರ್ಕಾರದಿಂದ ದೊಡ್ಡ ಸಬ್ಸಿಡಿಗಳನ್ನು ಪಡೆದಿದ್ದು ಈಗ ರೈತರನ್ನು ಶೋಷಣೆ ಮಾಡುತ್ತಿದ್ದಾರೆ. ಈ ಕಂಪನಿಗಳ ಮೋಸಜಾಲದಿಂದ ರೈತರು ಬಿಡುಗಡೆ ಹೊಂದಲು ಸರ್ಕಾರವು ಕೋಲ್ಡ್‌ ಸ್ಟೋರೇಜ್‌ಗಳನ್ನು ರೈತರಿಗೆ ನಿರ್ಮಿಸಿಕೊಡಬೇಕು. ಇದರಿಂದ ರೈತರು ಬೆಲೆಕುಸಿತ ಉಂಟಾದಾಗ ಅತಿ ಕಡಿಮೆ ಬೆಲೆಗೆ ಸೇಬು ಮಾರುವುದು ತಪ್ಪುತ್ತದೆ ಎಂದು ಅವರು ಒತ್ತಾಯಿಸಿದ್ದಾರೆ.

ಸರ್ಕಾರವು ಗಣನೀಯ ಪ್ರಮಾಣದ ಸೇಬುಗಳನ್ನು ಸಮಂಜಸವಾದ ಬೆಲೆಯಲ್ಲಿ ಖರೀದಿಸಿದರೆ, ಕಾಶ್ಮೀರದ ನಾಫೆಡ್‌ನಂತೆ ಮಾರುಕಟ್ಟೆಯು ಹೆಚ್ಚು ಕಡಿಮೆ ಸ್ಥಿರವಾಗಿರುತ್ತದೆ ಮತ್ತು ಮಾರುಕಟ್ಟೆ ಶಕ್ತಿಗಳು ಬೆಳೆಗಾರರನ್ನು ಶೋಷಿಸಲು ಸಾಧ್ಯವಾಗುವುದಿಲ್ಲ ಎಂದು ಸಹ ಅವರು ಒತ್ತಾಯಿಸಿದ್ದಾರೆ.

ಇದೇ ಸಂದರ್ಭದಲ್ಲಿ ಹಿಮಾಚಲ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕುಲದೀಪ್ ರಾಥೋರ್ ಅದಾನಿ ಕಂಪನಿಯ ರೈತ ವಿರೋಧಿ ಧೋರಣೆಯನ್ನು ಖಂಡಿಸಿದ್ದಾರೆ. ಸರ್ಕಾರದ ಮೌನ ಅನುಮೋದನೆಯೊಂದಿಗೆ ಅದಾನಿ ಕಂಪನಿಗೆ ಸೇಬು ಬೆಲೆಯನ್ನು ಕಡಿಮೆ ಮಾಡಿದೆ. ಈಗಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ಕೂಡಲೇ ಸರ್ಕಾರ ಅವರ ನೆರವಿಗೆ ಧಾವಿಸಬೇಕು ಮತ್ತು ಅದಾನಿ ಕಂಪನಿ ಹೆಚ್ಚು ಬೆಲೆ ನೀಡುವಂತೆ ತಾಕೀತು ಮಾಡಬೇಕೆಂದು ಒತ್ತಾಯಿಸಿದ್ದಾರೆ.

1984 ರಿಂದ ರಾಜ್ಯ ಸರ್ಕಾರಗಳು ರೈತರಿಗೆ ಕೃಷಿ ಉಪಕರಣಗಳ ಜೊತೆಗೆ ಕೀಟನಾಶಕ, ಶಿಲೀಂಧ್ರನಾಶಕ ಮತ್ತು ಇತರ ಔಷಧಿಗಳ ಮೇಲೆ ಸಬ್ಸಿಡಿಗಳನ್ನು ನೀಡುತ್ತಿವೆ ಆದರೆ ಬಿಜೆಪಿ ಸರ್ಕಾರವು ಈ ಎಲ್ಲಾ ಸಬ್ಸಿಡಿಗಳನ್ನು ನಿಲ್ಲಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಕಳೆದ ವರ್ಷ 88 ರೂ ಗೆ ಒಂದು ಕೆಜಿ ಪ್ರೀಮಿಯಂ ಸೇಬು ಖರೀದಿಸುತ್ತಿದ್ದ ಅದಾನಿ ಕಂಪನಿ ಈಗ ಕೇವಲ 72 ರೂ ಖರೀದಿಸಲು ಮುಂದಾಗಿದೆ. ರೈತರು ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡ ಕಾರಣ ನಷ್ಟವಾದರೂ ಅಲ್ಲಿಯೇ ಮಾರಬೇಕಾಗಿದೆ. ಇನ್ನೊಂದೆಡೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಅವನ್ನ ನಿರ್ನಾಮ ಮಾಡಲಾಗುತ್ತಿದೆ. ಈ ರೀತಿಯಾಗಿ ರೈತರು ಕಾರ್ಪೊರೇಟ್ ಕಂಪನಿಗಳ ಅಡಿಯಾಳಾಗಬೇಕಾಗುತ್ತದೆ. ಹಾಗಾಗಿ ಕೃಷಿ ಕಾನೂನುಗಳು ಬೇಡ ಮತ್ತು ಎಪಿಎಂಸಿಗಳು ಗಟ್ಟಿಯಾಗಬೇಕು, ಅಲ್ಲಿನ ಭ್ರಷ್ಟಾಚಾರ ನಿಲ್ಲಬೇಕು ಎಂಬುದು ರೈತರ ಆಗ್ರಹವಾಗಿದೆ. ಅದಕ್ಕಾಗಿಯೇ ದೆಹಲಿಯಲ್ಲಿ ತೀವ್ರ ಹೋರಾಟ ನಡೆಸುತ್ತಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ: ತಾಳ್ಮೆ, ಬದ್ಧತೆ, ಶಿಸ್ತಿನ ಐತಿಹಾಸಿಕ ಹೋರಾಟಕ್ಕೆ 9 ತಿಂಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...