Homeಮುಖಪುಟ20% ಕಡಿಮೆ ಬೆಲೆ ನೀಡಿ ಸೇಬು ಖರೀದಿಗೆ ಮುಂದಾದ ಅದಾನಿ ಕಂಪನಿ: ರೈತರಿಂದ ಅದಾನಿ ಬಾಯ್ಕಾಟ್...

20% ಕಡಿಮೆ ಬೆಲೆ ನೀಡಿ ಸೇಬು ಖರೀದಿಗೆ ಮುಂದಾದ ಅದಾನಿ ಕಂಪನಿ: ರೈತರಿಂದ ಅದಾನಿ ಬಾಯ್ಕಾಟ್ ಬೆದರಿಕೆ

ಕಳೆದ ವರ್ಷ 88 ರೂ ಗೆ ಒಂದು ಕೆಜಿ ಪ್ರೀಮಿಯಂ ಸೇಬು ಖರೀದಿಸುತ್ತಿದ್ದ ಅದಾನಿ ಕಂಪನಿ ಈಗ ಕೇವಲ 72 ರೂ ಖರೀದಿಸಲು ಮುಂದಾಗಿದೆ.

- Advertisement -
- Advertisement -

ದೆಹಲಿಯಲ್ಲಿ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತರ ಬೃಹತ್ ಹೋರಾಟ ಇಂದಿಗೆ 9 ತಿಂಗಳು ಪೂರೈಸಿದೆ. ಸರ್ಕಾರದ ಯಾವುದೇ ಸಂಧಾನ, ಬೆದರಿಕೆಗಳಿಗೆ ಬಗ್ಗದ ರೈತರು ದಿನೇ ದಿನೇ ಹೋರಾಟ ತೀವ್ರಗೊಳಿಸುತ್ತಿದ್ದಾರೆ. ಅವರ ಹೋರಾಟ ನ್ಯಾಯಯುತವಾದುದ್ದು ಎಂಬುದನ್ನು ಹಿಮಾಚಲ ಪ್ರದೇಶದ ಸೇಬು ಬೆಳೆಗಾರರ ಸಂಕಷ್ಟ ಮತ್ತೊಮ್ಮೆ ಸಾಬೀತುಪಡಿಸಿದೆ. ಈ ವರ್ಷ ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಿಂದಾಗಿ ಮೊದಲೆ ಬೆಳೆ ನಷ್ಟದಿಂದ ಸಂಕಷ್ಟದಿಂದಿದ್ದ ರೈತರ ಮೇಲೆ ಅದಾನಿ ಅಗ್ರಿ ಫ್ರೆಶ್ ಕಂಪನಿ ಗಧಾಪ್ರಹಾರ ನಡೆಸಿದೆ. 20% ಕಡಿಮೆ ಬೆಲೆ ನೀಡಿ ಸೇಬು ಖರೀದಿಗೆ ಮುಂದಾಗಿರುವುದು ರೈತರಲ್ಲಿ ಆಕ್ರೋಶ ಹುಟ್ಟಿಸಿದೆ.

ಹಿಮಾಚಲ ಪ್ರದೇಶದಲ್ಲಿ ಅದಾನಿ ಗ್ರೂಪ್ ಸಿಎ ಸ್ಟೋರ್‌ಗಳಿಗೆ ಸೇಬು ಖರೀದಿಸಲು ಗುರುವಾರ ತನ್ನ ಬೆಲೆಗಳನ್ನು ಘೋಷಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಪ್ರೀಮಿಯಂ ಸೇಬಿನ ಬೆಲೆಗಳು ಈ ಬಾರಿ ಶೇಕಡಾ 20 ರಷ್ಟು ಕಡಿಮೆಯಾಗಿವೆ. ಕಳೆದ ವರ್ಷ ಪ್ರೀಮಿಯಂ ಸೇಬಿನ ಆರಂಭಿಕ ಬೆಲೆ ಪ್ರತಿ ಕೆಜಿಗೆ 88 ರೂ ಇತ್ತು. ಆದರೆ ಅದನ್ನು ಈ ಬಾರಿ ಅದು ಕೆಜಿಗೆ 72 ರೂಗೆ ಇಳಿಸಲಾಗಿದೆ. ಇದು ಸೇಬು ಬೆಳೆಗಾರರನ್ನು ಕೆರಳಿಸಿದ್ದು ಅವರು ಅದಾನಿ ಕಂಪನಿ ಬಾಯ್ಕಾಟ್ ಮಾಡುವ ಎಚ್ಚರಿಕೆ ನಿಡಿದ್ದಾರೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಇಂದು ಘೋಷಿಸಿದ ದರಗಳ ಪ್ರಕಾರ, ಶೇ.60 ಕ್ಕಿಂತ ಕಡಿಮೆ ಬಣ್ಣವನ್ನು ಹೊಂದಿರುವ ಸೇಬುಗಳನ್ನು ಪ್ರತಿ ಕೆಜಿಗೆ 12 ರಿಂದ 15ರೂಗಳಿಗೆ ಮಾರಾಟ ಮಾಡಲಾಗುತ್ತಿದೆ. ಪ್ರತಿ ಕೆಜಿ ಸೇಬಿನ ಉತ್ಪಾದನಾ ವೆಚ್ಚ ಸುಮಾರು 25 ರೂ ಆಗುತ್ತದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿಮ್ಲಾದಲ್ಲಿ ಸೇಬು ಖರೀದಿ ಪ್ರಕ್ರಿಯೆ: Photo Courtesy: The Tribune

“ಇದು ತುಂಬಾ ನಿರಾಶಾದಾಯಕವಾಗಿದೆ ಮತ್ತು ಸೇಬು ಬೆಳೆಗಾರರು ಈ ಬಾರಿ ಅದಾನಿ ಕಂಪನಿಯನ್ನು ಬಹಿಷ್ಕರಿಸಬೇಕು” ಎಂದು ಹಣ್ಣು, ತರಕಾರಿ ಮತ್ತು ಹೂ ಬೆಳೆಗಾರರ ​​ಸಂಘದ ಅಧ್ಯಕ್ಷ ಹರೀಶ್ ಚೌಹಾಣ್ ಕರೆ ನೀಡಿದ್ದಾರೆ. “ಅದಾನಿ ಕಂಪನಿಯ ಬೆಲೆ ನಿಗದಿಗೊಳಿಸುವ ಕಾರ್ಯವಿಧಾನವು ಅನಿಯಂತ್ರಿತವಾಗಿದೆ. ಬೆಲೆಗಳನ್ನು ನಿಗದಿಪಡಿಸಿದಾಗ ಯಾವುದೇ ಸರ್ಕಾರಿ ಅಧಿಕಾರಿಯಾಗಲಿ ಅಥವಾ ರೈತರ ಪ್ರತಿನಿಧಿಗಳಾಗಲಿ ಯಾರೂ ಇಲ್ಲ” ಎಂದು ಚೌಹಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೇ ದೆಹಲಿಯಲ್ಲಿ ಹೋರಾಟನಿರತ ರೈತರ ವರ್ಷದಿಂದಲೂ ಹೇಳುತ್ತಾ ಬಂದಿರುವುದನ್ನು ನಾವು ಗಮನಿಸಬೇಕು.

ಇನ್ನೊಂದೆಡೆ ಬಿಥಲ್‌ನಲ್ಲಿರುವ ಅದಾನಿ ಸಿಎ ಗೋಡೌನ್ ಪ್ಲಾಂಟ್ ಮುಖ್ಯಸ್ಥ ಮಂಜೀತ್ ಶಿಲು ಮಾತನಾಡಿ, “ನಾವು ನೀಡುತ್ತಿರುವ ಬೆಲೆಗಳು ಉತ್ತಮವಾಗಿವೆ. ಬೆಳೆಗಾರರು ಪ್ಯಾಕಿಂಗ್ ಮತ್ತು ಗ್ರೇಡಿಂಗ್‌ಗೆ ಹಣ ಪಾವತಿಸಬೇಕಾಗಿಲ್ಲ. ನಮ್ಮಲ್ಲಿ ಸುಮಾರು 17,000 ಬೆಳೆಗಾರರ ​​ಗುಂಪು ಇದೆ. ಅವರು ನಮಗೆ ಸೇಬು ಮಾರುತ್ತಾರೆ. ನಾವು ಬೆಲೆಗಳನ್ನು ಘೋಷಿಸಿದಾಗಿನಿಂದ ಯಾರೂ ಆ ಬಗ್ಗೆ ನಮಗೆ ದೂರು ನೀಡಿಲ್ಲ. ಅದಾನಿ ಕಂಪನಿಗೆ ಸೇಬು ನೀಡದ ಬೆಳೆಗಾರರು ಮಾತ್ರ ದೂರು ನೀಡುತ್ತಿದ್ದಾರೆ” ಎಂದಿದ್ದಾರೆ.

ಅದಾನಿ ಕಂಪನಿ ದರಗಳು ಅತ್ಯಂತ ಕಳಪೆ ಮಟ್ಟದ್ದಾಗಿವೆ. ಎಪಿಎಂಸಿ ಮಂಡಿಗಳಲ್ಲಿ ಇದಕ್ಕಿಂತ ಹೆಚ್ಚಿನ ಬೆಲೆ ರೈತರಿಗೆ ಸಿಗುತ್ತಿದೆ ಎಂದು ಪ್ರಗತಿಪರ ಬೆಳೆಗಾರರ ​​ಸಂಘದ ಅಧ್ಯಕ್ಷ ಲೋಕಿಂದರ್ ಬಿಶ್ತ್ ಹೇಳಿದ್ದಾರೆ. ಅದಾನಿ ಕಂಪನಿಯ ಸಿಎ ಸ್ಟೋರ್‌ಗಳನ್ನು ಸ್ಥಾಪಿಸಲು ಸರ್ಕಾರದಿಂದ ದೊಡ್ಡ ಸಬ್ಸಿಡಿಗಳನ್ನು ಪಡೆದಿದ್ದು ಈಗ ರೈತರನ್ನು ಶೋಷಣೆ ಮಾಡುತ್ತಿದ್ದಾರೆ. ಈ ಕಂಪನಿಗಳ ಮೋಸಜಾಲದಿಂದ ರೈತರು ಬಿಡುಗಡೆ ಹೊಂದಲು ಸರ್ಕಾರವು ಕೋಲ್ಡ್‌ ಸ್ಟೋರೇಜ್‌ಗಳನ್ನು ರೈತರಿಗೆ ನಿರ್ಮಿಸಿಕೊಡಬೇಕು. ಇದರಿಂದ ರೈತರು ಬೆಲೆಕುಸಿತ ಉಂಟಾದಾಗ ಅತಿ ಕಡಿಮೆ ಬೆಲೆಗೆ ಸೇಬು ಮಾರುವುದು ತಪ್ಪುತ್ತದೆ ಎಂದು ಅವರು ಒತ್ತಾಯಿಸಿದ್ದಾರೆ.

ಸರ್ಕಾರವು ಗಣನೀಯ ಪ್ರಮಾಣದ ಸೇಬುಗಳನ್ನು ಸಮಂಜಸವಾದ ಬೆಲೆಯಲ್ಲಿ ಖರೀದಿಸಿದರೆ, ಕಾಶ್ಮೀರದ ನಾಫೆಡ್‌ನಂತೆ ಮಾರುಕಟ್ಟೆಯು ಹೆಚ್ಚು ಕಡಿಮೆ ಸ್ಥಿರವಾಗಿರುತ್ತದೆ ಮತ್ತು ಮಾರುಕಟ್ಟೆ ಶಕ್ತಿಗಳು ಬೆಳೆಗಾರರನ್ನು ಶೋಷಿಸಲು ಸಾಧ್ಯವಾಗುವುದಿಲ್ಲ ಎಂದು ಸಹ ಅವರು ಒತ್ತಾಯಿಸಿದ್ದಾರೆ.

ಇದೇ ಸಂದರ್ಭದಲ್ಲಿ ಹಿಮಾಚಲ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕುಲದೀಪ್ ರಾಥೋರ್ ಅದಾನಿ ಕಂಪನಿಯ ರೈತ ವಿರೋಧಿ ಧೋರಣೆಯನ್ನು ಖಂಡಿಸಿದ್ದಾರೆ. ಸರ್ಕಾರದ ಮೌನ ಅನುಮೋದನೆಯೊಂದಿಗೆ ಅದಾನಿ ಕಂಪನಿಗೆ ಸೇಬು ಬೆಲೆಯನ್ನು ಕಡಿಮೆ ಮಾಡಿದೆ. ಈಗಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ಕೂಡಲೇ ಸರ್ಕಾರ ಅವರ ನೆರವಿಗೆ ಧಾವಿಸಬೇಕು ಮತ್ತು ಅದಾನಿ ಕಂಪನಿ ಹೆಚ್ಚು ಬೆಲೆ ನೀಡುವಂತೆ ತಾಕೀತು ಮಾಡಬೇಕೆಂದು ಒತ್ತಾಯಿಸಿದ್ದಾರೆ.

1984 ರಿಂದ ರಾಜ್ಯ ಸರ್ಕಾರಗಳು ರೈತರಿಗೆ ಕೃಷಿ ಉಪಕರಣಗಳ ಜೊತೆಗೆ ಕೀಟನಾಶಕ, ಶಿಲೀಂಧ್ರನಾಶಕ ಮತ್ತು ಇತರ ಔಷಧಿಗಳ ಮೇಲೆ ಸಬ್ಸಿಡಿಗಳನ್ನು ನೀಡುತ್ತಿವೆ ಆದರೆ ಬಿಜೆಪಿ ಸರ್ಕಾರವು ಈ ಎಲ್ಲಾ ಸಬ್ಸಿಡಿಗಳನ್ನು ನಿಲ್ಲಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಕಳೆದ ವರ್ಷ 88 ರೂ ಗೆ ಒಂದು ಕೆಜಿ ಪ್ರೀಮಿಯಂ ಸೇಬು ಖರೀದಿಸುತ್ತಿದ್ದ ಅದಾನಿ ಕಂಪನಿ ಈಗ ಕೇವಲ 72 ರೂ ಖರೀದಿಸಲು ಮುಂದಾಗಿದೆ. ರೈತರು ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡ ಕಾರಣ ನಷ್ಟವಾದರೂ ಅಲ್ಲಿಯೇ ಮಾರಬೇಕಾಗಿದೆ. ಇನ್ನೊಂದೆಡೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಅವನ್ನ ನಿರ್ನಾಮ ಮಾಡಲಾಗುತ್ತಿದೆ. ಈ ರೀತಿಯಾಗಿ ರೈತರು ಕಾರ್ಪೊರೇಟ್ ಕಂಪನಿಗಳ ಅಡಿಯಾಳಾಗಬೇಕಾಗುತ್ತದೆ. ಹಾಗಾಗಿ ಕೃಷಿ ಕಾನೂನುಗಳು ಬೇಡ ಮತ್ತು ಎಪಿಎಂಸಿಗಳು ಗಟ್ಟಿಯಾಗಬೇಕು, ಅಲ್ಲಿನ ಭ್ರಷ್ಟಾಚಾರ ನಿಲ್ಲಬೇಕು ಎಂಬುದು ರೈತರ ಆಗ್ರಹವಾಗಿದೆ. ಅದಕ್ಕಾಗಿಯೇ ದೆಹಲಿಯಲ್ಲಿ ತೀವ್ರ ಹೋರಾಟ ನಡೆಸುತ್ತಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ: ತಾಳ್ಮೆ, ಬದ್ಧತೆ, ಶಿಸ್ತಿನ ಐತಿಹಾಸಿಕ ಹೋರಾಟಕ್ಕೆ 9 ತಿಂಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....