Homeಮುಖಪುಟ20% ಕಡಿಮೆ ಬೆಲೆ ನೀಡಿ ಸೇಬು ಖರೀದಿಗೆ ಮುಂದಾದ ಅದಾನಿ ಕಂಪನಿ: ರೈತರಿಂದ ಅದಾನಿ ಬಾಯ್ಕಾಟ್...

20% ಕಡಿಮೆ ಬೆಲೆ ನೀಡಿ ಸೇಬು ಖರೀದಿಗೆ ಮುಂದಾದ ಅದಾನಿ ಕಂಪನಿ: ರೈತರಿಂದ ಅದಾನಿ ಬಾಯ್ಕಾಟ್ ಬೆದರಿಕೆ

ಕಳೆದ ವರ್ಷ 88 ರೂ ಗೆ ಒಂದು ಕೆಜಿ ಪ್ರೀಮಿಯಂ ಸೇಬು ಖರೀದಿಸುತ್ತಿದ್ದ ಅದಾನಿ ಕಂಪನಿ ಈಗ ಕೇವಲ 72 ರೂ ಖರೀದಿಸಲು ಮುಂದಾಗಿದೆ.

- Advertisement -
- Advertisement -

ದೆಹಲಿಯಲ್ಲಿ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತರ ಬೃಹತ್ ಹೋರಾಟ ಇಂದಿಗೆ 9 ತಿಂಗಳು ಪೂರೈಸಿದೆ. ಸರ್ಕಾರದ ಯಾವುದೇ ಸಂಧಾನ, ಬೆದರಿಕೆಗಳಿಗೆ ಬಗ್ಗದ ರೈತರು ದಿನೇ ದಿನೇ ಹೋರಾಟ ತೀವ್ರಗೊಳಿಸುತ್ತಿದ್ದಾರೆ. ಅವರ ಹೋರಾಟ ನ್ಯಾಯಯುತವಾದುದ್ದು ಎಂಬುದನ್ನು ಹಿಮಾಚಲ ಪ್ರದೇಶದ ಸೇಬು ಬೆಳೆಗಾರರ ಸಂಕಷ್ಟ ಮತ್ತೊಮ್ಮೆ ಸಾಬೀತುಪಡಿಸಿದೆ. ಈ ವರ್ಷ ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಿಂದಾಗಿ ಮೊದಲೆ ಬೆಳೆ ನಷ್ಟದಿಂದ ಸಂಕಷ್ಟದಿಂದಿದ್ದ ರೈತರ ಮೇಲೆ ಅದಾನಿ ಅಗ್ರಿ ಫ್ರೆಶ್ ಕಂಪನಿ ಗಧಾಪ್ರಹಾರ ನಡೆಸಿದೆ. 20% ಕಡಿಮೆ ಬೆಲೆ ನೀಡಿ ಸೇಬು ಖರೀದಿಗೆ ಮುಂದಾಗಿರುವುದು ರೈತರಲ್ಲಿ ಆಕ್ರೋಶ ಹುಟ್ಟಿಸಿದೆ.

ಹಿಮಾಚಲ ಪ್ರದೇಶದಲ್ಲಿ ಅದಾನಿ ಗ್ರೂಪ್ ಸಿಎ ಸ್ಟೋರ್‌ಗಳಿಗೆ ಸೇಬು ಖರೀದಿಸಲು ಗುರುವಾರ ತನ್ನ ಬೆಲೆಗಳನ್ನು ಘೋಷಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಪ್ರೀಮಿಯಂ ಸೇಬಿನ ಬೆಲೆಗಳು ಈ ಬಾರಿ ಶೇಕಡಾ 20 ರಷ್ಟು ಕಡಿಮೆಯಾಗಿವೆ. ಕಳೆದ ವರ್ಷ ಪ್ರೀಮಿಯಂ ಸೇಬಿನ ಆರಂಭಿಕ ಬೆಲೆ ಪ್ರತಿ ಕೆಜಿಗೆ 88 ರೂ ಇತ್ತು. ಆದರೆ ಅದನ್ನು ಈ ಬಾರಿ ಅದು ಕೆಜಿಗೆ 72 ರೂಗೆ ಇಳಿಸಲಾಗಿದೆ. ಇದು ಸೇಬು ಬೆಳೆಗಾರರನ್ನು ಕೆರಳಿಸಿದ್ದು ಅವರು ಅದಾನಿ ಕಂಪನಿ ಬಾಯ್ಕಾಟ್ ಮಾಡುವ ಎಚ್ಚರಿಕೆ ನಿಡಿದ್ದಾರೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಇಂದು ಘೋಷಿಸಿದ ದರಗಳ ಪ್ರಕಾರ, ಶೇ.60 ಕ್ಕಿಂತ ಕಡಿಮೆ ಬಣ್ಣವನ್ನು ಹೊಂದಿರುವ ಸೇಬುಗಳನ್ನು ಪ್ರತಿ ಕೆಜಿಗೆ 12 ರಿಂದ 15ರೂಗಳಿಗೆ ಮಾರಾಟ ಮಾಡಲಾಗುತ್ತಿದೆ. ಪ್ರತಿ ಕೆಜಿ ಸೇಬಿನ ಉತ್ಪಾದನಾ ವೆಚ್ಚ ಸುಮಾರು 25 ರೂ ಆಗುತ್ತದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿಮ್ಲಾದಲ್ಲಿ ಸೇಬು ಖರೀದಿ ಪ್ರಕ್ರಿಯೆ: Photo Courtesy: The Tribune

“ಇದು ತುಂಬಾ ನಿರಾಶಾದಾಯಕವಾಗಿದೆ ಮತ್ತು ಸೇಬು ಬೆಳೆಗಾರರು ಈ ಬಾರಿ ಅದಾನಿ ಕಂಪನಿಯನ್ನು ಬಹಿಷ್ಕರಿಸಬೇಕು” ಎಂದು ಹಣ್ಣು, ತರಕಾರಿ ಮತ್ತು ಹೂ ಬೆಳೆಗಾರರ ​​ಸಂಘದ ಅಧ್ಯಕ್ಷ ಹರೀಶ್ ಚೌಹಾಣ್ ಕರೆ ನೀಡಿದ್ದಾರೆ. “ಅದಾನಿ ಕಂಪನಿಯ ಬೆಲೆ ನಿಗದಿಗೊಳಿಸುವ ಕಾರ್ಯವಿಧಾನವು ಅನಿಯಂತ್ರಿತವಾಗಿದೆ. ಬೆಲೆಗಳನ್ನು ನಿಗದಿಪಡಿಸಿದಾಗ ಯಾವುದೇ ಸರ್ಕಾರಿ ಅಧಿಕಾರಿಯಾಗಲಿ ಅಥವಾ ರೈತರ ಪ್ರತಿನಿಧಿಗಳಾಗಲಿ ಯಾರೂ ಇಲ್ಲ” ಎಂದು ಚೌಹಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೇ ದೆಹಲಿಯಲ್ಲಿ ಹೋರಾಟನಿರತ ರೈತರ ವರ್ಷದಿಂದಲೂ ಹೇಳುತ್ತಾ ಬಂದಿರುವುದನ್ನು ನಾವು ಗಮನಿಸಬೇಕು.

ಇನ್ನೊಂದೆಡೆ ಬಿಥಲ್‌ನಲ್ಲಿರುವ ಅದಾನಿ ಸಿಎ ಗೋಡೌನ್ ಪ್ಲಾಂಟ್ ಮುಖ್ಯಸ್ಥ ಮಂಜೀತ್ ಶಿಲು ಮಾತನಾಡಿ, “ನಾವು ನೀಡುತ್ತಿರುವ ಬೆಲೆಗಳು ಉತ್ತಮವಾಗಿವೆ. ಬೆಳೆಗಾರರು ಪ್ಯಾಕಿಂಗ್ ಮತ್ತು ಗ್ರೇಡಿಂಗ್‌ಗೆ ಹಣ ಪಾವತಿಸಬೇಕಾಗಿಲ್ಲ. ನಮ್ಮಲ್ಲಿ ಸುಮಾರು 17,000 ಬೆಳೆಗಾರರ ​​ಗುಂಪು ಇದೆ. ಅವರು ನಮಗೆ ಸೇಬು ಮಾರುತ್ತಾರೆ. ನಾವು ಬೆಲೆಗಳನ್ನು ಘೋಷಿಸಿದಾಗಿನಿಂದ ಯಾರೂ ಆ ಬಗ್ಗೆ ನಮಗೆ ದೂರು ನೀಡಿಲ್ಲ. ಅದಾನಿ ಕಂಪನಿಗೆ ಸೇಬು ನೀಡದ ಬೆಳೆಗಾರರು ಮಾತ್ರ ದೂರು ನೀಡುತ್ತಿದ್ದಾರೆ” ಎಂದಿದ್ದಾರೆ.

ಅದಾನಿ ಕಂಪನಿ ದರಗಳು ಅತ್ಯಂತ ಕಳಪೆ ಮಟ್ಟದ್ದಾಗಿವೆ. ಎಪಿಎಂಸಿ ಮಂಡಿಗಳಲ್ಲಿ ಇದಕ್ಕಿಂತ ಹೆಚ್ಚಿನ ಬೆಲೆ ರೈತರಿಗೆ ಸಿಗುತ್ತಿದೆ ಎಂದು ಪ್ರಗತಿಪರ ಬೆಳೆಗಾರರ ​​ಸಂಘದ ಅಧ್ಯಕ್ಷ ಲೋಕಿಂದರ್ ಬಿಶ್ತ್ ಹೇಳಿದ್ದಾರೆ. ಅದಾನಿ ಕಂಪನಿಯ ಸಿಎ ಸ್ಟೋರ್‌ಗಳನ್ನು ಸ್ಥಾಪಿಸಲು ಸರ್ಕಾರದಿಂದ ದೊಡ್ಡ ಸಬ್ಸಿಡಿಗಳನ್ನು ಪಡೆದಿದ್ದು ಈಗ ರೈತರನ್ನು ಶೋಷಣೆ ಮಾಡುತ್ತಿದ್ದಾರೆ. ಈ ಕಂಪನಿಗಳ ಮೋಸಜಾಲದಿಂದ ರೈತರು ಬಿಡುಗಡೆ ಹೊಂದಲು ಸರ್ಕಾರವು ಕೋಲ್ಡ್‌ ಸ್ಟೋರೇಜ್‌ಗಳನ್ನು ರೈತರಿಗೆ ನಿರ್ಮಿಸಿಕೊಡಬೇಕು. ಇದರಿಂದ ರೈತರು ಬೆಲೆಕುಸಿತ ಉಂಟಾದಾಗ ಅತಿ ಕಡಿಮೆ ಬೆಲೆಗೆ ಸೇಬು ಮಾರುವುದು ತಪ್ಪುತ್ತದೆ ಎಂದು ಅವರು ಒತ್ತಾಯಿಸಿದ್ದಾರೆ.

ಸರ್ಕಾರವು ಗಣನೀಯ ಪ್ರಮಾಣದ ಸೇಬುಗಳನ್ನು ಸಮಂಜಸವಾದ ಬೆಲೆಯಲ್ಲಿ ಖರೀದಿಸಿದರೆ, ಕಾಶ್ಮೀರದ ನಾಫೆಡ್‌ನಂತೆ ಮಾರುಕಟ್ಟೆಯು ಹೆಚ್ಚು ಕಡಿಮೆ ಸ್ಥಿರವಾಗಿರುತ್ತದೆ ಮತ್ತು ಮಾರುಕಟ್ಟೆ ಶಕ್ತಿಗಳು ಬೆಳೆಗಾರರನ್ನು ಶೋಷಿಸಲು ಸಾಧ್ಯವಾಗುವುದಿಲ್ಲ ಎಂದು ಸಹ ಅವರು ಒತ್ತಾಯಿಸಿದ್ದಾರೆ.

ಇದೇ ಸಂದರ್ಭದಲ್ಲಿ ಹಿಮಾಚಲ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕುಲದೀಪ್ ರಾಥೋರ್ ಅದಾನಿ ಕಂಪನಿಯ ರೈತ ವಿರೋಧಿ ಧೋರಣೆಯನ್ನು ಖಂಡಿಸಿದ್ದಾರೆ. ಸರ್ಕಾರದ ಮೌನ ಅನುಮೋದನೆಯೊಂದಿಗೆ ಅದಾನಿ ಕಂಪನಿಗೆ ಸೇಬು ಬೆಲೆಯನ್ನು ಕಡಿಮೆ ಮಾಡಿದೆ. ಈಗಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ಕೂಡಲೇ ಸರ್ಕಾರ ಅವರ ನೆರವಿಗೆ ಧಾವಿಸಬೇಕು ಮತ್ತು ಅದಾನಿ ಕಂಪನಿ ಹೆಚ್ಚು ಬೆಲೆ ನೀಡುವಂತೆ ತಾಕೀತು ಮಾಡಬೇಕೆಂದು ಒತ್ತಾಯಿಸಿದ್ದಾರೆ.

1984 ರಿಂದ ರಾಜ್ಯ ಸರ್ಕಾರಗಳು ರೈತರಿಗೆ ಕೃಷಿ ಉಪಕರಣಗಳ ಜೊತೆಗೆ ಕೀಟನಾಶಕ, ಶಿಲೀಂಧ್ರನಾಶಕ ಮತ್ತು ಇತರ ಔಷಧಿಗಳ ಮೇಲೆ ಸಬ್ಸಿಡಿಗಳನ್ನು ನೀಡುತ್ತಿವೆ ಆದರೆ ಬಿಜೆಪಿ ಸರ್ಕಾರವು ಈ ಎಲ್ಲಾ ಸಬ್ಸಿಡಿಗಳನ್ನು ನಿಲ್ಲಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಕಳೆದ ವರ್ಷ 88 ರೂ ಗೆ ಒಂದು ಕೆಜಿ ಪ್ರೀಮಿಯಂ ಸೇಬು ಖರೀದಿಸುತ್ತಿದ್ದ ಅದಾನಿ ಕಂಪನಿ ಈಗ ಕೇವಲ 72 ರೂ ಖರೀದಿಸಲು ಮುಂದಾಗಿದೆ. ರೈತರು ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡ ಕಾರಣ ನಷ್ಟವಾದರೂ ಅಲ್ಲಿಯೇ ಮಾರಬೇಕಾಗಿದೆ. ಇನ್ನೊಂದೆಡೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಅವನ್ನ ನಿರ್ನಾಮ ಮಾಡಲಾಗುತ್ತಿದೆ. ಈ ರೀತಿಯಾಗಿ ರೈತರು ಕಾರ್ಪೊರೇಟ್ ಕಂಪನಿಗಳ ಅಡಿಯಾಳಾಗಬೇಕಾಗುತ್ತದೆ. ಹಾಗಾಗಿ ಕೃಷಿ ಕಾನೂನುಗಳು ಬೇಡ ಮತ್ತು ಎಪಿಎಂಸಿಗಳು ಗಟ್ಟಿಯಾಗಬೇಕು, ಅಲ್ಲಿನ ಭ್ರಷ್ಟಾಚಾರ ನಿಲ್ಲಬೇಕು ಎಂಬುದು ರೈತರ ಆಗ್ರಹವಾಗಿದೆ. ಅದಕ್ಕಾಗಿಯೇ ದೆಹಲಿಯಲ್ಲಿ ತೀವ್ರ ಹೋರಾಟ ನಡೆಸುತ್ತಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ: ತಾಳ್ಮೆ, ಬದ್ಧತೆ, ಶಿಸ್ತಿನ ಐತಿಹಾಸಿಕ ಹೋರಾಟಕ್ಕೆ 9 ತಿಂಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...