Homeಮುಖಪುಟ20% ಕಡಿಮೆ ಬೆಲೆ ನೀಡಿ ಸೇಬು ಖರೀದಿಗೆ ಮುಂದಾದ ಅದಾನಿ ಕಂಪನಿ: ರೈತರಿಂದ ಅದಾನಿ ಬಾಯ್ಕಾಟ್...

20% ಕಡಿಮೆ ಬೆಲೆ ನೀಡಿ ಸೇಬು ಖರೀದಿಗೆ ಮುಂದಾದ ಅದಾನಿ ಕಂಪನಿ: ರೈತರಿಂದ ಅದಾನಿ ಬಾಯ್ಕಾಟ್ ಬೆದರಿಕೆ

ಕಳೆದ ವರ್ಷ 88 ರೂ ಗೆ ಒಂದು ಕೆಜಿ ಪ್ರೀಮಿಯಂ ಸೇಬು ಖರೀದಿಸುತ್ತಿದ್ದ ಅದಾನಿ ಕಂಪನಿ ಈಗ ಕೇವಲ 72 ರೂ ಖರೀದಿಸಲು ಮುಂದಾಗಿದೆ.

- Advertisement -
- Advertisement -

ದೆಹಲಿಯಲ್ಲಿ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತರ ಬೃಹತ್ ಹೋರಾಟ ಇಂದಿಗೆ 9 ತಿಂಗಳು ಪೂರೈಸಿದೆ. ಸರ್ಕಾರದ ಯಾವುದೇ ಸಂಧಾನ, ಬೆದರಿಕೆಗಳಿಗೆ ಬಗ್ಗದ ರೈತರು ದಿನೇ ದಿನೇ ಹೋರಾಟ ತೀವ್ರಗೊಳಿಸುತ್ತಿದ್ದಾರೆ. ಅವರ ಹೋರಾಟ ನ್ಯಾಯಯುತವಾದುದ್ದು ಎಂಬುದನ್ನು ಹಿಮಾಚಲ ಪ್ರದೇಶದ ಸೇಬು ಬೆಳೆಗಾರರ ಸಂಕಷ್ಟ ಮತ್ತೊಮ್ಮೆ ಸಾಬೀತುಪಡಿಸಿದೆ. ಈ ವರ್ಷ ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಿಂದಾಗಿ ಮೊದಲೆ ಬೆಳೆ ನಷ್ಟದಿಂದ ಸಂಕಷ್ಟದಿಂದಿದ್ದ ರೈತರ ಮೇಲೆ ಅದಾನಿ ಅಗ್ರಿ ಫ್ರೆಶ್ ಕಂಪನಿ ಗಧಾಪ್ರಹಾರ ನಡೆಸಿದೆ. 20% ಕಡಿಮೆ ಬೆಲೆ ನೀಡಿ ಸೇಬು ಖರೀದಿಗೆ ಮುಂದಾಗಿರುವುದು ರೈತರಲ್ಲಿ ಆಕ್ರೋಶ ಹುಟ್ಟಿಸಿದೆ.

ಹಿಮಾಚಲ ಪ್ರದೇಶದಲ್ಲಿ ಅದಾನಿ ಗ್ರೂಪ್ ಸಿಎ ಸ್ಟೋರ್‌ಗಳಿಗೆ ಸೇಬು ಖರೀದಿಸಲು ಗುರುವಾರ ತನ್ನ ಬೆಲೆಗಳನ್ನು ಘೋಷಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಪ್ರೀಮಿಯಂ ಸೇಬಿನ ಬೆಲೆಗಳು ಈ ಬಾರಿ ಶೇಕಡಾ 20 ರಷ್ಟು ಕಡಿಮೆಯಾಗಿವೆ. ಕಳೆದ ವರ್ಷ ಪ್ರೀಮಿಯಂ ಸೇಬಿನ ಆರಂಭಿಕ ಬೆಲೆ ಪ್ರತಿ ಕೆಜಿಗೆ 88 ರೂ ಇತ್ತು. ಆದರೆ ಅದನ್ನು ಈ ಬಾರಿ ಅದು ಕೆಜಿಗೆ 72 ರೂಗೆ ಇಳಿಸಲಾಗಿದೆ. ಇದು ಸೇಬು ಬೆಳೆಗಾರರನ್ನು ಕೆರಳಿಸಿದ್ದು ಅವರು ಅದಾನಿ ಕಂಪನಿ ಬಾಯ್ಕಾಟ್ ಮಾಡುವ ಎಚ್ಚರಿಕೆ ನಿಡಿದ್ದಾರೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಇಂದು ಘೋಷಿಸಿದ ದರಗಳ ಪ್ರಕಾರ, ಶೇ.60 ಕ್ಕಿಂತ ಕಡಿಮೆ ಬಣ್ಣವನ್ನು ಹೊಂದಿರುವ ಸೇಬುಗಳನ್ನು ಪ್ರತಿ ಕೆಜಿಗೆ 12 ರಿಂದ 15ರೂಗಳಿಗೆ ಮಾರಾಟ ಮಾಡಲಾಗುತ್ತಿದೆ. ಪ್ರತಿ ಕೆಜಿ ಸೇಬಿನ ಉತ್ಪಾದನಾ ವೆಚ್ಚ ಸುಮಾರು 25 ರೂ ಆಗುತ್ತದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿಮ್ಲಾದಲ್ಲಿ ಸೇಬು ಖರೀದಿ ಪ್ರಕ್ರಿಯೆ: Photo Courtesy: The Tribune

“ಇದು ತುಂಬಾ ನಿರಾಶಾದಾಯಕವಾಗಿದೆ ಮತ್ತು ಸೇಬು ಬೆಳೆಗಾರರು ಈ ಬಾರಿ ಅದಾನಿ ಕಂಪನಿಯನ್ನು ಬಹಿಷ್ಕರಿಸಬೇಕು” ಎಂದು ಹಣ್ಣು, ತರಕಾರಿ ಮತ್ತು ಹೂ ಬೆಳೆಗಾರರ ​​ಸಂಘದ ಅಧ್ಯಕ್ಷ ಹರೀಶ್ ಚೌಹಾಣ್ ಕರೆ ನೀಡಿದ್ದಾರೆ. “ಅದಾನಿ ಕಂಪನಿಯ ಬೆಲೆ ನಿಗದಿಗೊಳಿಸುವ ಕಾರ್ಯವಿಧಾನವು ಅನಿಯಂತ್ರಿತವಾಗಿದೆ. ಬೆಲೆಗಳನ್ನು ನಿಗದಿಪಡಿಸಿದಾಗ ಯಾವುದೇ ಸರ್ಕಾರಿ ಅಧಿಕಾರಿಯಾಗಲಿ ಅಥವಾ ರೈತರ ಪ್ರತಿನಿಧಿಗಳಾಗಲಿ ಯಾರೂ ಇಲ್ಲ” ಎಂದು ಚೌಹಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೇ ದೆಹಲಿಯಲ್ಲಿ ಹೋರಾಟನಿರತ ರೈತರ ವರ್ಷದಿಂದಲೂ ಹೇಳುತ್ತಾ ಬಂದಿರುವುದನ್ನು ನಾವು ಗಮನಿಸಬೇಕು.

ಇನ್ನೊಂದೆಡೆ ಬಿಥಲ್‌ನಲ್ಲಿರುವ ಅದಾನಿ ಸಿಎ ಗೋಡೌನ್ ಪ್ಲಾಂಟ್ ಮುಖ್ಯಸ್ಥ ಮಂಜೀತ್ ಶಿಲು ಮಾತನಾಡಿ, “ನಾವು ನೀಡುತ್ತಿರುವ ಬೆಲೆಗಳು ಉತ್ತಮವಾಗಿವೆ. ಬೆಳೆಗಾರರು ಪ್ಯಾಕಿಂಗ್ ಮತ್ತು ಗ್ರೇಡಿಂಗ್‌ಗೆ ಹಣ ಪಾವತಿಸಬೇಕಾಗಿಲ್ಲ. ನಮ್ಮಲ್ಲಿ ಸುಮಾರು 17,000 ಬೆಳೆಗಾರರ ​​ಗುಂಪು ಇದೆ. ಅವರು ನಮಗೆ ಸೇಬು ಮಾರುತ್ತಾರೆ. ನಾವು ಬೆಲೆಗಳನ್ನು ಘೋಷಿಸಿದಾಗಿನಿಂದ ಯಾರೂ ಆ ಬಗ್ಗೆ ನಮಗೆ ದೂರು ನೀಡಿಲ್ಲ. ಅದಾನಿ ಕಂಪನಿಗೆ ಸೇಬು ನೀಡದ ಬೆಳೆಗಾರರು ಮಾತ್ರ ದೂರು ನೀಡುತ್ತಿದ್ದಾರೆ” ಎಂದಿದ್ದಾರೆ.

ಅದಾನಿ ಕಂಪನಿ ದರಗಳು ಅತ್ಯಂತ ಕಳಪೆ ಮಟ್ಟದ್ದಾಗಿವೆ. ಎಪಿಎಂಸಿ ಮಂಡಿಗಳಲ್ಲಿ ಇದಕ್ಕಿಂತ ಹೆಚ್ಚಿನ ಬೆಲೆ ರೈತರಿಗೆ ಸಿಗುತ್ತಿದೆ ಎಂದು ಪ್ರಗತಿಪರ ಬೆಳೆಗಾರರ ​​ಸಂಘದ ಅಧ್ಯಕ್ಷ ಲೋಕಿಂದರ್ ಬಿಶ್ತ್ ಹೇಳಿದ್ದಾರೆ. ಅದಾನಿ ಕಂಪನಿಯ ಸಿಎ ಸ್ಟೋರ್‌ಗಳನ್ನು ಸ್ಥಾಪಿಸಲು ಸರ್ಕಾರದಿಂದ ದೊಡ್ಡ ಸಬ್ಸಿಡಿಗಳನ್ನು ಪಡೆದಿದ್ದು ಈಗ ರೈತರನ್ನು ಶೋಷಣೆ ಮಾಡುತ್ತಿದ್ದಾರೆ. ಈ ಕಂಪನಿಗಳ ಮೋಸಜಾಲದಿಂದ ರೈತರು ಬಿಡುಗಡೆ ಹೊಂದಲು ಸರ್ಕಾರವು ಕೋಲ್ಡ್‌ ಸ್ಟೋರೇಜ್‌ಗಳನ್ನು ರೈತರಿಗೆ ನಿರ್ಮಿಸಿಕೊಡಬೇಕು. ಇದರಿಂದ ರೈತರು ಬೆಲೆಕುಸಿತ ಉಂಟಾದಾಗ ಅತಿ ಕಡಿಮೆ ಬೆಲೆಗೆ ಸೇಬು ಮಾರುವುದು ತಪ್ಪುತ್ತದೆ ಎಂದು ಅವರು ಒತ್ತಾಯಿಸಿದ್ದಾರೆ.

ಸರ್ಕಾರವು ಗಣನೀಯ ಪ್ರಮಾಣದ ಸೇಬುಗಳನ್ನು ಸಮಂಜಸವಾದ ಬೆಲೆಯಲ್ಲಿ ಖರೀದಿಸಿದರೆ, ಕಾಶ್ಮೀರದ ನಾಫೆಡ್‌ನಂತೆ ಮಾರುಕಟ್ಟೆಯು ಹೆಚ್ಚು ಕಡಿಮೆ ಸ್ಥಿರವಾಗಿರುತ್ತದೆ ಮತ್ತು ಮಾರುಕಟ್ಟೆ ಶಕ್ತಿಗಳು ಬೆಳೆಗಾರರನ್ನು ಶೋಷಿಸಲು ಸಾಧ್ಯವಾಗುವುದಿಲ್ಲ ಎಂದು ಸಹ ಅವರು ಒತ್ತಾಯಿಸಿದ್ದಾರೆ.

ಇದೇ ಸಂದರ್ಭದಲ್ಲಿ ಹಿಮಾಚಲ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕುಲದೀಪ್ ರಾಥೋರ್ ಅದಾನಿ ಕಂಪನಿಯ ರೈತ ವಿರೋಧಿ ಧೋರಣೆಯನ್ನು ಖಂಡಿಸಿದ್ದಾರೆ. ಸರ್ಕಾರದ ಮೌನ ಅನುಮೋದನೆಯೊಂದಿಗೆ ಅದಾನಿ ಕಂಪನಿಗೆ ಸೇಬು ಬೆಲೆಯನ್ನು ಕಡಿಮೆ ಮಾಡಿದೆ. ಈಗಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ಕೂಡಲೇ ಸರ್ಕಾರ ಅವರ ನೆರವಿಗೆ ಧಾವಿಸಬೇಕು ಮತ್ತು ಅದಾನಿ ಕಂಪನಿ ಹೆಚ್ಚು ಬೆಲೆ ನೀಡುವಂತೆ ತಾಕೀತು ಮಾಡಬೇಕೆಂದು ಒತ್ತಾಯಿಸಿದ್ದಾರೆ.

1984 ರಿಂದ ರಾಜ್ಯ ಸರ್ಕಾರಗಳು ರೈತರಿಗೆ ಕೃಷಿ ಉಪಕರಣಗಳ ಜೊತೆಗೆ ಕೀಟನಾಶಕ, ಶಿಲೀಂಧ್ರನಾಶಕ ಮತ್ತು ಇತರ ಔಷಧಿಗಳ ಮೇಲೆ ಸಬ್ಸಿಡಿಗಳನ್ನು ನೀಡುತ್ತಿವೆ ಆದರೆ ಬಿಜೆಪಿ ಸರ್ಕಾರವು ಈ ಎಲ್ಲಾ ಸಬ್ಸಿಡಿಗಳನ್ನು ನಿಲ್ಲಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಕಳೆದ ವರ್ಷ 88 ರೂ ಗೆ ಒಂದು ಕೆಜಿ ಪ್ರೀಮಿಯಂ ಸೇಬು ಖರೀದಿಸುತ್ತಿದ್ದ ಅದಾನಿ ಕಂಪನಿ ಈಗ ಕೇವಲ 72 ರೂ ಖರೀದಿಸಲು ಮುಂದಾಗಿದೆ. ರೈತರು ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡ ಕಾರಣ ನಷ್ಟವಾದರೂ ಅಲ್ಲಿಯೇ ಮಾರಬೇಕಾಗಿದೆ. ಇನ್ನೊಂದೆಡೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಅವನ್ನ ನಿರ್ನಾಮ ಮಾಡಲಾಗುತ್ತಿದೆ. ಈ ರೀತಿಯಾಗಿ ರೈತರು ಕಾರ್ಪೊರೇಟ್ ಕಂಪನಿಗಳ ಅಡಿಯಾಳಾಗಬೇಕಾಗುತ್ತದೆ. ಹಾಗಾಗಿ ಕೃಷಿ ಕಾನೂನುಗಳು ಬೇಡ ಮತ್ತು ಎಪಿಎಂಸಿಗಳು ಗಟ್ಟಿಯಾಗಬೇಕು, ಅಲ್ಲಿನ ಭ್ರಷ್ಟಾಚಾರ ನಿಲ್ಲಬೇಕು ಎಂಬುದು ರೈತರ ಆಗ್ರಹವಾಗಿದೆ. ಅದಕ್ಕಾಗಿಯೇ ದೆಹಲಿಯಲ್ಲಿ ತೀವ್ರ ಹೋರಾಟ ನಡೆಸುತ್ತಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ: ತಾಳ್ಮೆ, ಬದ್ಧತೆ, ಶಿಸ್ತಿನ ಐತಿಹಾಸಿಕ ಹೋರಾಟಕ್ಕೆ 9 ತಿಂಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಂತರರಾಷ್ಟ್ರೀಯ ಕಾನೂನು ಸತ್ತಿದೆ ಎಂದ ರಷ್ಯಾ, ಯುಎನ್ಎಸ್‌ಸಿ ಪಿ-5 ಶೃಂಗಸಭೆಗೆ ಒತ್ತಾಯ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಅಂತರರಾಷ್ಟ್ರೀಯ ಕಾನೂನು ಪರಿಣಾಮಕಾರಿಯಾಗಿ ಸತ್ತಿದೆ ಎಂದು ರಷ್ಯಾ ಹೇಳಿದೆ ಮತ್ತು ಯುಎನ್ ಭದ್ರತಾ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ. ಅಂತಾರಾಷ್ಟ್ರೀಯ...

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್...

ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಹೆಚ್ಚಳ; 2025 ರ ವರದಿಯಲ್ಲಿ 3.6 ಲಕ್ಷ ದಾಟಿದ ಅತಿಸಾರ ಪ್ರಕರಣಗಳು

ಮುಂಬೈ: ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಮೂಡಿಸಿದೆ.  ಅಧಿಕೃತ ಅಂಕಿಅಂಶಗಳು ಪ್ರತಿ ವರ್ಷ ಸಾವಿರಾರು ಜನರು ಕಲುಷಿತ ನೀರು ಮತ್ತು ಕಳಪೆ ನೈರ್ಮಲ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ...

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಒಂದು ವಾರದಲ್ಲಿ ಗಲ್ಫ್ ದೇಶಗಳಿಂದ 52,000 ಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ: ವಿದೇಶಾಂಗ ಸಚಿವಾಲಯ

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡುತ್ತಿರುವುದರಿಂದ ಮಾರ್ಚ್ 1 ರಿಂದ 7 ರವರೆಗೆ ಗಲ್ಫ್ ಪ್ರದೇಶದಿಂದ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...

ಬಳ್ಳಾರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ದಾಳಿ : ಓರ್ವ ಸಾವು, 8 ಜನರಿಗೆ ಗಾಯ

ಬಳ್ಳಾರಿ ನಗರದ 'ಗುರುಕುಲ ವಸತಿ ಶಾಲೆ'ಯಲ್ಲಿ ಶನಿವಾರ (ಮಾ.7) ರಾತ್ರಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ರಾಡ್, ಸ್ಕ್ರೂ ಡ್ರೈವರ್‌ನಿಂದ ದಾಳಿ ನಡೆಸಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಎಂಟು ಜನರು ಗಾಯಗೊಂಡಿದ್ದಾರೆ...

ಗೋವುಗಳ ಕಳ್ಳಸಾಗಣೆ ಆರೋಪ: ಹಣ್ಣು-ತರಕಾರಿ ಸಾಗಿಸುತ್ತಿದ್ದ 28 ವರ್ಷದ ಮುಸ್ಲಿಂ ಚಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಹಿಂದುತ್ವ ಗುಂಪು

ಭಿವಾಡಿ: ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ 28 ವರ್ಷದ ಆಮಿರ್ ಎಂಬ ವ್ಯಕ್ತಿಯನ್ನು ಗೋರಕ್ಷಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಸದಸ್ಯರು...