Homeಮುಖಪುಟಅದಾನಿ ಭ್ರಷ್ಟಾಚಾರ | ಕಪ್ಪು ಬ್ಯಾಗ್ ಹಿಡಿದು ಪ್ರತಿಭಟನೆ ನಡೆಸಿದ ವಿಪಕ್ಷಗಳು

ಅದಾನಿ ಭ್ರಷ್ಟಾಚಾರ | ಕಪ್ಪು ಬ್ಯಾಗ್ ಹಿಡಿದು ಪ್ರತಿಭಟನೆ ನಡೆಸಿದ ವಿಪಕ್ಷಗಳು

- Advertisement -
- Advertisement -

ಮಂಗಳವಾರ ಸಂಸತ್ತಿನ ಆವರಣದಲ್ಲಿ ಅದಾನಿ ಮತ್ತು ಮೋದಿ ಅವರ ವಿರುದ್ಧ ಹಲವಾರು ವಿರೋಧ ಪಕ್ಷದ ಸಂಸದರು ಕಪ್ಪು ‘ಜೋಲಾ’ಗಳನ್ನು (ಬ್ಯಾಗ್) ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ಅವರ ವ್ಯಂಗ್ಯಚಿತ್ರಗಳನ್ನು ಮತ್ತು ಅದರ ಮುಂಭಾಗದಲ್ಲಿ ‘ಮೋದಿ ಅದಾನಿ ಭಾಯಿ ಭಾಯಿ’ ಎಂದು ಬರೆದಿರುವ ಬ್ಯಾಗ್‌ಗಳನ್ನು ಸಂಸದರು ಪ್ರದರ್ಶಿಸಿದ್ದಾರೆ. ಅದಾನಿ ಭ್ರಷ್ಟಾಚಾರ

ಚಳಿಗಾಲದ ಅಧಿವೇಶನ ಪ್ರಾರಂಭವಾದ ನಂತರ ವಿಪಕ್ಷಗಳು ಅಧಿವೇಶನಕ್ಕೆ ಮುಂಚಿತವಾಗಿ ಬೆಳಿಗ್ಗೆ ಸರಣಿ ಪ್ರತಿಭಟನೆಗಳನ್ನು ನಡೆಸುತ್ತಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್, ಡಿಎಂಕೆ, ಜೆಎಂಎಂ, ಎಡಪಕ್ಷಗಳ ಸಂಸದರು ಮಕರ ದ್ವಾರದ ಮೆಟ್ಟಿಲುಗಳ ಮುಂದೆ ಮಂಗಳವಾರ ಕೂಡಾ ಪ್ರತಿಭಟನೆ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಒಂದು ಬದಿಯಲ್ಲಿ ಮೋದಿ ಮತ್ತು ಅದಾನಿ ಅವರ ವ್ಯಂಗ್ಯ ಚಿತ್ರಗಳು ಮತ್ತು ಬ್ಯಾಗ್‌ನ ಹಿಂಭಾಗದಲ್ಲಿ ‘ಮೋದಿ ಅದಾನಿ ಭಾಯಿ ಭಾಯ್’ ಎಂದು ಬರೆದ ಕಪ್ಪು ‘ಬ್ಯಾಗ್‌’ಗಳನ್ನು ಅವರು ಪ್ರದರ್ಶಿಸಿದ್ದಾರೆ . ಇದೇ ವೇಳೆ ಅವರು ಮೋದಿ ಮತ್ತು ಅದಾನಿ ನಡುವಿನ ಆರೋಪದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ ಮತ್ತು ಈ ವಿಷಯದ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸಿದ್ದಾರೆ. ಅದಾನಿ ಭ್ರಷ್ಟಾಚಾರ

ಇದಕ್ಕೂ ಮುನ್ನ, ವಿವಿಧ ವಿಷಯಗಳ ಬಗ್ಗೆ ಪಕ್ಷದ ನಿಲುವು ಮತ್ತು ಸಂಸತ್ತಿನಲ್ಲಿ ಮುಂದಿನ ಹಾದಿಯನ್ನು ಪರಿಶೀಲಿಸಲು ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದರ ಸಭೆಯನ್ನು ರಾಹುಲ್ ಗಾಂಧಿ ಅಧ್ಯಕ್ಷತೆ ವಹಿಸಿದ್ದರು.

ಅದಾನಿ ವಿವಾದಕ್ಕೆ ಸಂಬಂಧಿಸಿದಂತೆ ಕೆಲವು ಇಂಡಿಯಾ ಒಕ್ಕೂಟದ ಪಕ್ಷಗಳ ನಾಯಕರು ಸಂಸತ್ತಿನ ಕಟ್ಟಡದಲ್ಲಿ ಪ್ರತಿಭಟನೆ ನಡೆಸಿದ ಒಂದು ದಿನದ ನಂತರ ಈ ಪ್ರತಿಭಟನೆ ನಡೆದಿದೆ. ಸೋಮವಾರ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಮತ್ತು ಗೌತಮ್ ಅದಾನಿ ಅವರ ಮುಖವಾಡಗಳನ್ನು ಧರಿಸಿರುವ ಕಾಂಗ್ರೆಸ್ ಸದಸ್ಯರೊಂದಿಗೆ ಅಣಕು ‘ಸಂದರ್ಶನ’ ನಡೆಸಿದ್ದರು.

ಸಂಸತ್ತಿನ ಆವರಣದಲ್ಲಿರುವ ಮಕರ ದ್ವಾರದ ಮೆಟ್ಟಿಲುಗಳ ಮುಂದೆ ನಿಂತು, ಲೋಕಸಭೆಯ ವಿರೋಧ ಪಕ್ಷದ ನಾಯಕ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಸೋಮವಾರ “ಮೋದಿ, ಅದಾನಿ ಏಕ್ ಹೈ” ಮತ್ತು “ನಮಗೆ ನ್ಯಾಯ ಬೇಕು” ಎಂಬ ಘೋಷಣೆಗಳನ್ನು ಕೂಗಿದ್ದರು.

ಚಳಿಗಾಲದ ಅಧಿವೇಶನ ಆರಂಭವಾದಾಗಿನಿಂದಲೂ ಅದಾನಿ ವಿಚಾರವಾಗಿ ಪ್ರತಿಪಕ್ಷಗಳ ಪ್ರತಿಭಟನೆಗಳು ಸಂಸತ್ತಿನ ಆವರಣದಲ್ಲಿ ನಡೆಯುತ್ತಿವೆ. ಅಮೆರಿಕದ ನ್ಯಾಯಾಲಯದಲ್ಲಿ ಅದಾನಿ ಮತ್ತು ಅವರ ಕಂಪೆನಿಯ ಇತರ ಅಧಿಕಾರಿಗಳ ವಿರುದ್ಧ ದೋಷಾರೋಪಣೆ ಸಲ್ಲಿಕೆಯಾದ ನಂತರ ಕಾಂಗ್ರೆಸ್ ಮತ್ತು ಇತರ ಕೆಲವು ವಿರೋಧ ಪಕ್ಷಗಳು ಈ ವಿಚಾರವನ್ನು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಒತ್ತಾಯಿಸುತ್ತಿವೆ.

ಇದನ್ನೂ ಓದಿ: ಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

ಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...