Homeಎಕಾನಮಿಡೌ ಜೋನ್ಸ್ ಸೂಚ್ಯಂಕಗಳಿಂದ ಅದಾನಿ ಎಂಟರ್‌ಪ್ರೈಸಸ್ ಔಟ್: NSE ಯಿಂದ ಏಕಿಲ್ಲ - ಮೊಹುವ ಮೊಯಿತ್ರ

ಡೌ ಜೋನ್ಸ್ ಸೂಚ್ಯಂಕಗಳಿಂದ ಅದಾನಿ ಎಂಟರ್‌ಪ್ರೈಸಸ್ ಔಟ್: NSE ಯಿಂದ ಏಕಿಲ್ಲ – ಮೊಹುವ ಮೊಯಿತ್ರ

- Advertisement -
- Advertisement -

ಅದಾನಿ ಸಮೂಹದ ವಂಚನೆ ಹಗರಣ ಹೊರಬರುತ್ತಿದ್ದಂತೆ ಅವರ ಷೇರು ಮೌಲ್ಯಗಳು ಒಂದು ವಾರದಿಂದ ಸತತವಾಗಿ ಕುಸಿಯುತ್ತಿವೆ. ಇದರಿಂದಾಗಿ ಅದಾನಿ ಸಮೂಹಕ್ಕೆ 9.8 ಲಕ್ಷ ಕೋಟಿಗೂ ಅಧಿಕ ನಷ್ಟವುಂಟಾಗಿದೆ ಎಂದು ಅಂದಾಜಿಸಲಾಗಿದೆ. ಇದೇ ಸಂದರ್ಭದಲ್ಲಿ ಷೇರುಗಳ ಮ್ಯಾನಿಪ್ಯುಲೇಷನ್ ಆರೋಪ ಇರುವುದರಿಂದ ಅಮೆರಿಕದ ಹಳೆಯ ಮತ್ತು ಪ್ರಸಿದ್ದ S&P ಡೌ ಜೋನ್ಸ್ ಸ್ಟಾಕ್ ಎಕ್ಸ್‌ಚೇಂಜ್ ಸಂಸ್ಥೆಯು ಅದಾನಿ ಎಂಟರ್‌ಪ್ರೈಸಸ್ ಅನ್ನು ಡೌ ಜೋನ್ಸ್ ಸೂಚ್ಯಂಕಗಳಿಂದ ತೆಗೆದುಹಾಕಿದೆ.

ಎಸ್&ಪಿ ಡೌ ಜೋನ್ಸ್ ಸೂಚ್ಯಂಕಗಳು ಡೌ ಜೋನ್ಸ್ ಸಸ್ಟೈನಬಿಲಿಟಿ ಸೂಚ್ಯಂಕಗಳಿಗೆ ಈ ಕೆಳಗಿನ ಬದಲಾವಣೆಗಳನ್ನು ಮಾಡುತ್ತವೆ. “ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಅಕೌಂಟಿಂಗ್ ವಂಚನೆ ಮಾಡಿದೆ ಎಂಬ ಆರೋಪದ ಮಾಧ್ಯಮ ಮತ್ತು ಷೇರುದಾರರ ವಿಶ್ಲೇಷಣೆಯ ನಂತರ ಅದಾನಿ ಎಂಟರ್‌ಪ್ರೈಸಸ್ (XBOM: 512599) ಅನ್ನು ಡೌ ಜೋನ್ಸ್ ಸುಸ್ಥಿರತೆ ಸೂಚ್ಯಂಕಗಳಿಂದ ತೆಗೆದುಹಾಕಲಾಗುತ್ತದೆ. ಇದು ಫೆಬ್ರವರಿ 7, 2023 ರಂದು ಮಂಗಳವಾರ ತೆರೆಯುವ ಮೊದಲು ಜಾರಿಗೆ ಬರುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಡೌ ಜೋನ್ಸ್ ಅಮೆರಿಕದ ಸ್ಟಾಕ್ ಎಕ್ಸ್‌ಚೇಂಜ್‌ಗಳಲ್ಲಿ ಪಟ್ಟಿ ಮಾಡಲಾದ (ಲಿಸ್ಟಡ್) 30 ಪ್ರಮುಖ ಕಂಪನಿಗಳ ಷೇರು ಮಾರುಕಟ್ಟೆ ಸೂಚ್ಯಂಕವಾಗಿದೆ. ಅದು ಅತ್ಯಂತ ಹಳೆಯ ಮತ್ತು ಸಾಮಾನ್ಯವಾಗಿ ಅನುಸರಿಸುವ ಇಕ್ವಿಟಿ ಸೂಚ್ಯಂಕಗಳಲ್ಲಿ ಒಂದಾಗಿದ್ದು ಅದೀಗ ಅದಾನಿ ಸಮೂಹದ ವಿರುದ್ಧ ಕ್ರಮ ಕೈಗೊಂಡಿದೆ.

ಈ ಹಿನ್ನೆಲೆಯಲ್ಲಿ  ಭಾರತದ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ (NSE) ಏಕೆ ತನ್ನ ಸೂಚ್ಯಂಕಗಳಿಂದ ಅದಾನಿ ಸಮೂಹದ ಸದಸ್ಯತ್ವ ರದ್ದುಗೊಳಿಸಬಾರದು ಎಂದು ಟಿಎಂಸಿ ಸಂಸದೆ ಮೊಹುವ ಮೊಯಿತ್ರ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “S&P ಡೌ ಜೋನ್ಸ್ ಸಂಸ್ಥೆಯು ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಅಕೌಂಟಿಂಗ್ ವಂಚನೆಯ ಆರೋಪಗಳ ಕಾರಣದಿಂದ ಅದಾನಿ ಎಂಟರ್‌ಪ್ರೈಸಸ್ ಅನ್ನು ಡೌ ಜೋನ್ಸ್ ಸೂಚ್ಯಂಕಗಳಿಂದ ತೆಗೆದುಹಾಕುತ್ತದೆ. ಅಂತರಾಷ್ಟ್ರೀಯ ಸಂಸ್ಥೆಯೊಂದು ಹೀಗೆ ಕ್ರಮ ಕೈಗೊಳ್ಳುವಾಗ ಅದಾನಿ ಸ್ಟಾಕ್‌ಗಳ ಸೂಚ್ಯಂಕ ಸದಸ್ಯತ್ವವನ್ನು ಏಕೆ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ (NSE) ಮರುಮೌಲ್ಯಮಾಪನ ಮಾಡುತ್ತಿಲ್ಲ?” ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ದಾಖಲೆ ಕುಸಿತ ಕಂಡ ಅದಾನಿ; ಸಾಲ ನೀಡಿರುವ ವಿವರ ಒದಗಿಸುವಂತೆ ಬ್ಯಾಂಕುಗಳಿಗೆ RBI ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. It is sad to see many Indians for reasons are supporting the narrative of the west who are hell bent on bringing india to the present Pakistan level. It is time to fight these nefarious design and strengthen Indian company. . In this regard i strongly condemn the statement of this Moiuva MTR .

  2. You people have succeeded in getting him down by a sabotage joining hands with foreign agency temporarily but he will come back like a phoneix since his contribution to indian economy is beyond doubt..

  3. You people have succeeded in getting him down by a sabotage joining hands with foreign agency temporarily but he will come back like a phoneix since his contribution to indian economy is beyond doubt..

  4. You people have succeeded in getting him down by a sabotage joining hands with foreign agency temporarily but he will come back like a phoneix since his contribution to indian economy is beyond doubt..

  5. Dow-Jones and other foreign indices are reliable in Indian circumstances to what extent. They are just like agencies like PwC which being a foreign organization manipulated accounts of many Indian forms. Just because they did, doesn’t compel NSE to act like that. Offcourse, NSE, had given given such report, then Indians should have bothered.
    Why can’t be the assumption goes like this- Many foreign industries involved in Steel and port operation joined hand with Heidelberg along with Indian Anti BJP gang to bring down Adani?

LEAVE A REPLY

Please enter your comment!
Please enter your name here

- Advertisment -

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...

ಕರ್ನಾಟಕ ಎಸ್‌ಐಆರ್: ಶಾಶ್ವತ ನಿವಾಸಿ ಪ್ರಮಾಣಪತ್ರಕ್ಕೆ ಬೆಂಗಳೂರು ನಗರದಲ್ಲೇ ಭಾರೀ ಬೇಡಿಕೆ: ಕಂದಾಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಡುವೆಯೇ, ಕಂದಾಯ ಇಲಾಖೆಗೆ ಸಲ್ಲಿಕೆಯಾಗುತ್ತಿರುವ ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್‌ಸಿ) ಅರ್ಜಿಗಳ ಸಂಖ್ಯೆಯಲ್ಲಿ ಬೆಂಗಳೂರು ನಗರ ಜಿಲ್ಲೆಯು...

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...