Homeಎಕಾನಮಿಡೌ ಜೋನ್ಸ್ ಸೂಚ್ಯಂಕಗಳಿಂದ ಅದಾನಿ ಎಂಟರ್‌ಪ್ರೈಸಸ್ ಔಟ್: NSE ಯಿಂದ ಏಕಿಲ್ಲ - ಮೊಹುವ ಮೊಯಿತ್ರ

ಡೌ ಜೋನ್ಸ್ ಸೂಚ್ಯಂಕಗಳಿಂದ ಅದಾನಿ ಎಂಟರ್‌ಪ್ರೈಸಸ್ ಔಟ್: NSE ಯಿಂದ ಏಕಿಲ್ಲ – ಮೊಹುವ ಮೊಯಿತ್ರ

- Advertisement -
- Advertisement -

ಅದಾನಿ ಸಮೂಹದ ವಂಚನೆ ಹಗರಣ ಹೊರಬರುತ್ತಿದ್ದಂತೆ ಅವರ ಷೇರು ಮೌಲ್ಯಗಳು ಒಂದು ವಾರದಿಂದ ಸತತವಾಗಿ ಕುಸಿಯುತ್ತಿವೆ. ಇದರಿಂದಾಗಿ ಅದಾನಿ ಸಮೂಹಕ್ಕೆ 9.8 ಲಕ್ಷ ಕೋಟಿಗೂ ಅಧಿಕ ನಷ್ಟವುಂಟಾಗಿದೆ ಎಂದು ಅಂದಾಜಿಸಲಾಗಿದೆ. ಇದೇ ಸಂದರ್ಭದಲ್ಲಿ ಷೇರುಗಳ ಮ್ಯಾನಿಪ್ಯುಲೇಷನ್ ಆರೋಪ ಇರುವುದರಿಂದ ಅಮೆರಿಕದ ಹಳೆಯ ಮತ್ತು ಪ್ರಸಿದ್ದ S&P ಡೌ ಜೋನ್ಸ್ ಸ್ಟಾಕ್ ಎಕ್ಸ್‌ಚೇಂಜ್ ಸಂಸ್ಥೆಯು ಅದಾನಿ ಎಂಟರ್‌ಪ್ರೈಸಸ್ ಅನ್ನು ಡೌ ಜೋನ್ಸ್ ಸೂಚ್ಯಂಕಗಳಿಂದ ತೆಗೆದುಹಾಕಿದೆ.

ಎಸ್&ಪಿ ಡೌ ಜೋನ್ಸ್ ಸೂಚ್ಯಂಕಗಳು ಡೌ ಜೋನ್ಸ್ ಸಸ್ಟೈನಬಿಲಿಟಿ ಸೂಚ್ಯಂಕಗಳಿಗೆ ಈ ಕೆಳಗಿನ ಬದಲಾವಣೆಗಳನ್ನು ಮಾಡುತ್ತವೆ. “ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಅಕೌಂಟಿಂಗ್ ವಂಚನೆ ಮಾಡಿದೆ ಎಂಬ ಆರೋಪದ ಮಾಧ್ಯಮ ಮತ್ತು ಷೇರುದಾರರ ವಿಶ್ಲೇಷಣೆಯ ನಂತರ ಅದಾನಿ ಎಂಟರ್‌ಪ್ರೈಸಸ್ (XBOM: 512599) ಅನ್ನು ಡೌ ಜೋನ್ಸ್ ಸುಸ್ಥಿರತೆ ಸೂಚ್ಯಂಕಗಳಿಂದ ತೆಗೆದುಹಾಕಲಾಗುತ್ತದೆ. ಇದು ಫೆಬ್ರವರಿ 7, 2023 ರಂದು ಮಂಗಳವಾರ ತೆರೆಯುವ ಮೊದಲು ಜಾರಿಗೆ ಬರುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಡೌ ಜೋನ್ಸ್ ಅಮೆರಿಕದ ಸ್ಟಾಕ್ ಎಕ್ಸ್‌ಚೇಂಜ್‌ಗಳಲ್ಲಿ ಪಟ್ಟಿ ಮಾಡಲಾದ (ಲಿಸ್ಟಡ್) 30 ಪ್ರಮುಖ ಕಂಪನಿಗಳ ಷೇರು ಮಾರುಕಟ್ಟೆ ಸೂಚ್ಯಂಕವಾಗಿದೆ. ಅದು ಅತ್ಯಂತ ಹಳೆಯ ಮತ್ತು ಸಾಮಾನ್ಯವಾಗಿ ಅನುಸರಿಸುವ ಇಕ್ವಿಟಿ ಸೂಚ್ಯಂಕಗಳಲ್ಲಿ ಒಂದಾಗಿದ್ದು ಅದೀಗ ಅದಾನಿ ಸಮೂಹದ ವಿರುದ್ಧ ಕ್ರಮ ಕೈಗೊಂಡಿದೆ.

ಈ ಹಿನ್ನೆಲೆಯಲ್ಲಿ  ಭಾರತದ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ (NSE) ಏಕೆ ತನ್ನ ಸೂಚ್ಯಂಕಗಳಿಂದ ಅದಾನಿ ಸಮೂಹದ ಸದಸ್ಯತ್ವ ರದ್ದುಗೊಳಿಸಬಾರದು ಎಂದು ಟಿಎಂಸಿ ಸಂಸದೆ ಮೊಹುವ ಮೊಯಿತ್ರ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “S&P ಡೌ ಜೋನ್ಸ್ ಸಂಸ್ಥೆಯು ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಅಕೌಂಟಿಂಗ್ ವಂಚನೆಯ ಆರೋಪಗಳ ಕಾರಣದಿಂದ ಅದಾನಿ ಎಂಟರ್‌ಪ್ರೈಸಸ್ ಅನ್ನು ಡೌ ಜೋನ್ಸ್ ಸೂಚ್ಯಂಕಗಳಿಂದ ತೆಗೆದುಹಾಕುತ್ತದೆ. ಅಂತರಾಷ್ಟ್ರೀಯ ಸಂಸ್ಥೆಯೊಂದು ಹೀಗೆ ಕ್ರಮ ಕೈಗೊಳ್ಳುವಾಗ ಅದಾನಿ ಸ್ಟಾಕ್‌ಗಳ ಸೂಚ್ಯಂಕ ಸದಸ್ಯತ್ವವನ್ನು ಏಕೆ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ (NSE) ಮರುಮೌಲ್ಯಮಾಪನ ಮಾಡುತ್ತಿಲ್ಲ?” ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ದಾಖಲೆ ಕುಸಿತ ಕಂಡ ಅದಾನಿ; ಸಾಲ ನೀಡಿರುವ ವಿವರ ಒದಗಿಸುವಂತೆ ಬ್ಯಾಂಕುಗಳಿಗೆ RBI ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. It is sad to see many Indians for reasons are supporting the narrative of the west who are hell bent on bringing india to the present Pakistan level. It is time to fight these nefarious design and strengthen Indian company. . In this regard i strongly condemn the statement of this Moiuva MTR .

  2. You people have succeeded in getting him down by a sabotage joining hands with foreign agency temporarily but he will come back like a phoneix since his contribution to indian economy is beyond doubt..

  3. You people have succeeded in getting him down by a sabotage joining hands with foreign agency temporarily but he will come back like a phoneix since his contribution to indian economy is beyond doubt..

  4. You people have succeeded in getting him down by a sabotage joining hands with foreign agency temporarily but he will come back like a phoneix since his contribution to indian economy is beyond doubt..

  5. Dow-Jones and other foreign indices are reliable in Indian circumstances to what extent. They are just like agencies like PwC which being a foreign organization manipulated accounts of many Indian forms. Just because they did, doesn’t compel NSE to act like that. Offcourse, NSE, had given given such report, then Indians should have bothered.
    Why can’t be the assumption goes like this- Many foreign industries involved in Steel and port operation joined hand with Heidelberg along with Indian Anti BJP gang to bring down Adani?

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...