Homeಎಕಾನಮಿಡೌ ಜೋನ್ಸ್ ಸೂಚ್ಯಂಕಗಳಿಂದ ಅದಾನಿ ಎಂಟರ್‌ಪ್ರೈಸಸ್ ಔಟ್: NSE ಯಿಂದ ಏಕಿಲ್ಲ - ಮೊಹುವ ಮೊಯಿತ್ರ

ಡೌ ಜೋನ್ಸ್ ಸೂಚ್ಯಂಕಗಳಿಂದ ಅದಾನಿ ಎಂಟರ್‌ಪ್ರೈಸಸ್ ಔಟ್: NSE ಯಿಂದ ಏಕಿಲ್ಲ – ಮೊಹುವ ಮೊಯಿತ್ರ

- Advertisement -
- Advertisement -

ಅದಾನಿ ಸಮೂಹದ ವಂಚನೆ ಹಗರಣ ಹೊರಬರುತ್ತಿದ್ದಂತೆ ಅವರ ಷೇರು ಮೌಲ್ಯಗಳು ಒಂದು ವಾರದಿಂದ ಸತತವಾಗಿ ಕುಸಿಯುತ್ತಿವೆ. ಇದರಿಂದಾಗಿ ಅದಾನಿ ಸಮೂಹಕ್ಕೆ 9.8 ಲಕ್ಷ ಕೋಟಿಗೂ ಅಧಿಕ ನಷ್ಟವುಂಟಾಗಿದೆ ಎಂದು ಅಂದಾಜಿಸಲಾಗಿದೆ. ಇದೇ ಸಂದರ್ಭದಲ್ಲಿ ಷೇರುಗಳ ಮ್ಯಾನಿಪ್ಯುಲೇಷನ್ ಆರೋಪ ಇರುವುದರಿಂದ ಅಮೆರಿಕದ ಹಳೆಯ ಮತ್ತು ಪ್ರಸಿದ್ದ S&P ಡೌ ಜೋನ್ಸ್ ಸ್ಟಾಕ್ ಎಕ್ಸ್‌ಚೇಂಜ್ ಸಂಸ್ಥೆಯು ಅದಾನಿ ಎಂಟರ್‌ಪ್ರೈಸಸ್ ಅನ್ನು ಡೌ ಜೋನ್ಸ್ ಸೂಚ್ಯಂಕಗಳಿಂದ ತೆಗೆದುಹಾಕಿದೆ.

ಎಸ್&ಪಿ ಡೌ ಜೋನ್ಸ್ ಸೂಚ್ಯಂಕಗಳು ಡೌ ಜೋನ್ಸ್ ಸಸ್ಟೈನಬಿಲಿಟಿ ಸೂಚ್ಯಂಕಗಳಿಗೆ ಈ ಕೆಳಗಿನ ಬದಲಾವಣೆಗಳನ್ನು ಮಾಡುತ್ತವೆ. “ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಅಕೌಂಟಿಂಗ್ ವಂಚನೆ ಮಾಡಿದೆ ಎಂಬ ಆರೋಪದ ಮಾಧ್ಯಮ ಮತ್ತು ಷೇರುದಾರರ ವಿಶ್ಲೇಷಣೆಯ ನಂತರ ಅದಾನಿ ಎಂಟರ್‌ಪ್ರೈಸಸ್ (XBOM: 512599) ಅನ್ನು ಡೌ ಜೋನ್ಸ್ ಸುಸ್ಥಿರತೆ ಸೂಚ್ಯಂಕಗಳಿಂದ ತೆಗೆದುಹಾಕಲಾಗುತ್ತದೆ. ಇದು ಫೆಬ್ರವರಿ 7, 2023 ರಂದು ಮಂಗಳವಾರ ತೆರೆಯುವ ಮೊದಲು ಜಾರಿಗೆ ಬರುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಡೌ ಜೋನ್ಸ್ ಅಮೆರಿಕದ ಸ್ಟಾಕ್ ಎಕ್ಸ್‌ಚೇಂಜ್‌ಗಳಲ್ಲಿ ಪಟ್ಟಿ ಮಾಡಲಾದ (ಲಿಸ್ಟಡ್) 30 ಪ್ರಮುಖ ಕಂಪನಿಗಳ ಷೇರು ಮಾರುಕಟ್ಟೆ ಸೂಚ್ಯಂಕವಾಗಿದೆ. ಅದು ಅತ್ಯಂತ ಹಳೆಯ ಮತ್ತು ಸಾಮಾನ್ಯವಾಗಿ ಅನುಸರಿಸುವ ಇಕ್ವಿಟಿ ಸೂಚ್ಯಂಕಗಳಲ್ಲಿ ಒಂದಾಗಿದ್ದು ಅದೀಗ ಅದಾನಿ ಸಮೂಹದ ವಿರುದ್ಧ ಕ್ರಮ ಕೈಗೊಂಡಿದೆ.

ಈ ಹಿನ್ನೆಲೆಯಲ್ಲಿ  ಭಾರತದ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ (NSE) ಏಕೆ ತನ್ನ ಸೂಚ್ಯಂಕಗಳಿಂದ ಅದಾನಿ ಸಮೂಹದ ಸದಸ್ಯತ್ವ ರದ್ದುಗೊಳಿಸಬಾರದು ಎಂದು ಟಿಎಂಸಿ ಸಂಸದೆ ಮೊಹುವ ಮೊಯಿತ್ರ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “S&P ಡೌ ಜೋನ್ಸ್ ಸಂಸ್ಥೆಯು ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಅಕೌಂಟಿಂಗ್ ವಂಚನೆಯ ಆರೋಪಗಳ ಕಾರಣದಿಂದ ಅದಾನಿ ಎಂಟರ್‌ಪ್ರೈಸಸ್ ಅನ್ನು ಡೌ ಜೋನ್ಸ್ ಸೂಚ್ಯಂಕಗಳಿಂದ ತೆಗೆದುಹಾಕುತ್ತದೆ. ಅಂತರಾಷ್ಟ್ರೀಯ ಸಂಸ್ಥೆಯೊಂದು ಹೀಗೆ ಕ್ರಮ ಕೈಗೊಳ್ಳುವಾಗ ಅದಾನಿ ಸ್ಟಾಕ್‌ಗಳ ಸೂಚ್ಯಂಕ ಸದಸ್ಯತ್ವವನ್ನು ಏಕೆ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ (NSE) ಮರುಮೌಲ್ಯಮಾಪನ ಮಾಡುತ್ತಿಲ್ಲ?” ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ದಾಖಲೆ ಕುಸಿತ ಕಂಡ ಅದಾನಿ; ಸಾಲ ನೀಡಿರುವ ವಿವರ ಒದಗಿಸುವಂತೆ ಬ್ಯಾಂಕುಗಳಿಗೆ RBI ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. It is sad to see many Indians for reasons are supporting the narrative of the west who are hell bent on bringing india to the present Pakistan level. It is time to fight these nefarious design and strengthen Indian company. . In this regard i strongly condemn the statement of this Moiuva MTR .

  2. You people have succeeded in getting him down by a sabotage joining hands with foreign agency temporarily but he will come back like a phoneix since his contribution to indian economy is beyond doubt..

  3. You people have succeeded in getting him down by a sabotage joining hands with foreign agency temporarily but he will come back like a phoneix since his contribution to indian economy is beyond doubt..

  4. You people have succeeded in getting him down by a sabotage joining hands with foreign agency temporarily but he will come back like a phoneix since his contribution to indian economy is beyond doubt..

  5. Dow-Jones and other foreign indices are reliable in Indian circumstances to what extent. They are just like agencies like PwC which being a foreign organization manipulated accounts of many Indian forms. Just because they did, doesn’t compel NSE to act like that. Offcourse, NSE, had given given such report, then Indians should have bothered.
    Why can’t be the assumption goes like this- Many foreign industries involved in Steel and port operation joined hand with Heidelberg along with Indian Anti BJP gang to bring down Adani?

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...