Homeಎಕಾನಮಿಡೌ ಜೋನ್ಸ್ ಸೂಚ್ಯಂಕಗಳಿಂದ ಅದಾನಿ ಎಂಟರ್‌ಪ್ರೈಸಸ್ ಔಟ್: NSE ಯಿಂದ ಏಕಿಲ್ಲ - ಮೊಹುವ ಮೊಯಿತ್ರ

ಡೌ ಜೋನ್ಸ್ ಸೂಚ್ಯಂಕಗಳಿಂದ ಅದಾನಿ ಎಂಟರ್‌ಪ್ರೈಸಸ್ ಔಟ್: NSE ಯಿಂದ ಏಕಿಲ್ಲ – ಮೊಹುವ ಮೊಯಿತ್ರ

- Advertisement -
- Advertisement -

ಅದಾನಿ ಸಮೂಹದ ವಂಚನೆ ಹಗರಣ ಹೊರಬರುತ್ತಿದ್ದಂತೆ ಅವರ ಷೇರು ಮೌಲ್ಯಗಳು ಒಂದು ವಾರದಿಂದ ಸತತವಾಗಿ ಕುಸಿಯುತ್ತಿವೆ. ಇದರಿಂದಾಗಿ ಅದಾನಿ ಸಮೂಹಕ್ಕೆ 9.8 ಲಕ್ಷ ಕೋಟಿಗೂ ಅಧಿಕ ನಷ್ಟವುಂಟಾಗಿದೆ ಎಂದು ಅಂದಾಜಿಸಲಾಗಿದೆ. ಇದೇ ಸಂದರ್ಭದಲ್ಲಿ ಷೇರುಗಳ ಮ್ಯಾನಿಪ್ಯುಲೇಷನ್ ಆರೋಪ ಇರುವುದರಿಂದ ಅಮೆರಿಕದ ಹಳೆಯ ಮತ್ತು ಪ್ರಸಿದ್ದ S&P ಡೌ ಜೋನ್ಸ್ ಸ್ಟಾಕ್ ಎಕ್ಸ್‌ಚೇಂಜ್ ಸಂಸ್ಥೆಯು ಅದಾನಿ ಎಂಟರ್‌ಪ್ರೈಸಸ್ ಅನ್ನು ಡೌ ಜೋನ್ಸ್ ಸೂಚ್ಯಂಕಗಳಿಂದ ತೆಗೆದುಹಾಕಿದೆ.

ಎಸ್&ಪಿ ಡೌ ಜೋನ್ಸ್ ಸೂಚ್ಯಂಕಗಳು ಡೌ ಜೋನ್ಸ್ ಸಸ್ಟೈನಬಿಲಿಟಿ ಸೂಚ್ಯಂಕಗಳಿಗೆ ಈ ಕೆಳಗಿನ ಬದಲಾವಣೆಗಳನ್ನು ಮಾಡುತ್ತವೆ. “ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಅಕೌಂಟಿಂಗ್ ವಂಚನೆ ಮಾಡಿದೆ ಎಂಬ ಆರೋಪದ ಮಾಧ್ಯಮ ಮತ್ತು ಷೇರುದಾರರ ವಿಶ್ಲೇಷಣೆಯ ನಂತರ ಅದಾನಿ ಎಂಟರ್‌ಪ್ರೈಸಸ್ (XBOM: 512599) ಅನ್ನು ಡೌ ಜೋನ್ಸ್ ಸುಸ್ಥಿರತೆ ಸೂಚ್ಯಂಕಗಳಿಂದ ತೆಗೆದುಹಾಕಲಾಗುತ್ತದೆ. ಇದು ಫೆಬ್ರವರಿ 7, 2023 ರಂದು ಮಂಗಳವಾರ ತೆರೆಯುವ ಮೊದಲು ಜಾರಿಗೆ ಬರುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಡೌ ಜೋನ್ಸ್ ಅಮೆರಿಕದ ಸ್ಟಾಕ್ ಎಕ್ಸ್‌ಚೇಂಜ್‌ಗಳಲ್ಲಿ ಪಟ್ಟಿ ಮಾಡಲಾದ (ಲಿಸ್ಟಡ್) 30 ಪ್ರಮುಖ ಕಂಪನಿಗಳ ಷೇರು ಮಾರುಕಟ್ಟೆ ಸೂಚ್ಯಂಕವಾಗಿದೆ. ಅದು ಅತ್ಯಂತ ಹಳೆಯ ಮತ್ತು ಸಾಮಾನ್ಯವಾಗಿ ಅನುಸರಿಸುವ ಇಕ್ವಿಟಿ ಸೂಚ್ಯಂಕಗಳಲ್ಲಿ ಒಂದಾಗಿದ್ದು ಅದೀಗ ಅದಾನಿ ಸಮೂಹದ ವಿರುದ್ಧ ಕ್ರಮ ಕೈಗೊಂಡಿದೆ.

ಈ ಹಿನ್ನೆಲೆಯಲ್ಲಿ  ಭಾರತದ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ (NSE) ಏಕೆ ತನ್ನ ಸೂಚ್ಯಂಕಗಳಿಂದ ಅದಾನಿ ಸಮೂಹದ ಸದಸ್ಯತ್ವ ರದ್ದುಗೊಳಿಸಬಾರದು ಎಂದು ಟಿಎಂಸಿ ಸಂಸದೆ ಮೊಹುವ ಮೊಯಿತ್ರ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “S&P ಡೌ ಜೋನ್ಸ್ ಸಂಸ್ಥೆಯು ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಅಕೌಂಟಿಂಗ್ ವಂಚನೆಯ ಆರೋಪಗಳ ಕಾರಣದಿಂದ ಅದಾನಿ ಎಂಟರ್‌ಪ್ರೈಸಸ್ ಅನ್ನು ಡೌ ಜೋನ್ಸ್ ಸೂಚ್ಯಂಕಗಳಿಂದ ತೆಗೆದುಹಾಕುತ್ತದೆ. ಅಂತರಾಷ್ಟ್ರೀಯ ಸಂಸ್ಥೆಯೊಂದು ಹೀಗೆ ಕ್ರಮ ಕೈಗೊಳ್ಳುವಾಗ ಅದಾನಿ ಸ್ಟಾಕ್‌ಗಳ ಸೂಚ್ಯಂಕ ಸದಸ್ಯತ್ವವನ್ನು ಏಕೆ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ (NSE) ಮರುಮೌಲ್ಯಮಾಪನ ಮಾಡುತ್ತಿಲ್ಲ?” ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ದಾಖಲೆ ಕುಸಿತ ಕಂಡ ಅದಾನಿ; ಸಾಲ ನೀಡಿರುವ ವಿವರ ಒದಗಿಸುವಂತೆ ಬ್ಯಾಂಕುಗಳಿಗೆ RBI ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. It is sad to see many Indians for reasons are supporting the narrative of the west who are hell bent on bringing india to the present Pakistan level. It is time to fight these nefarious design and strengthen Indian company. . In this regard i strongly condemn the statement of this Moiuva MTR .

  2. You people have succeeded in getting him down by a sabotage joining hands with foreign agency temporarily but he will come back like a phoneix since his contribution to indian economy is beyond doubt..

  3. You people have succeeded in getting him down by a sabotage joining hands with foreign agency temporarily but he will come back like a phoneix since his contribution to indian economy is beyond doubt..

  4. You people have succeeded in getting him down by a sabotage joining hands with foreign agency temporarily but he will come back like a phoneix since his contribution to indian economy is beyond doubt..

  5. Dow-Jones and other foreign indices are reliable in Indian circumstances to what extent. They are just like agencies like PwC which being a foreign organization manipulated accounts of many Indian forms. Just because they did, doesn’t compel NSE to act like that. Offcourse, NSE, had given given such report, then Indians should have bothered.
    Why can’t be the assumption goes like this- Many foreign industries involved in Steel and port operation joined hand with Heidelberg along with Indian Anti BJP gang to bring down Adani?

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...