Homeಎಕಾನಮಿಡೌ ಜೋನ್ಸ್ ಸೂಚ್ಯಂಕಗಳಿಂದ ಅದಾನಿ ಎಂಟರ್‌ಪ್ರೈಸಸ್ ಔಟ್: NSE ಯಿಂದ ಏಕಿಲ್ಲ - ಮೊಹುವ ಮೊಯಿತ್ರ

ಡೌ ಜೋನ್ಸ್ ಸೂಚ್ಯಂಕಗಳಿಂದ ಅದಾನಿ ಎಂಟರ್‌ಪ್ರೈಸಸ್ ಔಟ್: NSE ಯಿಂದ ಏಕಿಲ್ಲ – ಮೊಹುವ ಮೊಯಿತ್ರ

- Advertisement -
- Advertisement -

ಅದಾನಿ ಸಮೂಹದ ವಂಚನೆ ಹಗರಣ ಹೊರಬರುತ್ತಿದ್ದಂತೆ ಅವರ ಷೇರು ಮೌಲ್ಯಗಳು ಒಂದು ವಾರದಿಂದ ಸತತವಾಗಿ ಕುಸಿಯುತ್ತಿವೆ. ಇದರಿಂದಾಗಿ ಅದಾನಿ ಸಮೂಹಕ್ಕೆ 9.8 ಲಕ್ಷ ಕೋಟಿಗೂ ಅಧಿಕ ನಷ್ಟವುಂಟಾಗಿದೆ ಎಂದು ಅಂದಾಜಿಸಲಾಗಿದೆ. ಇದೇ ಸಂದರ್ಭದಲ್ಲಿ ಷೇರುಗಳ ಮ್ಯಾನಿಪ್ಯುಲೇಷನ್ ಆರೋಪ ಇರುವುದರಿಂದ ಅಮೆರಿಕದ ಹಳೆಯ ಮತ್ತು ಪ್ರಸಿದ್ದ S&P ಡೌ ಜೋನ್ಸ್ ಸ್ಟಾಕ್ ಎಕ್ಸ್‌ಚೇಂಜ್ ಸಂಸ್ಥೆಯು ಅದಾನಿ ಎಂಟರ್‌ಪ್ರೈಸಸ್ ಅನ್ನು ಡೌ ಜೋನ್ಸ್ ಸೂಚ್ಯಂಕಗಳಿಂದ ತೆಗೆದುಹಾಕಿದೆ.

ಎಸ್&ಪಿ ಡೌ ಜೋನ್ಸ್ ಸೂಚ್ಯಂಕಗಳು ಡೌ ಜೋನ್ಸ್ ಸಸ್ಟೈನಬಿಲಿಟಿ ಸೂಚ್ಯಂಕಗಳಿಗೆ ಈ ಕೆಳಗಿನ ಬದಲಾವಣೆಗಳನ್ನು ಮಾಡುತ್ತವೆ. “ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಅಕೌಂಟಿಂಗ್ ವಂಚನೆ ಮಾಡಿದೆ ಎಂಬ ಆರೋಪದ ಮಾಧ್ಯಮ ಮತ್ತು ಷೇರುದಾರರ ವಿಶ್ಲೇಷಣೆಯ ನಂತರ ಅದಾನಿ ಎಂಟರ್‌ಪ್ರೈಸಸ್ (XBOM: 512599) ಅನ್ನು ಡೌ ಜೋನ್ಸ್ ಸುಸ್ಥಿರತೆ ಸೂಚ್ಯಂಕಗಳಿಂದ ತೆಗೆದುಹಾಕಲಾಗುತ್ತದೆ. ಇದು ಫೆಬ್ರವರಿ 7, 2023 ರಂದು ಮಂಗಳವಾರ ತೆರೆಯುವ ಮೊದಲು ಜಾರಿಗೆ ಬರುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಡೌ ಜೋನ್ಸ್ ಅಮೆರಿಕದ ಸ್ಟಾಕ್ ಎಕ್ಸ್‌ಚೇಂಜ್‌ಗಳಲ್ಲಿ ಪಟ್ಟಿ ಮಾಡಲಾದ (ಲಿಸ್ಟಡ್) 30 ಪ್ರಮುಖ ಕಂಪನಿಗಳ ಷೇರು ಮಾರುಕಟ್ಟೆ ಸೂಚ್ಯಂಕವಾಗಿದೆ. ಅದು ಅತ್ಯಂತ ಹಳೆಯ ಮತ್ತು ಸಾಮಾನ್ಯವಾಗಿ ಅನುಸರಿಸುವ ಇಕ್ವಿಟಿ ಸೂಚ್ಯಂಕಗಳಲ್ಲಿ ಒಂದಾಗಿದ್ದು ಅದೀಗ ಅದಾನಿ ಸಮೂಹದ ವಿರುದ್ಧ ಕ್ರಮ ಕೈಗೊಂಡಿದೆ.

ಈ ಹಿನ್ನೆಲೆಯಲ್ಲಿ  ಭಾರತದ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ (NSE) ಏಕೆ ತನ್ನ ಸೂಚ್ಯಂಕಗಳಿಂದ ಅದಾನಿ ಸಮೂಹದ ಸದಸ್ಯತ್ವ ರದ್ದುಗೊಳಿಸಬಾರದು ಎಂದು ಟಿಎಂಸಿ ಸಂಸದೆ ಮೊಹುವ ಮೊಯಿತ್ರ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “S&P ಡೌ ಜೋನ್ಸ್ ಸಂಸ್ಥೆಯು ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಅಕೌಂಟಿಂಗ್ ವಂಚನೆಯ ಆರೋಪಗಳ ಕಾರಣದಿಂದ ಅದಾನಿ ಎಂಟರ್‌ಪ್ರೈಸಸ್ ಅನ್ನು ಡೌ ಜೋನ್ಸ್ ಸೂಚ್ಯಂಕಗಳಿಂದ ತೆಗೆದುಹಾಕುತ್ತದೆ. ಅಂತರಾಷ್ಟ್ರೀಯ ಸಂಸ್ಥೆಯೊಂದು ಹೀಗೆ ಕ್ರಮ ಕೈಗೊಳ್ಳುವಾಗ ಅದಾನಿ ಸ್ಟಾಕ್‌ಗಳ ಸೂಚ್ಯಂಕ ಸದಸ್ಯತ್ವವನ್ನು ಏಕೆ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ (NSE) ಮರುಮೌಲ್ಯಮಾಪನ ಮಾಡುತ್ತಿಲ್ಲ?” ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ದಾಖಲೆ ಕುಸಿತ ಕಂಡ ಅದಾನಿ; ಸಾಲ ನೀಡಿರುವ ವಿವರ ಒದಗಿಸುವಂತೆ ಬ್ಯಾಂಕುಗಳಿಗೆ RBI ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. It is sad to see many Indians for reasons are supporting the narrative of the west who are hell bent on bringing india to the present Pakistan level. It is time to fight these nefarious design and strengthen Indian company. . In this regard i strongly condemn the statement of this Moiuva MTR .

  2. You people have succeeded in getting him down by a sabotage joining hands with foreign agency temporarily but he will come back like a phoneix since his contribution to indian economy is beyond doubt..

  3. You people have succeeded in getting him down by a sabotage joining hands with foreign agency temporarily but he will come back like a phoneix since his contribution to indian economy is beyond doubt..

  4. You people have succeeded in getting him down by a sabotage joining hands with foreign agency temporarily but he will come back like a phoneix since his contribution to indian economy is beyond doubt..

  5. Dow-Jones and other foreign indices are reliable in Indian circumstances to what extent. They are just like agencies like PwC which being a foreign organization manipulated accounts of many Indian forms. Just because they did, doesn’t compel NSE to act like that. Offcourse, NSE, had given given such report, then Indians should have bothered.
    Why can’t be the assumption goes like this- Many foreign industries involved in Steel and port operation joined hand with Heidelberg along with Indian Anti BJP gang to bring down Adani?

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...