Homeಮುಖಪುಟಅದಾನಿ ವಂಚನೆ | 20% ಶೇರು ಕುಸಿತ; $600 ಮಿಲಿಯನ್ ಬಾಂಡ್ ನೀಡುವುದನ್ನು ರದ್ದು ಮಾಡಿದ...

ಅದಾನಿ ವಂಚನೆ | 20% ಶೇರು ಕುಸಿತ; $600 ಮಿಲಿಯನ್ ಬಾಂಡ್ ನೀಡುವುದನ್ನು ರದ್ದು ಮಾಡಿದ ಕಂಪೆನಿ

- Advertisement -
- Advertisement -

ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ದ ಅಮೆರಿಕದ ಪ್ರಾಸಿಕ್ಯೂಟರ್ ಕ್ರಿಮಿನಲ್ ಆರೋಪಪಟ್ಟಿ ಸಲ್ಲಿಸಿದ ವರದಿಯ ನಂತರ ಅದಾನಿ ಗ್ರೂಪ್‌ ಕಂಪನಿಗಳ ಷೇರುಗಳು 20% ಕುಸಿತ ಕಂಡಿದ್ದು, ಜೊತೆಗೆ ಕಂಪೆನಿಯು ತನ್ನ $600 ಮಿಲಿಯನ್ ಬಾಂಡ್ ನೀಡುವುದನ್ನು ರದ್ದುಗೊಳಿಸಿದೆ. ಅದಾನಿ ವಂಚನೆ

ಅದಾನಿ ಗ್ರೀನ್ ಎನರ್ಜಿ 18.76% ಕುಸಿದರೆ, ಅದಾನಿ ಎನರ್ಜಿ ಸಲ್ಯೂಷನ್ಸ್ 20%, ಅದಾನಿ ಎಂಟರ್‌ಪ್ರೈಸಸ್ 10%, ಅದಾನಿ ಪವರ್ 13.98% ಮತ್ತು ಅದಾನಿ ಪೋರ್ಟ್ಸ್ 13.98% ದಷ್ಟು ಬೆಳಗಿನ ಅವಧಿಯಲ್ಲಿ ಕುಸಿದವು ಎಂದು ವರದಿಯಗಳು ಉಲ್ಲೇಖಿಸಿವೆ. ಅದಾನಿ ವಂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಆರೋಪಿಗಳು 20 ವರ್ಷಗಳಲ್ಲಿ 2 ಶತಕೋಟಿ ಡಾಲರ್ ಲಾಭ ತರಲಿದ್ದ ಸೌರಶಕ್ತಿ ಪೂರೈಕೆ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಸುಮಾರು 265 ಮಿಲಿಯನ್ ಡಾಲರ್ ಲಂಚ ನೀಡಲು ಒಪ್ಪಿದ್ದರು ಎನ್ನಲಾಗಿದೆ.

ನ್ಯೂಯಾರ್ಕ್‌ನ ಪೂರ್ವ ಜಿಲ್ಲಾ ನ್ಯಾಯಾಲಯದಲ್ಲಿರುವ ಅಮೆರಿಕದ ಅಟಾರ್ನಿ ಕಚೇರಿಯ ಮಾಹಿತಿ ಪ್ರಕಾರ, ಗೌತಮ್ ಅದಾನಿ, ಸಾಗರ್‌ ಆರ್. ಅದಾನಿ ಹಾಗೂ ವಿನೀತ್ ಎಸ್. ಜೈನ್‌ ವಿರುದ್ಧ ಐದು ಅಂಶಗಳ ಕ್ರಿಮಿನಲ್‌ ಆರೋಪಪಟ್ಟಿ ಸಲ್ಲಿಸಲಾಗಿದೆ. ಬಂಡವಾಳ ಆಕರ್ಷಿಸಲು ಅಮೆರಿಕದ ಹೂಡಿಕೆದಾರರು ಹಾಗೂ ಜಾಗತಿಕ ಹಣಕಾಸು ಸಂಸ್ಥೆಗಳಿಗೆ ಸುಳ್ಳು ಮತ್ತು ತಪ್ಪು ಹೇಳಿಕೆ ನೀಡಿರುವ ಆರೋಪ ಇವರ ಮೇಲಿದೆ ಎಂದು ರಾಯಿಟರ್ಸ್ ವರದಿ ಹೇಳಿದೆ.

ನ್ಯಾಯಾಧೀಶರು ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ದ ಬಂಧನ ವಾರೆಂಟ್‌ಗಳನ್ನು ಹೊರಡಿಸಿದ್ದಾರೆ. ಆ ವಾರೆಂಟ್‌ಗಳನ್ನು ವಿದೇಶಿ ಕಾನೂನು ಜಾರಿ ಸಂಸ್ಥೆಗಳಿಗೆ ಹಸ್ತಾಂತರಿಸಲು ಪ್ರಾಸಿಕ್ಯೂಟರ್‌ಗಳು ಯೋಜಿಸಿದ್ದಾರೆ ಎಂದು ನ್ಯಾಯಾಲಯದ ದಾಖಲೆಗಳನ್ನು ಉಲ್ಲೇಖಿಸಿ ರಾಯಿಟರ್ಸ್ ತಿಳಿಸಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಯಾರ್ಕ್‌ ಸ್ಟಾಕ್‌ ಎಕ್ಸ್‌ಚೇಂಜ್‌ನಲ್ಲಿ ವ್ಯವಹಾರ ನಡೆಸಿದ್ದ ಕಂಪನಿಯ ಮಾಜಿ ಅಧಿಕಾರಿಗಳಾದ ರಂಜಿತ್ ಗುಪ್ತಾ ಹಾಗೂ ರೂಪೇಶ್ ಅಗರವಾಲ್‌ ಹಾಗೂ ಕೆನಡಾ ಮೂಲದ ಹೂಡಿಕೆದಾರರಾದ ದೀಪಕ್ ಮಲ್ಹೋತ್ರಾ ಮತ್ತು ಸೌರಬ್‌ ಅಗರವಾಲ್‌ ಅವರು ಲಂಚ ನೀಡಿರುವುದು ವಿದೇಶಿ ಭ್ರಷ್ಟ ಕಾರ್ಯಾಚರಣೆ ಕಾಯ್ದೆಯಡಿ ಅಪರಾಧವಾಗಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ಹೇಳಲಾಗಿದೆ.

“ತಮ್ಮ ವ್ಯವಹಾರಗಳಿಗೆ ಅನುಕೂಲವಾಗುವಂತೆ ಭಾರತ ಸರ್ಕಾರದ ಅಧಿಕಾರಿಗಳಿಗೆ ಆರೋಪಿಗಳು ಲಂಚ ನೀಡಿದ್ದಾರೆ. ಲಂಚ ಹಾಗೂ ಭ್ರಷ್ಟಾಚಾರದ ಕುರಿತು ಸುಳ್ಳು ಹೇಳಿಕೆಗಳ ಮೂಲಕ ಅದಾನಿ ಹಾಗೂ ಇತರ ಆರೋಪಿಗಳು ಹೂಡಿಕೆದಾರರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇತರ ಆರೋಪಿಗಳು ತನಿಖೆಗೆ ಅಡ್ಡಿಪಡಿಸುವ ಮೂಲಕ ಲಂಚದ ಆರೋಪವನ್ನು ಮರೆಮಾಚಲು ಯತ್ನಿಸಿದ್ದಾರೆ” ಎಂದು ಆರೋಪಿಸಲಾಗಿದೆ.

ದೋಷಾರೋಪಣೆಯ ಪ್ರಕಾರ, ಆರೋಪಿಗಳು ವಂಚನೆಗೆ ಗೌತಮ್ ಅದಾಮಿ ಅವರನ್ನು “ನ್ಯೂಮೆರೊ ಯುನೊ” ಮತ್ತು “ಬಿಗ್ ಮ್ಯಾನ್‌” ಎಂಬ ಕೋಡ್ ಹೆಸರುಗಳೊಂದಿಗೆ ಖಾಸಗಿಯಾಗಿ ಕರೆಯತ್ತಿದ್ದರು. ಸಾಗರ್ ಅದಾನಿ ಲಂಚದ ವ್ಯವಹಾರದ ಬಗ್ಗೆ ನಿಗಾ ಇಡಲು ತಮ್ಮ ಸೆಲ್ ಫೋನ್ ಬಳಸಿದ್ದಾರೆ ಎಂದು ಹೇಳಲಾಗಿದೆ.

ಅದಾನಿ ಮತ್ತು ಆತನ ಸಂಬಂಧಿಗಳು, ವಿನೀತ್ ಜೈನ್ ಸೇರಿದಂತೆ ಅದಾನಿ ಗ್ರೀನ್ ಎನರ್ಜಿಯ ಕಾರ್ಯನಿರ್ವಾಹಕರು ಸಾಲದಾತರು ಮತ್ತು ಹೂಡಿಕೆದಾರರಿಂದ ಭ್ರಷ್ಟಾಚಾರವನ್ನು ಮರೆಮಾಚುವ ಮೂಲಕ ತಮ್ಮ ಕಂಪನಿಗೆ 3 ಶತಕೋಟಿ ಡಾಲರ್‌ಗಿಂತ ಹೆಚ್ಚಿನ ಸಾಲ ಮತ್ತು ಬಾಂಡ್‌ಗಳನ್ನು ಸಂಗ್ರಹಿಸಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

“ಈ ಪ್ರಕರಣ ಕುರಿತ ತನಿಖೆಯನ್ನು ತಡೆಯಲು ಎಫ್‌ಬಿಐ, ನ್ಯಾಯಾಂಗ ಇಲಾಖೆ ಮತ್ತು ಸೆಕ್ಯುರಿಟಿ ಅಂಡ್ ಎಕ್ಸ್‌ಚೇಂಜ್ ಕಮಿಷನ್‌ ಕೂಡಾ ಪ್ರಯತ್ನಿಸುತ್ತಿದೆ” ಎಂದು ಪ್ರಾಸಿಕ್ಯೂಟರ್ ಆರೋಪಿಸಿದ್ದಾಗಿ ವರದಿಯಾಗಿದೆ.
ಪ್ರಕರಣದ ತನಿಖೆಯನ್ನು ನ್ಯೂಯಾರ್ಕ್‌ನ ಎಫ್‌ಬಿಐ ಕಚೇರಿ ನಡೆಸುತ್ತಿದೆ.

ಇದನ್ನೂ ಓದಿ: ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...