HomeUncategorizedNDTV ಬಳಿಕ ಮತ್ತೊಂದು ಸುದ್ದಿ ಸಂಸ್ಥೆ ಅದಾನಿ ತೆಕ್ಕೆಗೆ!

NDTV ಬಳಿಕ ಮತ್ತೊಂದು ಸುದ್ದಿ ಸಂಸ್ಥೆ ಅದಾನಿ ತೆಕ್ಕೆಗೆ!

- Advertisement -
- Advertisement -

ಅದಾನಿ ಸಮೂಹದ ಅಂಗಸಂಸ್ಥೆಯಾದ AMG ಮೀಡಿಯಾ ನೆಟ್‌ವರ್ಕ್ಸ್ ಲಿಮಿಟೆಡ್ (AMNL) ಇಂಡೋ-ಏಷ್ಯನ್ ನ್ಯೂಸ್ ಸರ್ವಿಸ್  IANS ಸುದ್ದಿ ಸಂಸ್ಥೆಯಲ್ಲಿ 50.5% ಷೇರನ್ನು ಪಡೆದುಕೊಂಡಿದ್ದು,  IANS ಅದಾನಿ ತೆಕ್ಕೆಗೆ ಸೇರಿದೆ.

ಹಿಂದಿ ಮತ್ತು ಇಂಗ್ಲೀಷ್‌ ಸುದ್ದಿ ಸಂಸ್ಥೆ IANS ಈಗ NDTVಯಂತೆಯೇ AMNLನ ಅಂಗಸಂಸ್ಥೆಯಾಗಿ ಕಾರ್ಯನಿರ್ವಹಿಸಲಿದೆ. ಅದಾನಿ ಸಮೂಹದ AMN,L IANSನೊಂದಿಗೆ ಷೇರು ಒಪ್ಪಂದಕ್ಕೆ ಸಹಿ ಹಾಕಿದೆ ಮತ್ತು ಕಂಪನಿಯಲ್ಲಿ ಮತದಾನದ ಹಕ್ಕುಗಳನ್ನು ಕೂಡ ಪಡೆದುಕೊಂಡಿದೆ. ಎಲ್ಲಾ ಕಾರ್ಯಾಚರಣೆ ಮತ್ತು IANS ನ ನಿರ್ವಹಣಾ ನಿಯಂತ್ರಣದ ಅಧಿಕಾರವು AMNLಗೆ ಇರುತ್ತದೆ ಮತ್ತು ಅದಾನಿ ಸಮೂಹ ಸಂಸ್ಥೆಗೆ IANS  ನಿರ್ದೇಶಕರನ್ನು ನೇಮಿಸುವ ಅಧಿಕಾರ ಕೂಡ ಹೊಂದಿರುತ್ತದೆ.

IANS ಜೊತೆ ಷೇರು ಒಪ್ಪಂದಕ್ಕೆ AMNL ಸಹಿ ಹಾಕಿದೆ ಎಂದು IANSನ ಷೇರುದಾರರಲ್ಲಿ ಓರ್ವರಾದ ಸಂದೀಪ್ ಬಾಮ್‌ಜೈ ಅವರು ತಿಳಿಸಿದ್ದು, IANS ನ ನಿರ್ವಹಣಾ ನಿಯಂತ್ರಣದ ಅಧಿಕಾರವು AMNLಗೆ ಇದೆ ಎಂದು ಹೇಳಿದ್ದಾರೆ.

ಎನ್‌ಡಿಟಿವಿಯನ್ನು ಗೌತಮ್ ಅದಾನಿ ಸಮೂಹವು ಸ್ವಾಧೀನಪಡಿಸಿಕೊಂಡ ಸುಮಾರು ಒಂದು ವರ್ಷದ ನಂತರ ಈ ಬೆಳವಣಿಗೆ ನಡೆದಿದೆ. ಮ್ಯಾನೇಜ್‌ಮೆಂಟ್ ನೀತಿಗಳು, ಹೊಸ ನಿರೂಪಕರು, ಹಳೆಯ ನಿರೂಪಕರ ರಾಜೀನಾಮೆ ಮತ್ತು ವಿಷಯದಲ್ಲಿನ ವ್ಯತ್ಯಾಸದ ವಿಚಾರಕ್ಕೆ ಸಂಬಂಧಿಸಿ ಎನ್‌ಡಿಟಿವಿ ಅದಾನಿ ತೆಕ್ಕೆಗೆ ಸೇರಿದ ಬಳಿಕ ವೀಕ್ಷಕರನ್ನು ಕಳೆದುಕೊಂಡಿದೆ.

ಆರ್‌ಆರ್‌ಪಿಆರ್‌ ಹೋಲ್ಡಿಂಗ್‌ ಪ್ರೈ. ಲಿ. ಎನ್‌ಡಿಟಿವಿಯಲ್ಲಿ ಶೇ. 29.18ರಷ್ಟು ಪಾಲನ್ನು ಹೊಂದಿದೆ. ಈ ಸಂಸ್ಥೆಯನ್ನು ವಿಶ್ವಪ್ರಧಾನ್‌ ಕಮರ್ಶಿಯಲ್‌ ಪ್ರೈವೇಟ್‌ ಲಿ.ನ್ನು ಸ್ವಾಧೀನಪಡಿಸಿಕೊಳ್ಳುವ ಮೂಲಕ ಅದಾನಿ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದರು.

NDTV ಭಾರತದಲ್ಲಿನ ವೀಕ್ಷಣೆಗಳು ಡಿಸೆಂಬರ್‌ನಲ್ಲಿ 45 ಮಿಲಿಯನ್‌ಗೆ ಇಳಿದಿದೆ ಎಂದು ನ್ಯೂಸ್‌ಲಾಂಡ್ರಿ ವರದಿ ಮಾಡಿದೆ. ಅಧಾನಿ ಸಮೂಹ ಅದನ್ನು ಸ್ವೀಕರಿಸುವ ಮೊದಲು  98 ಮಿಲಿಯನ್ ಇತ್ತು. ಇದು ಎನ್‌ಡಿಟಿವಿ ವೀಕ್ಷಕರಲ್ಲಿ 54 ಪ್ರತಿಶತದಷ್ಟು ಕಡಿತವಾಗಿರವುದನ್ನು ಸೂಚಿಸುತ್ತದೆ.

ಅದಾನಿ ಗುಂಪು ಮಾರ್ಚ್ 2022ರಲ್ಲಿ ಹಣಕಾಸು ಮಾಧ್ಯಮ ಸಂಸ್ಥೆ BQ ಕ್ವಿಂಟಿಲಿಯನ್ ಬಿಸಿನೆಸ್ ಮೀಡಿಯಾವನ್ನು ಕೂಡ ಖರೀದಿಸಿತ್ತು. ಅದಾನಿ ಸಮೂಹವು ಕ್ಯುಬಿಎಂಎಲ್‌ನಲ್ಲಿ ಶೇ 49ರಷ್ಟು ಷೇರುಗಳನ್ನು  ಮೊದಲು ಖರೀದಿಸಿತ್ತು. ಬಿಕ್ಯು ಪ್ರೈಮ್‌ಗೆ ಈ ಮೊದಲು ಬ್ಲೂಮ್‌ಬರ್ಗ್‌ ಕ್ವಿಂಟ್‌ ಎನ್ನುವ ಹೆಸರಿತ್ತು. ಅಮೆರಿಕದ ಬ್ಲೂಮ್‌ಬರ್ಗ್‌ ಮೀಡಿಯಾ ಮತ್ತು ರಾಘವ್ ಬಹ್ಲ್‌ ಒಡೆತನದ ಕ್ವಿಂಟಿಲಿಯನ್ ಮೀಡಿಯಾದ ಜಂಟಿ ಸಂಸ್ಥೆ ಇದಾಗಿತ್ತು.

ಇದನ್ನು ಓದಿ: ಇಸ್ರೇಲ್‌ನ ಯುದ್ಧ ದಾಹಕ್ಕೆ ತಮ್ಮದೇ ದೇಶದ ಮೂವರು ನಾಗರಿಕರು ಬಲಿ; ಪ್ರಮಾದವಾಯ್ತೆಂದ ನೆತನ್ಯಾಹು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...