HomeUncategorizedNDTV ಬಳಿಕ ಮತ್ತೊಂದು ಸುದ್ದಿ ಸಂಸ್ಥೆ ಅದಾನಿ ತೆಕ್ಕೆಗೆ!

NDTV ಬಳಿಕ ಮತ್ತೊಂದು ಸುದ್ದಿ ಸಂಸ್ಥೆ ಅದಾನಿ ತೆಕ್ಕೆಗೆ!

- Advertisement -
- Advertisement -

ಅದಾನಿ ಸಮೂಹದ ಅಂಗಸಂಸ್ಥೆಯಾದ AMG ಮೀಡಿಯಾ ನೆಟ್‌ವರ್ಕ್ಸ್ ಲಿಮಿಟೆಡ್ (AMNL) ಇಂಡೋ-ಏಷ್ಯನ್ ನ್ಯೂಸ್ ಸರ್ವಿಸ್  IANS ಸುದ್ದಿ ಸಂಸ್ಥೆಯಲ್ಲಿ 50.5% ಷೇರನ್ನು ಪಡೆದುಕೊಂಡಿದ್ದು,  IANS ಅದಾನಿ ತೆಕ್ಕೆಗೆ ಸೇರಿದೆ.

ಹಿಂದಿ ಮತ್ತು ಇಂಗ್ಲೀಷ್‌ ಸುದ್ದಿ ಸಂಸ್ಥೆ IANS ಈಗ NDTVಯಂತೆಯೇ AMNLನ ಅಂಗಸಂಸ್ಥೆಯಾಗಿ ಕಾರ್ಯನಿರ್ವಹಿಸಲಿದೆ. ಅದಾನಿ ಸಮೂಹದ AMN,L IANSನೊಂದಿಗೆ ಷೇರು ಒಪ್ಪಂದಕ್ಕೆ ಸಹಿ ಹಾಕಿದೆ ಮತ್ತು ಕಂಪನಿಯಲ್ಲಿ ಮತದಾನದ ಹಕ್ಕುಗಳನ್ನು ಕೂಡ ಪಡೆದುಕೊಂಡಿದೆ. ಎಲ್ಲಾ ಕಾರ್ಯಾಚರಣೆ ಮತ್ತು IANS ನ ನಿರ್ವಹಣಾ ನಿಯಂತ್ರಣದ ಅಧಿಕಾರವು AMNLಗೆ ಇರುತ್ತದೆ ಮತ್ತು ಅದಾನಿ ಸಮೂಹ ಸಂಸ್ಥೆಗೆ IANS  ನಿರ್ದೇಶಕರನ್ನು ನೇಮಿಸುವ ಅಧಿಕಾರ ಕೂಡ ಹೊಂದಿರುತ್ತದೆ.

IANS ಜೊತೆ ಷೇರು ಒಪ್ಪಂದಕ್ಕೆ AMNL ಸಹಿ ಹಾಕಿದೆ ಎಂದು IANSನ ಷೇರುದಾರರಲ್ಲಿ ಓರ್ವರಾದ ಸಂದೀಪ್ ಬಾಮ್‌ಜೈ ಅವರು ತಿಳಿಸಿದ್ದು, IANS ನ ನಿರ್ವಹಣಾ ನಿಯಂತ್ರಣದ ಅಧಿಕಾರವು AMNLಗೆ ಇದೆ ಎಂದು ಹೇಳಿದ್ದಾರೆ.

ಎನ್‌ಡಿಟಿವಿಯನ್ನು ಗೌತಮ್ ಅದಾನಿ ಸಮೂಹವು ಸ್ವಾಧೀನಪಡಿಸಿಕೊಂಡ ಸುಮಾರು ಒಂದು ವರ್ಷದ ನಂತರ ಈ ಬೆಳವಣಿಗೆ ನಡೆದಿದೆ. ಮ್ಯಾನೇಜ್‌ಮೆಂಟ್ ನೀತಿಗಳು, ಹೊಸ ನಿರೂಪಕರು, ಹಳೆಯ ನಿರೂಪಕರ ರಾಜೀನಾಮೆ ಮತ್ತು ವಿಷಯದಲ್ಲಿನ ವ್ಯತ್ಯಾಸದ ವಿಚಾರಕ್ಕೆ ಸಂಬಂಧಿಸಿ ಎನ್‌ಡಿಟಿವಿ ಅದಾನಿ ತೆಕ್ಕೆಗೆ ಸೇರಿದ ಬಳಿಕ ವೀಕ್ಷಕರನ್ನು ಕಳೆದುಕೊಂಡಿದೆ.

ಆರ್‌ಆರ್‌ಪಿಆರ್‌ ಹೋಲ್ಡಿಂಗ್‌ ಪ್ರೈ. ಲಿ. ಎನ್‌ಡಿಟಿವಿಯಲ್ಲಿ ಶೇ. 29.18ರಷ್ಟು ಪಾಲನ್ನು ಹೊಂದಿದೆ. ಈ ಸಂಸ್ಥೆಯನ್ನು ವಿಶ್ವಪ್ರಧಾನ್‌ ಕಮರ್ಶಿಯಲ್‌ ಪ್ರೈವೇಟ್‌ ಲಿ.ನ್ನು ಸ್ವಾಧೀನಪಡಿಸಿಕೊಳ್ಳುವ ಮೂಲಕ ಅದಾನಿ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದರು.

NDTV ಭಾರತದಲ್ಲಿನ ವೀಕ್ಷಣೆಗಳು ಡಿಸೆಂಬರ್‌ನಲ್ಲಿ 45 ಮಿಲಿಯನ್‌ಗೆ ಇಳಿದಿದೆ ಎಂದು ನ್ಯೂಸ್‌ಲಾಂಡ್ರಿ ವರದಿ ಮಾಡಿದೆ. ಅಧಾನಿ ಸಮೂಹ ಅದನ್ನು ಸ್ವೀಕರಿಸುವ ಮೊದಲು  98 ಮಿಲಿಯನ್ ಇತ್ತು. ಇದು ಎನ್‌ಡಿಟಿವಿ ವೀಕ್ಷಕರಲ್ಲಿ 54 ಪ್ರತಿಶತದಷ್ಟು ಕಡಿತವಾಗಿರವುದನ್ನು ಸೂಚಿಸುತ್ತದೆ.

ಅದಾನಿ ಗುಂಪು ಮಾರ್ಚ್ 2022ರಲ್ಲಿ ಹಣಕಾಸು ಮಾಧ್ಯಮ ಸಂಸ್ಥೆ BQ ಕ್ವಿಂಟಿಲಿಯನ್ ಬಿಸಿನೆಸ್ ಮೀಡಿಯಾವನ್ನು ಕೂಡ ಖರೀದಿಸಿತ್ತು. ಅದಾನಿ ಸಮೂಹವು ಕ್ಯುಬಿಎಂಎಲ್‌ನಲ್ಲಿ ಶೇ 49ರಷ್ಟು ಷೇರುಗಳನ್ನು  ಮೊದಲು ಖರೀದಿಸಿತ್ತು. ಬಿಕ್ಯು ಪ್ರೈಮ್‌ಗೆ ಈ ಮೊದಲು ಬ್ಲೂಮ್‌ಬರ್ಗ್‌ ಕ್ವಿಂಟ್‌ ಎನ್ನುವ ಹೆಸರಿತ್ತು. ಅಮೆರಿಕದ ಬ್ಲೂಮ್‌ಬರ್ಗ್‌ ಮೀಡಿಯಾ ಮತ್ತು ರಾಘವ್ ಬಹ್ಲ್‌ ಒಡೆತನದ ಕ್ವಿಂಟಿಲಿಯನ್ ಮೀಡಿಯಾದ ಜಂಟಿ ಸಂಸ್ಥೆ ಇದಾಗಿತ್ತು.

ಇದನ್ನು ಓದಿ: ಇಸ್ರೇಲ್‌ನ ಯುದ್ಧ ದಾಹಕ್ಕೆ ತಮ್ಮದೇ ದೇಶದ ಮೂವರು ನಾಗರಿಕರು ಬಲಿ; ಪ್ರಮಾದವಾಯ್ತೆಂದ ನೆತನ್ಯಾಹು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...