HomeUncategorizedNDTV ಬಳಿಕ ಮತ್ತೊಂದು ಸುದ್ದಿ ಸಂಸ್ಥೆ ಅದಾನಿ ತೆಕ್ಕೆಗೆ!

NDTV ಬಳಿಕ ಮತ್ತೊಂದು ಸುದ್ದಿ ಸಂಸ್ಥೆ ಅದಾನಿ ತೆಕ್ಕೆಗೆ!

- Advertisement -
- Advertisement -

ಅದಾನಿ ಸಮೂಹದ ಅಂಗಸಂಸ್ಥೆಯಾದ AMG ಮೀಡಿಯಾ ನೆಟ್‌ವರ್ಕ್ಸ್ ಲಿಮಿಟೆಡ್ (AMNL) ಇಂಡೋ-ಏಷ್ಯನ್ ನ್ಯೂಸ್ ಸರ್ವಿಸ್  IANS ಸುದ್ದಿ ಸಂಸ್ಥೆಯಲ್ಲಿ 50.5% ಷೇರನ್ನು ಪಡೆದುಕೊಂಡಿದ್ದು,  IANS ಅದಾನಿ ತೆಕ್ಕೆಗೆ ಸೇರಿದೆ.

ಹಿಂದಿ ಮತ್ತು ಇಂಗ್ಲೀಷ್‌ ಸುದ್ದಿ ಸಂಸ್ಥೆ IANS ಈಗ NDTVಯಂತೆಯೇ AMNLನ ಅಂಗಸಂಸ್ಥೆಯಾಗಿ ಕಾರ್ಯನಿರ್ವಹಿಸಲಿದೆ. ಅದಾನಿ ಸಮೂಹದ AMN,L IANSನೊಂದಿಗೆ ಷೇರು ಒಪ್ಪಂದಕ್ಕೆ ಸಹಿ ಹಾಕಿದೆ ಮತ್ತು ಕಂಪನಿಯಲ್ಲಿ ಮತದಾನದ ಹಕ್ಕುಗಳನ್ನು ಕೂಡ ಪಡೆದುಕೊಂಡಿದೆ. ಎಲ್ಲಾ ಕಾರ್ಯಾಚರಣೆ ಮತ್ತು IANS ನ ನಿರ್ವಹಣಾ ನಿಯಂತ್ರಣದ ಅಧಿಕಾರವು AMNLಗೆ ಇರುತ್ತದೆ ಮತ್ತು ಅದಾನಿ ಸಮೂಹ ಸಂಸ್ಥೆಗೆ IANS  ನಿರ್ದೇಶಕರನ್ನು ನೇಮಿಸುವ ಅಧಿಕಾರ ಕೂಡ ಹೊಂದಿರುತ್ತದೆ.

IANS ಜೊತೆ ಷೇರು ಒಪ್ಪಂದಕ್ಕೆ AMNL ಸಹಿ ಹಾಕಿದೆ ಎಂದು IANSನ ಷೇರುದಾರರಲ್ಲಿ ಓರ್ವರಾದ ಸಂದೀಪ್ ಬಾಮ್‌ಜೈ ಅವರು ತಿಳಿಸಿದ್ದು, IANS ನ ನಿರ್ವಹಣಾ ನಿಯಂತ್ರಣದ ಅಧಿಕಾರವು AMNLಗೆ ಇದೆ ಎಂದು ಹೇಳಿದ್ದಾರೆ.

ಎನ್‌ಡಿಟಿವಿಯನ್ನು ಗೌತಮ್ ಅದಾನಿ ಸಮೂಹವು ಸ್ವಾಧೀನಪಡಿಸಿಕೊಂಡ ಸುಮಾರು ಒಂದು ವರ್ಷದ ನಂತರ ಈ ಬೆಳವಣಿಗೆ ನಡೆದಿದೆ. ಮ್ಯಾನೇಜ್‌ಮೆಂಟ್ ನೀತಿಗಳು, ಹೊಸ ನಿರೂಪಕರು, ಹಳೆಯ ನಿರೂಪಕರ ರಾಜೀನಾಮೆ ಮತ್ತು ವಿಷಯದಲ್ಲಿನ ವ್ಯತ್ಯಾಸದ ವಿಚಾರಕ್ಕೆ ಸಂಬಂಧಿಸಿ ಎನ್‌ಡಿಟಿವಿ ಅದಾನಿ ತೆಕ್ಕೆಗೆ ಸೇರಿದ ಬಳಿಕ ವೀಕ್ಷಕರನ್ನು ಕಳೆದುಕೊಂಡಿದೆ.

ಆರ್‌ಆರ್‌ಪಿಆರ್‌ ಹೋಲ್ಡಿಂಗ್‌ ಪ್ರೈ. ಲಿ. ಎನ್‌ಡಿಟಿವಿಯಲ್ಲಿ ಶೇ. 29.18ರಷ್ಟು ಪಾಲನ್ನು ಹೊಂದಿದೆ. ಈ ಸಂಸ್ಥೆಯನ್ನು ವಿಶ್ವಪ್ರಧಾನ್‌ ಕಮರ್ಶಿಯಲ್‌ ಪ್ರೈವೇಟ್‌ ಲಿ.ನ್ನು ಸ್ವಾಧೀನಪಡಿಸಿಕೊಳ್ಳುವ ಮೂಲಕ ಅದಾನಿ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದರು.

NDTV ಭಾರತದಲ್ಲಿನ ವೀಕ್ಷಣೆಗಳು ಡಿಸೆಂಬರ್‌ನಲ್ಲಿ 45 ಮಿಲಿಯನ್‌ಗೆ ಇಳಿದಿದೆ ಎಂದು ನ್ಯೂಸ್‌ಲಾಂಡ್ರಿ ವರದಿ ಮಾಡಿದೆ. ಅಧಾನಿ ಸಮೂಹ ಅದನ್ನು ಸ್ವೀಕರಿಸುವ ಮೊದಲು  98 ಮಿಲಿಯನ್ ಇತ್ತು. ಇದು ಎನ್‌ಡಿಟಿವಿ ವೀಕ್ಷಕರಲ್ಲಿ 54 ಪ್ರತಿಶತದಷ್ಟು ಕಡಿತವಾಗಿರವುದನ್ನು ಸೂಚಿಸುತ್ತದೆ.

ಅದಾನಿ ಗುಂಪು ಮಾರ್ಚ್ 2022ರಲ್ಲಿ ಹಣಕಾಸು ಮಾಧ್ಯಮ ಸಂಸ್ಥೆ BQ ಕ್ವಿಂಟಿಲಿಯನ್ ಬಿಸಿನೆಸ್ ಮೀಡಿಯಾವನ್ನು ಕೂಡ ಖರೀದಿಸಿತ್ತು. ಅದಾನಿ ಸಮೂಹವು ಕ್ಯುಬಿಎಂಎಲ್‌ನಲ್ಲಿ ಶೇ 49ರಷ್ಟು ಷೇರುಗಳನ್ನು  ಮೊದಲು ಖರೀದಿಸಿತ್ತು. ಬಿಕ್ಯು ಪ್ರೈಮ್‌ಗೆ ಈ ಮೊದಲು ಬ್ಲೂಮ್‌ಬರ್ಗ್‌ ಕ್ವಿಂಟ್‌ ಎನ್ನುವ ಹೆಸರಿತ್ತು. ಅಮೆರಿಕದ ಬ್ಲೂಮ್‌ಬರ್ಗ್‌ ಮೀಡಿಯಾ ಮತ್ತು ರಾಘವ್ ಬಹ್ಲ್‌ ಒಡೆತನದ ಕ್ವಿಂಟಿಲಿಯನ್ ಮೀಡಿಯಾದ ಜಂಟಿ ಸಂಸ್ಥೆ ಇದಾಗಿತ್ತು.

ಇದನ್ನು ಓದಿ: ಇಸ್ರೇಲ್‌ನ ಯುದ್ಧ ದಾಹಕ್ಕೆ ತಮ್ಮದೇ ದೇಶದ ಮೂವರು ನಾಗರಿಕರು ಬಲಿ; ಪ್ರಮಾದವಾಯ್ತೆಂದ ನೆತನ್ಯಾಹು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...