HomeUncategorizedNDTV ಬಳಿಕ ಮತ್ತೊಂದು ಸುದ್ದಿ ಸಂಸ್ಥೆ ಅದಾನಿ ತೆಕ್ಕೆಗೆ!

NDTV ಬಳಿಕ ಮತ್ತೊಂದು ಸುದ್ದಿ ಸಂಸ್ಥೆ ಅದಾನಿ ತೆಕ್ಕೆಗೆ!

- Advertisement -
- Advertisement -

ಅದಾನಿ ಸಮೂಹದ ಅಂಗಸಂಸ್ಥೆಯಾದ AMG ಮೀಡಿಯಾ ನೆಟ್‌ವರ್ಕ್ಸ್ ಲಿಮಿಟೆಡ್ (AMNL) ಇಂಡೋ-ಏಷ್ಯನ್ ನ್ಯೂಸ್ ಸರ್ವಿಸ್  IANS ಸುದ್ದಿ ಸಂಸ್ಥೆಯಲ್ಲಿ 50.5% ಷೇರನ್ನು ಪಡೆದುಕೊಂಡಿದ್ದು,  IANS ಅದಾನಿ ತೆಕ್ಕೆಗೆ ಸೇರಿದೆ.

ಹಿಂದಿ ಮತ್ತು ಇಂಗ್ಲೀಷ್‌ ಸುದ್ದಿ ಸಂಸ್ಥೆ IANS ಈಗ NDTVಯಂತೆಯೇ AMNLನ ಅಂಗಸಂಸ್ಥೆಯಾಗಿ ಕಾರ್ಯನಿರ್ವಹಿಸಲಿದೆ. ಅದಾನಿ ಸಮೂಹದ AMN,L IANSನೊಂದಿಗೆ ಷೇರು ಒಪ್ಪಂದಕ್ಕೆ ಸಹಿ ಹಾಕಿದೆ ಮತ್ತು ಕಂಪನಿಯಲ್ಲಿ ಮತದಾನದ ಹಕ್ಕುಗಳನ್ನು ಕೂಡ ಪಡೆದುಕೊಂಡಿದೆ. ಎಲ್ಲಾ ಕಾರ್ಯಾಚರಣೆ ಮತ್ತು IANS ನ ನಿರ್ವಹಣಾ ನಿಯಂತ್ರಣದ ಅಧಿಕಾರವು AMNLಗೆ ಇರುತ್ತದೆ ಮತ್ತು ಅದಾನಿ ಸಮೂಹ ಸಂಸ್ಥೆಗೆ IANS  ನಿರ್ದೇಶಕರನ್ನು ನೇಮಿಸುವ ಅಧಿಕಾರ ಕೂಡ ಹೊಂದಿರುತ್ತದೆ.

IANS ಜೊತೆ ಷೇರು ಒಪ್ಪಂದಕ್ಕೆ AMNL ಸಹಿ ಹಾಕಿದೆ ಎಂದು IANSನ ಷೇರುದಾರರಲ್ಲಿ ಓರ್ವರಾದ ಸಂದೀಪ್ ಬಾಮ್‌ಜೈ ಅವರು ತಿಳಿಸಿದ್ದು, IANS ನ ನಿರ್ವಹಣಾ ನಿಯಂತ್ರಣದ ಅಧಿಕಾರವು AMNLಗೆ ಇದೆ ಎಂದು ಹೇಳಿದ್ದಾರೆ.

ಎನ್‌ಡಿಟಿವಿಯನ್ನು ಗೌತಮ್ ಅದಾನಿ ಸಮೂಹವು ಸ್ವಾಧೀನಪಡಿಸಿಕೊಂಡ ಸುಮಾರು ಒಂದು ವರ್ಷದ ನಂತರ ಈ ಬೆಳವಣಿಗೆ ನಡೆದಿದೆ. ಮ್ಯಾನೇಜ್‌ಮೆಂಟ್ ನೀತಿಗಳು, ಹೊಸ ನಿರೂಪಕರು, ಹಳೆಯ ನಿರೂಪಕರ ರಾಜೀನಾಮೆ ಮತ್ತು ವಿಷಯದಲ್ಲಿನ ವ್ಯತ್ಯಾಸದ ವಿಚಾರಕ್ಕೆ ಸಂಬಂಧಿಸಿ ಎನ್‌ಡಿಟಿವಿ ಅದಾನಿ ತೆಕ್ಕೆಗೆ ಸೇರಿದ ಬಳಿಕ ವೀಕ್ಷಕರನ್ನು ಕಳೆದುಕೊಂಡಿದೆ.

ಆರ್‌ಆರ್‌ಪಿಆರ್‌ ಹೋಲ್ಡಿಂಗ್‌ ಪ್ರೈ. ಲಿ. ಎನ್‌ಡಿಟಿವಿಯಲ್ಲಿ ಶೇ. 29.18ರಷ್ಟು ಪಾಲನ್ನು ಹೊಂದಿದೆ. ಈ ಸಂಸ್ಥೆಯನ್ನು ವಿಶ್ವಪ್ರಧಾನ್‌ ಕಮರ್ಶಿಯಲ್‌ ಪ್ರೈವೇಟ್‌ ಲಿ.ನ್ನು ಸ್ವಾಧೀನಪಡಿಸಿಕೊಳ್ಳುವ ಮೂಲಕ ಅದಾನಿ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದರು.

NDTV ಭಾರತದಲ್ಲಿನ ವೀಕ್ಷಣೆಗಳು ಡಿಸೆಂಬರ್‌ನಲ್ಲಿ 45 ಮಿಲಿಯನ್‌ಗೆ ಇಳಿದಿದೆ ಎಂದು ನ್ಯೂಸ್‌ಲಾಂಡ್ರಿ ವರದಿ ಮಾಡಿದೆ. ಅಧಾನಿ ಸಮೂಹ ಅದನ್ನು ಸ್ವೀಕರಿಸುವ ಮೊದಲು  98 ಮಿಲಿಯನ್ ಇತ್ತು. ಇದು ಎನ್‌ಡಿಟಿವಿ ವೀಕ್ಷಕರಲ್ಲಿ 54 ಪ್ರತಿಶತದಷ್ಟು ಕಡಿತವಾಗಿರವುದನ್ನು ಸೂಚಿಸುತ್ತದೆ.

ಅದಾನಿ ಗುಂಪು ಮಾರ್ಚ್ 2022ರಲ್ಲಿ ಹಣಕಾಸು ಮಾಧ್ಯಮ ಸಂಸ್ಥೆ BQ ಕ್ವಿಂಟಿಲಿಯನ್ ಬಿಸಿನೆಸ್ ಮೀಡಿಯಾವನ್ನು ಕೂಡ ಖರೀದಿಸಿತ್ತು. ಅದಾನಿ ಸಮೂಹವು ಕ್ಯುಬಿಎಂಎಲ್‌ನಲ್ಲಿ ಶೇ 49ರಷ್ಟು ಷೇರುಗಳನ್ನು  ಮೊದಲು ಖರೀದಿಸಿತ್ತು. ಬಿಕ್ಯು ಪ್ರೈಮ್‌ಗೆ ಈ ಮೊದಲು ಬ್ಲೂಮ್‌ಬರ್ಗ್‌ ಕ್ವಿಂಟ್‌ ಎನ್ನುವ ಹೆಸರಿತ್ತು. ಅಮೆರಿಕದ ಬ್ಲೂಮ್‌ಬರ್ಗ್‌ ಮೀಡಿಯಾ ಮತ್ತು ರಾಘವ್ ಬಹ್ಲ್‌ ಒಡೆತನದ ಕ್ವಿಂಟಿಲಿಯನ್ ಮೀಡಿಯಾದ ಜಂಟಿ ಸಂಸ್ಥೆ ಇದಾಗಿತ್ತು.

ಇದನ್ನು ಓದಿ: ಇಸ್ರೇಲ್‌ನ ಯುದ್ಧ ದಾಹಕ್ಕೆ ತಮ್ಮದೇ ದೇಶದ ಮೂವರು ನಾಗರಿಕರು ಬಲಿ; ಪ್ರಮಾದವಾಯ್ತೆಂದ ನೆತನ್ಯಾಹು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...