Homeಮುಖಪುಟಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಅಣು ಶಕ್ತಿಯ ಖಾಸಗೀಕರಣ ಮಸೂದೆ ಅಂಗೀಕಾರ ಬೆನ್ನಲ್ಲೇ ಬೆಳವಣಿಗೆ

- Advertisement -
- Advertisement -

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿದೆ.

ಈ ಬೆನ್ನಲ್ಲೇ ಅದಾನಿ ಗ್ರೂಪ್ ವಾಣಿಜ್ಯ ಪರಮಾಣು ವಿದ್ಯುತ್ ಯೋಜನೆಯ ಕುರಿತು ಉತ್ತರ ಪ್ರದೇಶ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಅದಾನಿ ಗ್ರೂಪ್ ಒಂದು ಹೊಸ ನ್ಯೂಕ್ಲಿಯರ್ ವಿದ್ಯುತ್ ಯೋಜನೆಯ ಬಗ್ಗೆ ಆಲೋಚಿಸುತ್ತಿದೆ. ಒಟ್ಟು 8 ಸಣ್ಣ ಆಕಾರದ ನ್ಯೂಕ್ಲಿಯರ್ ರಿಯಾಕ್ಟರ್‌ಗಳನ್ನು (ಎಸ್‌ಎಂಆರ್‌) ಸ್ಥಾಪಿಸುವ ಯೋಜನೆ ಇದಾಗಿದೆ. ಪ್ರತಿಯೊಂದು ರಿಯಾಕ್ಟರ್‌ನ ಸಾಮರ್ಥ್ಯ 300 ಮೆಗಾವ್ಯಾಟ್ ಆಗಿರುತ್ತದೆ.ಒಟ್ಟು 8 ರಿಯಾಕ್ಟರ್‌ಗಳಿಂದ ಅದಾನಿ ಗ್ರೂಪ್‌ಗೆ ಸುಮಾರು 1,600 ಮೆಗಾವ್ಯಾಟ್ ನ್ಯೂಕ್ಲಿಯರ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಸಿಗಲಿದೆ.ಈ ಮಾಹಿತಿಯನ್ನು ತಿಳಿಸಿದವರು ತಮ್ಮ ಹೆಸರನ್ನು ಬಹಿರಂಗಪಡಿಸದಂತೆ ಕೇಳಿಕೊಂಡಿದ್ದಾರೆ. ಏಕೆಂದರೆ ಈ ಯೋಜನೆಯ ಬಗ್ಗೆ ಇನ್ನೂ ಖಾಸಗಿ ಚರ್ಚೆಗಳು ನಡೆಯುತ್ತಿವೆ ಎಂದು ಸುದ್ದಿ ಸಂಸ್ಥೆ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಬ್ಲೂಮ್‌ಬರ್ಗ್ ಪ್ರಕಾರ, ರಿಯಾಕ್ಟರ್‌ಗಳಿಗೆ ಸ್ಥಿರವಾದ ನೀರಿನ ಪೂರೈಕೆಯನ್ನು ಖಚಿತಪಡಿಸಿಜಕೊಳ್ಳುವುದು ಅಗತ್ಯವಾಗಿದೆ. ಹಾಗಾಗಿ, ಯೋಜನೆಗೆ ಉತ್ತರ ಪ್ರದೇಶ ಸರ್ಕಾರ ಇನ್ನೂ ಸೂಕ್ತವಾದ ನದಿ ತೀರದ ಸ್ಥಳವನ್ನು ಗುರುತಿಸಿಲ್ಲ.

ದತ್ತಾಂಶ ಕೇಂದ್ರ ವಿಸ್ತರಣೆ ಮತ್ತು ಕೃತಕ ಬುದ್ಧಿಮತ್ತೆ-ಚಾಲಿತ ವ್ಯವಸ್ಥೆಗಳ ಹೆಚ್ಚುತ್ತಿರುವ ಬಳಕೆಯಿಂದಾಗಿ ಭಾರತದ ವಿದ್ಯುತ್ ಬೇಡಿಕೆ ತೀವ್ರವಾಗಿ ಏರುತ್ತಿರುವ ಸಮಯದಲ್ಲಿ, ತನ್ನ ನವೀಕರಿಸಬಹುದಾದ ಮತ್ತು ಕಡಿಮೆ-ಇಂಗಾಲದ ಇಂಧನ ಬಂಡವಾಳವನ್ನು ವಿಸ್ತರಿಸುವ ಅದಾನಿಯ ಪ್ರಯತ್ನಗಳ ಒಂದು ಭಾಗವಾಗಿ ಈ ಯೋಜನೆಗೆ ಮುಂದಾಗಿದೆ ಎಂದು ವರದಿ ಹೇಳಿದೆ.

ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಅಂಗೀಕಾರಗೊಂಡ ಬೆನ್ನಲ್ಲೇ ಅದಾನಿ ಗ್ರೂಪ್ ಅಣು ವಿದ್ಯುತ್ ಯೋಜನೆ ಕುರಿತು ಚರ್ಚೆಗೆ ಮುಂದಾಗಿರುವುದು ಗಮನಾರ್ಹವಾಗಿದೆ.

ಖಾಸಗಿ ಗ್ರೂಪ್ ಒಂದು ಅಣು ವಿದ್ಯುತ್ ಯೋಜನೆಗೆ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ ಬೆನ್ನಲ್ಲೇ ಮಸೂದೆ ಮಂಡಿಸಲಾಗಿದೆ ಎಂದು ಸಂಸತ್ತಿನಲ್ಲಿ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಹೇಳಿದ್ದರು.

ಫೆಬ್ರವರಿಯ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ಪರಮಾಣು ಇಂಧನ ಮಿಷನ್ ಅಡಿಯಲ್ಲಿ, ಕೇಂದ್ರ ಸರ್ಕಾರವು ಸಣ್ಣ ಮಾಡ್ಯುಲರ್ ರಿಯಾಕ್ಟರ್‌ಗಳ ಸಂಶೋಧನೆ ಮತ್ತು ಅಭಿವೃದ್ಧಿಗೆ 200 ಬಿಲಿಯನ್ ರೂ.ಗಳನ್ನು ಖರ್ಚು ಮಾಡುವುದಾಗಿ ಹೇಳಿದೆ.

ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಮಾದರಿ

ಅದಾನಿ ಗ್ರೂಪ್ ಮತ್ತು ಉತ್ತರ ಪ್ರದೇಶ ಸರ್ಕಾರದ ನಡುವಿನ ಚರ್ಚೆಗಳು ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಮಾದರಿಯ ಸುತ್ತ ಕೇಂದ್ರೀಕೃತವಾಗಿವೆ. ಪ್ರಸ್ತಾವಿತ ಯೋಜನೆಯ ಪ್ರಕಾರ, ಸರ್ಕಾರಿ ಸ್ವಾಮ್ಯದ ಭಾರತೀಯ ಪರಮಾಣು ವಿದ್ಯುತ್ ನಿಗಮ ಲಿಮಿಟೆಡ್ (ಎನ್‌ಪಿಸಿಐಎಲ್) ಅದಾನಿ ಗ್ರೂಪ್ ಪರವಾಗಿ ಸ್ಥಾವರವನ್ನು ನಿರ್ವಹಿಸುತ್ತದೆ ಎಂದು ಮೂಲಗಳನ್ನು ಉಲ್ಲೇಖಿಸಿ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಬ್ಲೂಮ್‌ಬರ್ಗ್ ಪ್ರಕಾರ, ಅದಾನಿ ಸ್ಥಾಪಿಸಲು ಯೋಜಿಸಿರುವ 200 ಮೆಗಾವ್ಯಾಟ್ ಸಾಮರ್ಥ್ಯದ ಎಸ್‌ಎಂಆರ್‌ಗಳ ವಿನ್ಯಾಸ ಮತ್ತು ಅಭಿವೃದ್ಧಿಯ ಕುರಿತು ಸರ್ಕಾರಿ ಸ್ವಾಮ್ಯದ ಭಾಭಾ ಪರಮಾಣು ಸಂಶೋಧನಾ ಕೇಂದ್ರ (ಬಿಎಆರ್‌ಸಿ) ಕೆಲಸ ಮಾಡುತ್ತಿದೆ.

ಸರ್ಕಾರದ ಅನುಮೋದನೆಗಳನ್ನು ಪಡೆದ ನಂತರ ಈ ಯೋಜನೆ ಪೂರ್ಣಗೊಳ್ಳಲು ಐದರಿಂದ ಆರು ವರ್ಷಗಳು ಬೇಕಾಗುತ್ತದೆ ಎಂದು ನಿರೀಕ್ಷಿಸಲಾಗಿದೆ. ಅದಾನಿ ಪರಮಾಣು ವಲಯಕ್ಕೆ ಮೊದಲ ಬಾರಿಗೆ ಪ್ರವೇಶಿಸುವುದರಿಂದ ಸಮಯ ಮಿತಿಯನ್ನು ಭಾಗಶಃ ವಿಸ್ತರಿಸಲಾಗಿದೆ.

ಇತರ ಕಂಪನಿಗಳಿಂದ ಪರಮಾಣು ಕ್ಷೇತ್ರದ ಮೇಲೆ ಕಣ್ಣು

ಟಾಟಾ ಗ್ರೂಪ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮತ್ತು ಜೆಎಸ್‌ಡಬ್ಲ್ಯೂ ಗ್ರೂಪ್ ಸೇರಿದಂತೆ ಇತರ ಭಾರತೀಯ ಉದ್ಯಮ ಸಮೂಹಗಳು ಕೂಡ ಪರಮಾಣು ವಿದ್ಯುತ್ ವಲಯಕ್ಕೆ ಪ್ರವೇಶವನ್ನು ಬಯಸುತ್ತಿವೆ ಎಂದು ಪಿಟಿಐ ಈ ಹಿಂದೆ ವರದಿ ಮಾಡಿತ್ತು.

ಭಾರತವು ಪ್ರಸ್ತುತ ಏಳು ಸ್ಥಳಗಳಲ್ಲಿ ಸುಮಾರು ಎರಡು ಡಜನ್ ಪರಮಾಣು ರಿಯಾಕ್ಟರ್‌ಗಳನ್ನು ನಿರ್ವಹಿಸುತ್ತಿದ್ದು, ಇದು ದೇಶದ ವಿದ್ಯುತ್ ಉತ್ಪಾದನೆಗೆ ಸರಿಸುಮಾರು ಶೇಕಡ 3ರಷ್ಟು ಕೊಡುಗೆ ನೀಡುತ್ತಿದೆ. ಈ ರಿಯಾಕ್ಟರ್‌ಗಳು ಸುಮಾರು 8,780 ಮೆಗಾವ್ಯಾಟ್ ಸ್ಥಾಪಿತ ಸಾಮರ್ಥ್ಯವನ್ನು ಹೊಂದಿದ್ದು, ಅನುಷ್ಠಾನದ ವಿವಿಧ ಹಂತಗಳಲ್ಲಿರುವ ಯೋಜನೆಗಳ ಮೂಲಕ ಸಾಮರ್ಥ್ಯವನ್ನು 13,600 ಮೆಗಾವ್ಯಾಟ್‌ಗೆ ಹೆಚ್ಚಿಸುವ ಯೋಜನೆಗಳು ನಡೆಯುತ್ತಿವೆ. 2047 ರ ವೇಳೆಗೆ 100 ಗಿಗಾವ್ಯಾಟ್ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು ಸಾಧಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಪರಮಾಣು ಕ್ಷೇತ್ರಕ್ಕೆ ಅದಾನಿ ಪ್ರವೇಶದ ಕುರಿತು ಉತ್ತರ ಪ್ರದೇಶ ಸರ್ಕಾರ, ಅದಾನಿ ಗ್ರೂಪ್ ಮತ್ತು ಪರಮಾಣು ಇಂಧನ ಇಲಾಖೆಯ ಪ್ರತಿನಿಧಿಗಳು, ಯಾರೂ ಕೂಡ ತಕ್ಷಣಕ್ಕೆ ಪ್ರತಿಕ್ರಿಯಿಸಿಲ್ಲ ಎಂದು ಬ್ಲೂಮ್‌ಬರ್ಗ್‌ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...