Homeಮುಖಪುಟಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಅಣು ಶಕ್ತಿಯ ಖಾಸಗೀಕರಣ ಮಸೂದೆ ಅಂಗೀಕಾರ ಬೆನ್ನಲ್ಲೇ ಬೆಳವಣಿಗೆ

- Advertisement -
- Advertisement -

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿದೆ.

ಈ ಬೆನ್ನಲ್ಲೇ ಅದಾನಿ ಗ್ರೂಪ್ ವಾಣಿಜ್ಯ ಪರಮಾಣು ವಿದ್ಯುತ್ ಯೋಜನೆಯ ಕುರಿತು ಉತ್ತರ ಪ್ರದೇಶ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಅದಾನಿ ಗ್ರೂಪ್ ಒಂದು ಹೊಸ ನ್ಯೂಕ್ಲಿಯರ್ ವಿದ್ಯುತ್ ಯೋಜನೆಯ ಬಗ್ಗೆ ಆಲೋಚಿಸುತ್ತಿದೆ. ಒಟ್ಟು 8 ಸಣ್ಣ ಆಕಾರದ ನ್ಯೂಕ್ಲಿಯರ್ ರಿಯಾಕ್ಟರ್‌ಗಳನ್ನು (ಎಸ್‌ಎಂಆರ್‌) ಸ್ಥಾಪಿಸುವ ಯೋಜನೆ ಇದಾಗಿದೆ. ಪ್ರತಿಯೊಂದು ರಿಯಾಕ್ಟರ್‌ನ ಸಾಮರ್ಥ್ಯ 300 ಮೆಗಾವ್ಯಾಟ್ ಆಗಿರುತ್ತದೆ.ಒಟ್ಟು 8 ರಿಯಾಕ್ಟರ್‌ಗಳಿಂದ ಅದಾನಿ ಗ್ರೂಪ್‌ಗೆ ಸುಮಾರು 1,600 ಮೆಗಾವ್ಯಾಟ್ ನ್ಯೂಕ್ಲಿಯರ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಸಿಗಲಿದೆ.ಈ ಮಾಹಿತಿಯನ್ನು ತಿಳಿಸಿದವರು ತಮ್ಮ ಹೆಸರನ್ನು ಬಹಿರಂಗಪಡಿಸದಂತೆ ಕೇಳಿಕೊಂಡಿದ್ದಾರೆ. ಏಕೆಂದರೆ ಈ ಯೋಜನೆಯ ಬಗ್ಗೆ ಇನ್ನೂ ಖಾಸಗಿ ಚರ್ಚೆಗಳು ನಡೆಯುತ್ತಿವೆ ಎಂದು ಸುದ್ದಿ ಸಂಸ್ಥೆ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಬ್ಲೂಮ್‌ಬರ್ಗ್ ಪ್ರಕಾರ, ರಿಯಾಕ್ಟರ್‌ಗಳಿಗೆ ಸ್ಥಿರವಾದ ನೀರಿನ ಪೂರೈಕೆಯನ್ನು ಖಚಿತಪಡಿಸಿಜಕೊಳ್ಳುವುದು ಅಗತ್ಯವಾಗಿದೆ. ಹಾಗಾಗಿ, ಯೋಜನೆಗೆ ಉತ್ತರ ಪ್ರದೇಶ ಸರ್ಕಾರ ಇನ್ನೂ ಸೂಕ್ತವಾದ ನದಿ ತೀರದ ಸ್ಥಳವನ್ನು ಗುರುತಿಸಿಲ್ಲ.

ದತ್ತಾಂಶ ಕೇಂದ್ರ ವಿಸ್ತರಣೆ ಮತ್ತು ಕೃತಕ ಬುದ್ಧಿಮತ್ತೆ-ಚಾಲಿತ ವ್ಯವಸ್ಥೆಗಳ ಹೆಚ್ಚುತ್ತಿರುವ ಬಳಕೆಯಿಂದಾಗಿ ಭಾರತದ ವಿದ್ಯುತ್ ಬೇಡಿಕೆ ತೀವ್ರವಾಗಿ ಏರುತ್ತಿರುವ ಸಮಯದಲ್ಲಿ, ತನ್ನ ನವೀಕರಿಸಬಹುದಾದ ಮತ್ತು ಕಡಿಮೆ-ಇಂಗಾಲದ ಇಂಧನ ಬಂಡವಾಳವನ್ನು ವಿಸ್ತರಿಸುವ ಅದಾನಿಯ ಪ್ರಯತ್ನಗಳ ಒಂದು ಭಾಗವಾಗಿ ಈ ಯೋಜನೆಗೆ ಮುಂದಾಗಿದೆ ಎಂದು ವರದಿ ಹೇಳಿದೆ.

ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಅಂಗೀಕಾರಗೊಂಡ ಬೆನ್ನಲ್ಲೇ ಅದಾನಿ ಗ್ರೂಪ್ ಅಣು ವಿದ್ಯುತ್ ಯೋಜನೆ ಕುರಿತು ಚರ್ಚೆಗೆ ಮುಂದಾಗಿರುವುದು ಗಮನಾರ್ಹವಾಗಿದೆ.

ಖಾಸಗಿ ಗ್ರೂಪ್ ಒಂದು ಅಣು ವಿದ್ಯುತ್ ಯೋಜನೆಗೆ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ ಬೆನ್ನಲ್ಲೇ ಮಸೂದೆ ಮಂಡಿಸಲಾಗಿದೆ ಎಂದು ಸಂಸತ್ತಿನಲ್ಲಿ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಹೇಳಿದ್ದರು.

ಫೆಬ್ರವರಿಯ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ಪರಮಾಣು ಇಂಧನ ಮಿಷನ್ ಅಡಿಯಲ್ಲಿ, ಕೇಂದ್ರ ಸರ್ಕಾರವು ಸಣ್ಣ ಮಾಡ್ಯುಲರ್ ರಿಯಾಕ್ಟರ್‌ಗಳ ಸಂಶೋಧನೆ ಮತ್ತು ಅಭಿವೃದ್ಧಿಗೆ 200 ಬಿಲಿಯನ್ ರೂ.ಗಳನ್ನು ಖರ್ಚು ಮಾಡುವುದಾಗಿ ಹೇಳಿದೆ.

ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಮಾದರಿ

ಅದಾನಿ ಗ್ರೂಪ್ ಮತ್ತು ಉತ್ತರ ಪ್ರದೇಶ ಸರ್ಕಾರದ ನಡುವಿನ ಚರ್ಚೆಗಳು ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಮಾದರಿಯ ಸುತ್ತ ಕೇಂದ್ರೀಕೃತವಾಗಿವೆ. ಪ್ರಸ್ತಾವಿತ ಯೋಜನೆಯ ಪ್ರಕಾರ, ಸರ್ಕಾರಿ ಸ್ವಾಮ್ಯದ ಭಾರತೀಯ ಪರಮಾಣು ವಿದ್ಯುತ್ ನಿಗಮ ಲಿಮಿಟೆಡ್ (ಎನ್‌ಪಿಸಿಐಎಲ್) ಅದಾನಿ ಗ್ರೂಪ್ ಪರವಾಗಿ ಸ್ಥಾವರವನ್ನು ನಿರ್ವಹಿಸುತ್ತದೆ ಎಂದು ಮೂಲಗಳನ್ನು ಉಲ್ಲೇಖಿಸಿ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಬ್ಲೂಮ್‌ಬರ್ಗ್ ಪ್ರಕಾರ, ಅದಾನಿ ಸ್ಥಾಪಿಸಲು ಯೋಜಿಸಿರುವ 200 ಮೆಗಾವ್ಯಾಟ್ ಸಾಮರ್ಥ್ಯದ ಎಸ್‌ಎಂಆರ್‌ಗಳ ವಿನ್ಯಾಸ ಮತ್ತು ಅಭಿವೃದ್ಧಿಯ ಕುರಿತು ಸರ್ಕಾರಿ ಸ್ವಾಮ್ಯದ ಭಾಭಾ ಪರಮಾಣು ಸಂಶೋಧನಾ ಕೇಂದ್ರ (ಬಿಎಆರ್‌ಸಿ) ಕೆಲಸ ಮಾಡುತ್ತಿದೆ.

ಸರ್ಕಾರದ ಅನುಮೋದನೆಗಳನ್ನು ಪಡೆದ ನಂತರ ಈ ಯೋಜನೆ ಪೂರ್ಣಗೊಳ್ಳಲು ಐದರಿಂದ ಆರು ವರ್ಷಗಳು ಬೇಕಾಗುತ್ತದೆ ಎಂದು ನಿರೀಕ್ಷಿಸಲಾಗಿದೆ. ಅದಾನಿ ಪರಮಾಣು ವಲಯಕ್ಕೆ ಮೊದಲ ಬಾರಿಗೆ ಪ್ರವೇಶಿಸುವುದರಿಂದ ಸಮಯ ಮಿತಿಯನ್ನು ಭಾಗಶಃ ವಿಸ್ತರಿಸಲಾಗಿದೆ.

ಇತರ ಕಂಪನಿಗಳಿಂದ ಪರಮಾಣು ಕ್ಷೇತ್ರದ ಮೇಲೆ ಕಣ್ಣು

ಟಾಟಾ ಗ್ರೂಪ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮತ್ತು ಜೆಎಸ್‌ಡಬ್ಲ್ಯೂ ಗ್ರೂಪ್ ಸೇರಿದಂತೆ ಇತರ ಭಾರತೀಯ ಉದ್ಯಮ ಸಮೂಹಗಳು ಕೂಡ ಪರಮಾಣು ವಿದ್ಯುತ್ ವಲಯಕ್ಕೆ ಪ್ರವೇಶವನ್ನು ಬಯಸುತ್ತಿವೆ ಎಂದು ಪಿಟಿಐ ಈ ಹಿಂದೆ ವರದಿ ಮಾಡಿತ್ತು.

ಭಾರತವು ಪ್ರಸ್ತುತ ಏಳು ಸ್ಥಳಗಳಲ್ಲಿ ಸುಮಾರು ಎರಡು ಡಜನ್ ಪರಮಾಣು ರಿಯಾಕ್ಟರ್‌ಗಳನ್ನು ನಿರ್ವಹಿಸುತ್ತಿದ್ದು, ಇದು ದೇಶದ ವಿದ್ಯುತ್ ಉತ್ಪಾದನೆಗೆ ಸರಿಸುಮಾರು ಶೇಕಡ 3ರಷ್ಟು ಕೊಡುಗೆ ನೀಡುತ್ತಿದೆ. ಈ ರಿಯಾಕ್ಟರ್‌ಗಳು ಸುಮಾರು 8,780 ಮೆಗಾವ್ಯಾಟ್ ಸ್ಥಾಪಿತ ಸಾಮರ್ಥ್ಯವನ್ನು ಹೊಂದಿದ್ದು, ಅನುಷ್ಠಾನದ ವಿವಿಧ ಹಂತಗಳಲ್ಲಿರುವ ಯೋಜನೆಗಳ ಮೂಲಕ ಸಾಮರ್ಥ್ಯವನ್ನು 13,600 ಮೆಗಾವ್ಯಾಟ್‌ಗೆ ಹೆಚ್ಚಿಸುವ ಯೋಜನೆಗಳು ನಡೆಯುತ್ತಿವೆ. 2047 ರ ವೇಳೆಗೆ 100 ಗಿಗಾವ್ಯಾಟ್ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು ಸಾಧಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಪರಮಾಣು ಕ್ಷೇತ್ರಕ್ಕೆ ಅದಾನಿ ಪ್ರವೇಶದ ಕುರಿತು ಉತ್ತರ ಪ್ರದೇಶ ಸರ್ಕಾರ, ಅದಾನಿ ಗ್ರೂಪ್ ಮತ್ತು ಪರಮಾಣು ಇಂಧನ ಇಲಾಖೆಯ ಪ್ರತಿನಿಧಿಗಳು, ಯಾರೂ ಕೂಡ ತಕ್ಷಣಕ್ಕೆ ಪ್ರತಿಕ್ರಿಯಿಸಿಲ್ಲ ಎಂದು ಬ್ಲೂಮ್‌ಬರ್ಗ್‌ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಭಾರತೀಯ ವೀಸಾ ಅರ್ಜಿಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ

ಢಾಕಾ: ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ನಂತರ ಹೆಚ್ಚಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಎರಡನೇ ಅತಿದೊಡ್ಡ ನಗರ ಚಿತ್ತಗಾಂಗ್‌ನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರದಲ್ಲಿ ವೀಸಾ...

ತೀವ್ರ ವಿರೋಧಗಳ ನಡುವೆ ಗಣರಾಜ್ಯೋತ್ಸವ ಆಚರಣೆಯಲ್ಲಿ ‘ವಂದೇ ಮಾತರಂ’ ಹಾಡಲು ನಿರ್ಧರಿಸಿದ ಕೇಂದ್ರ ಸರ್ಕಾರ 

ಗಣರಾಜ್ಯೋತ್ಸವದ ಸಂದರ್ಭದಲ್ಲಿ 'ವಂದೇ ಮಾತರಂ' ಗೀತೆಯನ್ನು ಪ್ರಧಾನವಾಗಿ ಹಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಯುರೋಪಿಯನ್ ಒಕ್ಕೂಟದ ನಾಯಕರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಆಂಟೋನಿಯೊ ಕೋಸ್ಟಾ ಮುಂದಿನ ತಿಂಗಳು ಭಾರತಕ್ಕೆ ಆಗಮಿಸುವ...

ಅನಧಿಕೃತ ಬುದ್ಧಿಮಾಂದ್ಯ ಶಾಲೆಯಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಅಮಾನವೀಯ ಹಲ್ಲೆ: ದಂಪತಿಯನ್ನು ವಶಕ್ಕೆ ಪಡೆದ ಪೊಲೀಸರು

ಬಾಗಲಕೋಟೆ: ಬಾಗಲಕೋಟೆಯ ಅನಧಿಕೃತ ದಿವ್ಯಜ್ಯೋತಿ ಬುದ್ಧಿಮಾಂದ್ಯ ಶಾಲೆಯಲ್ಲಿ ಶಿಕ್ಷಕ ದಂಪತಿ ಬುದ್ಧಿಮಾಂದ್ಯನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ವೀಡಿಯೋ ವೈರಲ್ ಆದ ಬೆನ್ನಲ್ಲೇ ಘಟನೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮುಧೋಳ ತಾಲೂಕಿನ ಮಂಟೂರು ಗ್ರಾಮದ 16...

ಜೆಫ್ರಿ ಎಪ್‌ಸ್ಟೀನ್ ಫೈಲ್ಸ್: ನ್ಯಾಯಾಂಗ ಇಲಾಖೆಯ ವೆಬ್ ಪುಟದಿಂದ ಟ್ರಂಪ್ ಫೋಟೋ ಸೇರಿದಂತೆ 16 ದಾಖಲೆಗಳು ಕಣ್ಮರೆ 

ನ್ಯೂಯಾರ್ಕ್: ಜೆಫ್ರಿ ಎಪ್‌ಸ್ಟೀನ್ ಗೆ ಸಂಬಂಧಿಸಿದ ದಾಖಲೆಗಳಿರುವ ಅಮೆರಿಕದ ನ್ಯಾಯ ಇಲಾಖೆಯ (Justice Department) ಸಾರ್ವಜನಿಕ ವೆಬ್‌ಪುಟದಿಂದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಸೇರಿದಂತೆ ಕನಿಷ್ಟ 16 ದಾಖಲೆಗಳು ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಅಪ್ರಾಪ್ತ...

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ| ಬಿಎನ್‌ಪಿ ನಾಯಕನ ಮನೆಗೆ ಬೆಂಕಿ : 7 ವರ್ಷದ ಮಗಳು ಸಜೀವ ದಹನ

ವಿದ್ಯಾರ್ಥಿ ನಾಯಕ ಹಾಗೂ ಸ್ವತಂತ್ರ ರಾಜಕಾರಣಿ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ಬಳಿಕ ಬಾಂಗ್ಲಾ ದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆಯ ಮೂರನೇ ದಿನವಾದ ಶನಿವಾರ, ಪ್ರತಿಭಟನಾಕಾರರು ಬಾಂಗ್ಲಾದೇಶ್...

ದಕ್ಷಿಣ ಆಫ್ರಿಕಾದಲ್ಲಿ ಸಾರ್ವಜನಿಕರ ಮೇಲೆ ದಾಳಿಕೋರರು ನಡೆಸಿದ ಗುಂಡಿನ ದಾಳಿಯಲ್ಲಿ 9 ಜನರ ಸಾವು 

ಜೋಹಾನ್ಸ್‌ಬರ್ಗ್‌ನ ಹೊರಗಿನ ಬಾರ್‌ನಲ್ಲಿ ಭಾನುವಾರ ಮುಂಜಾನೆ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ನಡೆದ ಎರಡನೇ ಗುಂಡಿನ ದಾಳಿ...

ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20)...

ಕೇರಳ ದಲಿತ ಕಾರ್ಮಿಕನ ಗುಂಪುಹತ್ಯೆ: ನನ್ನ ವೃತ್ತಿ ಬದುಕಿನಲ್ಲೇ ಇಂತಹ ಹಿಂಸಾಚಾರ ನೋಡಿಲ್ಲ ಎಂದ ವೈದ್ಯರು

ಕೇರಳದ ಪಾಲಕ್ಕಾಡ್ ಜಿಲ್ಲೆಯ ವಲಯಾರ್‌ನಲ್ಲಿ ಗುಂಪೊಂದು ಹಲ್ಲೆ ನಡೆಸಿ ಹತ್ಯೆ ಮಾಡಿದ ಛತ್ತೀಸ್‌ಗಢದ ದಲಿತ ವಲಸೆ ಕಾರ್ಮಿಕ ರಾಮ್ ನಾರಾಯಣ್ ಅವರ ಮರಣೋತ್ತರ ಪರೀಕ್ಷೆಯು ದಾಳಿಯ ತೀವ್ರ ಕ್ರೌರ್ಯವನ್ನು ಬಹಿರಂಗಪಡಿಸಿದೆ, ದೇಹದ ಒಂದು...

ಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ ಅಂಕ : ಪುತ್ತೂರು ಶಾಸಕ ಅಶೋಕ್ ರೈ ಸೇರಿ 17 ಮಂದಿ ವಿರುದ್ಧ ಪ್ರಕರಣ ದಾಖಲು

ಶಾಸಕರೇ ಮುಂದೆ ನಿಂತು ಕಾನೂನುಬಾಹಿರ ಚಟುವಟಿಕೆ ನಡೆಸಲು ಜನರನ್ನು ಪ್ರೋತ್ಸಾಹಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಬಳಿ ಶನಿವಾರ (ಡಿ.20) ನಡೆದಿದೆ. ಕೇಪು ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯುತ್ತಿದ್ದ...

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...