Homeಮುಖಪುಟಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಅಣು ಶಕ್ತಿಯ ಖಾಸಗೀಕರಣ ಮಸೂದೆ ಅಂಗೀಕಾರ ಬೆನ್ನಲ್ಲೇ ಬೆಳವಣಿಗೆ

- Advertisement -
- Advertisement -

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿದೆ.

ಈ ಬೆನ್ನಲ್ಲೇ ಅದಾನಿ ಗ್ರೂಪ್ ವಾಣಿಜ್ಯ ಪರಮಾಣು ವಿದ್ಯುತ್ ಯೋಜನೆಯ ಕುರಿತು ಉತ್ತರ ಪ್ರದೇಶ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಅದಾನಿ ಗ್ರೂಪ್ ಒಂದು ಹೊಸ ನ್ಯೂಕ್ಲಿಯರ್ ವಿದ್ಯುತ್ ಯೋಜನೆಯ ಬಗ್ಗೆ ಆಲೋಚಿಸುತ್ತಿದೆ. ಒಟ್ಟು 8 ಸಣ್ಣ ಆಕಾರದ ನ್ಯೂಕ್ಲಿಯರ್ ರಿಯಾಕ್ಟರ್‌ಗಳನ್ನು (ಎಸ್‌ಎಂಆರ್‌) ಸ್ಥಾಪಿಸುವ ಯೋಜನೆ ಇದಾಗಿದೆ. ಪ್ರತಿಯೊಂದು ರಿಯಾಕ್ಟರ್‌ನ ಸಾಮರ್ಥ್ಯ 300 ಮೆಗಾವ್ಯಾಟ್ ಆಗಿರುತ್ತದೆ.ಒಟ್ಟು 8 ರಿಯಾಕ್ಟರ್‌ಗಳಿಂದ ಅದಾನಿ ಗ್ರೂಪ್‌ಗೆ ಸುಮಾರು 1,600 ಮೆಗಾವ್ಯಾಟ್ ನ್ಯೂಕ್ಲಿಯರ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಸಿಗಲಿದೆ.ಈ ಮಾಹಿತಿಯನ್ನು ತಿಳಿಸಿದವರು ತಮ್ಮ ಹೆಸರನ್ನು ಬಹಿರಂಗಪಡಿಸದಂತೆ ಕೇಳಿಕೊಂಡಿದ್ದಾರೆ. ಏಕೆಂದರೆ ಈ ಯೋಜನೆಯ ಬಗ್ಗೆ ಇನ್ನೂ ಖಾಸಗಿ ಚರ್ಚೆಗಳು ನಡೆಯುತ್ತಿವೆ ಎಂದು ಸುದ್ದಿ ಸಂಸ್ಥೆ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಬ್ಲೂಮ್‌ಬರ್ಗ್ ಪ್ರಕಾರ, ರಿಯಾಕ್ಟರ್‌ಗಳಿಗೆ ಸ್ಥಿರವಾದ ನೀರಿನ ಪೂರೈಕೆಯನ್ನು ಖಚಿತಪಡಿಸಿಜಕೊಳ್ಳುವುದು ಅಗತ್ಯವಾಗಿದೆ. ಹಾಗಾಗಿ, ಯೋಜನೆಗೆ ಉತ್ತರ ಪ್ರದೇಶ ಸರ್ಕಾರ ಇನ್ನೂ ಸೂಕ್ತವಾದ ನದಿ ತೀರದ ಸ್ಥಳವನ್ನು ಗುರುತಿಸಿಲ್ಲ.

ದತ್ತಾಂಶ ಕೇಂದ್ರ ವಿಸ್ತರಣೆ ಮತ್ತು ಕೃತಕ ಬುದ್ಧಿಮತ್ತೆ-ಚಾಲಿತ ವ್ಯವಸ್ಥೆಗಳ ಹೆಚ್ಚುತ್ತಿರುವ ಬಳಕೆಯಿಂದಾಗಿ ಭಾರತದ ವಿದ್ಯುತ್ ಬೇಡಿಕೆ ತೀವ್ರವಾಗಿ ಏರುತ್ತಿರುವ ಸಮಯದಲ್ಲಿ, ತನ್ನ ನವೀಕರಿಸಬಹುದಾದ ಮತ್ತು ಕಡಿಮೆ-ಇಂಗಾಲದ ಇಂಧನ ಬಂಡವಾಳವನ್ನು ವಿಸ್ತರಿಸುವ ಅದಾನಿಯ ಪ್ರಯತ್ನಗಳ ಒಂದು ಭಾಗವಾಗಿ ಈ ಯೋಜನೆಗೆ ಮುಂದಾಗಿದೆ ಎಂದು ವರದಿ ಹೇಳಿದೆ.

ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಅಂಗೀಕಾರಗೊಂಡ ಬೆನ್ನಲ್ಲೇ ಅದಾನಿ ಗ್ರೂಪ್ ಅಣು ವಿದ್ಯುತ್ ಯೋಜನೆ ಕುರಿತು ಚರ್ಚೆಗೆ ಮುಂದಾಗಿರುವುದು ಗಮನಾರ್ಹವಾಗಿದೆ.

ಖಾಸಗಿ ಗ್ರೂಪ್ ಒಂದು ಅಣು ವಿದ್ಯುತ್ ಯೋಜನೆಗೆ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ ಬೆನ್ನಲ್ಲೇ ಮಸೂದೆ ಮಂಡಿಸಲಾಗಿದೆ ಎಂದು ಸಂಸತ್ತಿನಲ್ಲಿ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಹೇಳಿದ್ದರು.

ಫೆಬ್ರವರಿಯ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ಪರಮಾಣು ಇಂಧನ ಮಿಷನ್ ಅಡಿಯಲ್ಲಿ, ಕೇಂದ್ರ ಸರ್ಕಾರವು ಸಣ್ಣ ಮಾಡ್ಯುಲರ್ ರಿಯಾಕ್ಟರ್‌ಗಳ ಸಂಶೋಧನೆ ಮತ್ತು ಅಭಿವೃದ್ಧಿಗೆ 200 ಬಿಲಿಯನ್ ರೂ.ಗಳನ್ನು ಖರ್ಚು ಮಾಡುವುದಾಗಿ ಹೇಳಿದೆ.

ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಮಾದರಿ

ಅದಾನಿ ಗ್ರೂಪ್ ಮತ್ತು ಉತ್ತರ ಪ್ರದೇಶ ಸರ್ಕಾರದ ನಡುವಿನ ಚರ್ಚೆಗಳು ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಮಾದರಿಯ ಸುತ್ತ ಕೇಂದ್ರೀಕೃತವಾಗಿವೆ. ಪ್ರಸ್ತಾವಿತ ಯೋಜನೆಯ ಪ್ರಕಾರ, ಸರ್ಕಾರಿ ಸ್ವಾಮ್ಯದ ಭಾರತೀಯ ಪರಮಾಣು ವಿದ್ಯುತ್ ನಿಗಮ ಲಿಮಿಟೆಡ್ (ಎನ್‌ಪಿಸಿಐಎಲ್) ಅದಾನಿ ಗ್ರೂಪ್ ಪರವಾಗಿ ಸ್ಥಾವರವನ್ನು ನಿರ್ವಹಿಸುತ್ತದೆ ಎಂದು ಮೂಲಗಳನ್ನು ಉಲ್ಲೇಖಿಸಿ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಬ್ಲೂಮ್‌ಬರ್ಗ್ ಪ್ರಕಾರ, ಅದಾನಿ ಸ್ಥಾಪಿಸಲು ಯೋಜಿಸಿರುವ 200 ಮೆಗಾವ್ಯಾಟ್ ಸಾಮರ್ಥ್ಯದ ಎಸ್‌ಎಂಆರ್‌ಗಳ ವಿನ್ಯಾಸ ಮತ್ತು ಅಭಿವೃದ್ಧಿಯ ಕುರಿತು ಸರ್ಕಾರಿ ಸ್ವಾಮ್ಯದ ಭಾಭಾ ಪರಮಾಣು ಸಂಶೋಧನಾ ಕೇಂದ್ರ (ಬಿಎಆರ್‌ಸಿ) ಕೆಲಸ ಮಾಡುತ್ತಿದೆ.

ಸರ್ಕಾರದ ಅನುಮೋದನೆಗಳನ್ನು ಪಡೆದ ನಂತರ ಈ ಯೋಜನೆ ಪೂರ್ಣಗೊಳ್ಳಲು ಐದರಿಂದ ಆರು ವರ್ಷಗಳು ಬೇಕಾಗುತ್ತದೆ ಎಂದು ನಿರೀಕ್ಷಿಸಲಾಗಿದೆ. ಅದಾನಿ ಪರಮಾಣು ವಲಯಕ್ಕೆ ಮೊದಲ ಬಾರಿಗೆ ಪ್ರವೇಶಿಸುವುದರಿಂದ ಸಮಯ ಮಿತಿಯನ್ನು ಭಾಗಶಃ ವಿಸ್ತರಿಸಲಾಗಿದೆ.

ಇತರ ಕಂಪನಿಗಳಿಂದ ಪರಮಾಣು ಕ್ಷೇತ್ರದ ಮೇಲೆ ಕಣ್ಣು

ಟಾಟಾ ಗ್ರೂಪ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮತ್ತು ಜೆಎಸ್‌ಡಬ್ಲ್ಯೂ ಗ್ರೂಪ್ ಸೇರಿದಂತೆ ಇತರ ಭಾರತೀಯ ಉದ್ಯಮ ಸಮೂಹಗಳು ಕೂಡ ಪರಮಾಣು ವಿದ್ಯುತ್ ವಲಯಕ್ಕೆ ಪ್ರವೇಶವನ್ನು ಬಯಸುತ್ತಿವೆ ಎಂದು ಪಿಟಿಐ ಈ ಹಿಂದೆ ವರದಿ ಮಾಡಿತ್ತು.

ಭಾರತವು ಪ್ರಸ್ತುತ ಏಳು ಸ್ಥಳಗಳಲ್ಲಿ ಸುಮಾರು ಎರಡು ಡಜನ್ ಪರಮಾಣು ರಿಯಾಕ್ಟರ್‌ಗಳನ್ನು ನಿರ್ವಹಿಸುತ್ತಿದ್ದು, ಇದು ದೇಶದ ವಿದ್ಯುತ್ ಉತ್ಪಾದನೆಗೆ ಸರಿಸುಮಾರು ಶೇಕಡ 3ರಷ್ಟು ಕೊಡುಗೆ ನೀಡುತ್ತಿದೆ. ಈ ರಿಯಾಕ್ಟರ್‌ಗಳು ಸುಮಾರು 8,780 ಮೆಗಾವ್ಯಾಟ್ ಸ್ಥಾಪಿತ ಸಾಮರ್ಥ್ಯವನ್ನು ಹೊಂದಿದ್ದು, ಅನುಷ್ಠಾನದ ವಿವಿಧ ಹಂತಗಳಲ್ಲಿರುವ ಯೋಜನೆಗಳ ಮೂಲಕ ಸಾಮರ್ಥ್ಯವನ್ನು 13,600 ಮೆಗಾವ್ಯಾಟ್‌ಗೆ ಹೆಚ್ಚಿಸುವ ಯೋಜನೆಗಳು ನಡೆಯುತ್ತಿವೆ. 2047 ರ ವೇಳೆಗೆ 100 ಗಿಗಾವ್ಯಾಟ್ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು ಸಾಧಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಪರಮಾಣು ಕ್ಷೇತ್ರಕ್ಕೆ ಅದಾನಿ ಪ್ರವೇಶದ ಕುರಿತು ಉತ್ತರ ಪ್ರದೇಶ ಸರ್ಕಾರ, ಅದಾನಿ ಗ್ರೂಪ್ ಮತ್ತು ಪರಮಾಣು ಇಂಧನ ಇಲಾಖೆಯ ಪ್ರತಿನಿಧಿಗಳು, ಯಾರೂ ಕೂಡ ತಕ್ಷಣಕ್ಕೆ ಪ್ರತಿಕ್ರಿಯಿಸಿಲ್ಲ ಎಂದು ಬ್ಲೂಮ್‌ಬರ್ಗ್‌ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...