Homeಮುಖಪುಟಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಅಣು ಶಕ್ತಿಯ ಖಾಸಗೀಕರಣ ಮಸೂದೆ ಅಂಗೀಕಾರ ಬೆನ್ನಲ್ಲೇ ಬೆಳವಣಿಗೆ

- Advertisement -
- Advertisement -

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿದೆ.

ಈ ಬೆನ್ನಲ್ಲೇ ಅದಾನಿ ಗ್ರೂಪ್ ವಾಣಿಜ್ಯ ಪರಮಾಣು ವಿದ್ಯುತ್ ಯೋಜನೆಯ ಕುರಿತು ಉತ್ತರ ಪ್ರದೇಶ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಅದಾನಿ ಗ್ರೂಪ್ ಒಂದು ಹೊಸ ನ್ಯೂಕ್ಲಿಯರ್ ವಿದ್ಯುತ್ ಯೋಜನೆಯ ಬಗ್ಗೆ ಆಲೋಚಿಸುತ್ತಿದೆ. ಒಟ್ಟು 8 ಸಣ್ಣ ಆಕಾರದ ನ್ಯೂಕ್ಲಿಯರ್ ರಿಯಾಕ್ಟರ್‌ಗಳನ್ನು (ಎಸ್‌ಎಂಆರ್‌) ಸ್ಥಾಪಿಸುವ ಯೋಜನೆ ಇದಾಗಿದೆ. ಪ್ರತಿಯೊಂದು ರಿಯಾಕ್ಟರ್‌ನ ಸಾಮರ್ಥ್ಯ 300 ಮೆಗಾವ್ಯಾಟ್ ಆಗಿರುತ್ತದೆ.ಒಟ್ಟು 8 ರಿಯಾಕ್ಟರ್‌ಗಳಿಂದ ಅದಾನಿ ಗ್ರೂಪ್‌ಗೆ ಸುಮಾರು 1,600 ಮೆಗಾವ್ಯಾಟ್ ನ್ಯೂಕ್ಲಿಯರ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಸಿಗಲಿದೆ.ಈ ಮಾಹಿತಿಯನ್ನು ತಿಳಿಸಿದವರು ತಮ್ಮ ಹೆಸರನ್ನು ಬಹಿರಂಗಪಡಿಸದಂತೆ ಕೇಳಿಕೊಂಡಿದ್ದಾರೆ. ಏಕೆಂದರೆ ಈ ಯೋಜನೆಯ ಬಗ್ಗೆ ಇನ್ನೂ ಖಾಸಗಿ ಚರ್ಚೆಗಳು ನಡೆಯುತ್ತಿವೆ ಎಂದು ಸುದ್ದಿ ಸಂಸ್ಥೆ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಬ್ಲೂಮ್‌ಬರ್ಗ್ ಪ್ರಕಾರ, ರಿಯಾಕ್ಟರ್‌ಗಳಿಗೆ ಸ್ಥಿರವಾದ ನೀರಿನ ಪೂರೈಕೆಯನ್ನು ಖಚಿತಪಡಿಸಿಜಕೊಳ್ಳುವುದು ಅಗತ್ಯವಾಗಿದೆ. ಹಾಗಾಗಿ, ಯೋಜನೆಗೆ ಉತ್ತರ ಪ್ರದೇಶ ಸರ್ಕಾರ ಇನ್ನೂ ಸೂಕ್ತವಾದ ನದಿ ತೀರದ ಸ್ಥಳವನ್ನು ಗುರುತಿಸಿಲ್ಲ.

ದತ್ತಾಂಶ ಕೇಂದ್ರ ವಿಸ್ತರಣೆ ಮತ್ತು ಕೃತಕ ಬುದ್ಧಿಮತ್ತೆ-ಚಾಲಿತ ವ್ಯವಸ್ಥೆಗಳ ಹೆಚ್ಚುತ್ತಿರುವ ಬಳಕೆಯಿಂದಾಗಿ ಭಾರತದ ವಿದ್ಯುತ್ ಬೇಡಿಕೆ ತೀವ್ರವಾಗಿ ಏರುತ್ತಿರುವ ಸಮಯದಲ್ಲಿ, ತನ್ನ ನವೀಕರಿಸಬಹುದಾದ ಮತ್ತು ಕಡಿಮೆ-ಇಂಗಾಲದ ಇಂಧನ ಬಂಡವಾಳವನ್ನು ವಿಸ್ತರಿಸುವ ಅದಾನಿಯ ಪ್ರಯತ್ನಗಳ ಒಂದು ಭಾಗವಾಗಿ ಈ ಯೋಜನೆಗೆ ಮುಂದಾಗಿದೆ ಎಂದು ವರದಿ ಹೇಳಿದೆ.

ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಅಂಗೀಕಾರಗೊಂಡ ಬೆನ್ನಲ್ಲೇ ಅದಾನಿ ಗ್ರೂಪ್ ಅಣು ವಿದ್ಯುತ್ ಯೋಜನೆ ಕುರಿತು ಚರ್ಚೆಗೆ ಮುಂದಾಗಿರುವುದು ಗಮನಾರ್ಹವಾಗಿದೆ.

ಖಾಸಗಿ ಗ್ರೂಪ್ ಒಂದು ಅಣು ವಿದ್ಯುತ್ ಯೋಜನೆಗೆ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ ಬೆನ್ನಲ್ಲೇ ಮಸೂದೆ ಮಂಡಿಸಲಾಗಿದೆ ಎಂದು ಸಂಸತ್ತಿನಲ್ಲಿ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಹೇಳಿದ್ದರು.

ಫೆಬ್ರವರಿಯ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ಪರಮಾಣು ಇಂಧನ ಮಿಷನ್ ಅಡಿಯಲ್ಲಿ, ಕೇಂದ್ರ ಸರ್ಕಾರವು ಸಣ್ಣ ಮಾಡ್ಯುಲರ್ ರಿಯಾಕ್ಟರ್‌ಗಳ ಸಂಶೋಧನೆ ಮತ್ತು ಅಭಿವೃದ್ಧಿಗೆ 200 ಬಿಲಿಯನ್ ರೂ.ಗಳನ್ನು ಖರ್ಚು ಮಾಡುವುದಾಗಿ ಹೇಳಿದೆ.

ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಮಾದರಿ

ಅದಾನಿ ಗ್ರೂಪ್ ಮತ್ತು ಉತ್ತರ ಪ್ರದೇಶ ಸರ್ಕಾರದ ನಡುವಿನ ಚರ್ಚೆಗಳು ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಮಾದರಿಯ ಸುತ್ತ ಕೇಂದ್ರೀಕೃತವಾಗಿವೆ. ಪ್ರಸ್ತಾವಿತ ಯೋಜನೆಯ ಪ್ರಕಾರ, ಸರ್ಕಾರಿ ಸ್ವಾಮ್ಯದ ಭಾರತೀಯ ಪರಮಾಣು ವಿದ್ಯುತ್ ನಿಗಮ ಲಿಮಿಟೆಡ್ (ಎನ್‌ಪಿಸಿಐಎಲ್) ಅದಾನಿ ಗ್ರೂಪ್ ಪರವಾಗಿ ಸ್ಥಾವರವನ್ನು ನಿರ್ವಹಿಸುತ್ತದೆ ಎಂದು ಮೂಲಗಳನ್ನು ಉಲ್ಲೇಖಿಸಿ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಬ್ಲೂಮ್‌ಬರ್ಗ್ ಪ್ರಕಾರ, ಅದಾನಿ ಸ್ಥಾಪಿಸಲು ಯೋಜಿಸಿರುವ 200 ಮೆಗಾವ್ಯಾಟ್ ಸಾಮರ್ಥ್ಯದ ಎಸ್‌ಎಂಆರ್‌ಗಳ ವಿನ್ಯಾಸ ಮತ್ತು ಅಭಿವೃದ್ಧಿಯ ಕುರಿತು ಸರ್ಕಾರಿ ಸ್ವಾಮ್ಯದ ಭಾಭಾ ಪರಮಾಣು ಸಂಶೋಧನಾ ಕೇಂದ್ರ (ಬಿಎಆರ್‌ಸಿ) ಕೆಲಸ ಮಾಡುತ್ತಿದೆ.

ಸರ್ಕಾರದ ಅನುಮೋದನೆಗಳನ್ನು ಪಡೆದ ನಂತರ ಈ ಯೋಜನೆ ಪೂರ್ಣಗೊಳ್ಳಲು ಐದರಿಂದ ಆರು ವರ್ಷಗಳು ಬೇಕಾಗುತ್ತದೆ ಎಂದು ನಿರೀಕ್ಷಿಸಲಾಗಿದೆ. ಅದಾನಿ ಪರಮಾಣು ವಲಯಕ್ಕೆ ಮೊದಲ ಬಾರಿಗೆ ಪ್ರವೇಶಿಸುವುದರಿಂದ ಸಮಯ ಮಿತಿಯನ್ನು ಭಾಗಶಃ ವಿಸ್ತರಿಸಲಾಗಿದೆ.

ಇತರ ಕಂಪನಿಗಳಿಂದ ಪರಮಾಣು ಕ್ಷೇತ್ರದ ಮೇಲೆ ಕಣ್ಣು

ಟಾಟಾ ಗ್ರೂಪ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮತ್ತು ಜೆಎಸ್‌ಡಬ್ಲ್ಯೂ ಗ್ರೂಪ್ ಸೇರಿದಂತೆ ಇತರ ಭಾರತೀಯ ಉದ್ಯಮ ಸಮೂಹಗಳು ಕೂಡ ಪರಮಾಣು ವಿದ್ಯುತ್ ವಲಯಕ್ಕೆ ಪ್ರವೇಶವನ್ನು ಬಯಸುತ್ತಿವೆ ಎಂದು ಪಿಟಿಐ ಈ ಹಿಂದೆ ವರದಿ ಮಾಡಿತ್ತು.

ಭಾರತವು ಪ್ರಸ್ತುತ ಏಳು ಸ್ಥಳಗಳಲ್ಲಿ ಸುಮಾರು ಎರಡು ಡಜನ್ ಪರಮಾಣು ರಿಯಾಕ್ಟರ್‌ಗಳನ್ನು ನಿರ್ವಹಿಸುತ್ತಿದ್ದು, ಇದು ದೇಶದ ವಿದ್ಯುತ್ ಉತ್ಪಾದನೆಗೆ ಸರಿಸುಮಾರು ಶೇಕಡ 3ರಷ್ಟು ಕೊಡುಗೆ ನೀಡುತ್ತಿದೆ. ಈ ರಿಯಾಕ್ಟರ್‌ಗಳು ಸುಮಾರು 8,780 ಮೆಗಾವ್ಯಾಟ್ ಸ್ಥಾಪಿತ ಸಾಮರ್ಥ್ಯವನ್ನು ಹೊಂದಿದ್ದು, ಅನುಷ್ಠಾನದ ವಿವಿಧ ಹಂತಗಳಲ್ಲಿರುವ ಯೋಜನೆಗಳ ಮೂಲಕ ಸಾಮರ್ಥ್ಯವನ್ನು 13,600 ಮೆಗಾವ್ಯಾಟ್‌ಗೆ ಹೆಚ್ಚಿಸುವ ಯೋಜನೆಗಳು ನಡೆಯುತ್ತಿವೆ. 2047 ರ ವೇಳೆಗೆ 100 ಗಿಗಾವ್ಯಾಟ್ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು ಸಾಧಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಪರಮಾಣು ಕ್ಷೇತ್ರಕ್ಕೆ ಅದಾನಿ ಪ್ರವೇಶದ ಕುರಿತು ಉತ್ತರ ಪ್ರದೇಶ ಸರ್ಕಾರ, ಅದಾನಿ ಗ್ರೂಪ್ ಮತ್ತು ಪರಮಾಣು ಇಂಧನ ಇಲಾಖೆಯ ಪ್ರತಿನಿಧಿಗಳು, ಯಾರೂ ಕೂಡ ತಕ್ಷಣಕ್ಕೆ ಪ್ರತಿಕ್ರಿಯಿಸಿಲ್ಲ ಎಂದು ಬ್ಲೂಮ್‌ಬರ್ಗ್‌ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...