Homeಮುಖಪುಟಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಅಣು ಶಕ್ತಿಯ ಖಾಸಗೀಕರಣ ಮಸೂದೆ ಅಂಗೀಕಾರ ಬೆನ್ನಲ್ಲೇ ಬೆಳವಣಿಗೆ

- Advertisement -
- Advertisement -

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿದೆ.

ಈ ಬೆನ್ನಲ್ಲೇ ಅದಾನಿ ಗ್ರೂಪ್ ವಾಣಿಜ್ಯ ಪರಮಾಣು ವಿದ್ಯುತ್ ಯೋಜನೆಯ ಕುರಿತು ಉತ್ತರ ಪ್ರದೇಶ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಅದಾನಿ ಗ್ರೂಪ್ ಒಂದು ಹೊಸ ನ್ಯೂಕ್ಲಿಯರ್ ವಿದ್ಯುತ್ ಯೋಜನೆಯ ಬಗ್ಗೆ ಆಲೋಚಿಸುತ್ತಿದೆ. ಒಟ್ಟು 8 ಸಣ್ಣ ಆಕಾರದ ನ್ಯೂಕ್ಲಿಯರ್ ರಿಯಾಕ್ಟರ್‌ಗಳನ್ನು (ಎಸ್‌ಎಂಆರ್‌) ಸ್ಥಾಪಿಸುವ ಯೋಜನೆ ಇದಾಗಿದೆ. ಪ್ರತಿಯೊಂದು ರಿಯಾಕ್ಟರ್‌ನ ಸಾಮರ್ಥ್ಯ 300 ಮೆಗಾವ್ಯಾಟ್ ಆಗಿರುತ್ತದೆ.ಒಟ್ಟು 8 ರಿಯಾಕ್ಟರ್‌ಗಳಿಂದ ಅದಾನಿ ಗ್ರೂಪ್‌ಗೆ ಸುಮಾರು 1,600 ಮೆಗಾವ್ಯಾಟ್ ನ್ಯೂಕ್ಲಿಯರ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಸಿಗಲಿದೆ.ಈ ಮಾಹಿತಿಯನ್ನು ತಿಳಿಸಿದವರು ತಮ್ಮ ಹೆಸರನ್ನು ಬಹಿರಂಗಪಡಿಸದಂತೆ ಕೇಳಿಕೊಂಡಿದ್ದಾರೆ. ಏಕೆಂದರೆ ಈ ಯೋಜನೆಯ ಬಗ್ಗೆ ಇನ್ನೂ ಖಾಸಗಿ ಚರ್ಚೆಗಳು ನಡೆಯುತ್ತಿವೆ ಎಂದು ಸುದ್ದಿ ಸಂಸ್ಥೆ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಬ್ಲೂಮ್‌ಬರ್ಗ್ ಪ್ರಕಾರ, ರಿಯಾಕ್ಟರ್‌ಗಳಿಗೆ ಸ್ಥಿರವಾದ ನೀರಿನ ಪೂರೈಕೆಯನ್ನು ಖಚಿತಪಡಿಸಿಜಕೊಳ್ಳುವುದು ಅಗತ್ಯವಾಗಿದೆ. ಹಾಗಾಗಿ, ಯೋಜನೆಗೆ ಉತ್ತರ ಪ್ರದೇಶ ಸರ್ಕಾರ ಇನ್ನೂ ಸೂಕ್ತವಾದ ನದಿ ತೀರದ ಸ್ಥಳವನ್ನು ಗುರುತಿಸಿಲ್ಲ.

ದತ್ತಾಂಶ ಕೇಂದ್ರ ವಿಸ್ತರಣೆ ಮತ್ತು ಕೃತಕ ಬುದ್ಧಿಮತ್ತೆ-ಚಾಲಿತ ವ್ಯವಸ್ಥೆಗಳ ಹೆಚ್ಚುತ್ತಿರುವ ಬಳಕೆಯಿಂದಾಗಿ ಭಾರತದ ವಿದ್ಯುತ್ ಬೇಡಿಕೆ ತೀವ್ರವಾಗಿ ಏರುತ್ತಿರುವ ಸಮಯದಲ್ಲಿ, ತನ್ನ ನವೀಕರಿಸಬಹುದಾದ ಮತ್ತು ಕಡಿಮೆ-ಇಂಗಾಲದ ಇಂಧನ ಬಂಡವಾಳವನ್ನು ವಿಸ್ತರಿಸುವ ಅದಾನಿಯ ಪ್ರಯತ್ನಗಳ ಒಂದು ಭಾಗವಾಗಿ ಈ ಯೋಜನೆಗೆ ಮುಂದಾಗಿದೆ ಎಂದು ವರದಿ ಹೇಳಿದೆ.

ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಅಂಗೀಕಾರಗೊಂಡ ಬೆನ್ನಲ್ಲೇ ಅದಾನಿ ಗ್ರೂಪ್ ಅಣು ವಿದ್ಯುತ್ ಯೋಜನೆ ಕುರಿತು ಚರ್ಚೆಗೆ ಮುಂದಾಗಿರುವುದು ಗಮನಾರ್ಹವಾಗಿದೆ.

ಖಾಸಗಿ ಗ್ರೂಪ್ ಒಂದು ಅಣು ವಿದ್ಯುತ್ ಯೋಜನೆಗೆ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ ಬೆನ್ನಲ್ಲೇ ಮಸೂದೆ ಮಂಡಿಸಲಾಗಿದೆ ಎಂದು ಸಂಸತ್ತಿನಲ್ಲಿ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಹೇಳಿದ್ದರು.

ಫೆಬ್ರವರಿಯ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ಪರಮಾಣು ಇಂಧನ ಮಿಷನ್ ಅಡಿಯಲ್ಲಿ, ಕೇಂದ್ರ ಸರ್ಕಾರವು ಸಣ್ಣ ಮಾಡ್ಯುಲರ್ ರಿಯಾಕ್ಟರ್‌ಗಳ ಸಂಶೋಧನೆ ಮತ್ತು ಅಭಿವೃದ್ಧಿಗೆ 200 ಬಿಲಿಯನ್ ರೂ.ಗಳನ್ನು ಖರ್ಚು ಮಾಡುವುದಾಗಿ ಹೇಳಿದೆ.

ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಮಾದರಿ

ಅದಾನಿ ಗ್ರೂಪ್ ಮತ್ತು ಉತ್ತರ ಪ್ರದೇಶ ಸರ್ಕಾರದ ನಡುವಿನ ಚರ್ಚೆಗಳು ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಮಾದರಿಯ ಸುತ್ತ ಕೇಂದ್ರೀಕೃತವಾಗಿವೆ. ಪ್ರಸ್ತಾವಿತ ಯೋಜನೆಯ ಪ್ರಕಾರ, ಸರ್ಕಾರಿ ಸ್ವಾಮ್ಯದ ಭಾರತೀಯ ಪರಮಾಣು ವಿದ್ಯುತ್ ನಿಗಮ ಲಿಮಿಟೆಡ್ (ಎನ್‌ಪಿಸಿಐಎಲ್) ಅದಾನಿ ಗ್ರೂಪ್ ಪರವಾಗಿ ಸ್ಥಾವರವನ್ನು ನಿರ್ವಹಿಸುತ್ತದೆ ಎಂದು ಮೂಲಗಳನ್ನು ಉಲ್ಲೇಖಿಸಿ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಬ್ಲೂಮ್‌ಬರ್ಗ್ ಪ್ರಕಾರ, ಅದಾನಿ ಸ್ಥಾಪಿಸಲು ಯೋಜಿಸಿರುವ 200 ಮೆಗಾವ್ಯಾಟ್ ಸಾಮರ್ಥ್ಯದ ಎಸ್‌ಎಂಆರ್‌ಗಳ ವಿನ್ಯಾಸ ಮತ್ತು ಅಭಿವೃದ್ಧಿಯ ಕುರಿತು ಸರ್ಕಾರಿ ಸ್ವಾಮ್ಯದ ಭಾಭಾ ಪರಮಾಣು ಸಂಶೋಧನಾ ಕೇಂದ್ರ (ಬಿಎಆರ್‌ಸಿ) ಕೆಲಸ ಮಾಡುತ್ತಿದೆ.

ಸರ್ಕಾರದ ಅನುಮೋದನೆಗಳನ್ನು ಪಡೆದ ನಂತರ ಈ ಯೋಜನೆ ಪೂರ್ಣಗೊಳ್ಳಲು ಐದರಿಂದ ಆರು ವರ್ಷಗಳು ಬೇಕಾಗುತ್ತದೆ ಎಂದು ನಿರೀಕ್ಷಿಸಲಾಗಿದೆ. ಅದಾನಿ ಪರಮಾಣು ವಲಯಕ್ಕೆ ಮೊದಲ ಬಾರಿಗೆ ಪ್ರವೇಶಿಸುವುದರಿಂದ ಸಮಯ ಮಿತಿಯನ್ನು ಭಾಗಶಃ ವಿಸ್ತರಿಸಲಾಗಿದೆ.

ಇತರ ಕಂಪನಿಗಳಿಂದ ಪರಮಾಣು ಕ್ಷೇತ್ರದ ಮೇಲೆ ಕಣ್ಣು

ಟಾಟಾ ಗ್ರೂಪ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮತ್ತು ಜೆಎಸ್‌ಡಬ್ಲ್ಯೂ ಗ್ರೂಪ್ ಸೇರಿದಂತೆ ಇತರ ಭಾರತೀಯ ಉದ್ಯಮ ಸಮೂಹಗಳು ಕೂಡ ಪರಮಾಣು ವಿದ್ಯುತ್ ವಲಯಕ್ಕೆ ಪ್ರವೇಶವನ್ನು ಬಯಸುತ್ತಿವೆ ಎಂದು ಪಿಟಿಐ ಈ ಹಿಂದೆ ವರದಿ ಮಾಡಿತ್ತು.

ಭಾರತವು ಪ್ರಸ್ತುತ ಏಳು ಸ್ಥಳಗಳಲ್ಲಿ ಸುಮಾರು ಎರಡು ಡಜನ್ ಪರಮಾಣು ರಿಯಾಕ್ಟರ್‌ಗಳನ್ನು ನಿರ್ವಹಿಸುತ್ತಿದ್ದು, ಇದು ದೇಶದ ವಿದ್ಯುತ್ ಉತ್ಪಾದನೆಗೆ ಸರಿಸುಮಾರು ಶೇಕಡ 3ರಷ್ಟು ಕೊಡುಗೆ ನೀಡುತ್ತಿದೆ. ಈ ರಿಯಾಕ್ಟರ್‌ಗಳು ಸುಮಾರು 8,780 ಮೆಗಾವ್ಯಾಟ್ ಸ್ಥಾಪಿತ ಸಾಮರ್ಥ್ಯವನ್ನು ಹೊಂದಿದ್ದು, ಅನುಷ್ಠಾನದ ವಿವಿಧ ಹಂತಗಳಲ್ಲಿರುವ ಯೋಜನೆಗಳ ಮೂಲಕ ಸಾಮರ್ಥ್ಯವನ್ನು 13,600 ಮೆಗಾವ್ಯಾಟ್‌ಗೆ ಹೆಚ್ಚಿಸುವ ಯೋಜನೆಗಳು ನಡೆಯುತ್ತಿವೆ. 2047 ರ ವೇಳೆಗೆ 100 ಗಿಗಾವ್ಯಾಟ್ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು ಸಾಧಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಪರಮಾಣು ಕ್ಷೇತ್ರಕ್ಕೆ ಅದಾನಿ ಪ್ರವೇಶದ ಕುರಿತು ಉತ್ತರ ಪ್ರದೇಶ ಸರ್ಕಾರ, ಅದಾನಿ ಗ್ರೂಪ್ ಮತ್ತು ಪರಮಾಣು ಇಂಧನ ಇಲಾಖೆಯ ಪ್ರತಿನಿಧಿಗಳು, ಯಾರೂ ಕೂಡ ತಕ್ಷಣಕ್ಕೆ ಪ್ರತಿಕ್ರಿಯಿಸಿಲ್ಲ ಎಂದು ಬ್ಲೂಮ್‌ಬರ್ಗ್‌ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...