Homeಅಂತರಾಷ್ಟ್ರೀಯಆರ್‌ಎಸ್‌ಎಫ್‌ 'ಪತ್ರಿಕಾ ಸ್ವಾತಂತ್ರ್ಯ ಹರಣಗಾರರ' ಪಟ್ಟಿಯಲ್ಲಿ ಅದಾನಿ ಗ್ರೂಪ್, ಒಪ್‌ಇಂಡಿಯಾ

ಆರ್‌ಎಸ್‌ಎಫ್‌ ‘ಪತ್ರಿಕಾ ಸ್ವಾತಂತ್ರ್ಯ ಹರಣಗಾರರ’ ಪಟ್ಟಿಯಲ್ಲಿ ಅದಾನಿ ಗ್ರೂಪ್, ಒಪ್‌ಇಂಡಿಯಾ

- Advertisement -
- Advertisement -

ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಪ್ರಕಟಿಸಿದ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ 180 ದೇಶಗಳ ಪೈಕಿ ಭಾರತ 151ನೇ ಸ್ಥಾನ ಪಡೆದಿದೆ. ಕಳೆದ ತಿಂಗಳು (ನೆವಂಬರ್ 2) ಪ್ರಕಟಿಸಿದ ಪತ್ರಿಕಾ ಸ್ವಾತಂತ್ರ್ಯ ಹರಣಗಾರರ ಪಟ್ಟಿಯಲ್ಲಿ ಭಾರತದ ಎರಡು ಸಂಸ್ಥೆಗಳ ಹೆಸರಿದೆ.

ಪತ್ರಿಕಾ ಸ್ವಾತಂತ್ರ್ಯ ಹರಣಗಾರರ ಪಟ್ಟಿಯಲ್ಲಿ ಪತ್ರಕರ್ತರನ್ನು ಕೊಲ್ಲುವ, ಸೆನ್ಸಾರ್ ಮಾಡುವ, ಜೈಲಿಗೆ ಹಾಕುವ, ಹಲ್ಲೆ ಮಾಡುವ, ಸುದ್ದಿ ಮಾಧ್ಯಮವನ್ನು ಹತ್ತಿಕ್ಕುವ, ಪತ್ರಿಕೋದ್ಯಮವನ್ನು ಅವಹೇಳನ ಮಾಡುವ ಅಥವಾ ಪ್ರಚಾರದ ಉದ್ದೇಶಗಳಿಗಾಗಿ ಮಾಹಿತಿಯನ್ನು ತಿರುಚಲು ಅದರ ಸಂಕೇತಗಳನ್ನು ಬಳಸುವ ಜನರು, ಸಂಸ್ಥೆಗಳು, ನಿಗಮಗಳು ಮತ್ತು ಸರ್ಕಾರಗಳು ಸೇರಿವೆ.

ಗೌತಮ್ ಅದಾನಿ ಮಾಲಿಕತ್ವದ ಅದಾನಿ ಗ್ರೂಪ್ ಮತ್ತು ಬಲಪಂಥೀಯ ಸುದ್ದಿ ವೆಬ್‌ಸೈಟ್ ಒಪ್ ಇಂಡಿಯಾವನ್ನು ‘ಪತ್ರಿಕಾ ಸ್ವಾತಂತ್ರ್ಯ ಹರಣಗಾರರು’ ಎಂದು ಆರ್‌ಎಸ್‌ಎಫ್ ಗುರುತಿಸಿದೆ.

ಜಾಗತಿಕವಾಗಿ ಪ್ರಬಲವಾಗಿರುವ ಕ್ಸಿ ಜಿನ್‌ಪಿಂಗ್ ನೇತೃತ್ವದ ಚೀನೀ ಕಮ್ಯುನಿಸ್ಟ್ ಪಕ್ಷ, ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಹಾಗೂ ಗೂಗಲ್ ಮಾತೃಸಂಸ್ಥೆ ಆಲ್ಪಾಬೆಟ್ ಮತ್ತು ಫೇಸ್‌ಬುಕ್ ಮಾತೃಸಂಸ್ಥೆ ಮೆಟಾ ಹೆಸರುಗಳೂ ಪಟ್ಟಿಯಲ್ಲಿ ಇದೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನೇತೃತ್ವದಲ್ಲಿ ಸುಮಾರು 220 ಪತ್ರಕರ್ತರ ಸಾವಿಗೆ ಕಾರಣರಾದ ಇಸ್ರೇಲ್ ಡಿಫೆನ್ಸ್ ಫೋರ್ಸ್ (ಐಡಿಎಫ್‌), ಮ್ಯಾನ್ಮಾರ್‌ ಸ್ಟೇಟ್ ಪೀಸ್ ಅಂಡ್ ಸೆಕ್ಯೂರಿಟಿ ಕಮಿಷನ್, ಕ್ಯಾಪ್ಟನ್ ಇಬ್ರಾಹಿಂ ಟ್ರೊರೆ ನೇತೃತ್ವದ ಬುರ್ಕಿನಾ ಫಾಸೊದ ಮಿಲಿಟರಿ ಜುಂಟಾ ಮತ್ತು ಪತ್ರಕರ್ತರಿಗೆ ಕಿರುಕುಳ ನೀಡಲು ತನ್ನ ಸಾಮಾಜಿಕ ಮಾಧ್ಯಮ ಎಕ್ಸ್ ಅನ್ನು ಬಳಸುವ ಬಿಲಿಯನೇರ್ ಎಲೋನ್ ಮಸ್ಕ್ ಕೂಡ ಪಟ್ಟಿಯಲ್ಲಿದ್ದಾರೆ.

ಅದಾನಿ

ಗೌತಮ್ ಅದಾನಿ ಭಾರತದ ಎರಡನೇ ಶ್ರೀಮಂತ ವ್ಯಕ್ತಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಪ್ತ ಮಿತ್ರ ಎಂದು ಆರ್‌ಎಸ್‌ಎಫ್ ಉಲ್ಲೇಖಿಸಿದೆ. ಗ್ಯಾಗ್ ಸೂಟ್ (ಬಾಯಿ ಮುಚ್ಚಿಸುವ ಪ್ರಕರಣಗಳು) ಎಂಬ ಯೋಜಿತ ತಂತ್ರದ ಭಾಗವಾಗಿ ಆದಾನಿ ಗ್ರೂಪ್ ಮತ್ತು ಅದರ ಅಂಗ ಸಂಸ್ಥೆಗಳು 2017ರಿಂದ ಇಲ್ಲಿಯವರೆಗೆ 15ಕ್ಕೂ ಹೆಚ್ಚು ವಿಮರ್ಶಾತ್ಮಕ ಪತ್ರಕರ್ತರ ಮತ್ತು ಸುದ್ದಿ ಮಾಧ್ಯಮಗಳ ವಿರುದ್ಧ ಸುಮಾರು 10 ಕಾನೂನು ಮೊಕದ್ದಮೆಗಳನ್ನು ಹೂಡಿವೆ. ಇವುಗಳಲ್ಲಿ ಹಣದ ಪರಿಹಾರ ಕೇಳುವ ಮೊಕದ್ದೆಮೆಗಳು (ಸಿವಿಲ್ ಡಿಫಾಮೇಷನ್ ಕೇಸ್) ಮತ್ತು ಜೈಲು ಶಿಕ್ಷೆಯ ಬೆದರಿಕೆ ಇರುವ ಮೊಕದ್ದೆಮೆಗಳು (ಕ್ರಿಮಿನಲ್ ಡಿಫಾಮೇಷನ್ ಕೇಸ್) ಸೇರಿವೆ. ಈ ಮೂಲಕ ಸ್ವತಂತ್ರ ಪತ್ರಿಕೆಗಳ ಧ್ವನಿಯನ್ನು ಅಡಗಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದೆ.

ಆದಾನಿ ಗ್ರೂಪ್‌ನ 2025ರ ‘ಹಿಟ್ ಲಿಸ್ಟ್‌ನಲ್ಲಿ (ಟಾರ್ಗೆಟ್ ಪಟ್ಟಿ) 8 ಪತ್ರಕರ್ತರ ಮತ್ತು 3 ಸುದ್ದಿ ಮಾಧ್ಯಮಗಳ ವಿರುದ್ಧ ಆದಾನಿ ಹೂಡಿರುವ ಒಂದು ಸಿವಿಲ್ ಡಿಫಾಮೇಷನ್ (ಹಣದ ಪರಿಹಾರ) ಮತ್ತು ಒಂದು ಕ್ರಿಮಿನಲ್ ಡಿಫಾಮೇಷನ್ (ಜೈಲು ಶಿಕ್ಷೆಯ ಬೆದರಿಕೆ) ಪ್ರಕರಣ ಸೇರಿ ಎರಡು ಮೊಕದ್ದೆಮೆಗಳು ಸೇರಿವೆ. ಈ ಪ್ರಕರಣಗಳಲ್ಲಿ ನ್ಯಾಯಾಲಯವು ‘ಎಕ್ಸ್‌ಪಾರ್ಟೆ ಇಂಜಂಕ್ಷನ್’ (ಒಂದು ಪಕ್ಷದ ವಾದ ಆಲಿಸಿ ತಾತ್ಕಾಲಿಕ ತಡೆಯಾಜ್ಞೆ) ನೀಡಿದೆ. ಆದಾನಿ ಗ್ರೂಪ್‌ಗೆ ತಾವೇ ಯಾವ ಸುದ್ದಿ/ಲೇಖನ ತನಗೆ ‘ಅಪಖ್ಯಾತಿ’ ತರುವಂತದ್ದು ಎಂದು ನಿರ್ಧರಿಸುವ ಅಧಿಕಾರ ಸಿಕ್ಕಿದೆ. ಪತ್ರಕರ್ತರಿಗೆ ಅಥವಾ ಮಾಧ್ಯಮಕ್ಕೆ ಅವರ ವಾದ ಆಲಿಸದೇ ಆ ವಿಷಯಗಳನ್ನು ತೆಗೆದುಹಾಕುವಂತೆ ಆದೇಶವಾಗಿದೆ. ಪ್ರಕರಣವನ್ನು ಗುರುತಿಸಲಾಗದ ಮೂರನೇ ವ್ಯಕ್ತಿಗಳಿಗೆ ವಿಸ್ತರಿಸಲಾಗಿದೆ ಮತ್ತು ಅನಿಯಮಿತ ಸೆನ್ಸಾರ್‌ಶಿಪ್‌ಗೆ ಕಾರಣವಾಗಬಹುದು ಎಂದು ವರದಿ ಹೇಳಿದೆ.

ದಿ ವೈರ್, ನ್ಯೂಸ್‌ಲಾಂಡ್ರಿ, ಹೆಚ್‌ಡಬ್ಲ್ಯೂ ನ್ಯೂಸ್ ಮತ್ತು ಸ್ವತಂತ್ರ ಪತ್ರಕರ್ತ ರವೀಶ್ ಕುಮಾರ್‌ನಂತಹ ಮಾಧ್ಯಮಗಳಿಗೆ ವಿಷಯಗಳನ್ನು ತೆಗೆದುಹಾಕುವ ಆದೇಶಗಳನ್ನು ನೀಡಲಾಗಿದೆ ಎಂದು ವರದಿಯಲ್ಲಿ ಹೇಳಿರುವುದಾಗಿ ದಿ ವೈರ್ ತಿಳಿಸಿದೆ.

ವರದಿಯು ಗ್ಯಾಗ್ ಸೂಟ್‌ಗಳ ಬಳಕೆಯನ್ನು ಅದಾನಿಯ ಮಾರಕ ಆಯುಧವಾಗಿ ಗುರುತಿಸಿದೆ.

ಒಪ್‌ಇಂಡಿಯಾ

ಬಲಪಂಥೀಯಾ ಸುದ್ದಿ ವೆಬ್‌ಸೈಟ್ ಒಪ್‌ಇಂಡಿಯಾವನ್ನು ಪಿತೂರಿ ಸಿದ್ಧಾಂತಗಳ ಮಾರಕ ಆಯುಧ ಎಂದು ವರದಿ ಹೇಳಿದೆ. 2025ರಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲು ತಂತ್ರಜ್ಞಾನವನ್ನು ಹೆಚ್ಚಾಗಿ ಬಳಸಲಾಗಿದೆ. ಇದಕ್ಕೆ ಉದಾಹರಣೆಯಾಗಿ ಒಪ್‌ಇಂಡಿಯಾವನ್ನು ಹೆಸರಿಸಿದೆ.

“ಹಿಂದೂ ರಾಷ್ಟ್ರೀಯತಾವಾದಿ ವೆಬ್‌ಸೈಟ್ ಒಪ್‌ಇಂಡಿಯಾ ಸರ್ಕಾರವನ್ನು ಟೀಕಿಸುವ ಪತ್ರಕರ್ತರ ಮೇಲೆ ಪದೇ ಪದೇ ದಾಳಿ ನಡೆಸುವುದಕ್ಕೆ ಹೆಸರುವಾಸಿಯಾಗಿದೆ. ಒಪ್‌ಇಂಡಿಯಾದ ವಿಷಯವು ‘ಲಿಬರಲ್ ಮೀಡಿಯಾ ಕಾರ್ಟೆಲ್’ ವಿರುದ್ಧದ ಹೋರಾಟದ ಭಾಗವಾಗಿ ತನ್ನನ್ನು ತಾನು ಬಿಂಬಿಸಿಕೊಳ್ಳುತ್ತದೆ. ಟ್ರೋಲ್ ನೆಟ್‌ವರ್ಕ್‌ಗಳ ಸಹಾಯದಿಂದ, ಇದು ನಿರ್ಣಾಯಕ ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳನ್ನು ಅಪಖ್ಯಾತಿಗೊಳಿಸುವ ಗುರಿಯನ್ನು ಹೊಂದಿರುವ ನಿರೂಪಣೆಗಳನ್ನು ಪ್ರಸಾರ ಮಾಡುತ್ತದೆ, ಆಗಾಗ್ಗೆ ಅವರು ಯುಎಸ್ ಬಿಲಿಯನೇರ್ ಲೋಕೋಪಕಾರಿ ಅಥವಾ ಭಾರತ ವಿರೋಧಿ ಲಾಬಿ ಯ ಭಾಗವಾಗಿದ್ದಾರೆ ಎಂದು ಆರೋಪಿಸುತ್ತದೆ” ಎಂದು ವರದಿ ಹೇಳಿದೆ.

ಈ ವರ್ಷ ಒಪ್ಇಂಡಿಯಾ ಒಟ್ಟು 96 ಲೇಖನಗಳ ಮೂಲಕ ಪತ್ರಕರ್ತರು ಹಾಗೂ ಸ್ವತಂತ್ರ ಮಾಧ್ಯಮಗಳ ಮೇಲೆ ನೇರ ದಾಳಿ ನಡೆಸಿದೆ. 200 ಪುಟಗಳ ಒಂದು ವರದಿ ಪ್ರಕಟಿಸಿ, ಕೆಲವು ಪತ್ರಕರ್ತರು ಮತ್ತು ಮಾಧ್ಯಮಗಳು ಒಂದು ಗುಪ್ತ ಜಾಲ ರಚಿಸಿ ಮೋದಿ ಸರ್ಕಾರದ ವಿರುದ್ಧ ‘ನರೇಟಿವ್ ವಾರ್’ ನಡೆಸುತ್ತಿದ್ದಾರೆ ಮತ್ತು ಭಾರತದಲ್ಲಿ ‘ರೆಜೀಮ್ ಚೇಂಜ್’ (ಸರ್ಕಾರ ಉರುಳಿಸುವ ಯೋಜನೆ) ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಪೂರ್ತಿ ಕುಮ್ಮಕ್ಕು ಸಿದ್ಧಾಂತಗಳನ್ನು ಹರಡಿದೆ. ಈ ಲೇಖನಗಳು ಪ್ರಕಟವಾದ ತಕ್ಷಣ ಯೋಜಿತವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ, ಬೆದರಿಕೆ ಮತ್ತು ಆನ್‌ಲೈನ್ ದೌರ್ಜನ್ಯದ ಬೃಹತ್ ಅಲೆಗಳು ಆ ಪತ್ರಕರ್ತರ ಮೇಲೆ ಬೀಳುವಂತೆ ಮಾಡಿದೆ. ಈ ಎಲ್ಲಾ ಕೃತ್ಯಗಳ ಮೂಲಕ ಸ್ವತಂತ್ರ ಪತ್ರಿಕೋದ್ಯಮವನ್ನು ಭಯಭೀತಿಗೊಳಿಸುವ ಮತ್ತು ಮೌನಗೊಳಿಸುವ ಉದ್ದೇಶ ಹೊಂದಿವೆ ಎಂಬುದು ಆರ್‌ಎಸ್‌ಎಫ್‌ ವರದಿಯ ಮುಖ್ಯ ಆತಂಕವಾಗಿದೆ.

ಸ್ವತಂತ್ರ ಮಾಧ್ಯಮ ಸಂಸ್ಥೆ ದಿ ನ್ಯೂಸ್ ಮಿನಿಟ್‌ನ ಸಹ-ಸಂಸ್ಥಾಪಕಿ ಮತ್ತು ಸಂಪಾದಕಿ ಧನ್ಯಾ ರಾಜೇಂದ್ರನ್ ಅವರನ್ನು ಪ್ರೈಝ್ ಫಾರ್ ಇಂಪ್ಯಾಕ್ಟ್‌ಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ತಾನು ಘೋಷಿಸಿದ ನಂತರ, ಅಕ್ಟೋಬರ್ 23ರಂದು ಒಪ್‌ಇಂಡಿಯಾದಲ್ಲಿ ಅವರು ಮಾನಹಾನಿಕರ ವಿಷಯಕ್ಕೆ ಗುರಿಯಾಗಿದ್ದರು ಎಂದು ಆರ್‌ಎಸ್‌ಎಫ್‌ ತಿಳಿಸಿದೆ.

ಆರ್‌ಎಸ್‌ಎಫ್‌ ವರದಿಯನ್ನು ಇಲ್ಲಿ ನೋಡಬಹುದು

Courtesy : thewire.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...