Homeಅಂತರಾಷ್ಟ್ರೀಯಆರ್‌ಎಸ್‌ಎಫ್‌ 'ಪತ್ರಿಕಾ ಸ್ವಾತಂತ್ರ್ಯ ಹರಣಗಾರರ' ಪಟ್ಟಿಯಲ್ಲಿ ಅದಾನಿ ಗ್ರೂಪ್, ಒಪ್‌ಇಂಡಿಯಾ

ಆರ್‌ಎಸ್‌ಎಫ್‌ ‘ಪತ್ರಿಕಾ ಸ್ವಾತಂತ್ರ್ಯ ಹರಣಗಾರರ’ ಪಟ್ಟಿಯಲ್ಲಿ ಅದಾನಿ ಗ್ರೂಪ್, ಒಪ್‌ಇಂಡಿಯಾ

- Advertisement -
- Advertisement -

ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಪ್ರಕಟಿಸಿದ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ 180 ದೇಶಗಳ ಪೈಕಿ ಭಾರತ 151ನೇ ಸ್ಥಾನ ಪಡೆದಿದೆ. ಕಳೆದ ತಿಂಗಳು (ನೆವಂಬರ್ 2) ಪ್ರಕಟಿಸಿದ ಪತ್ರಿಕಾ ಸ್ವಾತಂತ್ರ್ಯ ಹರಣಗಾರರ ಪಟ್ಟಿಯಲ್ಲಿ ಭಾರತದ ಎರಡು ಸಂಸ್ಥೆಗಳ ಹೆಸರಿದೆ.

ಪತ್ರಿಕಾ ಸ್ವಾತಂತ್ರ್ಯ ಹರಣಗಾರರ ಪಟ್ಟಿಯಲ್ಲಿ ಪತ್ರಕರ್ತರನ್ನು ಕೊಲ್ಲುವ, ಸೆನ್ಸಾರ್ ಮಾಡುವ, ಜೈಲಿಗೆ ಹಾಕುವ, ಹಲ್ಲೆ ಮಾಡುವ, ಸುದ್ದಿ ಮಾಧ್ಯಮವನ್ನು ಹತ್ತಿಕ್ಕುವ, ಪತ್ರಿಕೋದ್ಯಮವನ್ನು ಅವಹೇಳನ ಮಾಡುವ ಅಥವಾ ಪ್ರಚಾರದ ಉದ್ದೇಶಗಳಿಗಾಗಿ ಮಾಹಿತಿಯನ್ನು ತಿರುಚಲು ಅದರ ಸಂಕೇತಗಳನ್ನು ಬಳಸುವ ಜನರು, ಸಂಸ್ಥೆಗಳು, ನಿಗಮಗಳು ಮತ್ತು ಸರ್ಕಾರಗಳು ಸೇರಿವೆ.

ಗೌತಮ್ ಅದಾನಿ ಮಾಲಿಕತ್ವದ ಅದಾನಿ ಗ್ರೂಪ್ ಮತ್ತು ಬಲಪಂಥೀಯ ಸುದ್ದಿ ವೆಬ್‌ಸೈಟ್ ಒಪ್ ಇಂಡಿಯಾವನ್ನು ‘ಪತ್ರಿಕಾ ಸ್ವಾತಂತ್ರ್ಯ ಹರಣಗಾರರು’ ಎಂದು ಆರ್‌ಎಸ್‌ಎಫ್ ಗುರುತಿಸಿದೆ.

ಜಾಗತಿಕವಾಗಿ ಪ್ರಬಲವಾಗಿರುವ ಕ್ಸಿ ಜಿನ್‌ಪಿಂಗ್ ನೇತೃತ್ವದ ಚೀನೀ ಕಮ್ಯುನಿಸ್ಟ್ ಪಕ್ಷ, ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಹಾಗೂ ಗೂಗಲ್ ಮಾತೃಸಂಸ್ಥೆ ಆಲ್ಪಾಬೆಟ್ ಮತ್ತು ಫೇಸ್‌ಬುಕ್ ಮಾತೃಸಂಸ್ಥೆ ಮೆಟಾ ಹೆಸರುಗಳೂ ಪಟ್ಟಿಯಲ್ಲಿ ಇದೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನೇತೃತ್ವದಲ್ಲಿ ಸುಮಾರು 220 ಪತ್ರಕರ್ತರ ಸಾವಿಗೆ ಕಾರಣರಾದ ಇಸ್ರೇಲ್ ಡಿಫೆನ್ಸ್ ಫೋರ್ಸ್ (ಐಡಿಎಫ್‌), ಮ್ಯಾನ್ಮಾರ್‌ ಸ್ಟೇಟ್ ಪೀಸ್ ಅಂಡ್ ಸೆಕ್ಯೂರಿಟಿ ಕಮಿಷನ್, ಕ್ಯಾಪ್ಟನ್ ಇಬ್ರಾಹಿಂ ಟ್ರೊರೆ ನೇತೃತ್ವದ ಬುರ್ಕಿನಾ ಫಾಸೊದ ಮಿಲಿಟರಿ ಜುಂಟಾ ಮತ್ತು ಪತ್ರಕರ್ತರಿಗೆ ಕಿರುಕುಳ ನೀಡಲು ತನ್ನ ಸಾಮಾಜಿಕ ಮಾಧ್ಯಮ ಎಕ್ಸ್ ಅನ್ನು ಬಳಸುವ ಬಿಲಿಯನೇರ್ ಎಲೋನ್ ಮಸ್ಕ್ ಕೂಡ ಪಟ್ಟಿಯಲ್ಲಿದ್ದಾರೆ.

ಅದಾನಿ

ಗೌತಮ್ ಅದಾನಿ ಭಾರತದ ಎರಡನೇ ಶ್ರೀಮಂತ ವ್ಯಕ್ತಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಪ್ತ ಮಿತ್ರ ಎಂದು ಆರ್‌ಎಸ್‌ಎಫ್ ಉಲ್ಲೇಖಿಸಿದೆ. ಗ್ಯಾಗ್ ಸೂಟ್ (ಬಾಯಿ ಮುಚ್ಚಿಸುವ ಪ್ರಕರಣಗಳು) ಎಂಬ ಯೋಜಿತ ತಂತ್ರದ ಭಾಗವಾಗಿ ಆದಾನಿ ಗ್ರೂಪ್ ಮತ್ತು ಅದರ ಅಂಗ ಸಂಸ್ಥೆಗಳು 2017ರಿಂದ ಇಲ್ಲಿಯವರೆಗೆ 15ಕ್ಕೂ ಹೆಚ್ಚು ವಿಮರ್ಶಾತ್ಮಕ ಪತ್ರಕರ್ತರ ಮತ್ತು ಸುದ್ದಿ ಮಾಧ್ಯಮಗಳ ವಿರುದ್ಧ ಸುಮಾರು 10 ಕಾನೂನು ಮೊಕದ್ದಮೆಗಳನ್ನು ಹೂಡಿವೆ. ಇವುಗಳಲ್ಲಿ ಹಣದ ಪರಿಹಾರ ಕೇಳುವ ಮೊಕದ್ದೆಮೆಗಳು (ಸಿವಿಲ್ ಡಿಫಾಮೇಷನ್ ಕೇಸ್) ಮತ್ತು ಜೈಲು ಶಿಕ್ಷೆಯ ಬೆದರಿಕೆ ಇರುವ ಮೊಕದ್ದೆಮೆಗಳು (ಕ್ರಿಮಿನಲ್ ಡಿಫಾಮೇಷನ್ ಕೇಸ್) ಸೇರಿವೆ. ಈ ಮೂಲಕ ಸ್ವತಂತ್ರ ಪತ್ರಿಕೆಗಳ ಧ್ವನಿಯನ್ನು ಅಡಗಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದೆ.

ಆದಾನಿ ಗ್ರೂಪ್‌ನ 2025ರ ‘ಹಿಟ್ ಲಿಸ್ಟ್‌ನಲ್ಲಿ (ಟಾರ್ಗೆಟ್ ಪಟ್ಟಿ) 8 ಪತ್ರಕರ್ತರ ಮತ್ತು 3 ಸುದ್ದಿ ಮಾಧ್ಯಮಗಳ ವಿರುದ್ಧ ಆದಾನಿ ಹೂಡಿರುವ ಒಂದು ಸಿವಿಲ್ ಡಿಫಾಮೇಷನ್ (ಹಣದ ಪರಿಹಾರ) ಮತ್ತು ಒಂದು ಕ್ರಿಮಿನಲ್ ಡಿಫಾಮೇಷನ್ (ಜೈಲು ಶಿಕ್ಷೆಯ ಬೆದರಿಕೆ) ಪ್ರಕರಣ ಸೇರಿ ಎರಡು ಮೊಕದ್ದೆಮೆಗಳು ಸೇರಿವೆ. ಈ ಪ್ರಕರಣಗಳಲ್ಲಿ ನ್ಯಾಯಾಲಯವು ‘ಎಕ್ಸ್‌ಪಾರ್ಟೆ ಇಂಜಂಕ್ಷನ್’ (ಒಂದು ಪಕ್ಷದ ವಾದ ಆಲಿಸಿ ತಾತ್ಕಾಲಿಕ ತಡೆಯಾಜ್ಞೆ) ನೀಡಿದೆ. ಆದಾನಿ ಗ್ರೂಪ್‌ಗೆ ತಾವೇ ಯಾವ ಸುದ್ದಿ/ಲೇಖನ ತನಗೆ ‘ಅಪಖ್ಯಾತಿ’ ತರುವಂತದ್ದು ಎಂದು ನಿರ್ಧರಿಸುವ ಅಧಿಕಾರ ಸಿಕ್ಕಿದೆ. ಪತ್ರಕರ್ತರಿಗೆ ಅಥವಾ ಮಾಧ್ಯಮಕ್ಕೆ ಅವರ ವಾದ ಆಲಿಸದೇ ಆ ವಿಷಯಗಳನ್ನು ತೆಗೆದುಹಾಕುವಂತೆ ಆದೇಶವಾಗಿದೆ. ಪ್ರಕರಣವನ್ನು ಗುರುತಿಸಲಾಗದ ಮೂರನೇ ವ್ಯಕ್ತಿಗಳಿಗೆ ವಿಸ್ತರಿಸಲಾಗಿದೆ ಮತ್ತು ಅನಿಯಮಿತ ಸೆನ್ಸಾರ್‌ಶಿಪ್‌ಗೆ ಕಾರಣವಾಗಬಹುದು ಎಂದು ವರದಿ ಹೇಳಿದೆ.

ದಿ ವೈರ್, ನ್ಯೂಸ್‌ಲಾಂಡ್ರಿ, ಹೆಚ್‌ಡಬ್ಲ್ಯೂ ನ್ಯೂಸ್ ಮತ್ತು ಸ್ವತಂತ್ರ ಪತ್ರಕರ್ತ ರವೀಶ್ ಕುಮಾರ್‌ನಂತಹ ಮಾಧ್ಯಮಗಳಿಗೆ ವಿಷಯಗಳನ್ನು ತೆಗೆದುಹಾಕುವ ಆದೇಶಗಳನ್ನು ನೀಡಲಾಗಿದೆ ಎಂದು ವರದಿಯಲ್ಲಿ ಹೇಳಿರುವುದಾಗಿ ದಿ ವೈರ್ ತಿಳಿಸಿದೆ.

ವರದಿಯು ಗ್ಯಾಗ್ ಸೂಟ್‌ಗಳ ಬಳಕೆಯನ್ನು ಅದಾನಿಯ ಮಾರಕ ಆಯುಧವಾಗಿ ಗುರುತಿಸಿದೆ.

ಒಪ್‌ಇಂಡಿಯಾ

ಬಲಪಂಥೀಯಾ ಸುದ್ದಿ ವೆಬ್‌ಸೈಟ್ ಒಪ್‌ಇಂಡಿಯಾವನ್ನು ಪಿತೂರಿ ಸಿದ್ಧಾಂತಗಳ ಮಾರಕ ಆಯುಧ ಎಂದು ವರದಿ ಹೇಳಿದೆ. 2025ರಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲು ತಂತ್ರಜ್ಞಾನವನ್ನು ಹೆಚ್ಚಾಗಿ ಬಳಸಲಾಗಿದೆ. ಇದಕ್ಕೆ ಉದಾಹರಣೆಯಾಗಿ ಒಪ್‌ಇಂಡಿಯಾವನ್ನು ಹೆಸರಿಸಿದೆ.

“ಹಿಂದೂ ರಾಷ್ಟ್ರೀಯತಾವಾದಿ ವೆಬ್‌ಸೈಟ್ ಒಪ್‌ಇಂಡಿಯಾ ಸರ್ಕಾರವನ್ನು ಟೀಕಿಸುವ ಪತ್ರಕರ್ತರ ಮೇಲೆ ಪದೇ ಪದೇ ದಾಳಿ ನಡೆಸುವುದಕ್ಕೆ ಹೆಸರುವಾಸಿಯಾಗಿದೆ. ಒಪ್‌ಇಂಡಿಯಾದ ವಿಷಯವು ‘ಲಿಬರಲ್ ಮೀಡಿಯಾ ಕಾರ್ಟೆಲ್’ ವಿರುದ್ಧದ ಹೋರಾಟದ ಭಾಗವಾಗಿ ತನ್ನನ್ನು ತಾನು ಬಿಂಬಿಸಿಕೊಳ್ಳುತ್ತದೆ. ಟ್ರೋಲ್ ನೆಟ್‌ವರ್ಕ್‌ಗಳ ಸಹಾಯದಿಂದ, ಇದು ನಿರ್ಣಾಯಕ ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳನ್ನು ಅಪಖ್ಯಾತಿಗೊಳಿಸುವ ಗುರಿಯನ್ನು ಹೊಂದಿರುವ ನಿರೂಪಣೆಗಳನ್ನು ಪ್ರಸಾರ ಮಾಡುತ್ತದೆ, ಆಗಾಗ್ಗೆ ಅವರು ಯುಎಸ್ ಬಿಲಿಯನೇರ್ ಲೋಕೋಪಕಾರಿ ಅಥವಾ ಭಾರತ ವಿರೋಧಿ ಲಾಬಿ ಯ ಭಾಗವಾಗಿದ್ದಾರೆ ಎಂದು ಆರೋಪಿಸುತ್ತದೆ” ಎಂದು ವರದಿ ಹೇಳಿದೆ.

ಈ ವರ್ಷ ಒಪ್ಇಂಡಿಯಾ ಒಟ್ಟು 96 ಲೇಖನಗಳ ಮೂಲಕ ಪತ್ರಕರ್ತರು ಹಾಗೂ ಸ್ವತಂತ್ರ ಮಾಧ್ಯಮಗಳ ಮೇಲೆ ನೇರ ದಾಳಿ ನಡೆಸಿದೆ. 200 ಪುಟಗಳ ಒಂದು ವರದಿ ಪ್ರಕಟಿಸಿ, ಕೆಲವು ಪತ್ರಕರ್ತರು ಮತ್ತು ಮಾಧ್ಯಮಗಳು ಒಂದು ಗುಪ್ತ ಜಾಲ ರಚಿಸಿ ಮೋದಿ ಸರ್ಕಾರದ ವಿರುದ್ಧ ‘ನರೇಟಿವ್ ವಾರ್’ ನಡೆಸುತ್ತಿದ್ದಾರೆ ಮತ್ತು ಭಾರತದಲ್ಲಿ ‘ರೆಜೀಮ್ ಚೇಂಜ್’ (ಸರ್ಕಾರ ಉರುಳಿಸುವ ಯೋಜನೆ) ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಪೂರ್ತಿ ಕುಮ್ಮಕ್ಕು ಸಿದ್ಧಾಂತಗಳನ್ನು ಹರಡಿದೆ. ಈ ಲೇಖನಗಳು ಪ್ರಕಟವಾದ ತಕ್ಷಣ ಯೋಜಿತವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ, ಬೆದರಿಕೆ ಮತ್ತು ಆನ್‌ಲೈನ್ ದೌರ್ಜನ್ಯದ ಬೃಹತ್ ಅಲೆಗಳು ಆ ಪತ್ರಕರ್ತರ ಮೇಲೆ ಬೀಳುವಂತೆ ಮಾಡಿದೆ. ಈ ಎಲ್ಲಾ ಕೃತ್ಯಗಳ ಮೂಲಕ ಸ್ವತಂತ್ರ ಪತ್ರಿಕೋದ್ಯಮವನ್ನು ಭಯಭೀತಿಗೊಳಿಸುವ ಮತ್ತು ಮೌನಗೊಳಿಸುವ ಉದ್ದೇಶ ಹೊಂದಿವೆ ಎಂಬುದು ಆರ್‌ಎಸ್‌ಎಫ್‌ ವರದಿಯ ಮುಖ್ಯ ಆತಂಕವಾಗಿದೆ.

ಸ್ವತಂತ್ರ ಮಾಧ್ಯಮ ಸಂಸ್ಥೆ ದಿ ನ್ಯೂಸ್ ಮಿನಿಟ್‌ನ ಸಹ-ಸಂಸ್ಥಾಪಕಿ ಮತ್ತು ಸಂಪಾದಕಿ ಧನ್ಯಾ ರಾಜೇಂದ್ರನ್ ಅವರನ್ನು ಪ್ರೈಝ್ ಫಾರ್ ಇಂಪ್ಯಾಕ್ಟ್‌ಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ತಾನು ಘೋಷಿಸಿದ ನಂತರ, ಅಕ್ಟೋಬರ್ 23ರಂದು ಒಪ್‌ಇಂಡಿಯಾದಲ್ಲಿ ಅವರು ಮಾನಹಾನಿಕರ ವಿಷಯಕ್ಕೆ ಗುರಿಯಾಗಿದ್ದರು ಎಂದು ಆರ್‌ಎಸ್‌ಎಫ್‌ ತಿಳಿಸಿದೆ.

ಆರ್‌ಎಸ್‌ಎಫ್‌ ವರದಿಯನ್ನು ಇಲ್ಲಿ ನೋಡಬಹುದು

Courtesy : thewire.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...