Homeಅಂತರಾಷ್ಟ್ರೀಯಆರ್‌ಎಸ್‌ಎಫ್‌ 'ಪತ್ರಿಕಾ ಸ್ವಾತಂತ್ರ್ಯ ಹರಣಗಾರರ' ಪಟ್ಟಿಯಲ್ಲಿ ಅದಾನಿ ಗ್ರೂಪ್, ಒಪ್‌ಇಂಡಿಯಾ

ಆರ್‌ಎಸ್‌ಎಫ್‌ ‘ಪತ್ರಿಕಾ ಸ್ವಾತಂತ್ರ್ಯ ಹರಣಗಾರರ’ ಪಟ್ಟಿಯಲ್ಲಿ ಅದಾನಿ ಗ್ರೂಪ್, ಒಪ್‌ಇಂಡಿಯಾ

- Advertisement -
- Advertisement -

ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಪ್ರಕಟಿಸಿದ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ 180 ದೇಶಗಳ ಪೈಕಿ ಭಾರತ 151ನೇ ಸ್ಥಾನ ಪಡೆದಿದೆ. ಕಳೆದ ತಿಂಗಳು (ನೆವಂಬರ್ 2) ಪ್ರಕಟಿಸಿದ ಪತ್ರಿಕಾ ಸ್ವಾತಂತ್ರ್ಯ ಹರಣಗಾರರ ಪಟ್ಟಿಯಲ್ಲಿ ಭಾರತದ ಎರಡು ಸಂಸ್ಥೆಗಳ ಹೆಸರಿದೆ.

ಪತ್ರಿಕಾ ಸ್ವಾತಂತ್ರ್ಯ ಹರಣಗಾರರ ಪಟ್ಟಿಯಲ್ಲಿ ಪತ್ರಕರ್ತರನ್ನು ಕೊಲ್ಲುವ, ಸೆನ್ಸಾರ್ ಮಾಡುವ, ಜೈಲಿಗೆ ಹಾಕುವ, ಹಲ್ಲೆ ಮಾಡುವ, ಸುದ್ದಿ ಮಾಧ್ಯಮವನ್ನು ಹತ್ತಿಕ್ಕುವ, ಪತ್ರಿಕೋದ್ಯಮವನ್ನು ಅವಹೇಳನ ಮಾಡುವ ಅಥವಾ ಪ್ರಚಾರದ ಉದ್ದೇಶಗಳಿಗಾಗಿ ಮಾಹಿತಿಯನ್ನು ತಿರುಚಲು ಅದರ ಸಂಕೇತಗಳನ್ನು ಬಳಸುವ ಜನರು, ಸಂಸ್ಥೆಗಳು, ನಿಗಮಗಳು ಮತ್ತು ಸರ್ಕಾರಗಳು ಸೇರಿವೆ.

ಗೌತಮ್ ಅದಾನಿ ಮಾಲಿಕತ್ವದ ಅದಾನಿ ಗ್ರೂಪ್ ಮತ್ತು ಬಲಪಂಥೀಯ ಸುದ್ದಿ ವೆಬ್‌ಸೈಟ್ ಒಪ್ ಇಂಡಿಯಾವನ್ನು ‘ಪತ್ರಿಕಾ ಸ್ವಾತಂತ್ರ್ಯ ಹರಣಗಾರರು’ ಎಂದು ಆರ್‌ಎಸ್‌ಎಫ್ ಗುರುತಿಸಿದೆ.

ಜಾಗತಿಕವಾಗಿ ಪ್ರಬಲವಾಗಿರುವ ಕ್ಸಿ ಜಿನ್‌ಪಿಂಗ್ ನೇತೃತ್ವದ ಚೀನೀ ಕಮ್ಯುನಿಸ್ಟ್ ಪಕ್ಷ, ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಹಾಗೂ ಗೂಗಲ್ ಮಾತೃಸಂಸ್ಥೆ ಆಲ್ಪಾಬೆಟ್ ಮತ್ತು ಫೇಸ್‌ಬುಕ್ ಮಾತೃಸಂಸ್ಥೆ ಮೆಟಾ ಹೆಸರುಗಳೂ ಪಟ್ಟಿಯಲ್ಲಿ ಇದೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನೇತೃತ್ವದಲ್ಲಿ ಸುಮಾರು 220 ಪತ್ರಕರ್ತರ ಸಾವಿಗೆ ಕಾರಣರಾದ ಇಸ್ರೇಲ್ ಡಿಫೆನ್ಸ್ ಫೋರ್ಸ್ (ಐಡಿಎಫ್‌), ಮ್ಯಾನ್ಮಾರ್‌ ಸ್ಟೇಟ್ ಪೀಸ್ ಅಂಡ್ ಸೆಕ್ಯೂರಿಟಿ ಕಮಿಷನ್, ಕ್ಯಾಪ್ಟನ್ ಇಬ್ರಾಹಿಂ ಟ್ರೊರೆ ನೇತೃತ್ವದ ಬುರ್ಕಿನಾ ಫಾಸೊದ ಮಿಲಿಟರಿ ಜುಂಟಾ ಮತ್ತು ಪತ್ರಕರ್ತರಿಗೆ ಕಿರುಕುಳ ನೀಡಲು ತನ್ನ ಸಾಮಾಜಿಕ ಮಾಧ್ಯಮ ಎಕ್ಸ್ ಅನ್ನು ಬಳಸುವ ಬಿಲಿಯನೇರ್ ಎಲೋನ್ ಮಸ್ಕ್ ಕೂಡ ಪಟ್ಟಿಯಲ್ಲಿದ್ದಾರೆ.

ಅದಾನಿ

ಗೌತಮ್ ಅದಾನಿ ಭಾರತದ ಎರಡನೇ ಶ್ರೀಮಂತ ವ್ಯಕ್ತಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಪ್ತ ಮಿತ್ರ ಎಂದು ಆರ್‌ಎಸ್‌ಎಫ್ ಉಲ್ಲೇಖಿಸಿದೆ. ಗ್ಯಾಗ್ ಸೂಟ್ (ಬಾಯಿ ಮುಚ್ಚಿಸುವ ಪ್ರಕರಣಗಳು) ಎಂಬ ಯೋಜಿತ ತಂತ್ರದ ಭಾಗವಾಗಿ ಆದಾನಿ ಗ್ರೂಪ್ ಮತ್ತು ಅದರ ಅಂಗ ಸಂಸ್ಥೆಗಳು 2017ರಿಂದ ಇಲ್ಲಿಯವರೆಗೆ 15ಕ್ಕೂ ಹೆಚ್ಚು ವಿಮರ್ಶಾತ್ಮಕ ಪತ್ರಕರ್ತರ ಮತ್ತು ಸುದ್ದಿ ಮಾಧ್ಯಮಗಳ ವಿರುದ್ಧ ಸುಮಾರು 10 ಕಾನೂನು ಮೊಕದ್ದಮೆಗಳನ್ನು ಹೂಡಿವೆ. ಇವುಗಳಲ್ಲಿ ಹಣದ ಪರಿಹಾರ ಕೇಳುವ ಮೊಕದ್ದೆಮೆಗಳು (ಸಿವಿಲ್ ಡಿಫಾಮೇಷನ್ ಕೇಸ್) ಮತ್ತು ಜೈಲು ಶಿಕ್ಷೆಯ ಬೆದರಿಕೆ ಇರುವ ಮೊಕದ್ದೆಮೆಗಳು (ಕ್ರಿಮಿನಲ್ ಡಿಫಾಮೇಷನ್ ಕೇಸ್) ಸೇರಿವೆ. ಈ ಮೂಲಕ ಸ್ವತಂತ್ರ ಪತ್ರಿಕೆಗಳ ಧ್ವನಿಯನ್ನು ಅಡಗಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದೆ.

ಆದಾನಿ ಗ್ರೂಪ್‌ನ 2025ರ ‘ಹಿಟ್ ಲಿಸ್ಟ್‌ನಲ್ಲಿ (ಟಾರ್ಗೆಟ್ ಪಟ್ಟಿ) 8 ಪತ್ರಕರ್ತರ ಮತ್ತು 3 ಸುದ್ದಿ ಮಾಧ್ಯಮಗಳ ವಿರುದ್ಧ ಆದಾನಿ ಹೂಡಿರುವ ಒಂದು ಸಿವಿಲ್ ಡಿಫಾಮೇಷನ್ (ಹಣದ ಪರಿಹಾರ) ಮತ್ತು ಒಂದು ಕ್ರಿಮಿನಲ್ ಡಿಫಾಮೇಷನ್ (ಜೈಲು ಶಿಕ್ಷೆಯ ಬೆದರಿಕೆ) ಪ್ರಕರಣ ಸೇರಿ ಎರಡು ಮೊಕದ್ದೆಮೆಗಳು ಸೇರಿವೆ. ಈ ಪ್ರಕರಣಗಳಲ್ಲಿ ನ್ಯಾಯಾಲಯವು ‘ಎಕ್ಸ್‌ಪಾರ್ಟೆ ಇಂಜಂಕ್ಷನ್’ (ಒಂದು ಪಕ್ಷದ ವಾದ ಆಲಿಸಿ ತಾತ್ಕಾಲಿಕ ತಡೆಯಾಜ್ಞೆ) ನೀಡಿದೆ. ಆದಾನಿ ಗ್ರೂಪ್‌ಗೆ ತಾವೇ ಯಾವ ಸುದ್ದಿ/ಲೇಖನ ತನಗೆ ‘ಅಪಖ್ಯಾತಿ’ ತರುವಂತದ್ದು ಎಂದು ನಿರ್ಧರಿಸುವ ಅಧಿಕಾರ ಸಿಕ್ಕಿದೆ. ಪತ್ರಕರ್ತರಿಗೆ ಅಥವಾ ಮಾಧ್ಯಮಕ್ಕೆ ಅವರ ವಾದ ಆಲಿಸದೇ ಆ ವಿಷಯಗಳನ್ನು ತೆಗೆದುಹಾಕುವಂತೆ ಆದೇಶವಾಗಿದೆ. ಪ್ರಕರಣವನ್ನು ಗುರುತಿಸಲಾಗದ ಮೂರನೇ ವ್ಯಕ್ತಿಗಳಿಗೆ ವಿಸ್ತರಿಸಲಾಗಿದೆ ಮತ್ತು ಅನಿಯಮಿತ ಸೆನ್ಸಾರ್‌ಶಿಪ್‌ಗೆ ಕಾರಣವಾಗಬಹುದು ಎಂದು ವರದಿ ಹೇಳಿದೆ.

ದಿ ವೈರ್, ನ್ಯೂಸ್‌ಲಾಂಡ್ರಿ, ಹೆಚ್‌ಡಬ್ಲ್ಯೂ ನ್ಯೂಸ್ ಮತ್ತು ಸ್ವತಂತ್ರ ಪತ್ರಕರ್ತ ರವೀಶ್ ಕುಮಾರ್‌ನಂತಹ ಮಾಧ್ಯಮಗಳಿಗೆ ವಿಷಯಗಳನ್ನು ತೆಗೆದುಹಾಕುವ ಆದೇಶಗಳನ್ನು ನೀಡಲಾಗಿದೆ ಎಂದು ವರದಿಯಲ್ಲಿ ಹೇಳಿರುವುದಾಗಿ ದಿ ವೈರ್ ತಿಳಿಸಿದೆ.

ವರದಿಯು ಗ್ಯಾಗ್ ಸೂಟ್‌ಗಳ ಬಳಕೆಯನ್ನು ಅದಾನಿಯ ಮಾರಕ ಆಯುಧವಾಗಿ ಗುರುತಿಸಿದೆ.

ಒಪ್‌ಇಂಡಿಯಾ

ಬಲಪಂಥೀಯಾ ಸುದ್ದಿ ವೆಬ್‌ಸೈಟ್ ಒಪ್‌ಇಂಡಿಯಾವನ್ನು ಪಿತೂರಿ ಸಿದ್ಧಾಂತಗಳ ಮಾರಕ ಆಯುಧ ಎಂದು ವರದಿ ಹೇಳಿದೆ. 2025ರಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲು ತಂತ್ರಜ್ಞಾನವನ್ನು ಹೆಚ್ಚಾಗಿ ಬಳಸಲಾಗಿದೆ. ಇದಕ್ಕೆ ಉದಾಹರಣೆಯಾಗಿ ಒಪ್‌ಇಂಡಿಯಾವನ್ನು ಹೆಸರಿಸಿದೆ.

“ಹಿಂದೂ ರಾಷ್ಟ್ರೀಯತಾವಾದಿ ವೆಬ್‌ಸೈಟ್ ಒಪ್‌ಇಂಡಿಯಾ ಸರ್ಕಾರವನ್ನು ಟೀಕಿಸುವ ಪತ್ರಕರ್ತರ ಮೇಲೆ ಪದೇ ಪದೇ ದಾಳಿ ನಡೆಸುವುದಕ್ಕೆ ಹೆಸರುವಾಸಿಯಾಗಿದೆ. ಒಪ್‌ಇಂಡಿಯಾದ ವಿಷಯವು ‘ಲಿಬರಲ್ ಮೀಡಿಯಾ ಕಾರ್ಟೆಲ್’ ವಿರುದ್ಧದ ಹೋರಾಟದ ಭಾಗವಾಗಿ ತನ್ನನ್ನು ತಾನು ಬಿಂಬಿಸಿಕೊಳ್ಳುತ್ತದೆ. ಟ್ರೋಲ್ ನೆಟ್‌ವರ್ಕ್‌ಗಳ ಸಹಾಯದಿಂದ, ಇದು ನಿರ್ಣಾಯಕ ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳನ್ನು ಅಪಖ್ಯಾತಿಗೊಳಿಸುವ ಗುರಿಯನ್ನು ಹೊಂದಿರುವ ನಿರೂಪಣೆಗಳನ್ನು ಪ್ರಸಾರ ಮಾಡುತ್ತದೆ, ಆಗಾಗ್ಗೆ ಅವರು ಯುಎಸ್ ಬಿಲಿಯನೇರ್ ಲೋಕೋಪಕಾರಿ ಅಥವಾ ಭಾರತ ವಿರೋಧಿ ಲಾಬಿ ಯ ಭಾಗವಾಗಿದ್ದಾರೆ ಎಂದು ಆರೋಪಿಸುತ್ತದೆ” ಎಂದು ವರದಿ ಹೇಳಿದೆ.

ಈ ವರ್ಷ ಒಪ್ಇಂಡಿಯಾ ಒಟ್ಟು 96 ಲೇಖನಗಳ ಮೂಲಕ ಪತ್ರಕರ್ತರು ಹಾಗೂ ಸ್ವತಂತ್ರ ಮಾಧ್ಯಮಗಳ ಮೇಲೆ ನೇರ ದಾಳಿ ನಡೆಸಿದೆ. 200 ಪುಟಗಳ ಒಂದು ವರದಿ ಪ್ರಕಟಿಸಿ, ಕೆಲವು ಪತ್ರಕರ್ತರು ಮತ್ತು ಮಾಧ್ಯಮಗಳು ಒಂದು ಗುಪ್ತ ಜಾಲ ರಚಿಸಿ ಮೋದಿ ಸರ್ಕಾರದ ವಿರುದ್ಧ ‘ನರೇಟಿವ್ ವಾರ್’ ನಡೆಸುತ್ತಿದ್ದಾರೆ ಮತ್ತು ಭಾರತದಲ್ಲಿ ‘ರೆಜೀಮ್ ಚೇಂಜ್’ (ಸರ್ಕಾರ ಉರುಳಿಸುವ ಯೋಜನೆ) ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಪೂರ್ತಿ ಕುಮ್ಮಕ್ಕು ಸಿದ್ಧಾಂತಗಳನ್ನು ಹರಡಿದೆ. ಈ ಲೇಖನಗಳು ಪ್ರಕಟವಾದ ತಕ್ಷಣ ಯೋಜಿತವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ, ಬೆದರಿಕೆ ಮತ್ತು ಆನ್‌ಲೈನ್ ದೌರ್ಜನ್ಯದ ಬೃಹತ್ ಅಲೆಗಳು ಆ ಪತ್ರಕರ್ತರ ಮೇಲೆ ಬೀಳುವಂತೆ ಮಾಡಿದೆ. ಈ ಎಲ್ಲಾ ಕೃತ್ಯಗಳ ಮೂಲಕ ಸ್ವತಂತ್ರ ಪತ್ರಿಕೋದ್ಯಮವನ್ನು ಭಯಭೀತಿಗೊಳಿಸುವ ಮತ್ತು ಮೌನಗೊಳಿಸುವ ಉದ್ದೇಶ ಹೊಂದಿವೆ ಎಂಬುದು ಆರ್‌ಎಸ್‌ಎಫ್‌ ವರದಿಯ ಮುಖ್ಯ ಆತಂಕವಾಗಿದೆ.

ಸ್ವತಂತ್ರ ಮಾಧ್ಯಮ ಸಂಸ್ಥೆ ದಿ ನ್ಯೂಸ್ ಮಿನಿಟ್‌ನ ಸಹ-ಸಂಸ್ಥಾಪಕಿ ಮತ್ತು ಸಂಪಾದಕಿ ಧನ್ಯಾ ರಾಜೇಂದ್ರನ್ ಅವರನ್ನು ಪ್ರೈಝ್ ಫಾರ್ ಇಂಪ್ಯಾಕ್ಟ್‌ಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ತಾನು ಘೋಷಿಸಿದ ನಂತರ, ಅಕ್ಟೋಬರ್ 23ರಂದು ಒಪ್‌ಇಂಡಿಯಾದಲ್ಲಿ ಅವರು ಮಾನಹಾನಿಕರ ವಿಷಯಕ್ಕೆ ಗುರಿಯಾಗಿದ್ದರು ಎಂದು ಆರ್‌ಎಸ್‌ಎಫ್‌ ತಿಳಿಸಿದೆ.

ಆರ್‌ಎಸ್‌ಎಫ್‌ ವರದಿಯನ್ನು ಇಲ್ಲಿ ನೋಡಬಹುದು

Courtesy : thewire.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...