Homeಅಂತರಾಷ್ಟ್ರೀಯಆರ್‌ಎಸ್‌ಎಫ್‌ 'ಪತ್ರಿಕಾ ಸ್ವಾತಂತ್ರ್ಯ ಹರಣಗಾರರ' ಪಟ್ಟಿಯಲ್ಲಿ ಅದಾನಿ ಗ್ರೂಪ್, ಒಪ್‌ಇಂಡಿಯಾ

ಆರ್‌ಎಸ್‌ಎಫ್‌ ‘ಪತ್ರಿಕಾ ಸ್ವಾತಂತ್ರ್ಯ ಹರಣಗಾರರ’ ಪಟ್ಟಿಯಲ್ಲಿ ಅದಾನಿ ಗ್ರೂಪ್, ಒಪ್‌ಇಂಡಿಯಾ

- Advertisement -
- Advertisement -

ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಪ್ರಕಟಿಸಿದ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ 180 ದೇಶಗಳ ಪೈಕಿ ಭಾರತ 151ನೇ ಸ್ಥಾನ ಪಡೆದಿದೆ. ಕಳೆದ ತಿಂಗಳು (ನೆವಂಬರ್ 2) ಪ್ರಕಟಿಸಿದ ಪತ್ರಿಕಾ ಸ್ವಾತಂತ್ರ್ಯ ಹರಣಗಾರರ ಪಟ್ಟಿಯಲ್ಲಿ ಭಾರತದ ಎರಡು ಸಂಸ್ಥೆಗಳ ಹೆಸರಿದೆ.

ಪತ್ರಿಕಾ ಸ್ವಾತಂತ್ರ್ಯ ಹರಣಗಾರರ ಪಟ್ಟಿಯಲ್ಲಿ ಪತ್ರಕರ್ತರನ್ನು ಕೊಲ್ಲುವ, ಸೆನ್ಸಾರ್ ಮಾಡುವ, ಜೈಲಿಗೆ ಹಾಕುವ, ಹಲ್ಲೆ ಮಾಡುವ, ಸುದ್ದಿ ಮಾಧ್ಯಮವನ್ನು ಹತ್ತಿಕ್ಕುವ, ಪತ್ರಿಕೋದ್ಯಮವನ್ನು ಅವಹೇಳನ ಮಾಡುವ ಅಥವಾ ಪ್ರಚಾರದ ಉದ್ದೇಶಗಳಿಗಾಗಿ ಮಾಹಿತಿಯನ್ನು ತಿರುಚಲು ಅದರ ಸಂಕೇತಗಳನ್ನು ಬಳಸುವ ಜನರು, ಸಂಸ್ಥೆಗಳು, ನಿಗಮಗಳು ಮತ್ತು ಸರ್ಕಾರಗಳು ಸೇರಿವೆ.

ಗೌತಮ್ ಅದಾನಿ ಮಾಲಿಕತ್ವದ ಅದಾನಿ ಗ್ರೂಪ್ ಮತ್ತು ಬಲಪಂಥೀಯ ಸುದ್ದಿ ವೆಬ್‌ಸೈಟ್ ಒಪ್ ಇಂಡಿಯಾವನ್ನು ‘ಪತ್ರಿಕಾ ಸ್ವಾತಂತ್ರ್ಯ ಹರಣಗಾರರು’ ಎಂದು ಆರ್‌ಎಸ್‌ಎಫ್ ಗುರುತಿಸಿದೆ.

ಜಾಗತಿಕವಾಗಿ ಪ್ರಬಲವಾಗಿರುವ ಕ್ಸಿ ಜಿನ್‌ಪಿಂಗ್ ನೇತೃತ್ವದ ಚೀನೀ ಕಮ್ಯುನಿಸ್ಟ್ ಪಕ್ಷ, ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಹಾಗೂ ಗೂಗಲ್ ಮಾತೃಸಂಸ್ಥೆ ಆಲ್ಪಾಬೆಟ್ ಮತ್ತು ಫೇಸ್‌ಬುಕ್ ಮಾತೃಸಂಸ್ಥೆ ಮೆಟಾ ಹೆಸರುಗಳೂ ಪಟ್ಟಿಯಲ್ಲಿ ಇದೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನೇತೃತ್ವದಲ್ಲಿ ಸುಮಾರು 220 ಪತ್ರಕರ್ತರ ಸಾವಿಗೆ ಕಾರಣರಾದ ಇಸ್ರೇಲ್ ಡಿಫೆನ್ಸ್ ಫೋರ್ಸ್ (ಐಡಿಎಫ್‌), ಮ್ಯಾನ್ಮಾರ್‌ ಸ್ಟೇಟ್ ಪೀಸ್ ಅಂಡ್ ಸೆಕ್ಯೂರಿಟಿ ಕಮಿಷನ್, ಕ್ಯಾಪ್ಟನ್ ಇಬ್ರಾಹಿಂ ಟ್ರೊರೆ ನೇತೃತ್ವದ ಬುರ್ಕಿನಾ ಫಾಸೊದ ಮಿಲಿಟರಿ ಜುಂಟಾ ಮತ್ತು ಪತ್ರಕರ್ತರಿಗೆ ಕಿರುಕುಳ ನೀಡಲು ತನ್ನ ಸಾಮಾಜಿಕ ಮಾಧ್ಯಮ ಎಕ್ಸ್ ಅನ್ನು ಬಳಸುವ ಬಿಲಿಯನೇರ್ ಎಲೋನ್ ಮಸ್ಕ್ ಕೂಡ ಪಟ್ಟಿಯಲ್ಲಿದ್ದಾರೆ.

ಅದಾನಿ

ಗೌತಮ್ ಅದಾನಿ ಭಾರತದ ಎರಡನೇ ಶ್ರೀಮಂತ ವ್ಯಕ್ತಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಪ್ತ ಮಿತ್ರ ಎಂದು ಆರ್‌ಎಸ್‌ಎಫ್ ಉಲ್ಲೇಖಿಸಿದೆ. ಗ್ಯಾಗ್ ಸೂಟ್ (ಬಾಯಿ ಮುಚ್ಚಿಸುವ ಪ್ರಕರಣಗಳು) ಎಂಬ ಯೋಜಿತ ತಂತ್ರದ ಭಾಗವಾಗಿ ಆದಾನಿ ಗ್ರೂಪ್ ಮತ್ತು ಅದರ ಅಂಗ ಸಂಸ್ಥೆಗಳು 2017ರಿಂದ ಇಲ್ಲಿಯವರೆಗೆ 15ಕ್ಕೂ ಹೆಚ್ಚು ವಿಮರ್ಶಾತ್ಮಕ ಪತ್ರಕರ್ತರ ಮತ್ತು ಸುದ್ದಿ ಮಾಧ್ಯಮಗಳ ವಿರುದ್ಧ ಸುಮಾರು 10 ಕಾನೂನು ಮೊಕದ್ದಮೆಗಳನ್ನು ಹೂಡಿವೆ. ಇವುಗಳಲ್ಲಿ ಹಣದ ಪರಿಹಾರ ಕೇಳುವ ಮೊಕದ್ದೆಮೆಗಳು (ಸಿವಿಲ್ ಡಿಫಾಮೇಷನ್ ಕೇಸ್) ಮತ್ತು ಜೈಲು ಶಿಕ್ಷೆಯ ಬೆದರಿಕೆ ಇರುವ ಮೊಕದ್ದೆಮೆಗಳು (ಕ್ರಿಮಿನಲ್ ಡಿಫಾಮೇಷನ್ ಕೇಸ್) ಸೇರಿವೆ. ಈ ಮೂಲಕ ಸ್ವತಂತ್ರ ಪತ್ರಿಕೆಗಳ ಧ್ವನಿಯನ್ನು ಅಡಗಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದೆ.

ಆದಾನಿ ಗ್ರೂಪ್‌ನ 2025ರ ‘ಹಿಟ್ ಲಿಸ್ಟ್‌ನಲ್ಲಿ (ಟಾರ್ಗೆಟ್ ಪಟ್ಟಿ) 8 ಪತ್ರಕರ್ತರ ಮತ್ತು 3 ಸುದ್ದಿ ಮಾಧ್ಯಮಗಳ ವಿರುದ್ಧ ಆದಾನಿ ಹೂಡಿರುವ ಒಂದು ಸಿವಿಲ್ ಡಿಫಾಮೇಷನ್ (ಹಣದ ಪರಿಹಾರ) ಮತ್ತು ಒಂದು ಕ್ರಿಮಿನಲ್ ಡಿಫಾಮೇಷನ್ (ಜೈಲು ಶಿಕ್ಷೆಯ ಬೆದರಿಕೆ) ಪ್ರಕರಣ ಸೇರಿ ಎರಡು ಮೊಕದ್ದೆಮೆಗಳು ಸೇರಿವೆ. ಈ ಪ್ರಕರಣಗಳಲ್ಲಿ ನ್ಯಾಯಾಲಯವು ‘ಎಕ್ಸ್‌ಪಾರ್ಟೆ ಇಂಜಂಕ್ಷನ್’ (ಒಂದು ಪಕ್ಷದ ವಾದ ಆಲಿಸಿ ತಾತ್ಕಾಲಿಕ ತಡೆಯಾಜ್ಞೆ) ನೀಡಿದೆ. ಆದಾನಿ ಗ್ರೂಪ್‌ಗೆ ತಾವೇ ಯಾವ ಸುದ್ದಿ/ಲೇಖನ ತನಗೆ ‘ಅಪಖ್ಯಾತಿ’ ತರುವಂತದ್ದು ಎಂದು ನಿರ್ಧರಿಸುವ ಅಧಿಕಾರ ಸಿಕ್ಕಿದೆ. ಪತ್ರಕರ್ತರಿಗೆ ಅಥವಾ ಮಾಧ್ಯಮಕ್ಕೆ ಅವರ ವಾದ ಆಲಿಸದೇ ಆ ವಿಷಯಗಳನ್ನು ತೆಗೆದುಹಾಕುವಂತೆ ಆದೇಶವಾಗಿದೆ. ಪ್ರಕರಣವನ್ನು ಗುರುತಿಸಲಾಗದ ಮೂರನೇ ವ್ಯಕ್ತಿಗಳಿಗೆ ವಿಸ್ತರಿಸಲಾಗಿದೆ ಮತ್ತು ಅನಿಯಮಿತ ಸೆನ್ಸಾರ್‌ಶಿಪ್‌ಗೆ ಕಾರಣವಾಗಬಹುದು ಎಂದು ವರದಿ ಹೇಳಿದೆ.

ದಿ ವೈರ್, ನ್ಯೂಸ್‌ಲಾಂಡ್ರಿ, ಹೆಚ್‌ಡಬ್ಲ್ಯೂ ನ್ಯೂಸ್ ಮತ್ತು ಸ್ವತಂತ್ರ ಪತ್ರಕರ್ತ ರವೀಶ್ ಕುಮಾರ್‌ನಂತಹ ಮಾಧ್ಯಮಗಳಿಗೆ ವಿಷಯಗಳನ್ನು ತೆಗೆದುಹಾಕುವ ಆದೇಶಗಳನ್ನು ನೀಡಲಾಗಿದೆ ಎಂದು ವರದಿಯಲ್ಲಿ ಹೇಳಿರುವುದಾಗಿ ದಿ ವೈರ್ ತಿಳಿಸಿದೆ.

ವರದಿಯು ಗ್ಯಾಗ್ ಸೂಟ್‌ಗಳ ಬಳಕೆಯನ್ನು ಅದಾನಿಯ ಮಾರಕ ಆಯುಧವಾಗಿ ಗುರುತಿಸಿದೆ.

ಒಪ್‌ಇಂಡಿಯಾ

ಬಲಪಂಥೀಯಾ ಸುದ್ದಿ ವೆಬ್‌ಸೈಟ್ ಒಪ್‌ಇಂಡಿಯಾವನ್ನು ಪಿತೂರಿ ಸಿದ್ಧಾಂತಗಳ ಮಾರಕ ಆಯುಧ ಎಂದು ವರದಿ ಹೇಳಿದೆ. 2025ರಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲು ತಂತ್ರಜ್ಞಾನವನ್ನು ಹೆಚ್ಚಾಗಿ ಬಳಸಲಾಗಿದೆ. ಇದಕ್ಕೆ ಉದಾಹರಣೆಯಾಗಿ ಒಪ್‌ಇಂಡಿಯಾವನ್ನು ಹೆಸರಿಸಿದೆ.

“ಹಿಂದೂ ರಾಷ್ಟ್ರೀಯತಾವಾದಿ ವೆಬ್‌ಸೈಟ್ ಒಪ್‌ಇಂಡಿಯಾ ಸರ್ಕಾರವನ್ನು ಟೀಕಿಸುವ ಪತ್ರಕರ್ತರ ಮೇಲೆ ಪದೇ ಪದೇ ದಾಳಿ ನಡೆಸುವುದಕ್ಕೆ ಹೆಸರುವಾಸಿಯಾಗಿದೆ. ಒಪ್‌ಇಂಡಿಯಾದ ವಿಷಯವು ‘ಲಿಬರಲ್ ಮೀಡಿಯಾ ಕಾರ್ಟೆಲ್’ ವಿರುದ್ಧದ ಹೋರಾಟದ ಭಾಗವಾಗಿ ತನ್ನನ್ನು ತಾನು ಬಿಂಬಿಸಿಕೊಳ್ಳುತ್ತದೆ. ಟ್ರೋಲ್ ನೆಟ್‌ವರ್ಕ್‌ಗಳ ಸಹಾಯದಿಂದ, ಇದು ನಿರ್ಣಾಯಕ ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳನ್ನು ಅಪಖ್ಯಾತಿಗೊಳಿಸುವ ಗುರಿಯನ್ನು ಹೊಂದಿರುವ ನಿರೂಪಣೆಗಳನ್ನು ಪ್ರಸಾರ ಮಾಡುತ್ತದೆ, ಆಗಾಗ್ಗೆ ಅವರು ಯುಎಸ್ ಬಿಲಿಯನೇರ್ ಲೋಕೋಪಕಾರಿ ಅಥವಾ ಭಾರತ ವಿರೋಧಿ ಲಾಬಿ ಯ ಭಾಗವಾಗಿದ್ದಾರೆ ಎಂದು ಆರೋಪಿಸುತ್ತದೆ” ಎಂದು ವರದಿ ಹೇಳಿದೆ.

ಈ ವರ್ಷ ಒಪ್ಇಂಡಿಯಾ ಒಟ್ಟು 96 ಲೇಖನಗಳ ಮೂಲಕ ಪತ್ರಕರ್ತರು ಹಾಗೂ ಸ್ವತಂತ್ರ ಮಾಧ್ಯಮಗಳ ಮೇಲೆ ನೇರ ದಾಳಿ ನಡೆಸಿದೆ. 200 ಪುಟಗಳ ಒಂದು ವರದಿ ಪ್ರಕಟಿಸಿ, ಕೆಲವು ಪತ್ರಕರ್ತರು ಮತ್ತು ಮಾಧ್ಯಮಗಳು ಒಂದು ಗುಪ್ತ ಜಾಲ ರಚಿಸಿ ಮೋದಿ ಸರ್ಕಾರದ ವಿರುದ್ಧ ‘ನರೇಟಿವ್ ವಾರ್’ ನಡೆಸುತ್ತಿದ್ದಾರೆ ಮತ್ತು ಭಾರತದಲ್ಲಿ ‘ರೆಜೀಮ್ ಚೇಂಜ್’ (ಸರ್ಕಾರ ಉರುಳಿಸುವ ಯೋಜನೆ) ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಪೂರ್ತಿ ಕುಮ್ಮಕ್ಕು ಸಿದ್ಧಾಂತಗಳನ್ನು ಹರಡಿದೆ. ಈ ಲೇಖನಗಳು ಪ್ರಕಟವಾದ ತಕ್ಷಣ ಯೋಜಿತವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ, ಬೆದರಿಕೆ ಮತ್ತು ಆನ್‌ಲೈನ್ ದೌರ್ಜನ್ಯದ ಬೃಹತ್ ಅಲೆಗಳು ಆ ಪತ್ರಕರ್ತರ ಮೇಲೆ ಬೀಳುವಂತೆ ಮಾಡಿದೆ. ಈ ಎಲ್ಲಾ ಕೃತ್ಯಗಳ ಮೂಲಕ ಸ್ವತಂತ್ರ ಪತ್ರಿಕೋದ್ಯಮವನ್ನು ಭಯಭೀತಿಗೊಳಿಸುವ ಮತ್ತು ಮೌನಗೊಳಿಸುವ ಉದ್ದೇಶ ಹೊಂದಿವೆ ಎಂಬುದು ಆರ್‌ಎಸ್‌ಎಫ್‌ ವರದಿಯ ಮುಖ್ಯ ಆತಂಕವಾಗಿದೆ.

ಸ್ವತಂತ್ರ ಮಾಧ್ಯಮ ಸಂಸ್ಥೆ ದಿ ನ್ಯೂಸ್ ಮಿನಿಟ್‌ನ ಸಹ-ಸಂಸ್ಥಾಪಕಿ ಮತ್ತು ಸಂಪಾದಕಿ ಧನ್ಯಾ ರಾಜೇಂದ್ರನ್ ಅವರನ್ನು ಪ್ರೈಝ್ ಫಾರ್ ಇಂಪ್ಯಾಕ್ಟ್‌ಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ತಾನು ಘೋಷಿಸಿದ ನಂತರ, ಅಕ್ಟೋಬರ್ 23ರಂದು ಒಪ್‌ಇಂಡಿಯಾದಲ್ಲಿ ಅವರು ಮಾನಹಾನಿಕರ ವಿಷಯಕ್ಕೆ ಗುರಿಯಾಗಿದ್ದರು ಎಂದು ಆರ್‌ಎಸ್‌ಎಫ್‌ ತಿಳಿಸಿದೆ.

ಆರ್‌ಎಸ್‌ಎಫ್‌ ವರದಿಯನ್ನು ಇಲ್ಲಿ ನೋಡಬಹುದು

Courtesy : thewire.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...