Homeಅಂತರಾಷ್ಟ್ರೀಯಇಸ್ರೇಲ್‌ನ ಅತೀ ದೊಡ್ಡ ಬಂದರು ‘ಅದಾನಿ ಗ್ರೂಪ್’ ವಶಕ್ಕೆ

ಇಸ್ರೇಲ್‌ನ ಅತೀ ದೊಡ್ಡ ಬಂದರು ‘ಅದಾನಿ ಗ್ರೂಪ್’ ವಶಕ್ಕೆ

- Advertisement -
- Advertisement -

ಇಸ್ರೇಲ್‌ನ ಗಡೋಟ್ ಗ್ರೂಪ್‌ನ ಸಹಭಾಗಿತ್ವದೊಂದಿಗೆ ಅದಾನಿ ಗ್ರೂಪ್ ನೇತೃತ್ವದ ಒಕ್ಕೂಟವು ಇಸ್ರೇಲ್‌‌ ದೇಶದ ಹೈಫಾ ಬಂದರಿನ ಕಾರ್ಯಾಚರಣೆಗಳನ್ನು ಖಾಸಗೀಕರಣಗೊಳಿಸುವ ಬಿಡ್ ಅನ್ನು ಗೆದ್ದಿದೆ.

2054 ರವರೆಗಿನ ರಿಯಾಯಿತಿ ಅವಧಿಗೆ 1.8 ಬಿಲಿಯನ್‌ ಡಾಲರ್‌ಗೆ ಹೈಫಾ ಪೋರ್ಟ್ ಕಂಪನಿ ಲಿಮಿಟೆಡ್‌ನ 100% ಷೇರುಗಳನ್ನು ಖರೀದಿಸುವ ಹಕ್ಕನ್ನು ಬಹುರಾಷ್ಟ್ರೀಯ ಕಂಪನಿಯು ಗೆದ್ದಿದೆ. ಇದರಲ್ಲಿ ಅದಾನಿ ಪೋರ್ಟ್ಸ್ ವಿಶೇಷ ಆರ್ಥಿಕ ವಲಯ ಲಿಮಿಟೆಡ್ (APSEZ) ಮತ್ತು ಗಡೋಟ್ ಗ್ರೂಪ್ ಒಕ್ಕೂಟದಲ್ಲಿ ಕ್ರಮವಾಗಿ 70% ಮತ್ತು 30% ಷೇರುಗಳನ್ನು ಹೊಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೈಫಾ ಇಸ್ರೇಲ್‌ನ ಎರಡು ದೊಡ್ಡ ವಾಣಿಜ್ಯ ಬಂದರುಗಳಾಗಿದ್ದು, ಇದು ದೇಶದ ಅರ್ಧದಷ್ಟು ಕಂಟೈನರ್ ಸರಕುಗಳ ವ್ಯವಹರವನ್ನು ನಡೆಸುತ್ತದೆ. ಇದು ಪ್ರಯಾಣಿಕ ಮತ್ತು ಕ್ರೂಸ್ ಹಡಗುಗಳಿಗೆ ಪ್ರಮುಖ ಬಂದರಾಗಿದೆ. ಈ ಬಂದರು ದೇಶದ ಮೂರನೇ ಅತಿ ದೊಡ್ಡ ನಗರದಲ್ಲಿದ್ದು, ರಾಜಧಾನಿ ಟೆಲ್ ಅವಿವ್‌ನಿಂದ 90 ಕಿಮೀ ದೂರದ ಬಂದಾಗಿದೆ. ಜೊತೆಗೆ ಇಸ್ರೇಲ್‌ನ ಪ್ರಮುಖ ಕೈಗಾರಿಕಾ ಪ್ರದೇಶದ ಹತ್ತಿರದಲ್ಲಿದೆ.

ಗಡೋಟ್ ಜೊತೆಗಿನ ಪಾಲುದಾರಿಕೆಯ ಕುರಿತು ಮಾತನಾಡಿದ ಗೌತಮ್ ಅದಾನಿ ಅವರ ಮಗ, ಅದಾನಿ ಬಂದರುಗಳು ಮತ್ತು ವಿಶೇಷ ಆರ್ಥಿಕ ವಲಯ ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಕರಣ್ ಅದಾನಿ, ಈ ಸಂಸ್ಥೆಯು ವರ್ಷಗಳಿಂದ ತಮ್ಮ ವಿಶ್ವಾಸಾರ್ಹ ಪಾಲುದಾರ ಎಂದು ಹೇಳಿದ್ದಾರೆ.

“ದೀರ್ಘಾವಧಿಯಲ್ಲಿ, ಯುರೋಪ್ ಮತ್ತು ಮಧ್ಯಪ್ರಾಚ್ಯ ಎರಡಕ್ಕೂ ಇಸ್ರೇಲ್ ಸಂಪರ್ಕವಾಗುವುದನ್ನು ನಾವು ನಿರೀಕ್ಷಿಸುತ್ತಿರುವುದರಿಂದ ಇದು ಒಂದು ಪ್ರಚಂಡ ಬಂದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ಬಂದರು ಸರಕುಗಳನ್ನು ವೈವಿಧ್ಯಗೊಳಿಸಲು ಮತ್ತು ವ್ಯಾಪಾರವನ್ನು ಸುಗಮಗೊಳಿಸುವುದಕ್ಕೆ ಸಹಾಯ ಮಾಡಲು, ಭಾರತ ಮತ್ತು ಹೈಫಾ ಬಂದರುಗಳ ನಡುವೆ ಕಾರ್ಯತಂತ್ರದ ವ್ಯಾಪಾರ ಮಾರ್ಗಗಳನ್ನು ಅಭಿವೃದ್ಧಿಪಡಿಸಲು ಅದಾನಿ ಗ್ರೂಪ್ ಎದುರು ನೋಡುತ್ತಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....