Homeಅಂತರಾಷ್ಟ್ರೀಯಇಸ್ರೇಲ್‌ನ ಅತೀ ದೊಡ್ಡ ಬಂದರು ‘ಅದಾನಿ ಗ್ರೂಪ್’ ವಶಕ್ಕೆ

ಇಸ್ರೇಲ್‌ನ ಅತೀ ದೊಡ್ಡ ಬಂದರು ‘ಅದಾನಿ ಗ್ರೂಪ್’ ವಶಕ್ಕೆ

- Advertisement -
- Advertisement -

ಇಸ್ರೇಲ್‌ನ ಗಡೋಟ್ ಗ್ರೂಪ್‌ನ ಸಹಭಾಗಿತ್ವದೊಂದಿಗೆ ಅದಾನಿ ಗ್ರೂಪ್ ನೇತೃತ್ವದ ಒಕ್ಕೂಟವು ಇಸ್ರೇಲ್‌‌ ದೇಶದ ಹೈಫಾ ಬಂದರಿನ ಕಾರ್ಯಾಚರಣೆಗಳನ್ನು ಖಾಸಗೀಕರಣಗೊಳಿಸುವ ಬಿಡ್ ಅನ್ನು ಗೆದ್ದಿದೆ.

2054 ರವರೆಗಿನ ರಿಯಾಯಿತಿ ಅವಧಿಗೆ 1.8 ಬಿಲಿಯನ್‌ ಡಾಲರ್‌ಗೆ ಹೈಫಾ ಪೋರ್ಟ್ ಕಂಪನಿ ಲಿಮಿಟೆಡ್‌ನ 100% ಷೇರುಗಳನ್ನು ಖರೀದಿಸುವ ಹಕ್ಕನ್ನು ಬಹುರಾಷ್ಟ್ರೀಯ ಕಂಪನಿಯು ಗೆದ್ದಿದೆ. ಇದರಲ್ಲಿ ಅದಾನಿ ಪೋರ್ಟ್ಸ್ ವಿಶೇಷ ಆರ್ಥಿಕ ವಲಯ ಲಿಮಿಟೆಡ್ (APSEZ) ಮತ್ತು ಗಡೋಟ್ ಗ್ರೂಪ್ ಒಕ್ಕೂಟದಲ್ಲಿ ಕ್ರಮವಾಗಿ 70% ಮತ್ತು 30% ಷೇರುಗಳನ್ನು ಹೊಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೈಫಾ ಇಸ್ರೇಲ್‌ನ ಎರಡು ದೊಡ್ಡ ವಾಣಿಜ್ಯ ಬಂದರುಗಳಾಗಿದ್ದು, ಇದು ದೇಶದ ಅರ್ಧದಷ್ಟು ಕಂಟೈನರ್ ಸರಕುಗಳ ವ್ಯವಹರವನ್ನು ನಡೆಸುತ್ತದೆ. ಇದು ಪ್ರಯಾಣಿಕ ಮತ್ತು ಕ್ರೂಸ್ ಹಡಗುಗಳಿಗೆ ಪ್ರಮುಖ ಬಂದರಾಗಿದೆ. ಈ ಬಂದರು ದೇಶದ ಮೂರನೇ ಅತಿ ದೊಡ್ಡ ನಗರದಲ್ಲಿದ್ದು, ರಾಜಧಾನಿ ಟೆಲ್ ಅವಿವ್‌ನಿಂದ 90 ಕಿಮೀ ದೂರದ ಬಂದಾಗಿದೆ. ಜೊತೆಗೆ ಇಸ್ರೇಲ್‌ನ ಪ್ರಮುಖ ಕೈಗಾರಿಕಾ ಪ್ರದೇಶದ ಹತ್ತಿರದಲ್ಲಿದೆ.

ಗಡೋಟ್ ಜೊತೆಗಿನ ಪಾಲುದಾರಿಕೆಯ ಕುರಿತು ಮಾತನಾಡಿದ ಗೌತಮ್ ಅದಾನಿ ಅವರ ಮಗ, ಅದಾನಿ ಬಂದರುಗಳು ಮತ್ತು ವಿಶೇಷ ಆರ್ಥಿಕ ವಲಯ ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಕರಣ್ ಅದಾನಿ, ಈ ಸಂಸ್ಥೆಯು ವರ್ಷಗಳಿಂದ ತಮ್ಮ ವಿಶ್ವಾಸಾರ್ಹ ಪಾಲುದಾರ ಎಂದು ಹೇಳಿದ್ದಾರೆ.

“ದೀರ್ಘಾವಧಿಯಲ್ಲಿ, ಯುರೋಪ್ ಮತ್ತು ಮಧ್ಯಪ್ರಾಚ್ಯ ಎರಡಕ್ಕೂ ಇಸ್ರೇಲ್ ಸಂಪರ್ಕವಾಗುವುದನ್ನು ನಾವು ನಿರೀಕ್ಷಿಸುತ್ತಿರುವುದರಿಂದ ಇದು ಒಂದು ಪ್ರಚಂಡ ಬಂದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ಬಂದರು ಸರಕುಗಳನ್ನು ವೈವಿಧ್ಯಗೊಳಿಸಲು ಮತ್ತು ವ್ಯಾಪಾರವನ್ನು ಸುಗಮಗೊಳಿಸುವುದಕ್ಕೆ ಸಹಾಯ ಮಾಡಲು, ಭಾರತ ಮತ್ತು ಹೈಫಾ ಬಂದರುಗಳ ನಡುವೆ ಕಾರ್ಯತಂತ್ರದ ವ್ಯಾಪಾರ ಮಾರ್ಗಗಳನ್ನು ಅಭಿವೃದ್ಧಿಪಡಿಸಲು ಅದಾನಿ ಗ್ರೂಪ್ ಎದುರು ನೋಡುತ್ತಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...