Homeಅಂತರಾಷ್ಟ್ರೀಯಇಸ್ರೇಲ್‌ನ ಅತೀ ದೊಡ್ಡ ಬಂದರು ‘ಅದಾನಿ ಗ್ರೂಪ್’ ವಶಕ್ಕೆ

ಇಸ್ರೇಲ್‌ನ ಅತೀ ದೊಡ್ಡ ಬಂದರು ‘ಅದಾನಿ ಗ್ರೂಪ್’ ವಶಕ್ಕೆ

- Advertisement -
- Advertisement -

ಇಸ್ರೇಲ್‌ನ ಗಡೋಟ್ ಗ್ರೂಪ್‌ನ ಸಹಭಾಗಿತ್ವದೊಂದಿಗೆ ಅದಾನಿ ಗ್ರೂಪ್ ನೇತೃತ್ವದ ಒಕ್ಕೂಟವು ಇಸ್ರೇಲ್‌‌ ದೇಶದ ಹೈಫಾ ಬಂದರಿನ ಕಾರ್ಯಾಚರಣೆಗಳನ್ನು ಖಾಸಗೀಕರಣಗೊಳಿಸುವ ಬಿಡ್ ಅನ್ನು ಗೆದ್ದಿದೆ.

2054 ರವರೆಗಿನ ರಿಯಾಯಿತಿ ಅವಧಿಗೆ 1.8 ಬಿಲಿಯನ್‌ ಡಾಲರ್‌ಗೆ ಹೈಫಾ ಪೋರ್ಟ್ ಕಂಪನಿ ಲಿಮಿಟೆಡ್‌ನ 100% ಷೇರುಗಳನ್ನು ಖರೀದಿಸುವ ಹಕ್ಕನ್ನು ಬಹುರಾಷ್ಟ್ರೀಯ ಕಂಪನಿಯು ಗೆದ್ದಿದೆ. ಇದರಲ್ಲಿ ಅದಾನಿ ಪೋರ್ಟ್ಸ್ ವಿಶೇಷ ಆರ್ಥಿಕ ವಲಯ ಲಿಮಿಟೆಡ್ (APSEZ) ಮತ್ತು ಗಡೋಟ್ ಗ್ರೂಪ್ ಒಕ್ಕೂಟದಲ್ಲಿ ಕ್ರಮವಾಗಿ 70% ಮತ್ತು 30% ಷೇರುಗಳನ್ನು ಹೊಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೈಫಾ ಇಸ್ರೇಲ್‌ನ ಎರಡು ದೊಡ್ಡ ವಾಣಿಜ್ಯ ಬಂದರುಗಳಾಗಿದ್ದು, ಇದು ದೇಶದ ಅರ್ಧದಷ್ಟು ಕಂಟೈನರ್ ಸರಕುಗಳ ವ್ಯವಹರವನ್ನು ನಡೆಸುತ್ತದೆ. ಇದು ಪ್ರಯಾಣಿಕ ಮತ್ತು ಕ್ರೂಸ್ ಹಡಗುಗಳಿಗೆ ಪ್ರಮುಖ ಬಂದರಾಗಿದೆ. ಈ ಬಂದರು ದೇಶದ ಮೂರನೇ ಅತಿ ದೊಡ್ಡ ನಗರದಲ್ಲಿದ್ದು, ರಾಜಧಾನಿ ಟೆಲ್ ಅವಿವ್‌ನಿಂದ 90 ಕಿಮೀ ದೂರದ ಬಂದಾಗಿದೆ. ಜೊತೆಗೆ ಇಸ್ರೇಲ್‌ನ ಪ್ರಮುಖ ಕೈಗಾರಿಕಾ ಪ್ರದೇಶದ ಹತ್ತಿರದಲ್ಲಿದೆ.

ಗಡೋಟ್ ಜೊತೆಗಿನ ಪಾಲುದಾರಿಕೆಯ ಕುರಿತು ಮಾತನಾಡಿದ ಗೌತಮ್ ಅದಾನಿ ಅವರ ಮಗ, ಅದಾನಿ ಬಂದರುಗಳು ಮತ್ತು ವಿಶೇಷ ಆರ್ಥಿಕ ವಲಯ ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಕರಣ್ ಅದಾನಿ, ಈ ಸಂಸ್ಥೆಯು ವರ್ಷಗಳಿಂದ ತಮ್ಮ ವಿಶ್ವಾಸಾರ್ಹ ಪಾಲುದಾರ ಎಂದು ಹೇಳಿದ್ದಾರೆ.

“ದೀರ್ಘಾವಧಿಯಲ್ಲಿ, ಯುರೋಪ್ ಮತ್ತು ಮಧ್ಯಪ್ರಾಚ್ಯ ಎರಡಕ್ಕೂ ಇಸ್ರೇಲ್ ಸಂಪರ್ಕವಾಗುವುದನ್ನು ನಾವು ನಿರೀಕ್ಷಿಸುತ್ತಿರುವುದರಿಂದ ಇದು ಒಂದು ಪ್ರಚಂಡ ಬಂದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ಬಂದರು ಸರಕುಗಳನ್ನು ವೈವಿಧ್ಯಗೊಳಿಸಲು ಮತ್ತು ವ್ಯಾಪಾರವನ್ನು ಸುಗಮಗೊಳಿಸುವುದಕ್ಕೆ ಸಹಾಯ ಮಾಡಲು, ಭಾರತ ಮತ್ತು ಹೈಫಾ ಬಂದರುಗಳ ನಡುವೆ ಕಾರ್ಯತಂತ್ರದ ವ್ಯಾಪಾರ ಮಾರ್ಗಗಳನ್ನು ಅಭಿವೃದ್ಧಿಪಡಿಸಲು ಅದಾನಿ ಗ್ರೂಪ್ ಎದುರು ನೋಡುತ್ತಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...