Homeಅಂತರಾಷ್ಟ್ರೀಯಇಸ್ರೇಲ್‌ನ ಅತೀ ದೊಡ್ಡ ಬಂದರು ‘ಅದಾನಿ ಗ್ರೂಪ್’ ವಶಕ್ಕೆ

ಇಸ್ರೇಲ್‌ನ ಅತೀ ದೊಡ್ಡ ಬಂದರು ‘ಅದಾನಿ ಗ್ರೂಪ್’ ವಶಕ್ಕೆ

- Advertisement -
- Advertisement -

ಇಸ್ರೇಲ್‌ನ ಗಡೋಟ್ ಗ್ರೂಪ್‌ನ ಸಹಭಾಗಿತ್ವದೊಂದಿಗೆ ಅದಾನಿ ಗ್ರೂಪ್ ನೇತೃತ್ವದ ಒಕ್ಕೂಟವು ಇಸ್ರೇಲ್‌‌ ದೇಶದ ಹೈಫಾ ಬಂದರಿನ ಕಾರ್ಯಾಚರಣೆಗಳನ್ನು ಖಾಸಗೀಕರಣಗೊಳಿಸುವ ಬಿಡ್ ಅನ್ನು ಗೆದ್ದಿದೆ.

2054 ರವರೆಗಿನ ರಿಯಾಯಿತಿ ಅವಧಿಗೆ 1.8 ಬಿಲಿಯನ್‌ ಡಾಲರ್‌ಗೆ ಹೈಫಾ ಪೋರ್ಟ್ ಕಂಪನಿ ಲಿಮಿಟೆಡ್‌ನ 100% ಷೇರುಗಳನ್ನು ಖರೀದಿಸುವ ಹಕ್ಕನ್ನು ಬಹುರಾಷ್ಟ್ರೀಯ ಕಂಪನಿಯು ಗೆದ್ದಿದೆ. ಇದರಲ್ಲಿ ಅದಾನಿ ಪೋರ್ಟ್ಸ್ ವಿಶೇಷ ಆರ್ಥಿಕ ವಲಯ ಲಿಮಿಟೆಡ್ (APSEZ) ಮತ್ತು ಗಡೋಟ್ ಗ್ರೂಪ್ ಒಕ್ಕೂಟದಲ್ಲಿ ಕ್ರಮವಾಗಿ 70% ಮತ್ತು 30% ಷೇರುಗಳನ್ನು ಹೊಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೈಫಾ ಇಸ್ರೇಲ್‌ನ ಎರಡು ದೊಡ್ಡ ವಾಣಿಜ್ಯ ಬಂದರುಗಳಾಗಿದ್ದು, ಇದು ದೇಶದ ಅರ್ಧದಷ್ಟು ಕಂಟೈನರ್ ಸರಕುಗಳ ವ್ಯವಹರವನ್ನು ನಡೆಸುತ್ತದೆ. ಇದು ಪ್ರಯಾಣಿಕ ಮತ್ತು ಕ್ರೂಸ್ ಹಡಗುಗಳಿಗೆ ಪ್ರಮುಖ ಬಂದರಾಗಿದೆ. ಈ ಬಂದರು ದೇಶದ ಮೂರನೇ ಅತಿ ದೊಡ್ಡ ನಗರದಲ್ಲಿದ್ದು, ರಾಜಧಾನಿ ಟೆಲ್ ಅವಿವ್‌ನಿಂದ 90 ಕಿಮೀ ದೂರದ ಬಂದಾಗಿದೆ. ಜೊತೆಗೆ ಇಸ್ರೇಲ್‌ನ ಪ್ರಮುಖ ಕೈಗಾರಿಕಾ ಪ್ರದೇಶದ ಹತ್ತಿರದಲ್ಲಿದೆ.

ಗಡೋಟ್ ಜೊತೆಗಿನ ಪಾಲುದಾರಿಕೆಯ ಕುರಿತು ಮಾತನಾಡಿದ ಗೌತಮ್ ಅದಾನಿ ಅವರ ಮಗ, ಅದಾನಿ ಬಂದರುಗಳು ಮತ್ತು ವಿಶೇಷ ಆರ್ಥಿಕ ವಲಯ ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಕರಣ್ ಅದಾನಿ, ಈ ಸಂಸ್ಥೆಯು ವರ್ಷಗಳಿಂದ ತಮ್ಮ ವಿಶ್ವಾಸಾರ್ಹ ಪಾಲುದಾರ ಎಂದು ಹೇಳಿದ್ದಾರೆ.

“ದೀರ್ಘಾವಧಿಯಲ್ಲಿ, ಯುರೋಪ್ ಮತ್ತು ಮಧ್ಯಪ್ರಾಚ್ಯ ಎರಡಕ್ಕೂ ಇಸ್ರೇಲ್ ಸಂಪರ್ಕವಾಗುವುದನ್ನು ನಾವು ನಿರೀಕ್ಷಿಸುತ್ತಿರುವುದರಿಂದ ಇದು ಒಂದು ಪ್ರಚಂಡ ಬಂದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ಬಂದರು ಸರಕುಗಳನ್ನು ವೈವಿಧ್ಯಗೊಳಿಸಲು ಮತ್ತು ವ್ಯಾಪಾರವನ್ನು ಸುಗಮಗೊಳಿಸುವುದಕ್ಕೆ ಸಹಾಯ ಮಾಡಲು, ಭಾರತ ಮತ್ತು ಹೈಫಾ ಬಂದರುಗಳ ನಡುವೆ ಕಾರ್ಯತಂತ್ರದ ವ್ಯಾಪಾರ ಮಾರ್ಗಗಳನ್ನು ಅಭಿವೃದ್ಧಿಪಡಿಸಲು ಅದಾನಿ ಗ್ರೂಪ್ ಎದುರು ನೋಡುತ್ತಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...