Homeಅಂತರಾಷ್ಟ್ರೀಯಬಂದರು ಗುತ್ತಿಗೆಗಾಗಿ ಮ್ಯಾನ್ಮಾರ್ ಮಿಲಿಟರಿ ನಿಯಂತ್ರಿತ ಕಂಪನಿಗೆ 30 ಮಿಲಿಯನ್ ಡಾಲರ್ ಹಣ ನೀಡಿದ ಅದಾನಿ...

ಬಂದರು ಗುತ್ತಿಗೆಗಾಗಿ ಮ್ಯಾನ್ಮಾರ್ ಮಿಲಿಟರಿ ನಿಯಂತ್ರಿತ ಕಂಪನಿಗೆ 30 ಮಿಲಿಯನ್ ಡಾಲರ್ ಹಣ ನೀಡಿದ ಅದಾನಿ ಗ್ರೂಪ್: ವರದಿ

- Advertisement -
- Advertisement -

ಒಂದೆಡೆ ಫೆಬ್ರವರಿ 1 ರ ದಂಗೆಯ ನಂತರ ಮ್ಯಾನ್ಮಾರ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದೇಶಿ ಕಂಪನಿಗಳ ಮೇಲೆ ಒತ್ತಡ ಹೆಚ್ಚಾಗುತ್ತದೆ ಮತ್ತು ಪ್ರತಿಭಟನಾಕಾರರ ಮೇಲೆ ಕ್ರೂರ ದಬ್ಬಾಳಿಕೆ ನಡೆಸುತ್ತಿದೆ. ಇನ್ನೊಂದೆಡೆ ಭಾರತದ ಅದಾನಿ ಗ್ರೂಪ್ ಮಿಲಿಟರಿ ನಿಯಂತ್ರಿತ ಮ್ಯಾನ್ಮಾರ್ ಎಕನಾಮಿಕ್ ಕಾರ್ಪೊರೇಶನ್‌ನೊಂದಿಗಿನ ಬಂದರು ಗುತ್ತಿಗೆ ಒಪ್ಪಂದಕ್ಕಾಗಿ ಹಣ ನೀಡಿದೆ ಎಂದು ಎಬಿಸಿ ನ್ಯೂಸ್ ವರದಿ ಮಾಡಿದೆ.

ಯಾಂಗೊನ್ ಪ್ರದೇಶ ಹೂಡಿಕೆ ಆಯೋಗದಿಂದ ಸೋರಿಕೆಯಾದ ದಾಖಲೆಗಳ ಪ್ರಕಾರ ಅದಾನಿ ಗ್ರೂಪ್ ಮ್ಯಾನ್ಮಾರ್ ಆರ್ಥಿಕ ನಿಗಮಕ್ಕೆ “ಭೂ ಗುತ್ತಿಗೆ ಶುಲ್ಕ” ದಲ್ಲಿ 30 ಮಿಲಿಯನ್ ಡಾಲರ್ ಪಾವತಿಸುತ್ತಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

ಕಳೆದ ತಿಂಗಳು ಅದಾನಿ ಗ್ರೂಪ್ ತನ್ನ ಹೇಳಿಕೆಯಲ್ಲಿ ಬಂದರಿನ ಅನುಮೋದನೆಗಾಗಿ ಮಿಲಿಟರಿ ನಾಯಕರೊಂದಿಗೆ ತೊಡಗಿಸಿಕೊಂಡಿಲ್ಲ ಎಂದು ಹೇಳಿತ್ತು. “ಈ ಅನುಮೋದನೆಯನ್ನು ಪಡೆಯುವಾಗ ಅಥವಾ ನಂತರ ಮಿಲಿಟರಿ ನಾಯಕತ್ವದೊಂದಿಗೆ ತೊಡಗಿಸಿಕೊಂಡಿದ್ದನ್ನು ನಾವು ಸ್ಪಷ್ಟವಾಗಿ ನಿರಾಕರಿಸುತ್ತೇವೆ” ಎಂದಿತ್ತು. ಆದರೆ ಸೋರಿಕೆಯಾದ ದಾಖಲೆಗಳು ಅದು ಸುಳ್ಳು ಎನ್ನುತ್ತಿವೆ.

ಅದಾನಿ ಬಂದರುಗಳ ಮುಖ್ಯ ಕಾರ್ಯನಿರ್ವಾಹಕ ಕರಣ್ ಅದಾನಿ ಅವರು ಜುಲೈ 2019 ರಲ್ಲಿ ಚುನಾಯಿತ ಸರ್ಕಾರದ ವಿರುದ್ಧ ದಂಗೆಯನ್ನು ಮುನ್ನಡೆಸಿದ ಸೇನಾ ಮುಖ್ಯಸ್ಥ ಹಿರಿಯ ಜನರಲ್ ಮಿನ್ ಆಂಗ್ ಹ್ಲೇಂಗ್ ಅವರನ್ನು ಭೇಟಿಯಾದರು ಎಂದು ಎಬಿಸಿ ನ್ಯೂಸ್ ವೀಡಿಯೊಗಳು ಮತ್ತು ಫೋಟೋಗಳನ್ನು ಬಹಿರಂಗಪಡಿಸಿದೆ. 2017 ರಲ್ಲಿ ನಿರಾಶ್ರಿತರ ಬಿಕ್ಕಟ್ಟನ್ನು ಹುಟ್ಟುಹಾಕಿದ ರೋಹಿಂಗ್ಯಾ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧದ ಅಭಿಯಾನದಲ್ಲಿ ತಮ್ಮ ಪಾತ್ರಕ್ಕಾಗಿ ಹೇಲಿಂಗ್ ಸೇರಿದಂತೆ ಕೆಲವು ಜನರಲ್‌ಗಳು ಆಗಲೇ ಯುನೈಟೆಡ್ ಸ್ಟೇಟ್ಸ್ ಮಾನವ ಹಕ್ಕುಗಳ ನಿರ್ಬಂಧದಲ್ಲಿದ್ದರು.

ಈ ಅಂತರರಾಷ್ಟ್ರೀಯ ಬೆಳವಣಿಗೆಗಳ ಹೊರತಾಗಿಯೂ ಮ್ಯಾನ್ಮಾರ್ ಎಕನಾಮಿಕ್ ಕಾರ್ಪೊರೇಷನ್ ಬಂದರಿಗೆ “ಭೂ ಅನುಮತಿ ಶುಲ್ಕ” ವಾಗಿ ಮತ್ತೆ 22 ಮಿಲಿಯನ್ ಡಾಲರ್ ಪಡೆಯುವ ಸಾಧ್ಯತೆಯಿದೆ ಎಂದು ಆಸ್ಟ್ರೇಲಿಯನ್ ಸೆಂಟರ್ ಫಾರ್ ಇಂಟರ್ನ್ಯಾಷನಲ್ ಜಸ್ಟೀಸ್ ಮತ್ತು ಆಕ್ಟಿವಿಸ್ಟ್ ಗ್ರೂಫ್ ಜಸ್ಟಿಸ್ ಫಾರ್ ಮ್ಯಾನ್ಮಾರ್ ಜಂಟಿ ವರದಿ ತಿಳಿಸಿದೆ.

ಕಳೆದ ತಿಂಗಳು ನಡೆದ ದಂಗೆಯ ನಂತರ ದಾಖಲೆಗಳು ಸೋರಿಕೆಯಾಗಿವೆ ಎಂದು ವರದಿಯ ಲೇಖಕ ಮತ್ತು ಮಾನವ ಹಕ್ಕುಗಳ ವಕೀಲ ರಾವನ್ ಅರ್ರಾಫ್ ಎಬಿಸಿ ನ್ಯೂಸ್‌ಗೆ ತಿಳಿಸಿದ್ದಾರೆ.

ಮ್ಯಾನ್ಮಾರ್ ಮಿಲಿಟರಿಯಿಂದ ನಿಯಂತ್ರಿಸಲ್ಪಡುವ ಮತ್ತು ಅದರ ಮಾಲೀಕತ್ವದಲ್ಲಿರುವ ‘ಮ್ಯಾನ್ಮಾರ್ ಎಕನಾಮಿಕ್ ಕಾರ್ಪೊರೇಷನ್’ಗೆ ಹಣ ಸಂದಾಯವಾಗಿದೆ ಎಂಬುದನ್ನು ಈ ದಾಖಲೆಗಳು ನಿರ್ದಿಷ್ಟವಾಗಿ ಬಹಿರಂಗಪಡಿಸುತ್ತವೆ. ಅದು ಸದ್ಯಕ್ಕೆ ಯುದ್ಧ ಅಪರಾಧಗಳು ಮತ್ತು ರೋಹಿಂಗ್ಯಾಗಳ ವಿರುದ್ಧದ ಅಪರಾಧಗಳು, ನರಮೇಧ ಸೇರಿದಂತೆ ಹಲವು ಆರೋಪಗಳ ಮೇಲೆ ಅಂತರರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಮತ್ತು ಇತರ ಕೋರ್ಟ್‌ನಲ್ಲಿ ತನಿಖೆ ಎದುರಿಸುತ್ತಿದೆ. ಈ ಕುರಿತು ಸಾಕಷ್ಟು ಬಾರಿ ಅದಾನಿಯವರ ಗಮನಕ್ಕೆ ತರಲಾಗಿದೆ. ಆದರೆ ಅವರು (ಎಂಇಸಿ) ಮ್ಯಾನ್ಮಾರ್ ಒಪ್ಪಂದದಿಂದ ಹೊರಗುಳಿಯಲು ನಿರಾಕರಿಸಿದ್ದಾರೆ ಮತ್ತು ಇದು ನಿಜವಾದ ಸಮಸ್ಯೆ ಎಂದು ಅರ್ರಾಫ್ ಹೇಳಿದ್ದಾರೆ.

ಅದಾನಿ ಗ್ರೂಪ್‌ನ ಹಣವನ್ನು ಮ್ಯಾನ್ಮಾರ್ ಮಿಲಿಟರಿಯು ಅಂತಾರಾಷ್ಟ್ರೀಯ ಅಪರಾಧಗಳಿಗೆ ಬಳಸಿಕೊಳ್ಳಬಹುದು ಎಂದು ಅರ್ರಾಫ್ ಆತಂಕ ವ್ಯಕ್ತಪಡಿಸಿದ್ದಾರೆ.

2019 ರ ವಿಶ್ವಸಂಸ್ಥೆಯ ವರದಿಯು ಮಿಲಿಟರಿ ಸಂಘಟನೆಯೊಂದಿಗೆ ತೊಡಗಿಸಿಕೊಂಡ ಕಂಪನಿಗಳಲ್ಲಿ ಅದಾನಿ ಪೋರ್ಟ್ಸ್‌ ಸಹ ಒಂದಾಗಿದೆ ಎಂದು ತಿಳಿಸಿತ್ತು. ಮಾನವ ಹಕ್ಕುಗಳ ಉಲ್ಲಂಘನೆಯಿಂದಾಗಿ ಮಿಲಿಟರಿಯೊಂದಿಗೆ ವ್ಯಾಪಾರ ಮಾಡದಂತೆ ವಿದೇಶಿ ಸಂಸ್ಥೆಗಳಿಗೆ ವರದಿ ಒತ್ತಾಯಿಸಿತ್ತು.

ಮ್ಯಾನ್ಮಾರ್‌ಗೆ 2019 ರಲ್ಲಿ ಭೇಟಿ ನೀಡಿದ್ದ ವಿಶ್ವಸಂಸ್ಥೆಯ ಸತ್ಯ-ಶೋಧನಾ ತಂಡದ ಭಾಗವಾಗಿದ್ದ ಆಸ್ಟ್ರೇಲಿಯಾದ ವಕೀಲ ಕ್ರಿಸ್ ಸಿಡೋಟಿ “ನಾವು ಮ್ಯಾನ್ಮಾರ್ ಮಿಲಿಟರಿಯ ಪುಷ್ಟೀಕರಣಕ್ಕೆ ಕೊಡುಗೆ ನೀಡುವ ಕಂಪನಿಗೆ ಆತಿಥ್ಯ ನೀಡಲು ಬಯಸುತ್ತೇವೆಯೇ? ಆಸ್ಟ್ರೇಲಿಯಾ ಮತ್ತು ಆಸ್ಟ್ರೇಲಿಯನ್ನರು ಉತ್ತರಿಸಬೇಕು” ಎಂದು ಕೇಳಿದ್ದರು. ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್‌ನಲ್ಲಿರುವ ಅಬಾಟ್ ಪಾಯಿಂಟ್ ಕಲ್ಲಿದ್ದಲು ಟರ್ಮಿನಲ್‌ ಎಂಬ ಮತ್ತೊಂದು ಅಂತರರಾಷ್ಟ್ರೀಯ ಯೋಜನೆಯಲ್ಲಿ ಅದಾನಿ ಪೋರ್ಟ್ಸ್‌ ತೊಡಗಿಸಿಕೊಳ್ಳಲು ನೋಡುತ್ತಿರುವುದುನ್ನು ಅವರು ಉಲ್ಲೇಖಿಸುತ್ತಿದ್ದರು.

“ಅದಾನಿ ಗ್ರೂಪ್‌ನಲ್ಲಿ ಹೂಡಿಕೆ ಮಾಡುತ್ತಿರುವವರಿಗೆ ಪ್ರಶ್ನೆಯೆಂದರೆ ಅವರು ಮ್ಯಾನ್ಮಾರ್ ಮಿಲಿಟರಿಯ ಕಾರ್ಯಾಚರಣೆಗಳಿಗೆ ಧನಸಹಾಯ ನೀಡಲು ಬಯಸುತ್ತಾರೆಯೇ? ಏಕೆಂದರೆ ಅದಾನಿಯಲ್ಲಿ ಹೂಡಿಕೆ ಮಾಡುವ ಮೂಲಕ ಅವರು ಪರೋಕ್ಷವಾಗಿ ಏನು ಮಾಡುತ್ತಿದ್ದಾರೆ?” ಎಂದು ಸಿಡೋಟಿ ಪ್ರಶ್ನಿಸಿದ್ದರು.

ಯುಎಸ್ ನಿರ್ಬಂಧಗಳು ಆಸ್ಟ್ರೇಲಿಯಾ ಸರ್ಕಾರವು ಅದಾನಿ ಪೋರ್ಟ್‌ನಲ್ಲಿ 3.2 ಮಿಲಿಯನ್ ಹೂಡಿಕೆಯನ್ನು ರದ್ದುಗೊಳಿಸುವಂತೆ ಒತ್ತಡ ಹೇರಿವೆ. ಆದರೆ ಭವಿಷ್ಯದ ನಿಧಿಯ ವಕ್ತಾರರು ಈ ಒಪ್ಪಂದವನ್ನು ಕೈಬಿಡುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಹೇಳಿದರು.


ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಏಕದಿನ ಪಂದ್ಯ: ಮೈದಾನಕ್ಕೆ ನುಗ್ಗಿ ‘ಸ್ಟಾಪ್ ಅದಾನಿ’ ಎಂದ ಪ್ರತಿಭಟನೆಗಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...