Homeಅಂತರಾಷ್ಟ್ರೀಯಬಂದರು ಗುತ್ತಿಗೆಗಾಗಿ ಮ್ಯಾನ್ಮಾರ್ ಮಿಲಿಟರಿ ನಿಯಂತ್ರಿತ ಕಂಪನಿಗೆ 30 ಮಿಲಿಯನ್ ಡಾಲರ್ ಹಣ ನೀಡಿದ ಅದಾನಿ...

ಬಂದರು ಗುತ್ತಿಗೆಗಾಗಿ ಮ್ಯಾನ್ಮಾರ್ ಮಿಲಿಟರಿ ನಿಯಂತ್ರಿತ ಕಂಪನಿಗೆ 30 ಮಿಲಿಯನ್ ಡಾಲರ್ ಹಣ ನೀಡಿದ ಅದಾನಿ ಗ್ರೂಪ್: ವರದಿ

- Advertisement -
- Advertisement -

ಒಂದೆಡೆ ಫೆಬ್ರವರಿ 1 ರ ದಂಗೆಯ ನಂತರ ಮ್ಯಾನ್ಮಾರ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದೇಶಿ ಕಂಪನಿಗಳ ಮೇಲೆ ಒತ್ತಡ ಹೆಚ್ಚಾಗುತ್ತದೆ ಮತ್ತು ಪ್ರತಿಭಟನಾಕಾರರ ಮೇಲೆ ಕ್ರೂರ ದಬ್ಬಾಳಿಕೆ ನಡೆಸುತ್ತಿದೆ. ಇನ್ನೊಂದೆಡೆ ಭಾರತದ ಅದಾನಿ ಗ್ರೂಪ್ ಮಿಲಿಟರಿ ನಿಯಂತ್ರಿತ ಮ್ಯಾನ್ಮಾರ್ ಎಕನಾಮಿಕ್ ಕಾರ್ಪೊರೇಶನ್‌ನೊಂದಿಗಿನ ಬಂದರು ಗುತ್ತಿಗೆ ಒಪ್ಪಂದಕ್ಕಾಗಿ ಹಣ ನೀಡಿದೆ ಎಂದು ಎಬಿಸಿ ನ್ಯೂಸ್ ವರದಿ ಮಾಡಿದೆ.

ಯಾಂಗೊನ್ ಪ್ರದೇಶ ಹೂಡಿಕೆ ಆಯೋಗದಿಂದ ಸೋರಿಕೆಯಾದ ದಾಖಲೆಗಳ ಪ್ರಕಾರ ಅದಾನಿ ಗ್ರೂಪ್ ಮ್ಯಾನ್ಮಾರ್ ಆರ್ಥಿಕ ನಿಗಮಕ್ಕೆ “ಭೂ ಗುತ್ತಿಗೆ ಶುಲ್ಕ” ದಲ್ಲಿ 30 ಮಿಲಿಯನ್ ಡಾಲರ್ ಪಾವತಿಸುತ್ತಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

ಕಳೆದ ತಿಂಗಳು ಅದಾನಿ ಗ್ರೂಪ್ ತನ್ನ ಹೇಳಿಕೆಯಲ್ಲಿ ಬಂದರಿನ ಅನುಮೋದನೆಗಾಗಿ ಮಿಲಿಟರಿ ನಾಯಕರೊಂದಿಗೆ ತೊಡಗಿಸಿಕೊಂಡಿಲ್ಲ ಎಂದು ಹೇಳಿತ್ತು. “ಈ ಅನುಮೋದನೆಯನ್ನು ಪಡೆಯುವಾಗ ಅಥವಾ ನಂತರ ಮಿಲಿಟರಿ ನಾಯಕತ್ವದೊಂದಿಗೆ ತೊಡಗಿಸಿಕೊಂಡಿದ್ದನ್ನು ನಾವು ಸ್ಪಷ್ಟವಾಗಿ ನಿರಾಕರಿಸುತ್ತೇವೆ” ಎಂದಿತ್ತು. ಆದರೆ ಸೋರಿಕೆಯಾದ ದಾಖಲೆಗಳು ಅದು ಸುಳ್ಳು ಎನ್ನುತ್ತಿವೆ.

ಅದಾನಿ ಬಂದರುಗಳ ಮುಖ್ಯ ಕಾರ್ಯನಿರ್ವಾಹಕ ಕರಣ್ ಅದಾನಿ ಅವರು ಜುಲೈ 2019 ರಲ್ಲಿ ಚುನಾಯಿತ ಸರ್ಕಾರದ ವಿರುದ್ಧ ದಂಗೆಯನ್ನು ಮುನ್ನಡೆಸಿದ ಸೇನಾ ಮುಖ್ಯಸ್ಥ ಹಿರಿಯ ಜನರಲ್ ಮಿನ್ ಆಂಗ್ ಹ್ಲೇಂಗ್ ಅವರನ್ನು ಭೇಟಿಯಾದರು ಎಂದು ಎಬಿಸಿ ನ್ಯೂಸ್ ವೀಡಿಯೊಗಳು ಮತ್ತು ಫೋಟೋಗಳನ್ನು ಬಹಿರಂಗಪಡಿಸಿದೆ. 2017 ರಲ್ಲಿ ನಿರಾಶ್ರಿತರ ಬಿಕ್ಕಟ್ಟನ್ನು ಹುಟ್ಟುಹಾಕಿದ ರೋಹಿಂಗ್ಯಾ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧದ ಅಭಿಯಾನದಲ್ಲಿ ತಮ್ಮ ಪಾತ್ರಕ್ಕಾಗಿ ಹೇಲಿಂಗ್ ಸೇರಿದಂತೆ ಕೆಲವು ಜನರಲ್‌ಗಳು ಆಗಲೇ ಯುನೈಟೆಡ್ ಸ್ಟೇಟ್ಸ್ ಮಾನವ ಹಕ್ಕುಗಳ ನಿರ್ಬಂಧದಲ್ಲಿದ್ದರು.

ಈ ಅಂತರರಾಷ್ಟ್ರೀಯ ಬೆಳವಣಿಗೆಗಳ ಹೊರತಾಗಿಯೂ ಮ್ಯಾನ್ಮಾರ್ ಎಕನಾಮಿಕ್ ಕಾರ್ಪೊರೇಷನ್ ಬಂದರಿಗೆ “ಭೂ ಅನುಮತಿ ಶುಲ್ಕ” ವಾಗಿ ಮತ್ತೆ 22 ಮಿಲಿಯನ್ ಡಾಲರ್ ಪಡೆಯುವ ಸಾಧ್ಯತೆಯಿದೆ ಎಂದು ಆಸ್ಟ್ರೇಲಿಯನ್ ಸೆಂಟರ್ ಫಾರ್ ಇಂಟರ್ನ್ಯಾಷನಲ್ ಜಸ್ಟೀಸ್ ಮತ್ತು ಆಕ್ಟಿವಿಸ್ಟ್ ಗ್ರೂಫ್ ಜಸ್ಟಿಸ್ ಫಾರ್ ಮ್ಯಾನ್ಮಾರ್ ಜಂಟಿ ವರದಿ ತಿಳಿಸಿದೆ.

ಕಳೆದ ತಿಂಗಳು ನಡೆದ ದಂಗೆಯ ನಂತರ ದಾಖಲೆಗಳು ಸೋರಿಕೆಯಾಗಿವೆ ಎಂದು ವರದಿಯ ಲೇಖಕ ಮತ್ತು ಮಾನವ ಹಕ್ಕುಗಳ ವಕೀಲ ರಾವನ್ ಅರ್ರಾಫ್ ಎಬಿಸಿ ನ್ಯೂಸ್‌ಗೆ ತಿಳಿಸಿದ್ದಾರೆ.

ಮ್ಯಾನ್ಮಾರ್ ಮಿಲಿಟರಿಯಿಂದ ನಿಯಂತ್ರಿಸಲ್ಪಡುವ ಮತ್ತು ಅದರ ಮಾಲೀಕತ್ವದಲ್ಲಿರುವ ‘ಮ್ಯಾನ್ಮಾರ್ ಎಕನಾಮಿಕ್ ಕಾರ್ಪೊರೇಷನ್’ಗೆ ಹಣ ಸಂದಾಯವಾಗಿದೆ ಎಂಬುದನ್ನು ಈ ದಾಖಲೆಗಳು ನಿರ್ದಿಷ್ಟವಾಗಿ ಬಹಿರಂಗಪಡಿಸುತ್ತವೆ. ಅದು ಸದ್ಯಕ್ಕೆ ಯುದ್ಧ ಅಪರಾಧಗಳು ಮತ್ತು ರೋಹಿಂಗ್ಯಾಗಳ ವಿರುದ್ಧದ ಅಪರಾಧಗಳು, ನರಮೇಧ ಸೇರಿದಂತೆ ಹಲವು ಆರೋಪಗಳ ಮೇಲೆ ಅಂತರರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಮತ್ತು ಇತರ ಕೋರ್ಟ್‌ನಲ್ಲಿ ತನಿಖೆ ಎದುರಿಸುತ್ತಿದೆ. ಈ ಕುರಿತು ಸಾಕಷ್ಟು ಬಾರಿ ಅದಾನಿಯವರ ಗಮನಕ್ಕೆ ತರಲಾಗಿದೆ. ಆದರೆ ಅವರು (ಎಂಇಸಿ) ಮ್ಯಾನ್ಮಾರ್ ಒಪ್ಪಂದದಿಂದ ಹೊರಗುಳಿಯಲು ನಿರಾಕರಿಸಿದ್ದಾರೆ ಮತ್ತು ಇದು ನಿಜವಾದ ಸಮಸ್ಯೆ ಎಂದು ಅರ್ರಾಫ್ ಹೇಳಿದ್ದಾರೆ.

ಅದಾನಿ ಗ್ರೂಪ್‌ನ ಹಣವನ್ನು ಮ್ಯಾನ್ಮಾರ್ ಮಿಲಿಟರಿಯು ಅಂತಾರಾಷ್ಟ್ರೀಯ ಅಪರಾಧಗಳಿಗೆ ಬಳಸಿಕೊಳ್ಳಬಹುದು ಎಂದು ಅರ್ರಾಫ್ ಆತಂಕ ವ್ಯಕ್ತಪಡಿಸಿದ್ದಾರೆ.

2019 ರ ವಿಶ್ವಸಂಸ್ಥೆಯ ವರದಿಯು ಮಿಲಿಟರಿ ಸಂಘಟನೆಯೊಂದಿಗೆ ತೊಡಗಿಸಿಕೊಂಡ ಕಂಪನಿಗಳಲ್ಲಿ ಅದಾನಿ ಪೋರ್ಟ್ಸ್‌ ಸಹ ಒಂದಾಗಿದೆ ಎಂದು ತಿಳಿಸಿತ್ತು. ಮಾನವ ಹಕ್ಕುಗಳ ಉಲ್ಲಂಘನೆಯಿಂದಾಗಿ ಮಿಲಿಟರಿಯೊಂದಿಗೆ ವ್ಯಾಪಾರ ಮಾಡದಂತೆ ವಿದೇಶಿ ಸಂಸ್ಥೆಗಳಿಗೆ ವರದಿ ಒತ್ತಾಯಿಸಿತ್ತು.

ಮ್ಯಾನ್ಮಾರ್‌ಗೆ 2019 ರಲ್ಲಿ ಭೇಟಿ ನೀಡಿದ್ದ ವಿಶ್ವಸಂಸ್ಥೆಯ ಸತ್ಯ-ಶೋಧನಾ ತಂಡದ ಭಾಗವಾಗಿದ್ದ ಆಸ್ಟ್ರೇಲಿಯಾದ ವಕೀಲ ಕ್ರಿಸ್ ಸಿಡೋಟಿ “ನಾವು ಮ್ಯಾನ್ಮಾರ್ ಮಿಲಿಟರಿಯ ಪುಷ್ಟೀಕರಣಕ್ಕೆ ಕೊಡುಗೆ ನೀಡುವ ಕಂಪನಿಗೆ ಆತಿಥ್ಯ ನೀಡಲು ಬಯಸುತ್ತೇವೆಯೇ? ಆಸ್ಟ್ರೇಲಿಯಾ ಮತ್ತು ಆಸ್ಟ್ರೇಲಿಯನ್ನರು ಉತ್ತರಿಸಬೇಕು” ಎಂದು ಕೇಳಿದ್ದರು. ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್‌ನಲ್ಲಿರುವ ಅಬಾಟ್ ಪಾಯಿಂಟ್ ಕಲ್ಲಿದ್ದಲು ಟರ್ಮಿನಲ್‌ ಎಂಬ ಮತ್ತೊಂದು ಅಂತರರಾಷ್ಟ್ರೀಯ ಯೋಜನೆಯಲ್ಲಿ ಅದಾನಿ ಪೋರ್ಟ್ಸ್‌ ತೊಡಗಿಸಿಕೊಳ್ಳಲು ನೋಡುತ್ತಿರುವುದುನ್ನು ಅವರು ಉಲ್ಲೇಖಿಸುತ್ತಿದ್ದರು.

“ಅದಾನಿ ಗ್ರೂಪ್‌ನಲ್ಲಿ ಹೂಡಿಕೆ ಮಾಡುತ್ತಿರುವವರಿಗೆ ಪ್ರಶ್ನೆಯೆಂದರೆ ಅವರು ಮ್ಯಾನ್ಮಾರ್ ಮಿಲಿಟರಿಯ ಕಾರ್ಯಾಚರಣೆಗಳಿಗೆ ಧನಸಹಾಯ ನೀಡಲು ಬಯಸುತ್ತಾರೆಯೇ? ಏಕೆಂದರೆ ಅದಾನಿಯಲ್ಲಿ ಹೂಡಿಕೆ ಮಾಡುವ ಮೂಲಕ ಅವರು ಪರೋಕ್ಷವಾಗಿ ಏನು ಮಾಡುತ್ತಿದ್ದಾರೆ?” ಎಂದು ಸಿಡೋಟಿ ಪ್ರಶ್ನಿಸಿದ್ದರು.

ಯುಎಸ್ ನಿರ್ಬಂಧಗಳು ಆಸ್ಟ್ರೇಲಿಯಾ ಸರ್ಕಾರವು ಅದಾನಿ ಪೋರ್ಟ್‌ನಲ್ಲಿ 3.2 ಮಿಲಿಯನ್ ಹೂಡಿಕೆಯನ್ನು ರದ್ದುಗೊಳಿಸುವಂತೆ ಒತ್ತಡ ಹೇರಿವೆ. ಆದರೆ ಭವಿಷ್ಯದ ನಿಧಿಯ ವಕ್ತಾರರು ಈ ಒಪ್ಪಂದವನ್ನು ಕೈಬಿಡುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಹೇಳಿದರು.


ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಏಕದಿನ ಪಂದ್ಯ: ಮೈದಾನಕ್ಕೆ ನುಗ್ಗಿ ‘ಸ್ಟಾಪ್ ಅದಾನಿ’ ಎಂದ ಪ್ರತಿಭಟನೆಗಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...