Homeಅಂತರಾಷ್ಟ್ರೀಯಬಂದರು ಗುತ್ತಿಗೆಗಾಗಿ ಮ್ಯಾನ್ಮಾರ್ ಮಿಲಿಟರಿ ನಿಯಂತ್ರಿತ ಕಂಪನಿಗೆ 30 ಮಿಲಿಯನ್ ಡಾಲರ್ ಹಣ ನೀಡಿದ ಅದಾನಿ...

ಬಂದರು ಗುತ್ತಿಗೆಗಾಗಿ ಮ್ಯಾನ್ಮಾರ್ ಮಿಲಿಟರಿ ನಿಯಂತ್ರಿತ ಕಂಪನಿಗೆ 30 ಮಿಲಿಯನ್ ಡಾಲರ್ ಹಣ ನೀಡಿದ ಅದಾನಿ ಗ್ರೂಪ್: ವರದಿ

- Advertisement -
- Advertisement -

ಒಂದೆಡೆ ಫೆಬ್ರವರಿ 1 ರ ದಂಗೆಯ ನಂತರ ಮ್ಯಾನ್ಮಾರ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದೇಶಿ ಕಂಪನಿಗಳ ಮೇಲೆ ಒತ್ತಡ ಹೆಚ್ಚಾಗುತ್ತದೆ ಮತ್ತು ಪ್ರತಿಭಟನಾಕಾರರ ಮೇಲೆ ಕ್ರೂರ ದಬ್ಬಾಳಿಕೆ ನಡೆಸುತ್ತಿದೆ. ಇನ್ನೊಂದೆಡೆ ಭಾರತದ ಅದಾನಿ ಗ್ರೂಪ್ ಮಿಲಿಟರಿ ನಿಯಂತ್ರಿತ ಮ್ಯಾನ್ಮಾರ್ ಎಕನಾಮಿಕ್ ಕಾರ್ಪೊರೇಶನ್‌ನೊಂದಿಗಿನ ಬಂದರು ಗುತ್ತಿಗೆ ಒಪ್ಪಂದಕ್ಕಾಗಿ ಹಣ ನೀಡಿದೆ ಎಂದು ಎಬಿಸಿ ನ್ಯೂಸ್ ವರದಿ ಮಾಡಿದೆ.

ಯಾಂಗೊನ್ ಪ್ರದೇಶ ಹೂಡಿಕೆ ಆಯೋಗದಿಂದ ಸೋರಿಕೆಯಾದ ದಾಖಲೆಗಳ ಪ್ರಕಾರ ಅದಾನಿ ಗ್ರೂಪ್ ಮ್ಯಾನ್ಮಾರ್ ಆರ್ಥಿಕ ನಿಗಮಕ್ಕೆ “ಭೂ ಗುತ್ತಿಗೆ ಶುಲ್ಕ” ದಲ್ಲಿ 30 ಮಿಲಿಯನ್ ಡಾಲರ್ ಪಾವತಿಸುತ್ತಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

ಕಳೆದ ತಿಂಗಳು ಅದಾನಿ ಗ್ರೂಪ್ ತನ್ನ ಹೇಳಿಕೆಯಲ್ಲಿ ಬಂದರಿನ ಅನುಮೋದನೆಗಾಗಿ ಮಿಲಿಟರಿ ನಾಯಕರೊಂದಿಗೆ ತೊಡಗಿಸಿಕೊಂಡಿಲ್ಲ ಎಂದು ಹೇಳಿತ್ತು. “ಈ ಅನುಮೋದನೆಯನ್ನು ಪಡೆಯುವಾಗ ಅಥವಾ ನಂತರ ಮಿಲಿಟರಿ ನಾಯಕತ್ವದೊಂದಿಗೆ ತೊಡಗಿಸಿಕೊಂಡಿದ್ದನ್ನು ನಾವು ಸ್ಪಷ್ಟವಾಗಿ ನಿರಾಕರಿಸುತ್ತೇವೆ” ಎಂದಿತ್ತು. ಆದರೆ ಸೋರಿಕೆಯಾದ ದಾಖಲೆಗಳು ಅದು ಸುಳ್ಳು ಎನ್ನುತ್ತಿವೆ.

ಅದಾನಿ ಬಂದರುಗಳ ಮುಖ್ಯ ಕಾರ್ಯನಿರ್ವಾಹಕ ಕರಣ್ ಅದಾನಿ ಅವರು ಜುಲೈ 2019 ರಲ್ಲಿ ಚುನಾಯಿತ ಸರ್ಕಾರದ ವಿರುದ್ಧ ದಂಗೆಯನ್ನು ಮುನ್ನಡೆಸಿದ ಸೇನಾ ಮುಖ್ಯಸ್ಥ ಹಿರಿಯ ಜನರಲ್ ಮಿನ್ ಆಂಗ್ ಹ್ಲೇಂಗ್ ಅವರನ್ನು ಭೇಟಿಯಾದರು ಎಂದು ಎಬಿಸಿ ನ್ಯೂಸ್ ವೀಡಿಯೊಗಳು ಮತ್ತು ಫೋಟೋಗಳನ್ನು ಬಹಿರಂಗಪಡಿಸಿದೆ. 2017 ರಲ್ಲಿ ನಿರಾಶ್ರಿತರ ಬಿಕ್ಕಟ್ಟನ್ನು ಹುಟ್ಟುಹಾಕಿದ ರೋಹಿಂಗ್ಯಾ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧದ ಅಭಿಯಾನದಲ್ಲಿ ತಮ್ಮ ಪಾತ್ರಕ್ಕಾಗಿ ಹೇಲಿಂಗ್ ಸೇರಿದಂತೆ ಕೆಲವು ಜನರಲ್‌ಗಳು ಆಗಲೇ ಯುನೈಟೆಡ್ ಸ್ಟೇಟ್ಸ್ ಮಾನವ ಹಕ್ಕುಗಳ ನಿರ್ಬಂಧದಲ್ಲಿದ್ದರು.

ಈ ಅಂತರರಾಷ್ಟ್ರೀಯ ಬೆಳವಣಿಗೆಗಳ ಹೊರತಾಗಿಯೂ ಮ್ಯಾನ್ಮಾರ್ ಎಕನಾಮಿಕ್ ಕಾರ್ಪೊರೇಷನ್ ಬಂದರಿಗೆ “ಭೂ ಅನುಮತಿ ಶುಲ್ಕ” ವಾಗಿ ಮತ್ತೆ 22 ಮಿಲಿಯನ್ ಡಾಲರ್ ಪಡೆಯುವ ಸಾಧ್ಯತೆಯಿದೆ ಎಂದು ಆಸ್ಟ್ರೇಲಿಯನ್ ಸೆಂಟರ್ ಫಾರ್ ಇಂಟರ್ನ್ಯಾಷನಲ್ ಜಸ್ಟೀಸ್ ಮತ್ತು ಆಕ್ಟಿವಿಸ್ಟ್ ಗ್ರೂಫ್ ಜಸ್ಟಿಸ್ ಫಾರ್ ಮ್ಯಾನ್ಮಾರ್ ಜಂಟಿ ವರದಿ ತಿಳಿಸಿದೆ.

ಕಳೆದ ತಿಂಗಳು ನಡೆದ ದಂಗೆಯ ನಂತರ ದಾಖಲೆಗಳು ಸೋರಿಕೆಯಾಗಿವೆ ಎಂದು ವರದಿಯ ಲೇಖಕ ಮತ್ತು ಮಾನವ ಹಕ್ಕುಗಳ ವಕೀಲ ರಾವನ್ ಅರ್ರಾಫ್ ಎಬಿಸಿ ನ್ಯೂಸ್‌ಗೆ ತಿಳಿಸಿದ್ದಾರೆ.

ಮ್ಯಾನ್ಮಾರ್ ಮಿಲಿಟರಿಯಿಂದ ನಿಯಂತ್ರಿಸಲ್ಪಡುವ ಮತ್ತು ಅದರ ಮಾಲೀಕತ್ವದಲ್ಲಿರುವ ‘ಮ್ಯಾನ್ಮಾರ್ ಎಕನಾಮಿಕ್ ಕಾರ್ಪೊರೇಷನ್’ಗೆ ಹಣ ಸಂದಾಯವಾಗಿದೆ ಎಂಬುದನ್ನು ಈ ದಾಖಲೆಗಳು ನಿರ್ದಿಷ್ಟವಾಗಿ ಬಹಿರಂಗಪಡಿಸುತ್ತವೆ. ಅದು ಸದ್ಯಕ್ಕೆ ಯುದ್ಧ ಅಪರಾಧಗಳು ಮತ್ತು ರೋಹಿಂಗ್ಯಾಗಳ ವಿರುದ್ಧದ ಅಪರಾಧಗಳು, ನರಮೇಧ ಸೇರಿದಂತೆ ಹಲವು ಆರೋಪಗಳ ಮೇಲೆ ಅಂತರರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಮತ್ತು ಇತರ ಕೋರ್ಟ್‌ನಲ್ಲಿ ತನಿಖೆ ಎದುರಿಸುತ್ತಿದೆ. ಈ ಕುರಿತು ಸಾಕಷ್ಟು ಬಾರಿ ಅದಾನಿಯವರ ಗಮನಕ್ಕೆ ತರಲಾಗಿದೆ. ಆದರೆ ಅವರು (ಎಂಇಸಿ) ಮ್ಯಾನ್ಮಾರ್ ಒಪ್ಪಂದದಿಂದ ಹೊರಗುಳಿಯಲು ನಿರಾಕರಿಸಿದ್ದಾರೆ ಮತ್ತು ಇದು ನಿಜವಾದ ಸಮಸ್ಯೆ ಎಂದು ಅರ್ರಾಫ್ ಹೇಳಿದ್ದಾರೆ.

ಅದಾನಿ ಗ್ರೂಪ್‌ನ ಹಣವನ್ನು ಮ್ಯಾನ್ಮಾರ್ ಮಿಲಿಟರಿಯು ಅಂತಾರಾಷ್ಟ್ರೀಯ ಅಪರಾಧಗಳಿಗೆ ಬಳಸಿಕೊಳ್ಳಬಹುದು ಎಂದು ಅರ್ರಾಫ್ ಆತಂಕ ವ್ಯಕ್ತಪಡಿಸಿದ್ದಾರೆ.

2019 ರ ವಿಶ್ವಸಂಸ್ಥೆಯ ವರದಿಯು ಮಿಲಿಟರಿ ಸಂಘಟನೆಯೊಂದಿಗೆ ತೊಡಗಿಸಿಕೊಂಡ ಕಂಪನಿಗಳಲ್ಲಿ ಅದಾನಿ ಪೋರ್ಟ್ಸ್‌ ಸಹ ಒಂದಾಗಿದೆ ಎಂದು ತಿಳಿಸಿತ್ತು. ಮಾನವ ಹಕ್ಕುಗಳ ಉಲ್ಲಂಘನೆಯಿಂದಾಗಿ ಮಿಲಿಟರಿಯೊಂದಿಗೆ ವ್ಯಾಪಾರ ಮಾಡದಂತೆ ವಿದೇಶಿ ಸಂಸ್ಥೆಗಳಿಗೆ ವರದಿ ಒತ್ತಾಯಿಸಿತ್ತು.

ಮ್ಯಾನ್ಮಾರ್‌ಗೆ 2019 ರಲ್ಲಿ ಭೇಟಿ ನೀಡಿದ್ದ ವಿಶ್ವಸಂಸ್ಥೆಯ ಸತ್ಯ-ಶೋಧನಾ ತಂಡದ ಭಾಗವಾಗಿದ್ದ ಆಸ್ಟ್ರೇಲಿಯಾದ ವಕೀಲ ಕ್ರಿಸ್ ಸಿಡೋಟಿ “ನಾವು ಮ್ಯಾನ್ಮಾರ್ ಮಿಲಿಟರಿಯ ಪುಷ್ಟೀಕರಣಕ್ಕೆ ಕೊಡುಗೆ ನೀಡುವ ಕಂಪನಿಗೆ ಆತಿಥ್ಯ ನೀಡಲು ಬಯಸುತ್ತೇವೆಯೇ? ಆಸ್ಟ್ರೇಲಿಯಾ ಮತ್ತು ಆಸ್ಟ್ರೇಲಿಯನ್ನರು ಉತ್ತರಿಸಬೇಕು” ಎಂದು ಕೇಳಿದ್ದರು. ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್‌ನಲ್ಲಿರುವ ಅಬಾಟ್ ಪಾಯಿಂಟ್ ಕಲ್ಲಿದ್ದಲು ಟರ್ಮಿನಲ್‌ ಎಂಬ ಮತ್ತೊಂದು ಅಂತರರಾಷ್ಟ್ರೀಯ ಯೋಜನೆಯಲ್ಲಿ ಅದಾನಿ ಪೋರ್ಟ್ಸ್‌ ತೊಡಗಿಸಿಕೊಳ್ಳಲು ನೋಡುತ್ತಿರುವುದುನ್ನು ಅವರು ಉಲ್ಲೇಖಿಸುತ್ತಿದ್ದರು.

“ಅದಾನಿ ಗ್ರೂಪ್‌ನಲ್ಲಿ ಹೂಡಿಕೆ ಮಾಡುತ್ತಿರುವವರಿಗೆ ಪ್ರಶ್ನೆಯೆಂದರೆ ಅವರು ಮ್ಯಾನ್ಮಾರ್ ಮಿಲಿಟರಿಯ ಕಾರ್ಯಾಚರಣೆಗಳಿಗೆ ಧನಸಹಾಯ ನೀಡಲು ಬಯಸುತ್ತಾರೆಯೇ? ಏಕೆಂದರೆ ಅದಾನಿಯಲ್ಲಿ ಹೂಡಿಕೆ ಮಾಡುವ ಮೂಲಕ ಅವರು ಪರೋಕ್ಷವಾಗಿ ಏನು ಮಾಡುತ್ತಿದ್ದಾರೆ?” ಎಂದು ಸಿಡೋಟಿ ಪ್ರಶ್ನಿಸಿದ್ದರು.

ಯುಎಸ್ ನಿರ್ಬಂಧಗಳು ಆಸ್ಟ್ರೇಲಿಯಾ ಸರ್ಕಾರವು ಅದಾನಿ ಪೋರ್ಟ್‌ನಲ್ಲಿ 3.2 ಮಿಲಿಯನ್ ಹೂಡಿಕೆಯನ್ನು ರದ್ದುಗೊಳಿಸುವಂತೆ ಒತ್ತಡ ಹೇರಿವೆ. ಆದರೆ ಭವಿಷ್ಯದ ನಿಧಿಯ ವಕ್ತಾರರು ಈ ಒಪ್ಪಂದವನ್ನು ಕೈಬಿಡುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಹೇಳಿದರು.


ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಏಕದಿನ ಪಂದ್ಯ: ಮೈದಾನಕ್ಕೆ ನುಗ್ಗಿ ‘ಸ್ಟಾಪ್ ಅದಾನಿ’ ಎಂದ ಪ್ರತಿಭಟನೆಗಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...