Homeಅಂತರಾಷ್ಟ್ರೀಯಬಂದರು ಗುತ್ತಿಗೆಗಾಗಿ ಮ್ಯಾನ್ಮಾರ್ ಮಿಲಿಟರಿ ನಿಯಂತ್ರಿತ ಕಂಪನಿಗೆ 30 ಮಿಲಿಯನ್ ಡಾಲರ್ ಹಣ ನೀಡಿದ ಅದಾನಿ...

ಬಂದರು ಗುತ್ತಿಗೆಗಾಗಿ ಮ್ಯಾನ್ಮಾರ್ ಮಿಲಿಟರಿ ನಿಯಂತ್ರಿತ ಕಂಪನಿಗೆ 30 ಮಿಲಿಯನ್ ಡಾಲರ್ ಹಣ ನೀಡಿದ ಅದಾನಿ ಗ್ರೂಪ್: ವರದಿ

- Advertisement -
- Advertisement -

ಒಂದೆಡೆ ಫೆಬ್ರವರಿ 1 ರ ದಂಗೆಯ ನಂತರ ಮ್ಯಾನ್ಮಾರ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದೇಶಿ ಕಂಪನಿಗಳ ಮೇಲೆ ಒತ್ತಡ ಹೆಚ್ಚಾಗುತ್ತದೆ ಮತ್ತು ಪ್ರತಿಭಟನಾಕಾರರ ಮೇಲೆ ಕ್ರೂರ ದಬ್ಬಾಳಿಕೆ ನಡೆಸುತ್ತಿದೆ. ಇನ್ನೊಂದೆಡೆ ಭಾರತದ ಅದಾನಿ ಗ್ರೂಪ್ ಮಿಲಿಟರಿ ನಿಯಂತ್ರಿತ ಮ್ಯಾನ್ಮಾರ್ ಎಕನಾಮಿಕ್ ಕಾರ್ಪೊರೇಶನ್‌ನೊಂದಿಗಿನ ಬಂದರು ಗುತ್ತಿಗೆ ಒಪ್ಪಂದಕ್ಕಾಗಿ ಹಣ ನೀಡಿದೆ ಎಂದು ಎಬಿಸಿ ನ್ಯೂಸ್ ವರದಿ ಮಾಡಿದೆ.

ಯಾಂಗೊನ್ ಪ್ರದೇಶ ಹೂಡಿಕೆ ಆಯೋಗದಿಂದ ಸೋರಿಕೆಯಾದ ದಾಖಲೆಗಳ ಪ್ರಕಾರ ಅದಾನಿ ಗ್ರೂಪ್ ಮ್ಯಾನ್ಮಾರ್ ಆರ್ಥಿಕ ನಿಗಮಕ್ಕೆ “ಭೂ ಗುತ್ತಿಗೆ ಶುಲ್ಕ” ದಲ್ಲಿ 30 ಮಿಲಿಯನ್ ಡಾಲರ್ ಪಾವತಿಸುತ್ತಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

ಕಳೆದ ತಿಂಗಳು ಅದಾನಿ ಗ್ರೂಪ್ ತನ್ನ ಹೇಳಿಕೆಯಲ್ಲಿ ಬಂದರಿನ ಅನುಮೋದನೆಗಾಗಿ ಮಿಲಿಟರಿ ನಾಯಕರೊಂದಿಗೆ ತೊಡಗಿಸಿಕೊಂಡಿಲ್ಲ ಎಂದು ಹೇಳಿತ್ತು. “ಈ ಅನುಮೋದನೆಯನ್ನು ಪಡೆಯುವಾಗ ಅಥವಾ ನಂತರ ಮಿಲಿಟರಿ ನಾಯಕತ್ವದೊಂದಿಗೆ ತೊಡಗಿಸಿಕೊಂಡಿದ್ದನ್ನು ನಾವು ಸ್ಪಷ್ಟವಾಗಿ ನಿರಾಕರಿಸುತ್ತೇವೆ” ಎಂದಿತ್ತು. ಆದರೆ ಸೋರಿಕೆಯಾದ ದಾಖಲೆಗಳು ಅದು ಸುಳ್ಳು ಎನ್ನುತ್ತಿವೆ.

ಅದಾನಿ ಬಂದರುಗಳ ಮುಖ್ಯ ಕಾರ್ಯನಿರ್ವಾಹಕ ಕರಣ್ ಅದಾನಿ ಅವರು ಜುಲೈ 2019 ರಲ್ಲಿ ಚುನಾಯಿತ ಸರ್ಕಾರದ ವಿರುದ್ಧ ದಂಗೆಯನ್ನು ಮುನ್ನಡೆಸಿದ ಸೇನಾ ಮುಖ್ಯಸ್ಥ ಹಿರಿಯ ಜನರಲ್ ಮಿನ್ ಆಂಗ್ ಹ್ಲೇಂಗ್ ಅವರನ್ನು ಭೇಟಿಯಾದರು ಎಂದು ಎಬಿಸಿ ನ್ಯೂಸ್ ವೀಡಿಯೊಗಳು ಮತ್ತು ಫೋಟೋಗಳನ್ನು ಬಹಿರಂಗಪಡಿಸಿದೆ. 2017 ರಲ್ಲಿ ನಿರಾಶ್ರಿತರ ಬಿಕ್ಕಟ್ಟನ್ನು ಹುಟ್ಟುಹಾಕಿದ ರೋಹಿಂಗ್ಯಾ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧದ ಅಭಿಯಾನದಲ್ಲಿ ತಮ್ಮ ಪಾತ್ರಕ್ಕಾಗಿ ಹೇಲಿಂಗ್ ಸೇರಿದಂತೆ ಕೆಲವು ಜನರಲ್‌ಗಳು ಆಗಲೇ ಯುನೈಟೆಡ್ ಸ್ಟೇಟ್ಸ್ ಮಾನವ ಹಕ್ಕುಗಳ ನಿರ್ಬಂಧದಲ್ಲಿದ್ದರು.

ಈ ಅಂತರರಾಷ್ಟ್ರೀಯ ಬೆಳವಣಿಗೆಗಳ ಹೊರತಾಗಿಯೂ ಮ್ಯಾನ್ಮಾರ್ ಎಕನಾಮಿಕ್ ಕಾರ್ಪೊರೇಷನ್ ಬಂದರಿಗೆ “ಭೂ ಅನುಮತಿ ಶುಲ್ಕ” ವಾಗಿ ಮತ್ತೆ 22 ಮಿಲಿಯನ್ ಡಾಲರ್ ಪಡೆಯುವ ಸಾಧ್ಯತೆಯಿದೆ ಎಂದು ಆಸ್ಟ್ರೇಲಿಯನ್ ಸೆಂಟರ್ ಫಾರ್ ಇಂಟರ್ನ್ಯಾಷನಲ್ ಜಸ್ಟೀಸ್ ಮತ್ತು ಆಕ್ಟಿವಿಸ್ಟ್ ಗ್ರೂಫ್ ಜಸ್ಟಿಸ್ ಫಾರ್ ಮ್ಯಾನ್ಮಾರ್ ಜಂಟಿ ವರದಿ ತಿಳಿಸಿದೆ.

ಕಳೆದ ತಿಂಗಳು ನಡೆದ ದಂಗೆಯ ನಂತರ ದಾಖಲೆಗಳು ಸೋರಿಕೆಯಾಗಿವೆ ಎಂದು ವರದಿಯ ಲೇಖಕ ಮತ್ತು ಮಾನವ ಹಕ್ಕುಗಳ ವಕೀಲ ರಾವನ್ ಅರ್ರಾಫ್ ಎಬಿಸಿ ನ್ಯೂಸ್‌ಗೆ ತಿಳಿಸಿದ್ದಾರೆ.

ಮ್ಯಾನ್ಮಾರ್ ಮಿಲಿಟರಿಯಿಂದ ನಿಯಂತ್ರಿಸಲ್ಪಡುವ ಮತ್ತು ಅದರ ಮಾಲೀಕತ್ವದಲ್ಲಿರುವ ‘ಮ್ಯಾನ್ಮಾರ್ ಎಕನಾಮಿಕ್ ಕಾರ್ಪೊರೇಷನ್’ಗೆ ಹಣ ಸಂದಾಯವಾಗಿದೆ ಎಂಬುದನ್ನು ಈ ದಾಖಲೆಗಳು ನಿರ್ದಿಷ್ಟವಾಗಿ ಬಹಿರಂಗಪಡಿಸುತ್ತವೆ. ಅದು ಸದ್ಯಕ್ಕೆ ಯುದ್ಧ ಅಪರಾಧಗಳು ಮತ್ತು ರೋಹಿಂಗ್ಯಾಗಳ ವಿರುದ್ಧದ ಅಪರಾಧಗಳು, ನರಮೇಧ ಸೇರಿದಂತೆ ಹಲವು ಆರೋಪಗಳ ಮೇಲೆ ಅಂತರರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಮತ್ತು ಇತರ ಕೋರ್ಟ್‌ನಲ್ಲಿ ತನಿಖೆ ಎದುರಿಸುತ್ತಿದೆ. ಈ ಕುರಿತು ಸಾಕಷ್ಟು ಬಾರಿ ಅದಾನಿಯವರ ಗಮನಕ್ಕೆ ತರಲಾಗಿದೆ. ಆದರೆ ಅವರು (ಎಂಇಸಿ) ಮ್ಯಾನ್ಮಾರ್ ಒಪ್ಪಂದದಿಂದ ಹೊರಗುಳಿಯಲು ನಿರಾಕರಿಸಿದ್ದಾರೆ ಮತ್ತು ಇದು ನಿಜವಾದ ಸಮಸ್ಯೆ ಎಂದು ಅರ್ರಾಫ್ ಹೇಳಿದ್ದಾರೆ.

ಅದಾನಿ ಗ್ರೂಪ್‌ನ ಹಣವನ್ನು ಮ್ಯಾನ್ಮಾರ್ ಮಿಲಿಟರಿಯು ಅಂತಾರಾಷ್ಟ್ರೀಯ ಅಪರಾಧಗಳಿಗೆ ಬಳಸಿಕೊಳ್ಳಬಹುದು ಎಂದು ಅರ್ರಾಫ್ ಆತಂಕ ವ್ಯಕ್ತಪಡಿಸಿದ್ದಾರೆ.

2019 ರ ವಿಶ್ವಸಂಸ್ಥೆಯ ವರದಿಯು ಮಿಲಿಟರಿ ಸಂಘಟನೆಯೊಂದಿಗೆ ತೊಡಗಿಸಿಕೊಂಡ ಕಂಪನಿಗಳಲ್ಲಿ ಅದಾನಿ ಪೋರ್ಟ್ಸ್‌ ಸಹ ಒಂದಾಗಿದೆ ಎಂದು ತಿಳಿಸಿತ್ತು. ಮಾನವ ಹಕ್ಕುಗಳ ಉಲ್ಲಂಘನೆಯಿಂದಾಗಿ ಮಿಲಿಟರಿಯೊಂದಿಗೆ ವ್ಯಾಪಾರ ಮಾಡದಂತೆ ವಿದೇಶಿ ಸಂಸ್ಥೆಗಳಿಗೆ ವರದಿ ಒತ್ತಾಯಿಸಿತ್ತು.

ಮ್ಯಾನ್ಮಾರ್‌ಗೆ 2019 ರಲ್ಲಿ ಭೇಟಿ ನೀಡಿದ್ದ ವಿಶ್ವಸಂಸ್ಥೆಯ ಸತ್ಯ-ಶೋಧನಾ ತಂಡದ ಭಾಗವಾಗಿದ್ದ ಆಸ್ಟ್ರೇಲಿಯಾದ ವಕೀಲ ಕ್ರಿಸ್ ಸಿಡೋಟಿ “ನಾವು ಮ್ಯಾನ್ಮಾರ್ ಮಿಲಿಟರಿಯ ಪುಷ್ಟೀಕರಣಕ್ಕೆ ಕೊಡುಗೆ ನೀಡುವ ಕಂಪನಿಗೆ ಆತಿಥ್ಯ ನೀಡಲು ಬಯಸುತ್ತೇವೆಯೇ? ಆಸ್ಟ್ರೇಲಿಯಾ ಮತ್ತು ಆಸ್ಟ್ರೇಲಿಯನ್ನರು ಉತ್ತರಿಸಬೇಕು” ಎಂದು ಕೇಳಿದ್ದರು. ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್‌ನಲ್ಲಿರುವ ಅಬಾಟ್ ಪಾಯಿಂಟ್ ಕಲ್ಲಿದ್ದಲು ಟರ್ಮಿನಲ್‌ ಎಂಬ ಮತ್ತೊಂದು ಅಂತರರಾಷ್ಟ್ರೀಯ ಯೋಜನೆಯಲ್ಲಿ ಅದಾನಿ ಪೋರ್ಟ್ಸ್‌ ತೊಡಗಿಸಿಕೊಳ್ಳಲು ನೋಡುತ್ತಿರುವುದುನ್ನು ಅವರು ಉಲ್ಲೇಖಿಸುತ್ತಿದ್ದರು.

“ಅದಾನಿ ಗ್ರೂಪ್‌ನಲ್ಲಿ ಹೂಡಿಕೆ ಮಾಡುತ್ತಿರುವವರಿಗೆ ಪ್ರಶ್ನೆಯೆಂದರೆ ಅವರು ಮ್ಯಾನ್ಮಾರ್ ಮಿಲಿಟರಿಯ ಕಾರ್ಯಾಚರಣೆಗಳಿಗೆ ಧನಸಹಾಯ ನೀಡಲು ಬಯಸುತ್ತಾರೆಯೇ? ಏಕೆಂದರೆ ಅದಾನಿಯಲ್ಲಿ ಹೂಡಿಕೆ ಮಾಡುವ ಮೂಲಕ ಅವರು ಪರೋಕ್ಷವಾಗಿ ಏನು ಮಾಡುತ್ತಿದ್ದಾರೆ?” ಎಂದು ಸಿಡೋಟಿ ಪ್ರಶ್ನಿಸಿದ್ದರು.

ಯುಎಸ್ ನಿರ್ಬಂಧಗಳು ಆಸ್ಟ್ರೇಲಿಯಾ ಸರ್ಕಾರವು ಅದಾನಿ ಪೋರ್ಟ್‌ನಲ್ಲಿ 3.2 ಮಿಲಿಯನ್ ಹೂಡಿಕೆಯನ್ನು ರದ್ದುಗೊಳಿಸುವಂತೆ ಒತ್ತಡ ಹೇರಿವೆ. ಆದರೆ ಭವಿಷ್ಯದ ನಿಧಿಯ ವಕ್ತಾರರು ಈ ಒಪ್ಪಂದವನ್ನು ಕೈಬಿಡುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಹೇಳಿದರು.


ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಏಕದಿನ ಪಂದ್ಯ: ಮೈದಾನಕ್ಕೆ ನುಗ್ಗಿ ‘ಸ್ಟಾಪ್ ಅದಾನಿ’ ಎಂದ ಪ್ರತಿಭಟನೆಗಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...