Homeಅಂತರಾಷ್ಟ್ರೀಯಬಂದರು ಗುತ್ತಿಗೆಗಾಗಿ ಮ್ಯಾನ್ಮಾರ್ ಮಿಲಿಟರಿ ನಿಯಂತ್ರಿತ ಕಂಪನಿಗೆ 30 ಮಿಲಿಯನ್ ಡಾಲರ್ ಹಣ ನೀಡಿದ ಅದಾನಿ...

ಬಂದರು ಗುತ್ತಿಗೆಗಾಗಿ ಮ್ಯಾನ್ಮಾರ್ ಮಿಲಿಟರಿ ನಿಯಂತ್ರಿತ ಕಂಪನಿಗೆ 30 ಮಿಲಿಯನ್ ಡಾಲರ್ ಹಣ ನೀಡಿದ ಅದಾನಿ ಗ್ರೂಪ್: ವರದಿ

- Advertisement -
- Advertisement -

ಒಂದೆಡೆ ಫೆಬ್ರವರಿ 1 ರ ದಂಗೆಯ ನಂತರ ಮ್ಯಾನ್ಮಾರ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದೇಶಿ ಕಂಪನಿಗಳ ಮೇಲೆ ಒತ್ತಡ ಹೆಚ್ಚಾಗುತ್ತದೆ ಮತ್ತು ಪ್ರತಿಭಟನಾಕಾರರ ಮೇಲೆ ಕ್ರೂರ ದಬ್ಬಾಳಿಕೆ ನಡೆಸುತ್ತಿದೆ. ಇನ್ನೊಂದೆಡೆ ಭಾರತದ ಅದಾನಿ ಗ್ರೂಪ್ ಮಿಲಿಟರಿ ನಿಯಂತ್ರಿತ ಮ್ಯಾನ್ಮಾರ್ ಎಕನಾಮಿಕ್ ಕಾರ್ಪೊರೇಶನ್‌ನೊಂದಿಗಿನ ಬಂದರು ಗುತ್ತಿಗೆ ಒಪ್ಪಂದಕ್ಕಾಗಿ ಹಣ ನೀಡಿದೆ ಎಂದು ಎಬಿಸಿ ನ್ಯೂಸ್ ವರದಿ ಮಾಡಿದೆ.

ಯಾಂಗೊನ್ ಪ್ರದೇಶ ಹೂಡಿಕೆ ಆಯೋಗದಿಂದ ಸೋರಿಕೆಯಾದ ದಾಖಲೆಗಳ ಪ್ರಕಾರ ಅದಾನಿ ಗ್ರೂಪ್ ಮ್ಯಾನ್ಮಾರ್ ಆರ್ಥಿಕ ನಿಗಮಕ್ಕೆ “ಭೂ ಗುತ್ತಿಗೆ ಶುಲ್ಕ” ದಲ್ಲಿ 30 ಮಿಲಿಯನ್ ಡಾಲರ್ ಪಾವತಿಸುತ್ತಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

ಕಳೆದ ತಿಂಗಳು ಅದಾನಿ ಗ್ರೂಪ್ ತನ್ನ ಹೇಳಿಕೆಯಲ್ಲಿ ಬಂದರಿನ ಅನುಮೋದನೆಗಾಗಿ ಮಿಲಿಟರಿ ನಾಯಕರೊಂದಿಗೆ ತೊಡಗಿಸಿಕೊಂಡಿಲ್ಲ ಎಂದು ಹೇಳಿತ್ತು. “ಈ ಅನುಮೋದನೆಯನ್ನು ಪಡೆಯುವಾಗ ಅಥವಾ ನಂತರ ಮಿಲಿಟರಿ ನಾಯಕತ್ವದೊಂದಿಗೆ ತೊಡಗಿಸಿಕೊಂಡಿದ್ದನ್ನು ನಾವು ಸ್ಪಷ್ಟವಾಗಿ ನಿರಾಕರಿಸುತ್ತೇವೆ” ಎಂದಿತ್ತು. ಆದರೆ ಸೋರಿಕೆಯಾದ ದಾಖಲೆಗಳು ಅದು ಸುಳ್ಳು ಎನ್ನುತ್ತಿವೆ.

ಅದಾನಿ ಬಂದರುಗಳ ಮುಖ್ಯ ಕಾರ್ಯನಿರ್ವಾಹಕ ಕರಣ್ ಅದಾನಿ ಅವರು ಜುಲೈ 2019 ರಲ್ಲಿ ಚುನಾಯಿತ ಸರ್ಕಾರದ ವಿರುದ್ಧ ದಂಗೆಯನ್ನು ಮುನ್ನಡೆಸಿದ ಸೇನಾ ಮುಖ್ಯಸ್ಥ ಹಿರಿಯ ಜನರಲ್ ಮಿನ್ ಆಂಗ್ ಹ್ಲೇಂಗ್ ಅವರನ್ನು ಭೇಟಿಯಾದರು ಎಂದು ಎಬಿಸಿ ನ್ಯೂಸ್ ವೀಡಿಯೊಗಳು ಮತ್ತು ಫೋಟೋಗಳನ್ನು ಬಹಿರಂಗಪಡಿಸಿದೆ. 2017 ರಲ್ಲಿ ನಿರಾಶ್ರಿತರ ಬಿಕ್ಕಟ್ಟನ್ನು ಹುಟ್ಟುಹಾಕಿದ ರೋಹಿಂಗ್ಯಾ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧದ ಅಭಿಯಾನದಲ್ಲಿ ತಮ್ಮ ಪಾತ್ರಕ್ಕಾಗಿ ಹೇಲಿಂಗ್ ಸೇರಿದಂತೆ ಕೆಲವು ಜನರಲ್‌ಗಳು ಆಗಲೇ ಯುನೈಟೆಡ್ ಸ್ಟೇಟ್ಸ್ ಮಾನವ ಹಕ್ಕುಗಳ ನಿರ್ಬಂಧದಲ್ಲಿದ್ದರು.

ಈ ಅಂತರರಾಷ್ಟ್ರೀಯ ಬೆಳವಣಿಗೆಗಳ ಹೊರತಾಗಿಯೂ ಮ್ಯಾನ್ಮಾರ್ ಎಕನಾಮಿಕ್ ಕಾರ್ಪೊರೇಷನ್ ಬಂದರಿಗೆ “ಭೂ ಅನುಮತಿ ಶುಲ್ಕ” ವಾಗಿ ಮತ್ತೆ 22 ಮಿಲಿಯನ್ ಡಾಲರ್ ಪಡೆಯುವ ಸಾಧ್ಯತೆಯಿದೆ ಎಂದು ಆಸ್ಟ್ರೇಲಿಯನ್ ಸೆಂಟರ್ ಫಾರ್ ಇಂಟರ್ನ್ಯಾಷನಲ್ ಜಸ್ಟೀಸ್ ಮತ್ತು ಆಕ್ಟಿವಿಸ್ಟ್ ಗ್ರೂಫ್ ಜಸ್ಟಿಸ್ ಫಾರ್ ಮ್ಯಾನ್ಮಾರ್ ಜಂಟಿ ವರದಿ ತಿಳಿಸಿದೆ.

ಕಳೆದ ತಿಂಗಳು ನಡೆದ ದಂಗೆಯ ನಂತರ ದಾಖಲೆಗಳು ಸೋರಿಕೆಯಾಗಿವೆ ಎಂದು ವರದಿಯ ಲೇಖಕ ಮತ್ತು ಮಾನವ ಹಕ್ಕುಗಳ ವಕೀಲ ರಾವನ್ ಅರ್ರಾಫ್ ಎಬಿಸಿ ನ್ಯೂಸ್‌ಗೆ ತಿಳಿಸಿದ್ದಾರೆ.

ಮ್ಯಾನ್ಮಾರ್ ಮಿಲಿಟರಿಯಿಂದ ನಿಯಂತ್ರಿಸಲ್ಪಡುವ ಮತ್ತು ಅದರ ಮಾಲೀಕತ್ವದಲ್ಲಿರುವ ‘ಮ್ಯಾನ್ಮಾರ್ ಎಕನಾಮಿಕ್ ಕಾರ್ಪೊರೇಷನ್’ಗೆ ಹಣ ಸಂದಾಯವಾಗಿದೆ ಎಂಬುದನ್ನು ಈ ದಾಖಲೆಗಳು ನಿರ್ದಿಷ್ಟವಾಗಿ ಬಹಿರಂಗಪಡಿಸುತ್ತವೆ. ಅದು ಸದ್ಯಕ್ಕೆ ಯುದ್ಧ ಅಪರಾಧಗಳು ಮತ್ತು ರೋಹಿಂಗ್ಯಾಗಳ ವಿರುದ್ಧದ ಅಪರಾಧಗಳು, ನರಮೇಧ ಸೇರಿದಂತೆ ಹಲವು ಆರೋಪಗಳ ಮೇಲೆ ಅಂತರರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಮತ್ತು ಇತರ ಕೋರ್ಟ್‌ನಲ್ಲಿ ತನಿಖೆ ಎದುರಿಸುತ್ತಿದೆ. ಈ ಕುರಿತು ಸಾಕಷ್ಟು ಬಾರಿ ಅದಾನಿಯವರ ಗಮನಕ್ಕೆ ತರಲಾಗಿದೆ. ಆದರೆ ಅವರು (ಎಂಇಸಿ) ಮ್ಯಾನ್ಮಾರ್ ಒಪ್ಪಂದದಿಂದ ಹೊರಗುಳಿಯಲು ನಿರಾಕರಿಸಿದ್ದಾರೆ ಮತ್ತು ಇದು ನಿಜವಾದ ಸಮಸ್ಯೆ ಎಂದು ಅರ್ರಾಫ್ ಹೇಳಿದ್ದಾರೆ.

ಅದಾನಿ ಗ್ರೂಪ್‌ನ ಹಣವನ್ನು ಮ್ಯಾನ್ಮಾರ್ ಮಿಲಿಟರಿಯು ಅಂತಾರಾಷ್ಟ್ರೀಯ ಅಪರಾಧಗಳಿಗೆ ಬಳಸಿಕೊಳ್ಳಬಹುದು ಎಂದು ಅರ್ರಾಫ್ ಆತಂಕ ವ್ಯಕ್ತಪಡಿಸಿದ್ದಾರೆ.

2019 ರ ವಿಶ್ವಸಂಸ್ಥೆಯ ವರದಿಯು ಮಿಲಿಟರಿ ಸಂಘಟನೆಯೊಂದಿಗೆ ತೊಡಗಿಸಿಕೊಂಡ ಕಂಪನಿಗಳಲ್ಲಿ ಅದಾನಿ ಪೋರ್ಟ್ಸ್‌ ಸಹ ಒಂದಾಗಿದೆ ಎಂದು ತಿಳಿಸಿತ್ತು. ಮಾನವ ಹಕ್ಕುಗಳ ಉಲ್ಲಂಘನೆಯಿಂದಾಗಿ ಮಿಲಿಟರಿಯೊಂದಿಗೆ ವ್ಯಾಪಾರ ಮಾಡದಂತೆ ವಿದೇಶಿ ಸಂಸ್ಥೆಗಳಿಗೆ ವರದಿ ಒತ್ತಾಯಿಸಿತ್ತು.

ಮ್ಯಾನ್ಮಾರ್‌ಗೆ 2019 ರಲ್ಲಿ ಭೇಟಿ ನೀಡಿದ್ದ ವಿಶ್ವಸಂಸ್ಥೆಯ ಸತ್ಯ-ಶೋಧನಾ ತಂಡದ ಭಾಗವಾಗಿದ್ದ ಆಸ್ಟ್ರೇಲಿಯಾದ ವಕೀಲ ಕ್ರಿಸ್ ಸಿಡೋಟಿ “ನಾವು ಮ್ಯಾನ್ಮಾರ್ ಮಿಲಿಟರಿಯ ಪುಷ್ಟೀಕರಣಕ್ಕೆ ಕೊಡುಗೆ ನೀಡುವ ಕಂಪನಿಗೆ ಆತಿಥ್ಯ ನೀಡಲು ಬಯಸುತ್ತೇವೆಯೇ? ಆಸ್ಟ್ರೇಲಿಯಾ ಮತ್ತು ಆಸ್ಟ್ರೇಲಿಯನ್ನರು ಉತ್ತರಿಸಬೇಕು” ಎಂದು ಕೇಳಿದ್ದರು. ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್‌ನಲ್ಲಿರುವ ಅಬಾಟ್ ಪಾಯಿಂಟ್ ಕಲ್ಲಿದ್ದಲು ಟರ್ಮಿನಲ್‌ ಎಂಬ ಮತ್ತೊಂದು ಅಂತರರಾಷ್ಟ್ರೀಯ ಯೋಜನೆಯಲ್ಲಿ ಅದಾನಿ ಪೋರ್ಟ್ಸ್‌ ತೊಡಗಿಸಿಕೊಳ್ಳಲು ನೋಡುತ್ತಿರುವುದುನ್ನು ಅವರು ಉಲ್ಲೇಖಿಸುತ್ತಿದ್ದರು.

“ಅದಾನಿ ಗ್ರೂಪ್‌ನಲ್ಲಿ ಹೂಡಿಕೆ ಮಾಡುತ್ತಿರುವವರಿಗೆ ಪ್ರಶ್ನೆಯೆಂದರೆ ಅವರು ಮ್ಯಾನ್ಮಾರ್ ಮಿಲಿಟರಿಯ ಕಾರ್ಯಾಚರಣೆಗಳಿಗೆ ಧನಸಹಾಯ ನೀಡಲು ಬಯಸುತ್ತಾರೆಯೇ? ಏಕೆಂದರೆ ಅದಾನಿಯಲ್ಲಿ ಹೂಡಿಕೆ ಮಾಡುವ ಮೂಲಕ ಅವರು ಪರೋಕ್ಷವಾಗಿ ಏನು ಮಾಡುತ್ತಿದ್ದಾರೆ?” ಎಂದು ಸಿಡೋಟಿ ಪ್ರಶ್ನಿಸಿದ್ದರು.

ಯುಎಸ್ ನಿರ್ಬಂಧಗಳು ಆಸ್ಟ್ರೇಲಿಯಾ ಸರ್ಕಾರವು ಅದಾನಿ ಪೋರ್ಟ್‌ನಲ್ಲಿ 3.2 ಮಿಲಿಯನ್ ಹೂಡಿಕೆಯನ್ನು ರದ್ದುಗೊಳಿಸುವಂತೆ ಒತ್ತಡ ಹೇರಿವೆ. ಆದರೆ ಭವಿಷ್ಯದ ನಿಧಿಯ ವಕ್ತಾರರು ಈ ಒಪ್ಪಂದವನ್ನು ಕೈಬಿಡುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಹೇಳಿದರು.


ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಏಕದಿನ ಪಂದ್ಯ: ಮೈದಾನಕ್ಕೆ ನುಗ್ಗಿ ‘ಸ್ಟಾಪ್ ಅದಾನಿ’ ಎಂದ ಪ್ರತಿಭಟನೆಗಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...