Homeಅಂತರಾಷ್ಟ್ರೀಯಬಂದರು ಗುತ್ತಿಗೆಗಾಗಿ ಮ್ಯಾನ್ಮಾರ್ ಮಿಲಿಟರಿ ನಿಯಂತ್ರಿತ ಕಂಪನಿಗೆ 30 ಮಿಲಿಯನ್ ಡಾಲರ್ ಹಣ ನೀಡಿದ ಅದಾನಿ...

ಬಂದರು ಗುತ್ತಿಗೆಗಾಗಿ ಮ್ಯಾನ್ಮಾರ್ ಮಿಲಿಟರಿ ನಿಯಂತ್ರಿತ ಕಂಪನಿಗೆ 30 ಮಿಲಿಯನ್ ಡಾಲರ್ ಹಣ ನೀಡಿದ ಅದಾನಿ ಗ್ರೂಪ್: ವರದಿ

- Advertisement -
- Advertisement -

ಒಂದೆಡೆ ಫೆಬ್ರವರಿ 1 ರ ದಂಗೆಯ ನಂತರ ಮ್ಯಾನ್ಮಾರ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದೇಶಿ ಕಂಪನಿಗಳ ಮೇಲೆ ಒತ್ತಡ ಹೆಚ್ಚಾಗುತ್ತದೆ ಮತ್ತು ಪ್ರತಿಭಟನಾಕಾರರ ಮೇಲೆ ಕ್ರೂರ ದಬ್ಬಾಳಿಕೆ ನಡೆಸುತ್ತಿದೆ. ಇನ್ನೊಂದೆಡೆ ಭಾರತದ ಅದಾನಿ ಗ್ರೂಪ್ ಮಿಲಿಟರಿ ನಿಯಂತ್ರಿತ ಮ್ಯಾನ್ಮಾರ್ ಎಕನಾಮಿಕ್ ಕಾರ್ಪೊರೇಶನ್‌ನೊಂದಿಗಿನ ಬಂದರು ಗುತ್ತಿಗೆ ಒಪ್ಪಂದಕ್ಕಾಗಿ ಹಣ ನೀಡಿದೆ ಎಂದು ಎಬಿಸಿ ನ್ಯೂಸ್ ವರದಿ ಮಾಡಿದೆ.

ಯಾಂಗೊನ್ ಪ್ರದೇಶ ಹೂಡಿಕೆ ಆಯೋಗದಿಂದ ಸೋರಿಕೆಯಾದ ದಾಖಲೆಗಳ ಪ್ರಕಾರ ಅದಾನಿ ಗ್ರೂಪ್ ಮ್ಯಾನ್ಮಾರ್ ಆರ್ಥಿಕ ನಿಗಮಕ್ಕೆ “ಭೂ ಗುತ್ತಿಗೆ ಶುಲ್ಕ” ದಲ್ಲಿ 30 ಮಿಲಿಯನ್ ಡಾಲರ್ ಪಾವತಿಸುತ್ತಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

ಕಳೆದ ತಿಂಗಳು ಅದಾನಿ ಗ್ರೂಪ್ ತನ್ನ ಹೇಳಿಕೆಯಲ್ಲಿ ಬಂದರಿನ ಅನುಮೋದನೆಗಾಗಿ ಮಿಲಿಟರಿ ನಾಯಕರೊಂದಿಗೆ ತೊಡಗಿಸಿಕೊಂಡಿಲ್ಲ ಎಂದು ಹೇಳಿತ್ತು. “ಈ ಅನುಮೋದನೆಯನ್ನು ಪಡೆಯುವಾಗ ಅಥವಾ ನಂತರ ಮಿಲಿಟರಿ ನಾಯಕತ್ವದೊಂದಿಗೆ ತೊಡಗಿಸಿಕೊಂಡಿದ್ದನ್ನು ನಾವು ಸ್ಪಷ್ಟವಾಗಿ ನಿರಾಕರಿಸುತ್ತೇವೆ” ಎಂದಿತ್ತು. ಆದರೆ ಸೋರಿಕೆಯಾದ ದಾಖಲೆಗಳು ಅದು ಸುಳ್ಳು ಎನ್ನುತ್ತಿವೆ.

ಅದಾನಿ ಬಂದರುಗಳ ಮುಖ್ಯ ಕಾರ್ಯನಿರ್ವಾಹಕ ಕರಣ್ ಅದಾನಿ ಅವರು ಜುಲೈ 2019 ರಲ್ಲಿ ಚುನಾಯಿತ ಸರ್ಕಾರದ ವಿರುದ್ಧ ದಂಗೆಯನ್ನು ಮುನ್ನಡೆಸಿದ ಸೇನಾ ಮುಖ್ಯಸ್ಥ ಹಿರಿಯ ಜನರಲ್ ಮಿನ್ ಆಂಗ್ ಹ್ಲೇಂಗ್ ಅವರನ್ನು ಭೇಟಿಯಾದರು ಎಂದು ಎಬಿಸಿ ನ್ಯೂಸ್ ವೀಡಿಯೊಗಳು ಮತ್ತು ಫೋಟೋಗಳನ್ನು ಬಹಿರಂಗಪಡಿಸಿದೆ. 2017 ರಲ್ಲಿ ನಿರಾಶ್ರಿತರ ಬಿಕ್ಕಟ್ಟನ್ನು ಹುಟ್ಟುಹಾಕಿದ ರೋಹಿಂಗ್ಯಾ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧದ ಅಭಿಯಾನದಲ್ಲಿ ತಮ್ಮ ಪಾತ್ರಕ್ಕಾಗಿ ಹೇಲಿಂಗ್ ಸೇರಿದಂತೆ ಕೆಲವು ಜನರಲ್‌ಗಳು ಆಗಲೇ ಯುನೈಟೆಡ್ ಸ್ಟೇಟ್ಸ್ ಮಾನವ ಹಕ್ಕುಗಳ ನಿರ್ಬಂಧದಲ್ಲಿದ್ದರು.

ಈ ಅಂತರರಾಷ್ಟ್ರೀಯ ಬೆಳವಣಿಗೆಗಳ ಹೊರತಾಗಿಯೂ ಮ್ಯಾನ್ಮಾರ್ ಎಕನಾಮಿಕ್ ಕಾರ್ಪೊರೇಷನ್ ಬಂದರಿಗೆ “ಭೂ ಅನುಮತಿ ಶುಲ್ಕ” ವಾಗಿ ಮತ್ತೆ 22 ಮಿಲಿಯನ್ ಡಾಲರ್ ಪಡೆಯುವ ಸಾಧ್ಯತೆಯಿದೆ ಎಂದು ಆಸ್ಟ್ರೇಲಿಯನ್ ಸೆಂಟರ್ ಫಾರ್ ಇಂಟರ್ನ್ಯಾಷನಲ್ ಜಸ್ಟೀಸ್ ಮತ್ತು ಆಕ್ಟಿವಿಸ್ಟ್ ಗ್ರೂಫ್ ಜಸ್ಟಿಸ್ ಫಾರ್ ಮ್ಯಾನ್ಮಾರ್ ಜಂಟಿ ವರದಿ ತಿಳಿಸಿದೆ.

ಕಳೆದ ತಿಂಗಳು ನಡೆದ ದಂಗೆಯ ನಂತರ ದಾಖಲೆಗಳು ಸೋರಿಕೆಯಾಗಿವೆ ಎಂದು ವರದಿಯ ಲೇಖಕ ಮತ್ತು ಮಾನವ ಹಕ್ಕುಗಳ ವಕೀಲ ರಾವನ್ ಅರ್ರಾಫ್ ಎಬಿಸಿ ನ್ಯೂಸ್‌ಗೆ ತಿಳಿಸಿದ್ದಾರೆ.

ಮ್ಯಾನ್ಮಾರ್ ಮಿಲಿಟರಿಯಿಂದ ನಿಯಂತ್ರಿಸಲ್ಪಡುವ ಮತ್ತು ಅದರ ಮಾಲೀಕತ್ವದಲ್ಲಿರುವ ‘ಮ್ಯಾನ್ಮಾರ್ ಎಕನಾಮಿಕ್ ಕಾರ್ಪೊರೇಷನ್’ಗೆ ಹಣ ಸಂದಾಯವಾಗಿದೆ ಎಂಬುದನ್ನು ಈ ದಾಖಲೆಗಳು ನಿರ್ದಿಷ್ಟವಾಗಿ ಬಹಿರಂಗಪಡಿಸುತ್ತವೆ. ಅದು ಸದ್ಯಕ್ಕೆ ಯುದ್ಧ ಅಪರಾಧಗಳು ಮತ್ತು ರೋಹಿಂಗ್ಯಾಗಳ ವಿರುದ್ಧದ ಅಪರಾಧಗಳು, ನರಮೇಧ ಸೇರಿದಂತೆ ಹಲವು ಆರೋಪಗಳ ಮೇಲೆ ಅಂತರರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಮತ್ತು ಇತರ ಕೋರ್ಟ್‌ನಲ್ಲಿ ತನಿಖೆ ಎದುರಿಸುತ್ತಿದೆ. ಈ ಕುರಿತು ಸಾಕಷ್ಟು ಬಾರಿ ಅದಾನಿಯವರ ಗಮನಕ್ಕೆ ತರಲಾಗಿದೆ. ಆದರೆ ಅವರು (ಎಂಇಸಿ) ಮ್ಯಾನ್ಮಾರ್ ಒಪ್ಪಂದದಿಂದ ಹೊರಗುಳಿಯಲು ನಿರಾಕರಿಸಿದ್ದಾರೆ ಮತ್ತು ಇದು ನಿಜವಾದ ಸಮಸ್ಯೆ ಎಂದು ಅರ್ರಾಫ್ ಹೇಳಿದ್ದಾರೆ.

ಅದಾನಿ ಗ್ರೂಪ್‌ನ ಹಣವನ್ನು ಮ್ಯಾನ್ಮಾರ್ ಮಿಲಿಟರಿಯು ಅಂತಾರಾಷ್ಟ್ರೀಯ ಅಪರಾಧಗಳಿಗೆ ಬಳಸಿಕೊಳ್ಳಬಹುದು ಎಂದು ಅರ್ರಾಫ್ ಆತಂಕ ವ್ಯಕ್ತಪಡಿಸಿದ್ದಾರೆ.

2019 ರ ವಿಶ್ವಸಂಸ್ಥೆಯ ವರದಿಯು ಮಿಲಿಟರಿ ಸಂಘಟನೆಯೊಂದಿಗೆ ತೊಡಗಿಸಿಕೊಂಡ ಕಂಪನಿಗಳಲ್ಲಿ ಅದಾನಿ ಪೋರ್ಟ್ಸ್‌ ಸಹ ಒಂದಾಗಿದೆ ಎಂದು ತಿಳಿಸಿತ್ತು. ಮಾನವ ಹಕ್ಕುಗಳ ಉಲ್ಲಂಘನೆಯಿಂದಾಗಿ ಮಿಲಿಟರಿಯೊಂದಿಗೆ ವ್ಯಾಪಾರ ಮಾಡದಂತೆ ವಿದೇಶಿ ಸಂಸ್ಥೆಗಳಿಗೆ ವರದಿ ಒತ್ತಾಯಿಸಿತ್ತು.

ಮ್ಯಾನ್ಮಾರ್‌ಗೆ 2019 ರಲ್ಲಿ ಭೇಟಿ ನೀಡಿದ್ದ ವಿಶ್ವಸಂಸ್ಥೆಯ ಸತ್ಯ-ಶೋಧನಾ ತಂಡದ ಭಾಗವಾಗಿದ್ದ ಆಸ್ಟ್ರೇಲಿಯಾದ ವಕೀಲ ಕ್ರಿಸ್ ಸಿಡೋಟಿ “ನಾವು ಮ್ಯಾನ್ಮಾರ್ ಮಿಲಿಟರಿಯ ಪುಷ್ಟೀಕರಣಕ್ಕೆ ಕೊಡುಗೆ ನೀಡುವ ಕಂಪನಿಗೆ ಆತಿಥ್ಯ ನೀಡಲು ಬಯಸುತ್ತೇವೆಯೇ? ಆಸ್ಟ್ರೇಲಿಯಾ ಮತ್ತು ಆಸ್ಟ್ರೇಲಿಯನ್ನರು ಉತ್ತರಿಸಬೇಕು” ಎಂದು ಕೇಳಿದ್ದರು. ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್‌ನಲ್ಲಿರುವ ಅಬಾಟ್ ಪಾಯಿಂಟ್ ಕಲ್ಲಿದ್ದಲು ಟರ್ಮಿನಲ್‌ ಎಂಬ ಮತ್ತೊಂದು ಅಂತರರಾಷ್ಟ್ರೀಯ ಯೋಜನೆಯಲ್ಲಿ ಅದಾನಿ ಪೋರ್ಟ್ಸ್‌ ತೊಡಗಿಸಿಕೊಳ್ಳಲು ನೋಡುತ್ತಿರುವುದುನ್ನು ಅವರು ಉಲ್ಲೇಖಿಸುತ್ತಿದ್ದರು.

“ಅದಾನಿ ಗ್ರೂಪ್‌ನಲ್ಲಿ ಹೂಡಿಕೆ ಮಾಡುತ್ತಿರುವವರಿಗೆ ಪ್ರಶ್ನೆಯೆಂದರೆ ಅವರು ಮ್ಯಾನ್ಮಾರ್ ಮಿಲಿಟರಿಯ ಕಾರ್ಯಾಚರಣೆಗಳಿಗೆ ಧನಸಹಾಯ ನೀಡಲು ಬಯಸುತ್ತಾರೆಯೇ? ಏಕೆಂದರೆ ಅದಾನಿಯಲ್ಲಿ ಹೂಡಿಕೆ ಮಾಡುವ ಮೂಲಕ ಅವರು ಪರೋಕ್ಷವಾಗಿ ಏನು ಮಾಡುತ್ತಿದ್ದಾರೆ?” ಎಂದು ಸಿಡೋಟಿ ಪ್ರಶ್ನಿಸಿದ್ದರು.

ಯುಎಸ್ ನಿರ್ಬಂಧಗಳು ಆಸ್ಟ್ರೇಲಿಯಾ ಸರ್ಕಾರವು ಅದಾನಿ ಪೋರ್ಟ್‌ನಲ್ಲಿ 3.2 ಮಿಲಿಯನ್ ಹೂಡಿಕೆಯನ್ನು ರದ್ದುಗೊಳಿಸುವಂತೆ ಒತ್ತಡ ಹೇರಿವೆ. ಆದರೆ ಭವಿಷ್ಯದ ನಿಧಿಯ ವಕ್ತಾರರು ಈ ಒಪ್ಪಂದವನ್ನು ಕೈಬಿಡುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಹೇಳಿದರು.


ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಏಕದಿನ ಪಂದ್ಯ: ಮೈದಾನಕ್ಕೆ ನುಗ್ಗಿ ‘ಸ್ಟಾಪ್ ಅದಾನಿ’ ಎಂದ ಪ್ರತಿಭಟನೆಗಾರ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...