Homeಮುಖಪುಟಅದಾನಿ-ಹಿಂಡೆನ್‌ಬರ್ಗ್ ಪ್ರಕರಣ: ಸುಪ್ರೀಂ ತೀರ್ಪಿನ ಮರುಪರಿಶೀಲನೆ ಕೋರಿ ಅರ್ಜಿ ಸಲ್ಲಿಕೆ

ಅದಾನಿ-ಹಿಂಡೆನ್‌ಬರ್ಗ್ ಪ್ರಕರಣ: ಸುಪ್ರೀಂ ತೀರ್ಪಿನ ಮರುಪರಿಶೀಲನೆ ಕೋರಿ ಅರ್ಜಿ ಸಲ್ಲಿಕೆ

- Advertisement -
- Advertisement -

ಅದಾನಿ ಗ್ರೂಪ್‌ ವಿರುದ್ದದ ಷೇರು ಬೆಲೆ ದುರ್ಬಳಕೆ ಆರೋಪಗಳ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಅಥವಾ ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ವರ್ಗಾಯಿಸಲು ನಿರಾಕರಿಸಿದ ಜನವರಿ 3ರ ತೀರ್ಪನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಸಿಬಿಐ ಅಥವಾ ಎಸ್‌ಐಟಿ ತನಿಖೆಗೆ ಆದೇಶಿಸಲು ನಿರಾಕರಿಸಿದ್ದ ಸುಪ್ರೀಂ ಕೋರ್ಟ್, ಬಂಡವಾಳ ಮಾರುಕಟ್ಟೆ ನಿಯಂತ್ರಕ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಅದಾನಿ ಗ್ರೂಪ್‌ ವಿರುದ್ಧದ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸುತ್ತಿದೆ ಎಂದು ತನ್ನ ತೀರ್ಪಿನಲ್ಲಿ ಹೇಳಿತ್ತು.

ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಲ್ಲಿ ದೋಷಗಳಿವೆ. ಅಲ್ಲದೆ, ಅರ್ಜಿದಾರರ ಪರ ವಕೀಲರು ಕಂಡುಕೊಂಡ ಕೆಲ ಹೊಸ ವಿಷಯಗಳ ಪ್ರಕಾರ, ತೀರ್ಪಿನ ಪರಿಶೀಲನೆಗೆ ಸಾಕಷ್ಟು ಕಾರಣಗಳಿವೆ ಎಂದು ಮರು ಪರಿಶೀಲನಾ ಅರ್ಜಿಯಲ್ಲಿ ಹೇಳಲಾಗಿದೆ. ಪ್ರಕರಣ ಸಂಬಂಧ ಈ ಹಿಂದೆ ಅರ್ಜಿ ಸಲ್ಲಿಸಿದವರಲ್ಲಿ ಒಬ್ಬರಾದ ಅನಾಮಿಕಾ ಜೈಸ್ವಾಲ್ ಅವರು ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ವಕೀಲೆ ನೇಹಾ ರಾಠಿ ಅವರ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ, ಸೆಬಿ ತನ್ನ ವರದಿಯಲ್ಲಿ ಅದಾನಿ ಗ್ರೂಪ್‌ ಮೇಲೆ ಆರೋಪ ಕೇಳಿ ಬಂದ ನಂತರ ತಾನು ಕೈಗೊಂಡ 24 ತನಿಖೆಗಳ ಸ್ಥಿತಿಗತಿಯ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ. ಅವು ಪೂರ್ಣಗೊಂಡಿದೆಯೂ, ಇಲ್ಲವೋ. ಆದರೆ, ಸೆಬಿ ಯಾವುದೇ ತನಿಖೆ ಅಥವಾ ಕ್ರಮದ ವಿವರಗಳನ್ನು ಬಹಿರಂಗಪಡಿಸಿಲ್ಲ ಎಂದು ಹೇಳಲಾಗಿದೆ.

“ಸೆಬಿ ತನ್ನ ತನಿಖೆಯ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆಗೊಳಿಸದ ಹೊರತು, ಯಾವುದೇ ನಿಯಂತ್ರಕ ವೈಫಲ್ಯವಿಲ್ಲ ಎಂದು ತೀರ್ಮಾನಿಸಲು ಸಾಧ್ಯವಿಲ್ಲ” ಎಂದು ಅರ್ಜಿಯಲ್ಲಿ ವಾದಿಸಲಾಗಿದೆ. ತನ್ನ ತೀರ್ಪಿನಲ್ಲಿ, ಅದಾನಿ ಗ್ರೂಪ್ ವಿರುದ್ಧ ಆರೋಪಗಳನ್ನು ಹೊರಿಸಲಾದ 24 ವಿಷಯಗಳ ಪೈಕಿ 22 ರಲ್ಲಿ ಸೆಬಿ ತನ್ನ ತನಿಖೆಯನ್ನು ಪೂರ್ಣಗೊಳಿಸಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸೆಬಿ ವಿರುದ್ದ ಯಾವುದೇ ಸ್ಪಷ್ಟವಾದ ನಿಯಂತ್ರಕ ವೈಫಲ್ಯ ಆರೋಪಗಳಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಅರ್ಜಿಯು, ಸೆಬಿಯ ನಿಯಂತ್ರಕ ವೈಫಲ್ಯಗಳು ಸುಲಭವಾಗಿ ಗೋಚರಿಸುವ ಅನೇಕ ನಿದರ್ಶನಗಳಿವೆ. ಅಂತಹ ವೈಫಲ್ಯಗಳು ಅಂತಿಮವಾಗಿ ಆಪಾದಿತ ನಿಯಂತ್ರಕ ಉಲ್ಲಂಘನೆಗಳು ಮತ್ತು ಶಾಸನಬದ್ಧ ಉಲ್ಲಂಘನೆಗಳಿಗೆ ಕಾರಣವಾಗಿವೆ ಎಂದು ಹೇಳಿದೆ.

ಇನ್ನೂ ಅನೇಕ ಅಂಶಗಳನ್ನು ಉಲ್ಲೇಖಿಸಿ ತೀರ್ಪಿನ ಮರು ಪರಿಶೀಲನೆಗೆ ಅನಾಮಿಕಾ ಜೈಸ್ವಾಲ್ ಮನವಿ ಮಾಡಿದ್ದಾರೆ.

ಹಿಂಡೆನ್‌ಬರ್ಗ್‌ ವರದಿ : 

ಅದಾನಿ ಸಮೂಹದ ಕಂಪನಿಗಳು ಸಾಲ ಪಡೆಯುವುದಕ್ಕಾಗಿ ಕೃತಕವಾಗಿ ತಮ್ಮ ಷೇರುಗಳ ಬೆಲೆ ಏರಿಸಿಕೊಂಡಿದೆ. ತಮ್ಮ ಷೇರುಗಳ ಬೆಲೆಯನ್ನು ಅಕ್ರಮವಾಗಿ ಏರಿಸಿ, ಅವುಗಳ ಮೌಲ್ಯ ಹೆಚ್ಚಿಸಿಕೊಂಡು ನಂತರ ಅವುಗಳನ್ನು ಅಡವಿಟ್ಟು ಸಾಲ ಪಡೆದಿವೆ. ಸಾಗರದಾಚೆಗಿನ ವ್ಯವಹಾರಗಳಲ್ಲಿ ತೆರಿಗೆ ವಂಚಿಸುವುದಕ್ಕಾಗಿ ದಶಕಗಳ ಕಾಲ ಲೆಕ್ಕಪತ್ರಗಳಲ್ಲಿ ವಂಚನೆ ನಡೆಸಿವೆ. ಆ ಮೂಲಕ ಅತಿ ಹೆಚ್ಚು ಸಾಲದ ಸುಳಿಗೆ ಸಿಲುಕಿದ್ದು, ಒಟ್ಟಾರೆ ಅದರ ಆರ್ಥಿಕ ತಳಪಾಯವೇ ಅಪಾಯದಲ್ಲಿದೆ ಎಂದು ಹಿಂಡೆನ್‌ಬರ್ಗ್ ವರದಿ ಆರೋಪಿಸಿತ್ತು.

“ನಾವು ಎರಡು ವರ್ಷದ ಸಂಶೋಧನೆಯ ವರದಿಯನ್ನು ಇಂದು ಬಹಿರಂಗಪಡಿಸುತ್ತಿದ್ದೇವೆ. 17.8 ಟ್ರಿಲಿಯನ್ (218 ಬಿಲಿಯನ್ ಅಮೆರಿಕನ್ ಡಾಲರ್) ಮೌಲ್ಯದ ವಹಿವಾಟು ನಡೆಸುವ ಭಾರತೀಯ ಅದಾನಿ ಸಮೂಹವು ದಶಕಗಳ ಕಾಲ ಸ್ಟಾಕ್ ತಿರುಚುವಿಕೆ ಮತ್ತು ಲೆಕ್ಕಪತ್ರ ವಂಚನೆ ಯೋಜನೆಯಲ್ಲಿ ತೊಡಗಿದೆ ಎಂಬುದಕ್ಕೆ ಪುರಾವೆಗಳನ್ನು ಪ್ರಸ್ತುತಪಡಿಸುತ್ತಿದ್ದೇವೆ” ಎಂದು ಸರಣಿ ಟ್ವೀಟ್‌ಗಳನ್ನು ಹಿಂಡೆನ್‌ಬರ್ಗ್‌ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಡಿತ್ತು.

ಈ ವಿಷಯ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿ ಅದಾನಿ ‍ಷೇರುಗಳು ದಿಢೀರನೆ ಕುಸಿದಿತ್ತು. ಅದಾನಿ ಸಮೂಹದ ಜೊತೆ ಬಹಳ ಆಪ್ತತೆಯಿಂದ ಇರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಕಸಿವಿಸಿ ಉಂಟು ಮಾಡಿತ್ತು. ಬಳಿಕ ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದು, ಪ್ರಕರಣ ಎಸ್‌ಐಟಿ ಅಥವಾ ಸಿಬಿಐ ತನಿಖೆಗೆ ಕೋರಿದ್ದ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಸೆಬಿಗೆ ತನಿಖೆಯ ಜವಬ್ದಾರಿ ವಹಿಸಿದೆ.

ಇದನ್ನೂ ಓದಿ : ಯುಸಿಸಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ: ವಿವಾದಾತ್ಮಕ ಕಾಯ್ದೆ ಜಾರಿಗೆ ಉತ್ತರಾಖಂಡದ ಹಾದಿ ಸುಗಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...